• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂತರಾಜಪುರ ಪಂಚಾಯತ್‌ ಅಧ್ಯಕ್ಷರಾಗಿ ಅಮೃತಶಿಲ್ಪ ಆಯ್ಕೆ
ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಹೋಬಳಿಯ ಕಾಂತರಾಜುಪುರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಅಮೃತಶಿಲ್ಪ ಶಿವರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷೆ ಅಮೃತಶಿಲ್ಪ ಮಾತನಾಡಿ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಸ್ಥಾನಕ್ಕೆ ದಲಿತ ಮಹಿಳೆಯಾದ ನನ್ನ ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇದರಿಂದ ರಾಜಕೀಯ, ಸಾಮಾಜಿಕ ನ್ಯಾಯ ಒದಗಿಸಿದಂತಾಗಿದೆ ಎಂದರು. ಎಲ್ಲಾ ಸದಸ್ಯರ ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಿದರೆ ಸಾಕಷ್ಟು ಅಭಿವೃದ್ಧಿ ಸಾಧಿಸಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ರೂಪಿಸಬಹುದು ಎಂದು ಹೇಳಿದರು.
ಹೊಳೆನರಸೀಪುರದ ಗಣಪತಿ ಪೆಂಡಾಲಿನಲ್ಲಿ ಜನಸ್ಪಂದನ ಸಭೆ
ಹೊಳೆನರಸೀಪುರ ಪಟ್ಟಣದ ಗಣೇಶ ಪೆಂಡಾಲಿನಲ್ಲಿ ಆಗಸ್ಟ್ ೨ರ ಶನಿವಾರ ಆಯೋಜನೆ ಮಾಡುವ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದ್ದು, ಬೆಳಗ್ಗೆ ೧೦ ಗಂಟೆಯಿಂದ ಸಂಜೆ ತನಕ ಅರ್ಜಿ ಸ್ವೀಕರಿಸಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಇದರ ಪ್ರಯೋಜನವನ್ನು ತಪ್ಪದೇ ಪಡೆದು ಕೊಳ್ಳಬೇಕೆಂದು ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ಜಿ. ಮುನಿರಾಜು ಸಲಹೆ ನೀಡಿದರು.
ಆನೆ ಕಾರ್ಯಪಡೆ ಕಚೇರಿ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ
ಆನೆ ಕಾರ್ಯಪಡೆ ಕಚೇರಿಯ ಕಾಮಗಾರಿ ಕಳಪೆಯಾಗಿದ್ದು ಕೂಡಲೇ ನಿಲ್ಲಿಸಬೇಕು, ಗುಣಮಟ್ಟದ ಕಾಮಗಾರಿ ಪ್ರಾರಂಭಿಸುವವರೆಗೂ ಇಲ್ಲಿ ಕಾಮಗಾರಿ ಮಾಡಲು ಬಿಡುವುದಿಲ್ಲ ಎಂದು ಕಾಫಿ ಬೆಳೆಗಾರರ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ತಾಲೂಕಿನ ಬಿಕ್ಕೋಡು ಗ್ರಾಮದ ಬಳಿ ಬೆಳೆಗಾರರು ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ನಿರ್ಮಾಣವಾಗುತ್ತಿರುವ ಆನೆ ಕಾರ್ಯಪಡೆ ಕಚೇರಿಯ ಮುಂಭಾಗ ಪ್ರತಿಭಟಿಸಿದರು. ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಭೂಮಿಪೂಜೆ ಮಾಡಿ 40 ಲಕ್ಷ ರು. ಅಂದಾಜು ವೆಚ್ಚದಲ್ಲಿ ಅನುದಾನ ನೀಡಿದ್ದರು. ಆದರೆ ಈಗ ನಡೆಸುತ್ತಿರುವ ಕಾಮಗಾರಿ ಸಂಪೂರ್ಣ ಕಳಪೆಯಿಂದ ಕೂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆರೆ ಒತ್ತುವರಿ ಮಾಡಿ ಕಾನೂನು ಬಾಹಿರವಾಗಿ ದಾಖಲೆ ತಿದ್ದುಪಡಿ
ಸರ್ಕಾರಿ ಕೆರೆಯನ್ನು ಅಕ್ರಮವಾಗಿ ಒತ್ತುವರಿ ಮತ್ತು ಕಾನೂನುಬಾಹಿರವಾಗಿ ಕಂದಾಯ ಇಲಾಖೆ ದಾಖಲೆ ತಿದ್ದುಪಡಿ ಮಾಡಿ ಖಾತೆ ಮಾಡಿಸಿಕೊಂಡಿದ್ದು, ಸೂಕ್ತ ತನಿಖೆ ನಡೆಸಿ ಗ್ರಾಮಸ್ಥರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಡಿಸಿ ಕಚೇರಿ ಆವರಣದಲ್ಲಿ ಹೊಳೆನರಸೀಪುರ ತಾಲೂಕಿನ ಶ್ರವಣೂರು ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಹಳ್ಳಿ ಮೈಸೂರು ಹೋಬಳಿ ಬಂಟರತಳಾಲು ಗ್ರಾಮದ ನಿವಾಸಿ ಬಿ.ಜೆ. ಮಂಜೇಗೌಡ ಇವರು ಸರ್ಕಾರಿ ಕೆರೆಯನ್ನು ಒತ್ತುವರಿ ಮಾಡಿ ಬೆಳೆಯನ್ನು ಹಾಕಿರುತ್ತಾರೆ. ಸರ್ಕಾರಿ ಕೆರೆಯಲ್ಲಿ ನೀರಿನ ಮಟ್ಟವು ತುಂಬಾ ಕಡಿಮೆ ಇದ್ದು, ಗ್ರಾಮಸ್ಥರಿಗೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ತುಂಬಾ ಸಮಸ್ಯೆಯಾಗಿರುತ್ತದೆ ಎಂದರು.
ಸಾಧನೆ ಎಂಬುದು ನಿಮ್ಮ ಮನಸ್ಸಿನ ನಿರ್ಧಾರದಲ್ಲಿ ಅಡಗಿದೆ
ನಿಮ್ಮ ಗುರಿಯತ್ತ ನಿಮ್ಮ ದೃಷ್ಠಿ ಇರಬೇಕು. ಶಾಲೆಯಲ್ಲಿ ಒಳ್ಳೆಯ ಟೀಚರ್ ಇರುತ್ತಾರೆ. ಕಲಿಯುವ ಆಸಕ್ತಿ ನಿಮ್ಮಲ್ಲಿ ಇರಬೇಕು. ಓದುವ ಸಮಯದಲ್ಲಿ ಮನಸ್ಸನ್ನು ಬೇರೆಡೆಗೆ ಸೆಳೆಯದ ಆಗೇ ನೋಡಿಕೊಳ್ಳುವುದು ನಿಮ್ಮ ಕೈಲಿ ಇರುತ್ತದೆ. ನಿಮ್ಮನಿಮ್ಮ ಮನಸ್ಸನ್ನು ಯಾವ ರೀತಿ ಸಿದ್ಧಪಡಿಸಿಕೊಂಡಿದ್ದೀರಿ, ಇಂತಹ ಮನಸ್ಸನ್ನು ಸರಿಯಾಗಿ ಇಟ್ಟುಕೊಂಡು ಹೋಗುತ್ತದೆ. ನಮ್ಮ ಮನಸ್ಸುಗಳಲ್ಲಿ ಬೇಕು ಬೇಡವಾದವು ಅಲ್ಲೆಕೊಳೆಯುತ್ತಿರುತ್ತದೆ. ಓದುವ ವೇಳೆ ಮನಸ್ಸು ಯಾವ ರೀತಿ ಇರುತ್ತದೆ ಎಂಬುದು ಓದುವುದನ್ನು ನಿರ್ಧರಿಸುತ್ತದೆ. ಮನಸ್ಸಿನಲ್ಲಿರುವ ಕೆಟ್ಟ ಕೊಳೆ ತೆಗೆಯಲು ಆಗುವುದಿಲ್ಲವೂ ಅವರು ಜೀವನದಲ್ಲಿ ಸಮಸ್ಯೆ ಎದುರಿಸುತ್ತಾರೆ ಎಂದರು.
ಉದ್ಯೋಗ ಸಂದರ್ಶನ ಕುರಿತಂತೆ ತರಬೇತಿ
ವಿದ್ಯಾರ್ಥಿಗಳಿಗೆ ಕೌಶಲ್ಯವೃದ್ಧಿ ಹೆಚ್ಚಿಸಲು ಮೂರು ದಿನದ ತರಬೇತಿಯನ್ನು ಕೊಡಲಾಗುತ್ತಿದೆ. ನಂತರ ಬೆಂಗಳೂರು ಮತ್ತು ಹಾಸನದ ವಿವಿಧ ಕಂಪನಿಗಳ ಬೃಹತ್ ಉದ್ಯೋಗ ಮೇಳ ಎದುರಿಸಲು ಅನುಕೂಲ ಮಾಡಿಕೊಡಲಾಗುವುದು. ಪ್ಲೇಸ್ಮೆಂಟ್ ಟ್ರೈನಿಂಗ್ ಇದಾಗಿದೆ. ಕೆಲಸಕ್ಕೆ ಸೇರಲು ಹೇಗೆ ಸಂದರ್ಶನ ಹೇಗೆ ಎದುರಿಸುವುದು ಬಗ್ಗೆ ಈ ತರಬೇತಿಯಲ್ಲಿ ತಿಳಿಸಲಾಗುತ್ತದೆ. ಪದವಿ ಸ್ನಾತಕೋತ್ತರ ಪದವಿ, ಐ.ಟಿ.ಐ ಮತ್ತು ಡಿಪ್ಲೋಮೊ ಪಾಸಾದವರು ಹಾಗೂ ಇತರೆ ಕೌಶಲ್ಯಗಳನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳನ್ನು ಈ ಉದ್ಯೋಗ ಮೇಳದಲ್ಲಿ ಆಯ್ಕೆ ಮಾಡಲಾಗುವುದು ಎಂದರು.
ಒಳಗಿನ ಮನಸ್ಸು ಶುದ್ಧವಾಗಿಟ್ಟುಕೊಂಡು ಕೆಲಸ ಮಾಡಿ
ನಮ್ಮ ಒಳಗಿನ ಮನಸ್ಸನ್ನು ಶುದ್ಧವಾಗಿಟ್ಟುಕೊಂಡು ಸಮಾಜದಲ್ಲಿ ಉತ್ತಮ ಕೆಲಸ ಮಾಡಬೇಕೆಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಠಾಧೀಶರಾದ ಶ್ರೀ ನಿರ್ಮಾಲನಂದನಾಥ ಸ್ವಾಮೀಜಿ ತಿಳಿಸಿದರು. ಸೂರ್ಯನ ಬೆಳಕಿನಿಂದಲೇ ದಿನದ ಎಲ್ಲಾ ಚಟುವಟಿಕೆಗಳು ಪ್ರಾರಂಭವಾಗುತ್ತದೆ. ನಮಗೆ ಸೂರ್ಯ ಚಂಧ್ರ ಬಂದು ಹೋಗುವುದರ ಬಗೆ ಗಮನವಿಲ್ಲ. ಯಾವುದು ಬಂದು ಬೇಗ ಹೊರಟು ಹೋಗುತ್ತದೆ ಅದರ ಬಗ್ಗೆ ಗಮನ ಹೆಚ್ಚು ಇರುತ್ತದೆ ಅಶಾಶ್ವತೆ ಕಡೆ ನಮ್ಮ ಮನಸ್ಸು,ಭಾವ ಇರುತ್ತದೆ ಎಂದರು. ಶಾಶ್ವತ ಇರುವ ಕಡೆ ಗಮನವೊಂದೆಯಲ್ಲ ನಮ್ಮ ಭಾವ ಇರಬೇಕು. ಆದರೇ ಇದನ್ನ ಭಾವಿಸುವುದು ಯಾರು? ನಮ್ಮ ಒಳಗಿನ ಮನಸ್ಸನ್ನು ಶುದ್ಧವಾಗಿಟ್ಟುಕೊಂಡು ಸಮಾಜದಲ್ಲಿ ಉತ್ತಮ ಕೆಲಸ ಮಾಡಬೇಕೆಂದು ತಿಳಿಸಿದರು.
ಹೆಣ್ಣು ಮಕ್ಕಳು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ
ಹಳ್ಳಿಮೈಸೂರಿನ ಕಸ್ತೂರಿ ಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ ಅತ್ರಿ ಏಜೆನ್ಸಿಸ್ ವತಿಯಿಂದ ನೋಟ್‌ಬುಕ್‌ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಸ್ತೂರಿ ಬಾ ಗಾಂಧಿ ಬಾಲಿಕ ವಿದ್ಯಾಲಯದಲ್ಲಿ ಹೆಣ್ಣುಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಶಿಕ್ಷಕ ವೃಂದದವರಿಗೆ ಮತ್ತು ಪೋಷಕರಿಗೆ ಹೆಸರು ತರಬೇಕು ಎಂದು ತಿಳಿಸಿದರು. ನಂತರ 65 ಹೆಣ್ಣು ಮಕ್ಕಳಿಗೆ ಟೀ ಶರ್ಟ್ ಮತ್ತು 200 ಪುಟಗಳ 6 ನೋಟ್‌ಬುಕ್‌ಗಳನ್ನು ವಿತರಿಸಿ, ಈ ಅವಕಾಶ ಕಲ್ಪಿಸಿಕೊಟ್ಟ ಆಡಳಿತ ಮಂಡಳಿಗೆ ಧನ್ಯವಾದ ಸಲ್ಲಿಸಿದರು.
ರೈತರಿಗೆ ಗಗನಕುಸುಮವಾದ ಕಾರ್ಬನ್ ಕ್ರೆಡಿಟ್‌
ವಾತಾವರಣದಲ್ಲಿ ಏರುತ್ತಿರುವ ಉಷ್ಣಾಂಶವನ್ನು ತಗ್ಗಿಸುವ ನಿಟ್ಟಿನಲ್ಲಿ ಜಾಗತಿಕವಾಗಿ ರೈತರಿಗೆ ಕಾರ್ಬನ್ ಕ್ರೆಡಿಟ್ ನೀಡುವ ಯೋಜನೆ ಜಾರಿಗೊಳಿಸಲಾಗಿದೆ. ಈ ಮೂಲಕ ಅರಣ್ಯ ಕೃಷಿ ಉತ್ತೇಜಿಸಿ ಭೂಮಿಯಲ್ಲಿ ಹಸಿರು ಹೆಚ್ಚಳಮಾಡುವ ಉದ್ದೇಶ ಅಡಗಿದೆ. ಇದಕ್ಕಾಗಿ ವಾತಾವರಣಕ್ಕೆ ವಿಷಾನಿಲ ಸೂಸುವ ಬೃಹತ್ ಕಂಪನಿಗಳಿಂದ ಅನುದಾನ ಸಂಗ್ರಹಿಸಿ ಜಮೀನಿನಲ್ಲಿ ಮರಗಳನ್ನು ಬೆಳೆಸುವ ಮೂಲಕ ವಾತಾವರಣದಲ್ಲಿ ಕಾರ್ಬನ್ ಅಂಶವನ್ನು ಕಡಿತಗೊಳಿಸುವ ಯೋಜನೆ ಇದಾಗಿದ್ದು, ವಿಶ್ವದಾದ್ಯಂತ ಈ ಯೋಜನೆ ಜಾರಿಗೊಂಡಿದೆ. ಉತ್ತರ ಪ್ರದೇಶ ರಾಜ್ಯದಲ್ಲಿ ಈ ವರ್ಷ ಸುಮಾರು 250 ರೈತರಿಗೆ 48 ಲಕ್ಷ ರು. ಗಳನ್ನು ಪಾವತಿಸುವ ಮೂಲಕ ಕಾರ್ಬನ್ ಕ್ರೆಡಿಟ್ ಪಾವತಿಸಿದ ದೇಶದ ಮೊದಲ ರಾಜ್ಯ ಎನ್ನಿಸಿಕೊಂಡಿದೆ.
ಅರಸೀಕೆರೆಯಲ್ಲಿ ಜಿಲ್ಲಾ ವಿಪ್ರ ಪಾಕತಜ್ಞರ ವಾರ್ಷಿಕೋತ್ಸವ
ಹಾಸನ ಜಿಲ್ಲಾ ವಿಪ್ರ ಪಾಕತಜ್ಞರ ಕ್ಷೇಮಾಭಿವೃದ್ಧಿ ಸಂಘದ 21ನೇ ವಾರ್ಷಿಕೋತ್ಸವ ಸಮಾರಂಭವು ಇದೇ 22ರಂದು ಅರಸೀಕೆರೆ ನಗರದಲ್ಲಿನ ಹಾರನಹಳ್ಳಿ ರಾಮಸ್ವಾಮಿ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಅರಸೀಕೆರೆ ತಾಲೂಕು ವಿಪ್ರಪಾಕ ತಜ್ಞರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಘವೇಂದ್ರ ತಿಳಿಸಿದರು. ಅರಸೀಕೆರೆ ನಗರದಲ್ಲಿನ ಹಾರನಹಳ್ಳಿ ರಾಮಸ್ವಾಮಿ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಅರಸೀಕೆರೆ ತಾಲೂಕು ವಿಪ್ರಪಾಕ ತಜ್ಞರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಘವೇಂದ್ರ ತಿಳಿಸಿದರು.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 550
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved