• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಾದ್ಯಂತ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ
ಮಹಾತ್ಮ ಗಾಂಧೀಜಿ, ಬಾಲಗಂಗಾಧರ ತಿಲಕ್, ಲಾಲ್ ಬಹುದ್ದೂರ್ ಶಾಸ್ತ್ರಿ, ವೀರ ಸಾವರ್ಕರ್‌, ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರಬೋಸ್, ಸರೋಜಿನಿ ನಾಯ್ಡು, ಜವಾಹರ್‌ ಲಾಲ್ ನೆಹರೂ ಸೇರಿದಂತೆ ನೂರಾರು ನೇತಾರರ ನೇತೃತ್ವದಲ್ಲಿ ಲಕ್ಷಾಂತರ ಚಳವಳಿಗಾರರು ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಅದೇ ರೀತಿ ಸ್ವಾತಂತ್ರ್ಯ ನಂತರ ಹರಿದು ಹಂಚಿ ಹೋಗಿದ್ದ ಭಾರತವನ್ನು ಭಾಷಾವಾರು ಪ್ರಾಂತ್ಯಗಳನ್ನಾಗಿ ವಿಂಗಡಿಸಿ ಒಗ್ಗೂಡಿಸಿದ ಕೀರ್ತಿ ಸರ್ದಾರ್‌ ವಲ್ಲಭಾಯಿ ಪಟೇಲ್ ಅವರಿಗೆ ಸಲ್ಲುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಹೇಳಿದರು.
ಆರ್‌ಬಿಐ ನಿಯಮ ಉಲ್ಲಂಘಿಸಿದ್ದರೆ ಮೈಕ್ರೋ ಫೈನಾನ್ಸ್‌ಗಳ ಮೇಲೆ ಕ್ರಮ : ಕೆ.ಎನ್. ರಾಜಣ್ಣ

ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಮೀಟರ್‌ ಬಡ್ಡಿ ದಂಧೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುವವರ ವಿರುದ್ಧ ಮುಖ್ಯಮಂತ್ರಿಗಳೇ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಈ ಕಾನೂನುಗಳು ಕಠಿಣಗೊಳ್ಳಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು.

ಗಣರಾಜ್ಯೋತ್ಸವದ ಹಿಂದಿನ ಇತಿಹಾಸವನ್ನೂ ಪ್ರತಿಯೊಬ್ಬರೂ ತಿಳಿಯಿರಿ
ಶಾಸಕ ಸಿ. ಎನ್. ಬಾಲಕೃಷ್ಣ ಸಂವಿಧಾನದ ಆಶೋತ್ತರಗಳ ಬಗ್ಗೆ ಮಾತನಾಡಿ ರಾಜಪ್ರಭುತ್ವವು ಅಂತ್ಯವಾಗಿ ಭಾರತದಲ್ಲಿ ಸಂವಿಧಾನವನ್ನು ಸ್ಥಾಪಿಸಿದ ದಿನವೇ ಜನವರಿ ೨೬ ದೇಶದ ಸಂವಿಧಾನ ಭಾರತೀಯರಿಗೆ ಹೆಮ್ಮೆಯ ದಿನವಾಗಿದೆ. ೨೬ ಜನವರಿ ೧೯೫೦ರಂದು ಸಂವಿಧಾನವನ್ನು ಸ್ಥಾಪನೆ ಮಾಡಲಾಗಿದ್ದು, ಇದರ ಗೌರವಾರ್ಥವಾಗಿ ಗಣರಾಜ್ಯೋತ್ಸವವನ್ನು ಅಸ್ತಿತ್ವಕ್ಕೆ ಬಂದ ದಿನವಾಗಿದ್ದು ಆಚರಿಸಲಾಗುತ್ತದೆ. ಭಾರತೀಯರ ಹೆಮ್ಮೆಯ ದಿನವಾದ ಗಣರಾಜ್ಯ ದಿನದ ಇತಿಹಾಸ ಮತ್ತು ಮಹತ್ವವನ್ನು ಪ್ರತಿಯೊಬ್ಬ ಪ್ರಜೆ ತಿಳಿಸಬೇಕು ಎಂದರು.
ಸಂವಿಧಾನದ ಅಡಿಪಾಯವೇ ಸಮಾನತೆ
ಭಾರತವು ಭವ್ಯವಾದ ಸಂವಿಧಾನ ಹೊಂದಿದೆ. ಸಂವಿಧಾನದ ಅಡಿಪಾಯ ಸರ್ವರಲ್ಲೂ ಸಮಾನತೆ ತರುವುದೇ ಆಗಿದೆ. ಸಂವಿಧಾನದ ಎಲ್ಲಾ ನಿಯಮಗಳನ್ನು ಪಾಲಿಸಲು ನಾವು ಮುಂದಾಗಬೇಕು. ಸಂವಿಧಾನದಿಂದ ಅನೇಕ ಸೌಲಭ್ಯಗಳು ಸಾಮಾನ್ಯ ವ್ಯಕ್ತಿಗೂ ಸಿಗಲು ಕಾರಣವಾಗಿದೆ ಎಂದು ಬಸವಾಪಟ್ಟಣ ಕೆ.ಪಿ.ಎಸ್ ಶಾಲೆಯ ಶಾಲಾಭಿವೃದ್ದಿ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ನಿರ್ವಾಣೆಗೌಡ ತಿಳಿಸಿದರು.
ಸಂವಿಧಾನ ಸರ್ವರಿಗೂ ಸಮಾನ ಅವಕಾಶ ನೀಡಿದೆ
ಸಂವಿಧಾನವನ್ನು ಗೌರವಿಸಿ ನಡೆದಾಗ ಯಾವುದೇ ಅಹಿತಕರ ಘಟನೆ ಸಂಭವಿಸುವುದಿಲ್ಲ ಎಂದು ಶಾಸಕ ಎ. ಮಂಜು ತಿಳಿಸಿದರು. ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಭಾನುವಾರ ನಡೆದ 76ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂವಿಧಾನ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿದೆ ಎಂದರು.
ಸಂವಿಧಾನ ಉಳಿಸುವುದು ನಮ್ಮ ಕರ್ತವ್ಯ
ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಎಲ್ಲ ಧರ್ಮ, ಎಲ್ಲ ಜಾತಿ-ಜನಾಂಗಳಿಗೆ ಒಪ್ಪುವ ಇಡೀ ವಿಶ್ವವೇ ಒಪ್ಪುವ ಸಂವಿಧಾನವನ್ನು ರಚನೆ ಮಾಡಿದ ಡಾ.ಅಂಬೇಡ್ಕರ್ ಅವರನ್ನು ಸ್ಮರಿಸಿಕೊಳ್ಳುತ್ತಾ ಹರಿದು ಹಂಚಿ ಹೊಗಿದ್ದ ಭಾರತ ದೇಶವನ್ನು ಮತ್ತೆ ಒಗ್ಗೂಡಿಸಲು ಹೋರಾಟ ಮಾಡಿದ ಸರ್ದಾರ್ ವಲ್ಲಾಬಾಯಿ ಪಟೇಲ್ ಅವರನ್ನು ನೆನಪಿಸಿಕೊಳ್ಳೋಣ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದು.
ಜಾತಿ ಉಪಜಾತಿಗಳ ನಡುವೆಯೂ ಒಗ್ಗಟ್ಟು ತಂದಿರುವುದು ಸಂವಿಧಾನ
ದೇಶದಲ್ಲಿ ಹಲವು ಧರ್ಮ, ಜಾತಿ, ಪಂಗಡಗಳಿದ್ದರೂ ಅತ್ಯಂತ ಪ್ರಬಲವಾದ ಸಂವಿಧಾನದಿಂದ ನಾವೆಲ್ಲಾ ಒಟ್ಟಾಗಿ ಜೀವನ ನಡೆಸುತ್ತಿದ್ದೇವೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಹರಿದು ಹಂಚಿ ಹೋಗಿದ್ದ ಪ್ರಾಂತ್ಯಗಳನ್ನು ಅವರು ರಾಜ್ಯಗಳನ್ನಾಗಿ ಮಾಡಿ ಒಟ್ಟಿಗೆ ಸೇರಿಸಿ ಗಣರಾಜ್ಯ ಮಾಡಲು ಕಾರಣಕರ್ತರಾಗಿದ್ದಾರೆ. ಇಂದು ನನ್ನಂತ ಸಾಮಾನ್ಯ ವ್ಯಕ್ತಿ ಶಾಸಕನಾಗಲು ಇಂದು ಸಂವಿಧಾನ ಕಾರಣವಾಗಿದೆ. ಅಧಿಕಾರ ಎಂಬುದು ಶಾಶ್ವತವಲ್ಲ ನಾವು ಅಧಿಕಾರದಲ್ಲಿದ್ದಾಗ ಏನು ಮಾಡುತ್ತೇವೆ ಎಂಬುದು ಮುಖ್ಯ ಎಂದರು.
ಮೈಕ್ರೋ ಫೈನಾನ್ಸ್‌ಗಳ ಜತೆ ಸಿಪಿಐ ರೇವಣ್ಣ ಸಭೆ
ಪೊಲೀಸ್ ಇಲಾಖೆಯ ಸಿಪಿಐ ರೇವಣ್ಣ ಠಾಣೆಯಲ್ಲಿ ಮೈಕ್ರೋ ಫೈನಾನ್ಸ್ ನಡೆಸುವ ಉದ್ಯೋಗಿಗಳ ಸಭೆಯನ್ನು ನಡೆಸಿ ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಯ ಉದ್ಯೋಗಿಗಳ ಸಾಲ ವಸೂಲಾತಿ ಸಂದರ್ಭದಲ್ಲಿ ಕಿರುಕುಳ ನೀಡುತ್ತಾ ದೌರ್ಜನ್ಯ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆತ್ನಹತ್ಯೆಗೆ ಮುಂದಾದ ಪ್ರಕರಣಗಳು ರಾಜ್ಯದಲ್ಲಿ ವ್ಯಾಪಕವಾಗಿವೆ. ಈ ಹಿನ್ನೆಲೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿ ಉದ್ಯೋಗಿಗಳನ್ನು ಠಾಣೆಗೆ ಕರೆಸಿ ಸೌಹಾರ್ದತೆ ಸಭೆಯನ್ನು ನಡೆಸಿ ಅವರಿಗೆ ತಿಳುವಳಿಕೆ ಜೊತೆಗೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.
ಒಳಾಂಗಣ ಕ್ರೀಡಾಂಗಣದ ಕಿಟಕಿಗಳ ಕಳವು
ಹೇಮಾವತಿ ಕ್ರೀಡಾಂಗಣದ ಆವರಣದಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಂಡಿಲ್ಲದ ಒಳಾಂಗಣ ಕ್ರೀಡಾಂಗಣದ ಕಿಟಕಿ ಫ್ರೇಮ್ ಸಹಿತ ಗಾಜುಗಳನ್ನು ಕಳ್ಳರು ಕಿತ್ತುಕೊಂಡು ಹೋಗಿದ್ದಾರೆ. ಒಳಾಂಗಣ ಕ್ರೀಡಾಂಗಣದ ಕಟ್ಟಡದ ಸುತ್ತಲಿನ ಕಿಟಕಿಗಳಿಗೆ ಪಿವಿಸಿ ಫ್ರೇಮ್‌ಗಳಲ್ಲಿ ಕಟ್ಟಡದ ಅಂದವಾಗಿಸುವ ಗಾಜುಗಳನ್ನು ಅಳವಡಿಸಲಾಗಿತ್ತು, ಆದರೆ ಕಳ್ಳರು ಕಟ್ಟಡದ ಸುತ್ತಮುತ್ತಲಿನ ಕಿಟಕಿಗಳ ಪಿವಿಸಿ ಫ್ರೇಮ್‌ಗಳ ಸಮೇತ ಗಾಜುಗಳನ್ನು ಕದ್ದೊಯ್ದಿದ್ದಾರೆ.
ಕೊಣನೂರಿನಲ್ಲಿ ಗಣರಾಜ್ಯೋತ್ಸವ ಆಚರಣೆ
ಕೊಣನೂರಿನ ಎಲ್ಲಾ ಸರ್ಕಾರಿ, ಖಾಸಗಿ ಶಾಲಾ ಕಾಲೇಜು, ಗ್ರಾಮ ಪಂಚಾಯತಿ ಆವರಣ, ಆರೋಗ್ಯ, ಪೊಲೀಸ್ ಇಲಾಖೆಗಳಲ್ಲಿ, ಕಂದಾಯ ಇಲಾಖೆ, ಪತ್ತಿನ ಸಹಕಾರ ಸಂಘ ಮುಂತಾದೆಡೆಗಳಲ್ಲಿ 76ನೇ ವರ್ಷದ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು. ಸರ್ಕಾರಿ ಇಲಾಖೆಯವರು ಗ್ರಾಮಪಂಚಾಯತಿ ಆವರಣದಲ್ಲಿ ನಡೆಯುವ ಧ್ವಜಾರೋಹಣ ಕಾರ್ಯಕ್ರಮಕ್ಕೆ ಆಗಮಿಸಿದರು. ಕೊಣನೂರು ಪಂಚಾಯತಿ ಆವರಣದಲ್ಲಿ ಗ್ರಾ.ಪಂ ಅಧ್ಯಕ್ಷೆ ಮಿಸ್ಬಾ ರಿಜ್ವಾನ್ ಧ್ವಜಾರೋಹಣ ನೆರವೇರಿಸಿದರು.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 412
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved