• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾನು ಮುಷ್ತಾಕ್‌ಗೆ ಬುಕರ್‌ ಪ್ರಶಸ್ತಿ ಹಿನ್ನೆಲೆ ಬೇಲೂರು ಕಸಾಪ ಸಂಭ್ರಮ
ಹಾಸನ ಜಿಲ್ಲೆಯ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಸಂದ ಹಿನ್ನೆಲೆಯಲ್ಲಿ ಬೇಲೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೇಕ್ ಕತ್ತರಿಸಿ ಸಂಭ್ರಮಾಚರಣೆಯನ್ನು ನಡೆಸಲಾಯಿತು. ಸಾಹಿತಿ ಇಂದಿರಮ್ಮ ಮಾತನಾಡಿ, ಕನ್ನಡ ಭಾಷೆ ಶ್ರೇಷ್ಠತೆಯ ಜೊತೆಗೆ ಬಾನು ಮುಷ್ತಾಕ್ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸ್ತ್ರೀ ಸಮಾನತೆಯನ್ನು ಎತ್ತಿ ಹಿಡಿಯುವ ಧೀರ ಮಹಿಳೆ ಎಂದರು.
ವಿದ್ಯೆಯಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ
ಭಗೀರಥ ಜಯಂತ್ಯುತ್ಸವ ಆಚರಣಾ ಸಮಿತಿ ಪಟ್ಟಣದ ಗಣಪತಿ ಕೊತ್ತಲು ಉದ್ಯಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಭಗೀರಥ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಉಪ್ಪಾರ ಸಮುದಾಯ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ವಿದ್ಯೆಯಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ. ಮಕ್ಕಳಿಗೆ ಆಸ್ತಿ ಮಾಡುವ ಬದಲು ಶಿಕ್ಷಣ ನೀಡಿ ಅವರನ್ನೇ ಸಮಾಜದ ಆಸ್ತಿಯನ್ನಾಗಿ ರೂಪಿಸುವಂತೆ ತಿಳಿಸಿ ಸಮುದಾಯದ ಮುಖಂಡರು ಭಿನ್ನಾಭಿಪ್ರಾಯ ಬದಿಗೊತ್ತಿ ಬಂದಲ್ಲಿ ನೆನಗುದಿಗೆ ಬಿದ್ದಿರುವ ಸಮುದಾಯ ಭವನದ ಕಾಮಗಾರಿ ಪೂರ್ಣಗೊಳ್ಳಲು ಅಗತ್ಯ ನೆರವು ನೀಡುವುದಾಗಿ ಹೇಳಿದರು.
ತಾಲೂಕು ಕಚೇರಿ ಸಿಬ್ಬಂದಿಯಿಂದ ರೈತರ ಶೋಷಣೆ
ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಮಾಡುವ ತಪ್ಪಿಗೆ ರೈತರು ಹೈರಾಣಾಗುವ ಪರಿಸ್ಥಿತಿ ಎದುರಾಗಿದೆ ಎಂದು ಟಿಎಪಿಸಿಎಂಎಸ್‌ನ ಅಧ್ಯಕ್ಷ ಎಂ.ಆರ್‌. ಅನಿಲ್ ಕುಮಾರ್ ಕಚೇರಿಯ ಕಾರ್ಯವೈಖರಿಯನ್ನ ತರಾಟೆಗೆ ತೆಗೆದುಕೊಂಡ ಪ್ರಸಂಗ ಕೆಡಿಪಿ ಸಭೆಯಲ್ಲಿ ನಡೆಯಿತು. ಜೂನ್ ೬ರಂದು ಮಧ್ಯಾಹ್ನ ೨:೩೦ಕ್ಕೆ ತಾಲೂಕು ಕಚೇರಿಯಲ್ಲಿ ಸ್ಥಳದಲ್ಲಿ ತಿದ್ದುಪಡಿ ಮಾಡುವ ಕಾರ್ಯಕ್ರಮ ರೂಪಿಸುವಂತೆ ಸೂಚಿಸಿದರು. ಅಲ್ಲದೆ ಸಾರ್ವಜನಿಕರು ಈ ನಿಟ್ಟಿನಲ್ಲಿ ಯಾವುದೇ ಸಮಸ್ಯೆಗಳಿದ್ದರೂ ಅಂದು ಹಾಜರಿದ್ದು ಸರಿಪಡಿಸಿಕೊಳ್ಳುವಂತೆ ಶಾಸಕ ಮನವಿ ಮಾಡಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ದೈಹಿಕ ಶಿಕ್ಷಣ ಪೂರಕ
ಸರ್ಕಾರಿ ಕಲಾ ಕಾಲೇಜು ಸಾವಿರಾರು ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ಸಾಕ್ಷಿಯಾಗಿದೆ. ಅಲ್ಲದೆ ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿರುವ ಕಲಾ ಕಾಲೇಜು ನುರಿತ ಉಪನ್ಯಾಸಕರ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಪಥದತ್ತ ಸಾಗಲಿ ಈ ಕ್ರೀಡಾಕೂಟ ಯಶಸ್ವಿಯಾಗಲಿ ಎಂದು ಹಾರೈಸಿದರು.
ಚನ್ನರಾಯಪಟ್ಟಣದಲ್ಲಿ ತಿರಂಗಾ ಯಾತ್ರೆ ಯಶಸ್ವಿ
ಆಪರೇಷನ್ ಸಿಂದೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ರಾಷ್ಟ್ರ ರಕ್ಷಣೆಗಾಗಿ ಪಟ್ಟಣದ ನಾಗರಿಕರ ವತಿಯಿಂದ ನಡೆದ ಬೃಹತ್ ತಿರಂಗಾ ಯಾತ್ರೆಯಲ್ಲಿ ಸಾವಿರಾರು ಜನರು ಭಾಗವಹಿಸಿ ಯಶಸ್ವಿಗೊಳಿಸಿದರು. ಪಾಪಿ ಪಾಕಿಸ್ತಾನದ ದೇಶದ್ರೋಹಿ ಕೆಲಸಗಳನ್ನು ಭಾರತೀಯರಾದ ನಾವೂ ಯಾವಾಗಲೂ ಖಂಡಿಸುತ್ತೇವೆ. ದೇಶ ಚೆನ್ನಾಗಿದ್ದರೆ ನಾವೆಲ್ಲರೂ ಚೆನ್ನಾಗಿರುತ್ತೇವೆ. ಆದ್ದರಿಂದ ಎಲ್ಲರೂ ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕು ಮತ್ತು ದೇಶದ ಬಗ್ಗೆ ಚಿಂತನೆ ಮಾಡಬೇಕು ಎಂದರು.
ಪ್ರೇಕ್ಷಕರನ್ನು ರಂಜಿಸಿದ ಸಂಗೀತ ಕಛೇರಿ
ರುದ್ರಪಟ್ಟಣದಲ್ಲಿ ಹಮ್ಮಿಕೊಂಡಿರುವ 22ನೇ ಸಂಗೀತೋತ್ಸವದಲ್ಲಿ ಪ್ರಸಿದ್ಧ ಕಲಾವಿದರು ಸಂಗೀತ ಕಚೇರಿ ಪ್ರಸ್ತುತ ಪಡಿಸಿ ರಾಗಸುಧೆ ಹರಿಸಿ ಪ್ರೇಕ್ಷಕರನ್ನು ರಂಜಿಸಿದರು. ವಿದ್ವಾನ್ ಚಂದನ್ ಕುಮಾರ್ ಎರಡು ತಾಸು ನಿರಂತರವಾಗಿ ನುಡಿಸಿದ ಕೊಳಲು ವಾದನದ ನೀನಾದ ಜನರನ್ನು ನಾದಲೋಕದಲ್ಲಿ ತೇಲಿಸಿತು. ಪುರಂದರ ದಾಸರ ಗಜವದನ ಬೇಡುವೆ, ಮುತ್ತುಸ್ವಾಮಿ ದೀಕ್ಷಿತರ ಅಖಿಲಾಂಡೇಶ್ವರಿ - ದ್ವಿಜಾವಂತಿ ಆದಿತಾಳದಲ್ಲಿ ಹಾಗೂ ಪಿಟೀಲು ಚೌಡಯ್ಯ ಅವರ ಶ್ರೀರಾಮ ಆನಂದಭೈರವಿ ಖಂಡ ಛಾಪು ಮನಸೆಳೆಯಿತು.
ಸಕಲೇಶಪುರದಲ್ಲಿ ತಿರಂಗಾ ಯಾತ್ರೆ ಯಶಸ್ವಿ
ಹಿಂಸೆಯನ್ನು ಸಹಿಸುವ ರಾಷ್ಟ್ರ ಭಾರತವಲ್ಲ. ಬದಲಾದ ಭಾರತದ ಬಗ್ಗೆ ಮಾತನಾಡುವ ಮುನ್ನ ಶತ್ರು ರಾಷ್ಟ್ರಗಳು ಯೋಚಿಸಬೇಕಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಶುಕ್ರವಾರ ಪಟ್ಟಣದಲ್ಲಿ ಬಿಜೆಪಿ, ವಿಶ್ವಹಿಂದೂ ಪರಿಷತ್ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿ, ಅಹಿಂಸೆಯನ್ನೇ ದೇಶದ ದೌರ್ಬಲ್ಯವೆಂದು ಕೊಂಡಿದ್ದ ನಮ್ಮ ಶತ್ರುಗಳು ಕಳೆದ ಏಳು ದಶಕದಿಂದ ಭಯೋತ್ಪಾದನೆ ಮೂಲಕ ಗಡಿ ಪ್ರದೇಶದ ಜನರ ನೆಮ್ಮದಿ ಹಾಳು ಮಾಡಿದ್ದಾರೆ ಎಂದರು.
ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸುವಂತೆ ಸೂಚನೆ
ಮಳೆಗಾಲ ಆರಂಭವಾಗಿರೋ ಹಿನ್ನೆಲೆಯಲ್ಲಿ ಲಾರ್ವ ಸಮೀಕ್ಷೆ, ಡೆಂಘೀ ನಿಯಂತ್ರಣ, ಮಲೇರಿಯಾ ರೋಗ ತಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಗ್ರಾಮ ಹಾಗೂ ಪಟ್ಟಣದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು, ಚರಂಡಿ ಮತ್ತು ಇನ್ನಿತರೆ ಗುಂಡಿಗಳಲ್ಲಿ ಹೆಚ್ಚು ನೀರು ನಿಲ್ಲದಂತೆ ನೋಡಿಕೊಳ್ಳಬೇಕು, ಸೊಳ್ಳೆಗಳಿಂದ ಹರಡುವ ರೋಗಗಳಾದ ಡೆಂಘೀ, ಚಿಕುನ್ ಗುನ್ಯಾ, ಮಲೇರಿಯಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹರಿಸಬೇಕು ಎಂದು ತಹಸೀಲ್ದಾರ್‌ ಮಲ್ಲಿಕಾರ್ಜುನ್ ತಿಳಿಸಿದರು.
ರುದ್ರಪಟ್ಟಣದ ಸಂಗೀತೋತ್ಸವಕ್ಕೆ ಮಾಜಿ ಶಾಸಕ ಎಟಿಆರ್‌ ಶ್ಲಾಘನೆ
ಕರ್ನಾಟಕ ಶಾಸ್ತ್ರೀಯ ಸಂಗೀತ ಪ್ರಪಂಚದ ಐತಿಹಾಸಿಕ ಕ್ಷೇತ್ರವಾಗಿದೆ. ಜಗತ್ತಿನ ಮೂಲೆ ಮೂಲೆಗಳಲ್ಲಿ ಸ್ಥಳೀಯ ಶಾಸ್ತ್ರೀಯ ಸಂಗೀತ ಸಂಸ್ಕೃತಿಯೊಂದಿಗೆ ಬೆರೆತು ಆತ್ಮೀಯವಾಗಿ ಹಿಡಿಯಬಲ್ಲ ಸಂಗೀತ ಸಾಧನವನ್ನು ವಿದ್ವಾನ್ ಆರ್‌.ಕೆ. ಪದ್ಮನಾಭ ಅವರು 22 ವರ್ಷಗಳಿಂದ ಸಂಗೀತ ಗ್ರಾಮ ರುದ್ರಪಟ್ಟಣದಲ್ಲಿ ನಡೆಸಿಕೊಂಡು ಬರುತ್ತಿರುವುದಕ್ಕೆ ಸದನ ಸಮಿತಿ ಮಾಜಿ ಅಧ್ಯಕ್ಷರು ಹಾಗೂ ಮಾಜಿ ಶಾಸಕರು ಡಾ. ಎ.ಟಿ. ರಾಮಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಗೀತ ಭಾಷೆಯನ್ನು ಜಗತ್ತಿನ ಮೂಲೆಮೂಲೆಗಳಲ್ಲಿ ಸ್ಥಳೀಯ ಸಂಸ್ಕೃತಿಯೊಂದಿಗೆ ಬೆರೆತು ತಮ್ಮನ್ನು ತೊಡಗಿಸಿಕೊಂಡು ಜನಜನಿತವಾಗಿದ್ದಾರೆ. ಇಂತಹ ವಿದ್ವಾಂಸರು ನಮ್ಮ ರುದ್ರಪಟ್ಟಣದಲ್ಲಿರುವುದು ಹೆಮ್ಮೆಯ ವಿಷಯ ಎಂದು ಡಾ. ಎ.ಟಿ. ರಾಮಸ್ವಾಮಿ ಬಣ್ಣಿಸಿದರು.
ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನ
ಕೃಷಿ ಇಲಾಖೆ ವತಿಯಿಂದ ಕೃಷಿಭಾಗ್ಯ ಯೋಜನೆ ಮೂಲಕ 2025 - 26ನೇ ಸಾಲಿನಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ 1.25 ಲಕ್ಷ ರು. ಸಹಾಯಧನ ನೀಡಲಾಗುತ್ತಿದೆ. ರೈತರು ಈ ಯೋಜನೆಯ ಲಾಭ ಪಡೆಯುವಂತೆ ಹೋಬಳಿ ಕೃಷಿ ಅಧಿಕಾರಿ ರಕ್ಷಿತ್ ಎಚ್ ಎಸ್ ತಿಳಿಸಿದರು. ಈ ಯೋಜನೆಯ ಲಾಭ ಪಡೆಯಲು ಕೃಷಿ ಇಲಾಖೆಯ ನಿಬಂಧನೆ ಯಂತೆ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು ಹಾಗೂ ಈಗಾಗಲೇ ಕೃಷಿ ಹೊಂಡ ಪಡೆದಿದ್ದರೆ ಈ ಯೋಜನೆಗೆ ಅನ್ವಯಿಸುವುದಿಲ್ಲ ಹೊಸ ರೈತರಿಗಾಗಿ ಈ ಯೋಜನೆಯನ್ನು ಕೃಷಿ ಇಲಾಖೆ ಜಾರಿಗೆ ತಂದಿದೆ ಎಂದರು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 508
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved