• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರಿಗೆ ಸಂಚಾರದ ಖರ್ಚು ಉಳಿಸಿದ ಶಕ್ತಿ ಯೋಜನೆ
ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಅನುಷ್ಠಾನಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಉಚಿತ ಬಸ್‌ ಪ್ರಯಾಣದ ಮಹಿಳಾ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿರುವ ಹಿನ್ನೆಲೆಯಲ್ಲಿ ಇಂದು ಶಕ್ತಿ ಸಂಭ್ರಮ ಕಾರ್ಯಕ್ರಮವನ್ನು ಸಡಗರದಿಂದ ಆಚರಿಸಲಾಯಿತು. ಶಕ್ತಿಯೋಜನೆಯಿಂದ ಸಾಕಷ್ಟು ಬಡ ಮಹಿಳಾ ಪ್ರಯಾಣಿಕರು ನಿರುದ್ಯೋಗಸ್ಥ ಮಹಿಳೆಯರು ಹಾಗೂ ಶಾಲಾ ಕಾಲೇಜಿನ ವಿದ್ಯಾರ್ಥಿನಿಯರು ಸೇರಿದಂತೆ ಎಲ್ಲಾ ಮಹಿಳೆಯರ ಪ್ರಯಾಣಕ್ಕೆ ಸಹಕಾರಿಯಾಗಿದೆ. ಸಂಚಾರಕ್ಕಾಗಿ ಮಾಡುತ್ತಿದ್ದ ಖರ್ಚು ಉಳಿತಾಯವಾಗಿದೆ. ಗಾರ್ಮೆಂಟ್ಸ್‌ ಸೇರಿದಂತೆ ಸಣ್ಣ ಪುಟ್ಟ ಕೆಲಸಗಳಿಗೆ ಹೋಗುವ ಮಹಿಳೆಯರಿಗೆ ವರದಾನವಾಗಿದ್ದು, ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಶಕ್ತಿ ಯೋಜನೆ ನೆರವಾಗುತ್ತಿದೆ ಎಂದರು.
ರಸ್ತೆ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ
ಹೋಬಳಿಯ ಬಿ ಹೊನ್ನೇನಹಳ್ಳಿ ಗ್ರಾಮದಲ್ಲಿ 1.70 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಶಾಸಕ ಸಿ ಎನ್ ಬಾಲಕೃಷ್ಣ ತಿಳಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ದೊರೆತಿತ್ತು. ಆದರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ದೊರೆತಿಲ್ಲ. ಕಳೆದ ಎರಡು ವರ್ಷಗಳಿಂದ ತಾಲೂಕಿನಲ್ಲಿ ಮಳೆಯಿಂದ ಹಾಳಾಗಿರುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸಮಸ್ಯೆಯಾಗುತ್ತಿದ್ದು, ಈ ಬಗ್ಗೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಲಾಗಿದೆ ಎಂದರು.
ಹದಿಹರೆಯದವರಿಗೆ ಆರೋಗ್ಯದ ಅರಿವು ಜಾಗೃತಿ ಅತ್ಯಗತ್ಯ
ಯುವಕರು ತಮ್ಮ ದೇಹದ ಮೇಲೆ ದುಷ್ಪರಿಣಾಮ ಬೀರುವ ಆಹಾರ ಮತ್ತು ಕೆಟ್ಟ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಿಗೆ ಆರೋಗ್ಯ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಅಧ್ಯಕ್ಷ ಹಾಗೂ ಜಾನಪದ ಪರಿಷತ್ತು ಅಧ್ಯಕ್ಷ ವೈ.ಎಸ್. ಸಿದ್ದೇಗೌಡ ಹೇಳಿದರು. ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುವ ಮೂಲಕ, ಶಾಲೆಗಳು ಹದಿಹರೆಯದವರ ಆರೋಗ್ಯವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಮೃತರ ಸಂಖ್ಯೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಇಂತಹ ಆರೋಗ್ಯ ಮಾಹಿತಿ ಅವಶ್ಯವಾಗಿದೆ ಎಂದರು.
ಗಂಡನಿಂದಲೇ ಪತ್ನಿ ಕೊಲೆ ಅನುಮಾನ ಮರು ಮರಣೋತ್ತರ ಪರೀಕ್ಷೆಗೆ ಮನವಿ
ಕೆಳಹಳ್ಳಿ ದಲಿತ ಮಹಿಳೆ ಶಾರದರವರನ್ನ ಗಂಡನಾದ ಪ್ರಸನ್ನ ಕೊಲೆ ಮಾಡಿರುವ ಬಗ್ಗೆ ಅನುಮಾನವಿದ್ದು, ಮರು ಮರಣೋತ್ತರ ಪರೀಕ್ಷೆ ನಡೆಸಿ ಸತ್ಯತೆ ಹೊರ ಬರುವ ಮೂಲಕ ನ್ಯಾಯಕೊಡಿಸಿ ತಪ್ಪಿಕಸ್ತರಿಗೆ ಶಿಕ್ಷೆ ಕೊಡಿಸಬೇಕೆಂದು ಆಗ್ರಹಿಸಿ ಡಿಸಿ ಕಚೇರಿ ಮುಂದೆ ದಲಿತಪರ ಸಂಘಟನೆಗಳ ಮಹಾ ಒಕ್ಕೂಟದಿಂದ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮತ್ತು ಹಿಮ್ಸ್ ನಿರ್ದೇಶಕ ರಾಜಣ್ಣ ಅವರಿಗೆ ಮನವಿ ಸಲ್ಲಿಸಿದರು. ಹಳೇಬೀಡು ಎಸ್‌ಐ ಸಿದ್ದಲಿಂಗ ಬನವಾಸೆಯವರಿಗೆ ದೂರವಾಣಿ ಕರೆ ಮೂಲಕ ಮರಣೋತ್ತರ ಪರೀಕ್ಷೆ ಬಗ್ಗೆ ವಿಚಾರಿಸಿದಾಗ ಸಹಜ ಸಾವು ಎಂದು ಸಬೂಬು ಹೇಳುತ್ತಾರೆ ಎಂದು ದೂರಿದರು.
ಮಠಮಾನ್ಯಗಳಿಂದ ಧರ್ಮ ಸಂಸ್ಕೃತಿ ಉಳಿದಿದೆ
ಮಠಮಾನ್ಯಗಳ ಪರಂಪರೆಯಿಂದ ಮಾತ್ರ ಸಂಸ್ಕೃತಿ ಧರ್ಮ ಉಳಿದಿದೆ. ಜೊತೆಗೆ ಮನುಷ್ಯನಲ್ಲಿ ಸನ್ಮಾರ್ಗದ ಗುಣಗಳನ್ನು ಬೆಳೆಸುತ್ತಿವೆ ಎಂದು ಬಾಳೆಹೊನ್ನೂರು ಮಠದ ರಂಭಾಪುರಿ ಜಗದ್ಗುರುಗಳು ಅಭಿಪ್ರಾಯಪಟ್ಟರು. ಜಗತ್ತಿನಲ್ಲಿ ದೇವರ ಅನುಗ್ರಹವಿಲ್ಲದೆ ಏನೂ ನಡೆಯಲು ಸಾಧ್ಯವಿಲ್ಲ ಎಂಬುದನ್ನು ಮನುಷ್ಯ ಅರ್ಥಮಾಡಿಕೊಳ್ಳಬೇಕು, ವಿಜ್ಞಾನ ಬೆಳೆದಂತೆ ಮನುಷ್ಯನ ಮನಸ್ಥಿತಿಯು ಬದಲಾಗುತ್ತಿದೆ. ತಾನು ನಡೆದು ಬಂದ ಪರಂಪರೆಯನ್ನು ಮರೆಯುತ್ತಿರುವ ಪರಿಣಾಮದಿಂದಲೇ ಪ್ರಕೃತಿಯಲ್ಲಿ ಹಲವು ಬದಲಾವಣೆಗಳಾಗಿ ಅವಘಡಗಳು ಹೆಚ್ಚಾಗಲು ಕಾರಣವಾಗಿದೆ ಎಂದರು.
ಸಮಾಜಕ್ಕೆ ಮಠಗಳ ಕೊಡುಗೆ ಅಪಾರ: ಶಾಸಕ ಶ್ರೀನಿವಾಸ್
ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಲನಹಳ್ಳಿ ಮಠಕ್ಕೆ ಭೇಟಿ ನೀಡಿ ಮಠಾಧೀಶರಾದ ಡಾ.ಸಿದ್ಧರಾಜು ಸ್ವಾಮೀಜಿಯವರ ಆಶೀರ್ವಾದ ಪಡೆದು ಮಾತನಾಡಿದ ಅವರು, ಪ್ರತಿಯೊಬ್ಬ ಮನುಷ್ಯನೂ ಸನ್ಮಾರ್ಗದಲ್ಲಿ ನಡೆಯಬೇಕಾದರೆ ಗುರುಗಳ ಆಶೀರ್ವಾದ ಇರಲೇಬೇಕು.
ಆಲೂರಿನ ವಿದ್ಯಾರ್ಥಿನಿಯರಿಗೆ ಎಚ್‌ಪಿವಿ ಲಸಿಕೆ
ರಾಧಮ್ಮ ಜನಸ್ಪಂದನ ಸಂಸ್ಥೆ ವತಿಯಿಂದ ಆಲೂರು ತಾಲೂಕಿನ 50 ವಿದ್ಯಾರ್ಥಿನಿಯರಿಗೆ ಪ್ರಥಮ ಹಂತವಾಗಿ ಸ್ತನ ಕ್ಯಾನ್ಸರ್‌ ತಡೆಗಟ್ಟುವ ಎಚ್‌ಪಿವಿ ಲಸಿಕೆ ಹಾಕಲಾಯಿತು. ಇನ್ಸ್ಪೈರ್ ಇಂಟರ್‌ನ್ಯಾಷನಲ್ ಶಾಲೆ ಕಾರುಗೋಡಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಳೆದ ತಿಂಗಳು ಮೆಮೋಗ್ರಫಿ ಸ್ಕ್ಯಾನಿಗೆ ಒಳಗಾಗಿದ್ದ 31 ಮಹಿಳೆಯರಿಗೆ ಸ್ಕ್ಯಾನಿಂಗ್ ರಿಪೋರ್ಟನ್ನು ಸಹ ನೀಡಲಾಯಿತು. ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಸಾವಿತ್ರಿ ಮಾತನಾಡಿ, ಹೇಮಂತ್ ಕುಮಾರ್ ಅವರು ಇಂತಹ ಕಾರ್ಯ ಮಾಡಲು ಅವರ ತಾಯಿ ಆಶೀರ್ವಾದವೇ ಪ್ರಮುಖ ಕಾರಣ. ಅವರ ತಾಯಿ ನೆನಪಿಗಾಗಿ ದುಡಿಯುತ್ತಿರುವುದು ಆರೋಗ್ಯ ಕ್ಷೇತ್ರದಲ್ಲಿ ರಾಜ್ಯಕ್ಕೆ ಮಾದರಿಯಾಗಬೇಕೆಂದರು.
ಹೊಳೆನರಸೀಪುರದಲ್ಲಿ ಶಕ್ತಿ ಯೋಜನೆ ಸಂಭ್ರಮಾಚರಣೆ
ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದ ಮಹಿಳೆಯರು ಉಚಿತ ಪ್ರಯಾಣ ಮಾಡುವ ಮೂಲಕ ತಮ್ಮ ಸ್ವಾವಲಂಬಿ ಕನಸುಗಳನ್ನು ಸಾಕಾರಗೊಳಿಸಿಕೊಳ್ಳಲು ಯೋಜನೆಯ ಪ್ರಯೋಜನ ಪಡೆದಿದ್ದಾರೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಕುಮಾರ್‌ ತಿಳಿಸಿದರು. ಕೆಎಸ್‌ಆರ್‌ಟಿಸಿ ತಾಲೂಕು ಘಟಕದ ವ್ಯವಸ್ಥಾಪಕ ಪಾಪನಾಯಕ್ ಮಾತನಾಡಿ, ತಾಲೂಕಿನ ಘಟಕದಲ್ಲಿ ಶಕ್ತಿ ಯೋಜನೆಯಡಿಯಲ್ಲಿ ತಿಂಗಳಿಗೆ ಸರಾಸರಿ ೨.೫ ಲಕ್ಷ ರು. ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಪ್ರಾಥಮಿಕ ಶಾಲೆಯಿಂದಲೇ ಗುಣಾತ್ಮಕ ಶಿಕ್ಷಣ ಶುರುವಾಗಲಿ
ಗುಣಮಟ್ಟದ ಶಿಕ್ಷಣ ಪಡೆಯಲು ಸರ್ಕಾರಿ ಶಾಲೆಗಳಲ್ಲಿ ಸಿಗುತ್ತದೆ. ಆದ್ದರಿಂದ ಗುಣಾತ್ಮಕ ಶಿಕ್ಷಣವನ್ನು ಕಿರಿಯ ಪ್ರಾಥಮಿಕ ಶಾಲೆಯಿಂದಲೇ ಆರಂಭಿಸಿ, ಸರ್ಕಾರದ ಸವಲತ್ತುಗಳನ್ನು ಪಡೆದುಕೊಂಡು ಉತ್ತಮ ದರ್ಜೆಯಲ್ಲಿ ವ್ಯಾಸಂಗದಲ್ಲಿ ಮುಂದೆ ಬನ್ನಿ ಎಂದು ಶಾಸಕ ಎ. ಮಂಜು ಸಲಹೆ ನೀಡಿದರು. ಇತ್ತೀಚಿನ ಕಾಲಘಟ್ಟದಲ್ಲಿ ಮಕ್ಕಳ ಮನೆ ಪೂರ್ವ ಪ್ರಾಥಮಿಕ ಶಿಕ್ಷಣ ಯಾವ ಕಾನ್ವೆಂಟ್‌ಗಳಿಗೂ ಕಡಿಮೆ ಇಲ್ಲದಂತೆ ಗುಣಾತ್ಮಕ ಶಿಕ್ಷಣ ನೀಡುತ್ತಿರುವುದು ನಮ್ಮ ಗುರಿಯಾಗಿದೆ ಎಂದು ಮಂಜು ತಿಳಿಸಿದರು.
ಕಲಿಕೆಯ ಜತೆಗೆ ಸಾಮಾನ್ಯ ಜ್ಞಾನವನ್ನೂ ತಿಳಿದುಕೊಳ್ಳಿ
ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಲಿಕೆಯ ಜತೆಗೆ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ದೊರೆಯುವ ಅಮೂಲ್ಯವಾದ ಸಮಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ನಾಗೇಶ ಕುಮಾರ್ ಡಿ. ಸಲಹೆ ನೀಡಿದರು. ಜ್ಞಾನರ್ಜನೆಗೆ ಪೂರಕವಾದ ಪುಸ್ತಕವನ್ನು ಹೆಚ್ಚು ಹೆಚ್ಚು ಓದಿ ತಿಳಿದುಕೊಳ್ಳುವ ಮನಸ್ಥಿತಿ ರೂಡಿಸಿಕೊಂಡು, ಉತ್ತಮ ಆರೋಗ್ಯ ಹಾಗೂ ಅತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಲು ಅಗತ್ಯವಾದ ಯೋಗಾಭ್ಯಾಸ ಮಾಡುತ್ತಾ ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಜತೆಗೆ ಪೋಷಕರು ಕನಸನ್ನು ನನಸು ಮಾಡಿರೆಂದು ಸಲಹೆ ನೀಡಿದರು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 550
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved