• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
29ಕ್ಕೆ ರಿಸರ್ವ್‌ ಬ್ಯಾಂಕ್‌ ಎದುರು ರೈತ ಸಂಘ ಪ್ರತಿಭಟನೆ
ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜ.೨೯ರಂದು ಬೆಳಗ್ಗೆ ೧೧ ಗಂಟೆಗೆ ಬೆಂಗಳೂರಿನ ರಿಸರ್ವ್ ಬ್ಯಾಂಕ್ ಎದುರು ರೈತರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಮಾಳೇನಹಳ್ಳಿ ಹರೀಶ್ ತಿಳಿಸಿದ್ದಾರೆ. ಅವರು ಪಟ್ಟಣದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ ಮೈಕ್ರೋ ಫೈನಾನ್ಸ್ ಹಾವಳಿ ಕಿರುಕುಳ ತಡೆಗಟ್ಟಲು ಆಗ್ರಹಿಸಿ ರಾಜಧಾನಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ರೈತ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಕರೆ ನೀಡಿದರು.
ಅರಣ್ಯ ಪ್ರದೇಶದ ಹೆಚ್ಚು ಒತ್ತುವರಿ ವಿರುದ್ಧ ಕ್ರಮ
ರಾಜ್ಯದೆಲ್ಲೆಡೆ ಅರಣ್ಯ ಪ್ರದೇಶ ದೊಡ್ಡ ಪ್ರಮಾಣದಲ್ಲಿ ಒತ್ತುವರಿ ಆಗಿದೆ, 2015ರ ನಂತರದಲ್ಲಿ, ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ಆದೇಶದ ಅನ್ವಯ ಅರಣ್ಯ ಪ್ರದೇಶದ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲಾಗುವುದು. ಪ್ರಕೃತಿಯನ್ನು ಕಾಪಾಡುವ ನಿಟ್ಟಿನಲ್ಲಿ ಅರಣ್ಯ ಪ್ರದೇಶವನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಕರ್ನಾಟಕ ಸರ್ಕಾರದ ಅರಣ್ಯ ಖಾತೆ ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯ ವ್ಯಕ್ತಪಡಿಸಿದರು.
ವಿದ್ಯಾವಂತರೇ ಮತದಾನದಿಂದ ದೂರ ಉಳಿಯುತ್ತಿದ್ದಾರೆ
ಇತ್ತೀಚಿನ ವರ್ಷಗಳಲ್ಲಿ ವಿದ್ಯಾವಂತರು ಮತದಾನ ಪ್ರಕ್ರಿಯೆಯಿಂದ ದೂರ ಉಳಿದು ಹಕ್ಕು ಮತ್ತು ಕರ್ತವ್ಯದಿಂದ ವಂಚಿತರಾಗುತ್ತಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಎಂ.ಎಸ್. ಶಶಿಕಲಾ ಬೇಸರ ವ್ಯಕ್ತಪಡಿಸಿದರು. ಪ್ರಜ್ಞಾವಂತ ಮಹಿಳೆಯರು ತಮ್ಮ ಹಕ್ಕು ಮತ್ತು ಕರ್ತವ್ಯವನ್ನು ಅರಿತು ಜವಾಬ್ದಾರಿಯುತವಾಗಿ ಜೀವನ ನಡೆಸಬೇಕು. ಬಾಲ್ಯವಿವಾಹಗಳಂತಹ ಘಟನೆಗಳು ನಡೆದರೆ ತಕ್ಷಣ ಮಾಹಿತಿ ನೀಡಬೇಕು ಎಂದರು.
ಹಾರನಹಳ್ಳಿ ರಸ್ತೆ ದುರಸ್ತಿ ಕಾಮಗಾರಿ ಪುನಾರಂಭ
ರಾಜ್ಯ ಹೆದ್ದಾರಿ 105 ಅರಸೀಕೆರೆ-ಹಾಸನ ಮುಖ್ಯರಸ್ತೆಯ ಹಾರನಹಳ್ಳಿ ಆಂಜನೇಯ ದೇವಾಲಯದಿಂದ ಜಾವಗಲ್ ರಸ್ತೆವರೆಗೆ ಚತಷ್ಪಥ ರಸ್ತೆ ಯೋಜನೆಗೆ ಲೋಕೋಪಯೋಗಿ ಇಲಾಖೆಯಿಂದ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಆರಂಭವಾದ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿತ್ತು. ಆರ್ಧಕ್ಕೆ ಕಾಮಗಾರಿ ನಿಂತಿತ್ತು. ಕೊನೆಗೂ ಕಳೆದ 3 ದಿನಗಳಿಂದ ರಸ್ತೆ ದುರಸ್ತಿ ಕಾರ್ಯ ಆರಂಭಿಸಲಾಗಿದೆ. ಗುತ್ತಿನಕೆರೆ ಹೋಗುವ ಸರ್ಕಲ್ ಜಾವಗಲ್ ತಿರುವು ಸರ್ಕಲ್‌ಗಳನ್ನು ಅಗಲ ಮಾಡಲಿ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಹಾರನಹಳ್ಳಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಅವಕಾಶ ಬಳಸಿಕೊಂಡು ಸಾಧನೆ ಮಾಡಿ
ವಿದ್ಯಾವಂತರು, ಶಿಕ್ಷಿತರ ಮಧ್ಯೆ ಇರುವ ಮಕ್ಕಳು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಬೇಕು. ಅದಕ್ಕೆ ಬೇಕಾದ ಎಲ್ಲ ಅವಕಾಶ ಇದೆ ಎಂದು ಶಿಕ್ಷಣ ಸಂತ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಹೇಳಿದರು. ನಗರದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಜನಮಿತ್ರ ಆಯೋಜಿಸಿರುವ ಎರಡು ದಿನಗಳ ಎಕ್ಸ್‌ಪೋಗೆ ಶನಿವಾರ ಬೆಳಗ್ಗೆ ಚಾಲನೆ ನೀಡಿ ಮಾತನಾಡಿದರು. ನಾನು ಯಾವುದೇ ಸೌಲಭ್ಯ ಇಲ್ಲದ ಹಳ್ಳಿಯಲ್ಲಿ ಹುಟ್ಟಿ ಬೆಳೆದವನು. ನನಗೆ ಅಕ್ಷರಜ್ಞಾನ ಇಲ್ಲ, ೧೯೭೨ರ ದಶಕದಿಂದಲೂ ಮಂಗಳೂರಿನ ಸ್ಟೇಟ್‌ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಕಿತ್ತಲೆಹಣ್ಣು ಮಾರುತ್ತಿರುವ ನನಗೆ ಅದೊಂದು ದಿನ ಇಂಗ್ಲಿಷ್ ಗೊತ್ತಿಲ್ಲದೆ ಆದ ಮುಜುಗರದಿಂದ ಶಾಲೆ ತೆರೆದು ನನ್ನೂರಿನ ಮಕ್ಕಳಿಗೆ ಅಕ್ಷರ ಕಲಿಸಬೇಕೆಂಬ ಸಂಕಲ್ಪ ಮಾಡಿದೆ ಎಂದರು.
ಐದಳ್ಳ ಕಾವಲಿನ ಭೂಮಿ ರೈತರಿಗೆ ಉಳಿಸಿಕೊಡಿ
ಹಳೇಬೀಡು ಹೋಬಳಿ ಐದಳ್ಳ ಕಾವಲಿನ ಸರ್ವೇ ನಂ. ೧ರ ೨೬೮೦ ಎಕರೆ ಭೂಮಿಯಲ್ಲಿ ಕೃಷಿ ಚಟವಟಿಕೆ ನಡೆಸುವ ರೈತರನ್ನು ಅರಣ್ಯ ಇಲಾಖೆ ಒಕ್ಕಲೆಬ್ಬಿಸುವ ಮೂಲಕ ರೈತರಿಗೆ ಅನ್ಯಾಯ ಮಾಡಿದೆ. ರೈತರಿಗೆ ಭೂಮಿ ಉಳಿಸಿಕೊಡದಿದ್ದರೆ ಜನವರಿ ೨೬ರಂದು ಬೇಲೂರಿಗೆ ರಸ್ತೆತಡೆ ನಡೆಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಷ್ಟ್ರೀಯ ಸಂಚಾಲಕ ಕನಕಂಚೇನಹಳ್ಳಿ ಪಟೇಲ್ ಪ್ರಸನ್ನಕುಮಾರ್ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಎಂ.ಮಮತಾ ಅವರಿಗೆ ಮನವಿ ಸಲ್ಲಿಸಿದರು.
ಆರೋಗ್ಯ ತಪಾಸಣೆ ಉಚಿತ ಶಿಬಿರ
ಇತ್ತೀಚಿನ ದಿನಗಳಲ್ಲಿ ಸಲಿಂಗಕಾಮ ಲೈಂಗಿಕ ಕ್ರಿಯೆ ಹೆಚ್ಚು ಕಂಡುಬರುತ್ತಿರುವುದರಿಂದ ಅವಿವಾಹಿತ ಯುವಕರಲ್ಲಿ ಎಚ್ಐವಿ ಖಚಿತ ಪ್ರಕರಣಗಳು ಹೆಚ್ಚು ಕಂಡುಬರುತ್ತಿರುವುದು ನೋವಿನ ಸಂಗತಿ ಎಂದು ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ ವಿಭಾಗದ ಆಪ್ತ ಸಮಾಲೋಚಕ ಪರಶುರಾಮ ಶಿರೂರ ಕಳವಳ ವ್ಯಕ್ತಪಡಿಸಿದರು. ಹೆಬ್ಬಾಲೆ ಗ್ರಾಮ ಪಂಚಾಯತ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹಾಸನ ಸಹಯೋಗದಲ್ಲಿ ಗಂಗನಾಳು ಗ್ರಾಮದಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣೆ ಉಚಿತ ಶಿಬಿರದಲ್ಲಿ ಮಾತನಾಡಿದರು.
ಸುತ್ತೂರು ಜಾತ್ರೆಗೆ ಒಂದು ಸಾರಿ ಬಂದು ಅನಂದಿಸಿ
ಮೈಸೂರು ಜಿಲ್ಲೆ ಶ್ರೀ ಸುತ್ತೂರಿನಲ್ಲಿ ಜನವರಿ 26ರಿಂದ 31ರವರೆಗೆ 6 ದಿವಸಗಳ ಕಾಲ ಶ್ರೀಕ್ಷೇತ್ರದ ಶ್ರೀ ವೀರ ಸಿಂಹಾಸನ ಮಹಾ ಸಂಸ್ಥಾನದ ಪರಮಪೂಜ್ಯ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರ ಸಾನಿಧ್ಯದಲ್ಲಿ ನಡೆಯುತ್ತಿದ್ದು, ರಾಜ್ಯ ಹಾಗೂ ಹಾಸನ ಜಿಲ್ಲೆಯ ಎಲ್ಲಾ ಸಮಾಜದವರು ಸುತ್ತೂರು ಜಾತ್ರಾ ಮಹೋತ್ಸದ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಸಂಚಾಲಕರು ಕೋಟವಾಳು ವಿರೂಪಾಕ್ಷ ಮುಂತಾದವರು ಮನವಿ ಮಾಡಿದರು.
ವಿದ್ಯುತ್‌ ಸಂಪರ್ಕ ನೀಡಲು 48 ವರ್ಷ ಬೇಕಾಯ್ತು
ಕನಿಷ್ಠ ಮಳೆ ಬೀಳುವ ಕಟ್ಟಾಯ ಹೋಬಳಿಯಲ್ಲಿ ಮಳೆಯಾಶ್ರಿತ ಬೆಳೆ ಮಾಡುವುದಕ್ಕೆ ಮಾತ್ರ ಇಲ್ಲಿನ ಜನರು ಸೀಮಿತಗೊಂಡಿದ್ದರು. ರಾವುತಹಳ್ಳಿ ಏತ ನೀರಾವರಿ ಯೋಜನೆ ಜಾರಿಗೊಳಿಸಿ ಎಂಬ ಹೋರಾಟ ನಿರಂತರವಾಗಿ ನಡೆಯುತ್ತಿದ್ದರೂ ಯಾವುದೇ ಆಡಳಿತಗಾರರು ಇತ್ತ ಗಮನಹರಿಸಿರಲಿಲ್ಲ. ಆದರೆ, ಯೋಜನೆ ನೆನಗುದಿಗೆ ಬಿದ್ದಿರುವುದನ್ನು ಗಮನಿಸಿದ್ದ ಆಲೂರು-ಸಕಲೇಶಪುರ-ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಕೇವಲ ೭ ಲಕ್ಷ ರು. ವೆಚ್ಚದಲ್ಲಿ ಯೋಜನೆಗೆ ನಿರಂತರ ವಿದ್ಯುತ್ ಸಂಪರ್ಕ ವ್ಯವಸ್ಥೆ ಮಾಡುವ ಮೂಲಕ ಯೋಜನೆ ಉದ್ಘಾಟನೆಗೊಳಿಸಿದ್ದಾರೆ.
ಶಿಲ್ಪಕಲೆ ಮುಂದಿನ ಪೀಳಿಗೆಗೂ ಮುಂದುವರಿಯಲಿ: ಬಿ.ಪಿ ಕೃಷ್ಣೇಗೌಡ
ಆ ಕಾಲದಲ್ಲೇ ಅಷ್ಟೊಂದು ಸುಂದರವಾದ ಕೆತ್ತನೆಯ ಮೂಲಕ ದೇವಾಲಯಗಳನ್ನು ನಿರ್ಮಾಣ ಮಾಡಿ ಜಗತ್ತಿನ ಕಣ್ಣು ತೆರೆಸಿದ ಮಹಾನ್ ಅನುಭವಿ ಅಮರಶಿಲ್ಪಿ ಜಕಣಾಚಾರಿ. ಇವರನ್ನು ಕೇವಲ ಒಂದು ಜಾತಿ ಒಂದು ಕುಲಕ್ಕೆ ಸೀಮಿತಮಾಡಬಾರದು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 413
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved