• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆಯನ್ನೆಲ್ಲಾ ಹದಗೆಡಿಸಿದ ಜಲಜೀವನ್‌ ಮಿಷನ್‌
ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಅರೆಹಳ್ಳಿ ಮಾರ್ಗದ ಅನುಘಟ್ಟ ರಸ್ತೆಯ ಮಾಲಹಳ್ಳಿ ಬಳಿ ಭೂಕುಸಿತ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ. ಅರೇಹಳ್ಳಿ ಸಮೀಪದ ಅನುಘಟ್ಟ ರಸ್ತೆಯಲ್ಲಿ ಜಲ್ ಜೀವನ್ ಮಿಷನ್ ಯೋಜನೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ರಸ್ತೆಯ ಎರಡು ಬದಿಯಲ್ಲೂ ಭೂಕುಸಿತ ಉಂಟಾಗಿ ಕಂದಕ ಏರ್ಪಟ್ಟಿದ್ದು ವಾಹನ ಸವಾರರು ಕೆಸರು ರಸ್ತೆಯಲ್ಲಿ ಗುಂಡಿ ತಪ್ಪಿಸಲು ಹರಸಹಾಸ ಪಡುವಂತಾಗಿದೆ.
ಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿ ತಂದುಕೊಟ್ಟ ಹಾಸನದ ಲೇಖಕಿ ಬಾನು ಮುಷ್ತಾಕ್

ಹಾಸನ ನಗರದ ನಿವಾಸಿ ಹಾಗೂ ಹಿರಿಯ ವಕೀಲೆ, ಕನ್ನಡದ ಲೇಖಕಿ ಬಾನು ಮುಷ್ತಾಕ್ ಅವರ ಅನುವಾದಿತ ಕೃತಿ ‘ಹಾರ್ಟ್ ಲ್ಯಾಂಪ್’ ಗೆ 2025 ರ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. 

ಮಕ್ಕಳ ರಕ್ಷಣಾ ಸಿಬ್ಬಂದಿಯ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ ಖಾಯಂಮೇತರ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕಾಂತರಾಜು ಮಾತನಾಡಿ, ಮಕ್ಕಳ ಸಂರಕ್ಷಣೆ ಸಂವಿಧಾನಬದ್ಧ ಜವಾಬ್ದಾರಿಯಾಗಿದ್ದು ಸಮಾಜದಲ್ಲಿ ನಿರ್ಲಕ್ಷ್ಯ, ಶೋಷಣೆ, ದೌರ್ಜನ್ಯಗಳಿಗೆ ಒಳಗಾಗಿ ಹಕ್ಕು ಮತ್ತು ಅವಕಾಶಗಳಿಂದ ವಂಚಿತರಾದ ಮಕ್ಕಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಬಾಲನ್ಯಾಯ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆಯ ಅಡಿಯಲ್ಲಿ ಅಸಹಾಯಕ, ಪಾಲನೆ, ಪೋಷಣೆ ಮತ್ತು ರಕ್ಷಣೆಯ ಅವಶ್ಯಕತೆ ಇರುವ ಮಕ್ಕಳು ಹಾಗೂ ಕಾನೂನಿನೊಡನೆ ಸಂಘರ್ಷದಲ್ಲಿರುವ ಮಕ್ಕಳಿಗೆ ರಕ್ಷಣೆ ಹಾಗೂ ಪುನರ್ವಸತಿ ಒದಗಿಸಲಾಗುತ್ತಿದೆ. ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ದೃಷ್ಠಿಯಿಂದ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು, ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳನ್ನು ಸ್ಥಾಪಿಸಲಾಗಿದೆ.
ಬೇಸಿಗೆ ಶಿಬಿರಗಳು ಮಕ್ಕಳ ಮನೋವಿಕಾಸಕ್ಕೆ ಸಹಕಾರಿ
ಕೇವಲ ಪಠ್ಯಕ್ಕೆ ಸೀಮಿತವಾಗದೇ ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಂಡಾಗ ಮಾತ್ರ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ವೈವಿಧ್ಯಮಯ ಚಟುವಟಿಕೆಗಳನ್ನೊಳಗೊಂಡ ಬೇಸಿಗೆ ಶಿಬಿರಗಳು ಮಕ್ಕಳ ಮನೋವಿಕಾಸಕ್ಕೆ ಸಹಕಾರಿಯಾಗಿವೆ ಎಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್ ಅಭಿಪ್ರಾಯಪಟ್ಟರು.
ಮದಲಾಪುರ ಗ್ರಾಮಕ್ಕೆ ನುಗ್ಗಿದ ಕಾಡಾನೆ
ಮದಲಾಪುರ ಗ್ರಾಮಕ್ಕೆ ಬುಧವಾರ ಬೆಳ್ಳಂಬೆಳಗ್ಗೆ ನುಗ್ಗಿದ ಒಂಟಿ ಸಲಗ ಗ್ರಾಮಸ್ಥರನ್ನು ಭಯಭೀತಿಗೊಳಿಸಿತು. ಲೋಕೇಶ್ ಅವರ ಕಾಫಿ ತೊಟಕ್ಕೆ ಹೋಗಿ ನಿಂತಿದೆ. ಗ್ರಾಮಸ್ಥರ ಕಿರುಚಾಟದಿಂದ ಗೀಳಿಟ್ಟು ಗಾಬರಿಗೊಂಡು ಮನೆ ಮುಂದೆ ನಿಂತಿದ್ದ ಬೈಕ್ ತುಳಿದು ದಾಂಧಲೆ ನಡೆಸಿತು. ಜನವಸತಿ ಇರುವ ಊರೊಳಗೆ ಕೆಲಕಾಲ ಅಡ್ಡಾಡಿದ ಕಾಡಾನೆ ಕಂಡು ನಿವಾಸಿಗಳು ಮನೆಯೊಳಗೆ ಓಡಿದರು. ಜನರ ಕಿರುಚಾಟ ಹೆಚ್ಚುತ್ತಿದ್ದಂತೆ ಗ್ರಾಮದಿಂದ ಕಾಲ್ಕಿತ್ತು ಕಾಫಿ ತೋಟದತ್ತ ಸಾಗಿತು. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕಾಗಮಿಸಿ ಆನೆಯನ್ನು ಕಾಡಿಗಟ್ಟಲು ಯತ್ನಿಸುತ್ತಿದ್ದಾರೆ.
ಅಂಬೇಡ್ಕರ್‌ ಬ್ಯಾನರ್‌ ಹರಿದವರ ಮೇಲೆ ಕ್ರಮಕ್ಕೆ ಆಗ್ರಹ
ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿ ಕೋಗಿಲೆ ಮನೆ ವೃತ್ತದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆಗೆ ಹಾಕಲಾಗಿದ್ದ ಬ್ಯಾನರ್ ಅನ್ನು ಮಂಗಳವಾರ ರಾತ್ರಿ ಕಿಡಿಗೇಡಿಗಳು ಹರಿದು ಹಾಕಿ ಅಂಬೇಡ್ಕರ್‌ಗೆ ಅವಮಾನ ಮಾಡಲಾಗಿದ್ದು ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕಾನೂನು ರೀತಿಯ ಕ್ರಮಕೈಗೊಳ್ಳಬೇಕು ಒತ್ತಾಯಿಸಿ ಬುಧವಾರ ಬೆಳಿಗ್ಗೆ ಕೋಗಿಲೆಮನೆ ಹಾಗೂ ಕುಶಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬೇಡ್ಕರ್ ಅಭಿಮಾನಿಗಳು ಪ್ರತಿಭಟನೆ ನಡೆಸಿದರು.
ವಿದ್ಯುತ್‌ ಕಡಿತ ಖಂಡಿಸಿ ಹಳೇಬೀಡಲ್ಲಿ ಪ್ರತಿಭಟನೆ
ಹಳೇಬೀಡು ಹೋಬಳಿಯಲ್ಲಿ ನಿರಂತರ ವಿದ್ಯುತ್ ವ್ಯತ್ಯಯವಾಗುತ್ತಿದ್ದು, ರೈತರು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೂಡಲೇ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ, ರೈತ ಸಂಘ ಹಾಗೂ ವಿವಿಧ ಜನಪರ ಸಂಘಟನೆಗಳ ಕಾರ್ಯಕರ್ತರು ಬುಧವಾರ ಹಳೇಬೀಡಿನಲ್ಲಿ ಪ್ರತಿಭಟನೆ ನಡೆಸಿದರು. ಪರಿವರ್ತಕವನ್ನು ಅಳವಡಿಕೊಡಲು ಕೆಲ ಸಿಬ್ಬಂದಿ ಲಂಚ ಕೇಳುತ್ತಾರೆ. ವಿದ್ಯುತ್ ಸರಬರಾಜಿನಲ್ಲಿ ಭಾರಿ ತೊಂದರೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ ಎಂದರು.
ಕೆಸರುಮಯವಾದ ಎಚ್‌ಪಿಸಿಎಲ್‌ ಬಂಕ್‌
ಹಿಂದೂಸ್ಥಾನ್‌ ಪೆಟ್ರೋಲಿಯಂ ಕಾರ್ಪೋರೇಷನ್ ಕಂಪನಿಯ ಪೆಟ್ರೋಲ್ ಬಂಕ್ ಕೆಸರುಮಯಗೊಂಡಿದ್ದು ಸಾರ್ವಜನಿಕರಿಗೆ ಸಮಸ್ಯೆಯಾಗಿ ಪರಿಣಮಿಸಿದೆ. ಗ್ರಾಹಕರ ಸೇವೆಯನ್ನು ಸ್ಥಗಿತಗೊಳಿಸಿದ್ದು ಕಳೆದೊಂದು ವಾರದ ಹಿಂದೆ ಅಲ್ಪ ನವೀಕರಣದ ನಂತರ ಬಂಕ್ ಸೇವೆಯನ್ನು ಗ್ರಾಹಕರಿಗ ಮುಕ್ತಗೊಳಿಸಿದೆ. ಆದರೆ, ಮಳೆಯಿಂದಾಗಿ ಕೆಸರುಮಯಗೊಂಡಿರುವ ಬಂಕ್‌ಗೆ ಹೋಗುವುದೇ ದುಸ್ಥರವಾಗಿದ್ದು ದ್ವಿಚಕ್ರವಾಹನ ಸಾವರರು ಕೆಸರಿಗೆ ಸಿಲುಕಿ ಬೀಳುತ್ತಿದ್ದರೆ, ಲಘು ವಾಹನಗಳು ಕೆಸರಿನಲ್ಲಿ ಸಿಲುಕಿ ಪರದಾಡುವಂತಾಗಿದೆ.
ಪೌತಿ ಖಾತೆ ಆಂದೋಲನದ ಪ್ರಯೋಜನ ಪಡೆಯಿರಿ
ತಾಲೂಕಿನಲ್ಲಿ ಬಾಗೂರು ಹೋಬಳಿ ಕೇಂದ್ರ ಹೆಚ್ಚು ವಿಸ್ತೀರ್ಣ ಹಾಗೂ ಜನಸಂಖ್ಯೆಯನ್ನು ಹೊಂದಿದೆ. ಆದ್ದರಿಂದಲೇ ಪೌತಿ ಖಾತೆ ಆಂದೋಲನಕ್ಕೆ ತಾಲೂಕಿನಲ್ಲೇ ಮೊದಲು ಹೋಬಳಿ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ತಾಲೂಕು ಆಡಳಿತದ ವತಿಯಿಂದ ರೈತರಿಗೆ ತ್ವರಿತಗತಿಯಲ್ಲಿ ಅವರು ಸಲ್ಲಿಸುವ ಮನವಿಗಳಿಗೆ ಸ್ಪಂದಿಸುವಂತೆ ತಿಳಿಸಲಾಗಿದೆ. ಪೌತಿ ಖಾತೆ ಆಂದೋಲದಲ್ಲಿ ಈಗಾಗಲೇ ಸುಮಾರು 122 ಅರ್ಜಿಗಳು ಸಲ್ಲಿಕೆಯಾಗಿದ್ದು, ತಿದ್ದುಪಡಿಗಾಗಿ 30 ಅರ್ಜಿಗಳನ್ನು ರೈತರು ಈಗಾಗಲೇ ಸಲ್ಲಿಸಿದ್ದಾರೆ ಎಂದು ಶಾಸಕ ಬಾಲಕೃಷ್ಣ ತಿಳಿಸಿದರು.
ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ಔಷಧಿ ಅಂಗಡಿಗಳ ತಪಾಸಣೆ
ಹಾಸನದ ಜಂಟಿಕೃಷಿ ನಿರ್ದೇಶಕರಾದ ಪಿ.ರಮೇಶ್‌ ಕುಮಾರ್ ಹಾಗೂ ಸಹಾಯಕ ಕೃಷಿ ನಿರ್ದೇಶಕರಾದ ತೀರ್ಥಪ್ರಸಾದ್, ಕೃಷಿ ನಿರ್ದೇಶಕ ಡಿ.ಕೆ.ಯೋಗಾನಂದ್ ಮತ್ತು ಸಹಾಯಕ ಕೃಷಿ ನಿರ್ದೇಶಕ ಜಾಗೃತಿಕೋಶ ಮಧುಸೂದನ್ ಸೇರಿದಂತೆ ಇನ್ನು ಮುಂತಾದವರು ತಾಲೂಕಿನ ಹಳೇಬೀಡು, ಮಾದೀಹಳ್ಳಿ ಹೋಬಳಿ ಸೇರಿದಂತೆ ವಿವಿಧೆಡೆಯಲ್ಲಿನ ಕೃಷಿ ಪರಿಕರಣ( ಆಗ್ರೋ ಕೇಂದ್ರಗಳಿಗೆ) ಕೇಂದ್ರಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿದರು. ಇದೇ ಸಂದರ್ಭದಲ್ಲಿ ತಾಲೂಕಿನ ಅಂದಲೆ ಸಮೀಪದ ರಾಮಚಂದ್ರಪುರ ಗ್ರಾಮದ ಸಿದ್ದೇಗೌಡ ಬಿನ್ ದೇವೇಗೌಡವರ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ ಹೈಬ್ರಿಡ್ ಹೈಟೆಕ್ ಮುಸುಕಿಜೋಳ ಬಿತ್ತನೆಬೀಜ ಪರವಾನಿಗೆ ಇಲ್ಲದೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಜಾಗೃತಿದಳ ಮತ್ತು ಜಾರಿದಳದಿಂದ ದಾಳಿ ನಡೆಸಿ ಮುಸುಕಿಜೋಳ ಬಿತ್ತನೆ ಬೀಜವನ್ನು ವಶಪಡಿಸಿಕೊಂಡರು.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 508
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved