• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಉಳಿಸುವುದು ಬೇಡ ಬಳಸಿದರೆ ಸಾಕು
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ನಗರದ ಬಿ.ಕಾಟೀಹಳ್ಳಿಯ ಸಂತ ಜೋಸೆಫರ ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಲೋಯೋಲಾ ಸಭಾಂಗಣದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ 110ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ಕನ್ನಡ ನಾಡು-ನುಡಿ ಸಾವಿರಾರು ವರ್ಷಗಳ ದೀರ್ಘ ಇತಿಹಾಸ ಮತ್ತು ಪರಂಪರೆಯನ್ನು ಒಳಗೊಂಡು ಶ್ರೀಮಂತವಾಗಿದೆ, ಇಂತಹ ಭಾಷೆಯನ್ನು ಉಳಿಸಿ ಬೆಳೆಸುವ ಕರ್ತವ್ಯ ಪ್ರತಿಯೊಬ್ಬ ಕನ್ನಡಿಗನಾದ್ದಾಗಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ಇತರ ಭಾಷೆಗಳನ್ನು ಕಲಿಯುವ ಅಗತ್ಯತೆ, ಅನಿವಾರ್ಯತೆ ಇದೆ ನಿಜ, ಆದರೆ ನಮ್ಮ ಭಾಷೆಯನ್ನು ಬಳಸಿಕೊಂಡು ಹೋದರೆ ಸಾಕು ನಮ್ಮ ಹೃದಯದ ಭಾಷೆ,ಮಾತೃ ಭಾಷೆ ಕನ್ನಡ ಚಿರಸ್ಥಾಯಿಯಾಗಲಿದೆ ಎಂದರು.
ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಮಾಯ
ಮೊಬೈಲ್ ಬಳಕೆಯಿಂದ ಆಗುವ ಅನುಕೂಲ ಮತ್ತು ಅನಾನುಕೂಲಗಳನ್ನು ವಿವರಿಸುತ್ತಾ ಯಾವುದೇ ಕೆಲಸ ಮಾಡಿದರೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ ಯಶಸ್ಸು ಸಿಗುತ್ತದೆ ಎನ್ನುವ ಆಶಯವನ್ನು ವ್ಯಕ್ತಪಡಿಸಿದರು. ಅನಾವಶ್ಯಕವಾಗಿ ರೀಲ್ಸ್ ಮಾಡುತ್ತಾ ಕಾಲಕಳೆಯುವ ಬದಲು ಉಪಯುಕ್ತ ಕಾರ್ಯಕ್ರಮಗಳನ್ನು ಅಪ್‌ಲೋಡ್ ಮಾಡುವುದರ ಮೂಲಕ ಹಣ ಮತ್ತು ಕೀರ್ತಿ ಗಳಿಸಬಹುದೆಂದು ಉದಾಹರಣೆಗಳ ಮೂಲಕ ವಿವರಿಸಿದರು. ಆದರೆ ಇಂದಿನ ಯುವಜನತೆ ನೈಜ ಗುರಿಯನ್ನು ಸಾಧಿಸದೆ ಅನಾವಶ್ಯಕವಾಗಿ ಕಾಲಹರಣ ಮಾಡುತ್ತಿದ್ದಾರೆ ಎಂದು ಹೇಳಿದರು.
ಶ್ರೀ ಕೊಲ್ಲಾಪುರದಮ್ಮ ಜಾತ್ರೆಯಲ್ಲಿ ಕೆಂಡೋತ್ಸವ
ಶ್ರೀ ಕೊಲ್ಲಾಪುರದಮ್ಮ ದೇವಸ್ಥಾನ ಸೇವಾ ಸಮಿತಿ ಮತ್ತು ಡಾ.ಬಿ. ಆರ್‌. ಅಂಬೇಡ್ಕರ್‌ ಯುವಕ ಸಂಘ ಪೆನ್‌ಷನ್‌ಮೊಹಲ್ಲಾ ಮತ್ತು ರಾಜ್‌ಕುಮಾರ್‌ ನಗರ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಅಮ್ಮನವರ ಜಾತ್ರೋತ್ಸವ ಅಂಗವಾಗಿ ಶ್ರದ್ಧ ಭಕ್ತಿಯಿಂದ ಕೆಂಡೋತ್ಸವವು ಜರುಗಿತು. ಶ್ರೀ ಅಮ್ಮನವರ ಜಾತ್ರೋತ್ಸವ ಮತ್ತು ಮಹಾಮಂಗಾಳಾರತಿ ನಡೆಯಿತು. ನಂತರ ದೇವರ ಅಡ್ಡೆಯ ಮೆರವಣಿಗೆ ಹೊಸಲೈನ್ ರಸ್ತೆ, ಮಾರ್ಗವಾಗಿ ಗಾಣಿಗರ ಬೀದಿ, ಡಿ. ಆರ್. ಪೋಲೀಸ್ ಕ್ವಾಟ್ರಸ್, ನಿರ್ಮಲ ನಗರ, ಬೆಸ್ತರ ಬೀದಿ ಮತ್ತು ದುರ್ಗಮ್ಮ ದೇವಸ್ಥಾನದ ಸುತ್ತಮುತ್ತ ಅಡ್ಡೆಯು ಮೆರವಣಿಗೆ ಸಾಗಿತು.
ದೇಗುಲ ಬಳಿ ಕಲ್ಲು ಗಣಿಗಾರಿಕೆಗೆ ಅನುಮತಿ ಬೇಡ
ವೀರದೇವನಹಳ್ಳಿ ಗ್ರಾಮದ ಸಮೀಪದಲ್ಲಿರುವ ಐತಿಹಾಸಿಕ ಪ್ರಸಿದ್ಧ ಹಾಗೂ ಮುಜರಾಯಿ ಇಲಾಖೆಗೆ ಒಳಪಡುವ ಶ್ರೀ ಕರಿಮಲ್ಲೇಶ್ವರಸ್ವಾಮಿ ದೇಗುಲದ ಸಮೀಪದ ಕೆಲ ಪ್ರಭಾವಿ ವ್ಯಕ್ತಿಗಳು ಕಲ್ಲು ಗಣಿಗಾರಿಕೆ ನಡೆಸಲು ಹುನ್ನಾರ ನಡೆಸಿದ್ದು ಇತಿಹಾಸ ಪ್ರಸಿದ್ಧ ದೇಗುಲದ ಸಂರಕ್ಷಣೆ ಹಿತದೃಷ್ಟಿಯಿಂದ ಸಂಬಂಧಿಸಿದ ಇಲಾಖೆಯವರು ಯಾವ ಕಾರಣಕ್ಕೂ ಅನುಮತಿ ನೀಡಬಾರದು ಎಂದು ವೀರದೇವನಹಳ್ಳಿ ಗ್ರಾಮಸ್ಥರು ಹಾಗೂ ಶ್ರೀ ಕರಿಮಲ್ಲೇಶ್ವರ ದೇಗುಲದ ಭಕ್ತರು ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದರು. ಕೆಲ ಪ್ರಭಾವಿ ವ್ಯಕ್ತಿಗಳು ರಾಜಕೀಯ ಒತ್ತಡ ಬಳಸಿಕೊಂಡು ಕಲ್ಲು ಗಣಿಗಾರಿಕೆ ನಡೆಸಲು ತಂತ್ರಗಾರಿಕೆಯನ್ನು ಮಾಡುತ್ತಿದ್ದಾರೆ ಎಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಗುರು ತೋರಿದ ದಾರಿಯಲ್ಲಿ ಜೀವನದ ತೇರು ಎಳೆಯಿರಿ
ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠವು ಯುಗಯೋಗಿ, ಜಗದ್ಗುರು ಪದ್ಮಭೂಷಣ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಸಂಸ್ಮರಣಾರ್ಥ ನಡೆಸಿಕೊಂಡು ಬರುತ್ತಿರುವ ಗುರು ತೋರಿದ ದಾರಿ ತಿಂಗಳ ಮಾಮನ ತೇರಿನ 128ನೇ ಹುಣ್ಣಿಮೆಯ ಕಾರ್ಯಕ್ರಮದ ಅಂಗವಾಗಿ 7 ದಿನಗಳ ಕಾಲ ನಡೆದ ಆಧ್ಯಾತ್ಮಿಕ ಚಿಂತನ ಶಿಬಿರದ ಸಮಾರೋಪ ಸಮಾರಂಭವು ಎಂ.ಜಿ ರಸ್ತೆಯ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಇತ್ತೀಚೆಗೆ ಜರುಗಿತು. ಗುರು ತೋರುವ ಸನ್ಮಾರ್ಗದಲ್ಲಿ ನಡೆದು, ನಮ್ಮಲ್ಲಿ ಮೂಡುವ ಜ್ಞಾನವನ್ನು ಪಸರಿಸುವ ಕೆಲಸ ಮಾಡಿಕೊಂಡು ಹೋದಾಗ ಮಾತ್ರ ಈ ಬದುಕಿಗೆ ಅರ್ಥ ಸಿಗಲಿದೆ ಎಂದರು.
ದೇವೇಗೌಡರ ಗರಡಿಯಲ್ಲಿ ಅನೇಕ ರಾಜಕಾರಣಿಗಳು ಪಳಗಿದ್ದಾರೆ
ರೈತನ ಮಗ ರಾಷ್ಟ್ರದ ಪ್ರಧಾನಿ ಸ್ಥಾನವನ್ನು ಅಲಂಕರಿಸಬಹುದು ಎಂಬುದನ್ನು ನಮ್ಮ ಸಂವಿಧಾನ ತೋರಿಸಿಕೊಟ್ಟಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು 93ನೇ ವಸಂತಕ್ಕೆ ಪಾರ್ದಾಪಣೆ ಮಾಡುತ್ತಿರುವುದು ನಮಗಷ್ಟೇ ಅಲ್ಲ ದೇಶದ ಜನತೆಗೆ ಸಂತಸವನ್ನು ಉಂಟು ಮಾಡಿದೆ ಎಂದು ಜೆಡಿಎಸ್ ಮುಖಂಡ ಹೊಸೂರ್ ಗಂಗಾಧರ್ ಹೇಳಿದರು. ಗ್ರಾಮೀಣ ಪ್ರದೇಶದ ಜನರ ಚಿಂತಕರಾಗಿದ್ದಾರೆ. ರೈತರ ಧ್ವನಿಯಾಗಿ ಕೆಲಸ ಮಾಡಿದವರು, ಸಾಮಾಜಿಕ ನ್ಯಾಯವನ್ನು ಕೊಡಿಸುವುದರಲ್ಲಿ ವಿಶೇಷ ಕಾಳಜಿ ತೋರಿದ್ದಾರೆ ಎಂದರು.
ಆರೋಗ್ಯದ ಮುಂದೆ ಬೇರೇನೂ ಮುಖ್ಯವಲ್ಲ
ಪರಿಸರ ಪ್ರೇಮಿ ಹಾಗೂ ಸಮಾಜ ಸೇವಕ ಹನುಮೇಗೌಡ ಹಾಗೂ ರೋಟರಿ ಕ್ಲಬ್ ಆಫ್ ಸೆಂಟ್ರಲ್ ಹಾಸನ, ಶ್ರೀ ಲಕ್ಷ್ಮೀ ರಂಗನಾಥ ಎಜುಕೇಶನ್ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ತಾಲೂಕಿನ ಕೌಶಿಕ ಗ್ರಾ ಪಂ ವ್ಯಾಪ್ತಿಯ ಶೆಟ್ಟಿಹಳ್ಳಿಯಲ್ಲಿ ನಡೆದ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಹಾಗೂ ಗಿಡ ನೆಡುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಆರೋಗ್ಯ ತಪಾಸಣಾ ಶಿಬಿರಗಳು ಗ್ರಾಮೀಣ ಭಾಗದ ಜನರಿಗೆ ಹೆಚ್ಚೆಚ್ಚು ಉಪಯುಕ್ತವಾಗುತ್ತವೆ. ದೂರದ ಊರುಗಳಿಂದ ನಗರ ಭಾಗಕ್ಕೆ ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಎಲ್ಲರಿಂದಲೂ ಸಾಧ್ಯವಿಲ್ಲ. ಹಾಗಾಗೀ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ತಪಾಸಣಾ ಶಿಬಿರಗಳು ಹೆಚ್ಚು ನಡೆಯಬೇಕಿದೆ ಎಂದರು.
ವಿದ್ಯಾರ್ಥಿ ನಿಲಯಕ್ಕೆ ಉಪ ಲೋಕಾಯುಕ್ತರ ಭೇಟಿ
ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ನಗರದ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್‌ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡಸಿ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳ ಪರಿಹಾರಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ವಿದ್ಯಾರ್ಥಿನಿಯರ ಕೋರಿಕೆಗೆ ಮೇರಿಗೆ ವಸತಿ ನಿಲಯದ ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುವತ್ತಿರುವ ಕೋರ್ಸ್‌ಗಳಿಗೆ ಸಂಬಂದಿಸಿದ ಪುಸ್ತಕಗಳನ್ನು ಒದಗಿಸುವಂತೆ ಸೂಚಿಸಿದರು. ವಿದ್ಯಾರ್ಥಿನಿಯರು ಸರ್ಕಾರದ ಈ ಸೌಲಭ್ಯಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ತಮ್ಮ ಗುರಿ ಸಾಧಿಸಿ,ಸ ಉತ್ತಮ ಪ್ರಜೆಗಳಾಗಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುವಂತೆ ತಿಳಿಸಿದರು.
ವಿದ್ಯಾರ್ಥಿ ನಿಲಯಕ್ಕೆ ಉಪ ಲೋಕಾಯುಕ್ತರ ಭೇಟಿ
ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ನಗರದ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್‌ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡಸಿ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳ ಪರಿಹಾರಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ವಿದ್ಯಾರ್ಥಿನಿಯರ ಕೋರಿಕೆಗೆ ಮೇರಿಗೆ ವಸತಿ ನಿಲಯದ ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುವತ್ತಿರುವ ಕೋರ್ಸ್‌ಗಳಿಗೆ ಸಂಬಂದಿಸಿದ ಪುಸ್ತಕಗಳನ್ನು ಒದಗಿಸುವಂತೆ ಸೂಚಿಸಿದರು. ವಿದ್ಯಾರ್ಥಿನಿಯರು ಸರ್ಕಾರದ ಈ ಸೌಲಭ್ಯಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ತಮ್ಮ ಗುರಿ ಸಾಧಿಸಿ,ಸ ಉತ್ತಮ ಪ್ರಜೆಗಳಾಗಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುವಂತೆ ತಿಳಿಸಿದರು.
ವಿದ್ಯಾರ್ಜನೆ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿದ್ದರೆ ಮಾತ್ರ ಯಶಸ್ಸು
ಮನುಷ್ಯ ತನ್ನ ವಿದ್ಯಾರ್ಜನೆ ಜೊತೆಗೆ ಪಠ್ಯೇತರ ಚಟುವಟಿಕೆ ರೂಢಿಸಿಕೊಂಡಿದ್ದರೆ ಮಾತ್ರ ಅವನು ಸಾರ್ವಜನಿಕ ಬದುಕಿನಲ್ಲಿ ಯಶಸ್ಸು ಕಾಣುತ್ತಾನೆ ಎಂದು ಹೊಯ್ಸಳೇಶ್ವರ ಪದವಿ ಪೂರ್ವ ಕಾಲೇಜಿನ ಸಲಹಾ ಸಮಿತಿ ಅಧ್ಯಕ್ಷ ಜಿ.ಬಿ.ಶಶಿಧರ್ ಅಭಿಪ್ರಾಯಪಟ್ಟರು. ನಮ್ಮ ಹೊಯ್ಸಳೇಶ್ವರ ಕಾಲೇಜು ಒಂದಲ್ಲ ಒಂದು ರೀತಿಯಲ್ಲಿ ವಿದ್ಯಾರ್ಥಿಗಳು ತಾಲೂಕು ಜಿಲ್ಲಾ ಮಟ್ಟದಲ್ಲಿ ಗಣನೀಯ ಸಾಧನೆ ಮಾಡಿರುವುದು ನಮ್ಮ ತಾಲೂಕಿಗೆ ಹೆಮ್ಮೆ ತರುವ ವಿಷಯವಾಗಿದೆ ಎಂದು ಹೇಳಿದರು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 508
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved