• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದನಗಳ ಜಾತ್ರಾ ಮಹೋತ್ಸವ ಪುನರಾರಂಭ
ಸ್ಥಗಿತಗೊಂಡಿದ್ದ ಶ್ರೀ ಚಂದ್ರಮೌಳೇಶ್ವರ ಸ್ವಾಮಿಯವರ ದನಗಳ ಜಾತ್ರಾ ಮಹೋತ್ಸವ, ಪುರಸಭೆ ವತಿಯಿಂದ ಪುನರಾಂಭ ಮಾಡಲಾಗುವುದು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು. , ಬರುವ ಉತ್ತಮ ರಾಸುಗಳಿಗೆ ಬಹುಮಾನ, ಕುಡಿಯುವ ನೀರು ವಿದ್ಯುತ್ ದೀಪ ನೆರಳಿನ ವ್ಯವಸ್ಥೆಯನ್ನು ಮೇವು ಕಲ್ಪಿಸಲಾಗಿದೆ. ಮೂರು ಹಂತದಲ್ಲಿ ತಳಿಗಳ ಆಧಾರದ ಮೇಲೆ ಬಹುಮಾನ ನೀಡುತ್ತಿದೆ. ರಾಸುಗಳನ್ನು ಜಾತ್ರೆಗೆ ಫೆಬ್ರವರಿ 7ರಿಂದ ತರಬೇಕು. ರಾಸುಗಳ ಆಯ್ಕೆ ೧೧ರಂದು ನಡೆಯಲಿದೆ.
ಮಲ್ಲಿಪಟ್ಟಣ ಏತ ನೀರಾವರಿ ಯೋಜನೆ ಕಾಮಗಾರಿ ಚುರುಕು
ಸದನದಲ್ಲಿ ಸರ್ಕಾರದ ಗಮನ ಸೆಳೆದ ಹಿನ್ನೆಲೆಯಲ್ಲಿ ನೆನಗುದಿಗೆ ಬಿದ್ದಿದ್ದ ಮಲ್ಲಿಪಟ್ಟಣ ಏತ ನೀರಾವರಿ ಯೋಜನೆಯ ಕಾಮಗಾರಿ ಚುರುಕುಗೊಂಡಿದ್ದು, ಮೂರು ತಿಂಗಳಲ್ಲಿ ಮೊದಲ ಹಂತದ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಎ. ಮಂಜು ತಿಳಿಸಿದರು. ಕೊಣನೂರು ಹೋಬಳಿಯ ಕೆಸವತ್ತೂರು ಗ್ರಾಮದ ಬಳಿಯಿಂದ 70 ಕೋಟಿ ರು. ವೆಚ್ಚದಲ್ಲಿ ಎರಡನೇ ಹಂತದ ಕಾಮಗಾರಿ ಪ್ರಾರಂಭವಾಗಲಿದ್ದು, 80 ಕಿ.ಮೀ. ವ್ಯಾಪ್ತಿಯ 53 ಕೆರೆ ಮತ್ತು 30 ಕಟ್ಟೆಗಳಿಗೆ ನೀರು ಹರಿಯಲಿದೆ. ಎರಡನೇ ಹಂತದ ಕಾಮಗಾರಿಯ ಪ್ರಸ್ತಾವನೆಯ ಅನುಮೋದನೆಗಾಗಿ ಕಾವೇರಿ ನೀರಾವರಿ ನಿಗಮದ ಬೋರ್ಡ್‌ ಸಭೆಯಲ್ಲಿ ಮಂಡನೆ ಮಾಡಲಾಗಿದೆ.
ಸಮಸಮಾಜ ನಿರ್ಮಾಣದ ಕನಸು ಬಿತ್ತಿದವರು ಅಂಬಿಗರ ಚೌಡಯ್ಯ
ಸಮ ಸಮಾಜದ ನಿರ್ಮಾಣದ ಕನಸು ಬಿತ್ತಿರುವ ಅಂಬಿಗರ ಚೌಡಯ್ಯ ಅವರ ಜೀವನದ ಬಗ್ಗೆ ನಮ್ಮ ಮುಂದಿನ ಪೀಳಿಗೆ ತಿಳಿಸುವಂತಹ ಕೆಲಸವಾಗಬೇಕು. ಶರಣರು ಮಾಡಿರುವ ಕ್ರಾಂತಿಯೂ ಇನ್ನೂ ಸಾಕಾರವಾಗಿಲ್ಲ, ಸಮ ಸಮಾಜ ಕಟ್ಟುವ ಕೆಲಸ ನಿರಂತರವಾಗಿ ಆಗಬೇಕು ಎಂದು ಅಪರ ಜಿಲ್ಲಾಧಿಕಾರಿ ಕೆ ಟಿ ಶಾಂತಲಾ ಹೇಳಿದ್ದಾರೆ. ಅಂಬಿಗರ ಚೌಡಯ್ಯ ಅವರ ಆಶಯದಂತೆ ಸಮಾನತೆಯ ಸಮಾಜವನ್ನು ಕಟ್ಟಲು ಸಣ್ಣ ಪ್ರತಿಜ್ಞೆಯನ್ನು ನಾವೆಲ್ಲರೂ ತೆಗೆದುಕೊಂಡರೆ ಮಾತ್ರ ಅಂಬಿಗರ ಚೌಡಯ್ಯ ಅವರಿಗೆ ನಾವು ಸಲ್ಲಿಸುವ ಗೌರವವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಹೇಳಿದರು.
ತ್ರಿವಿಧ ದಾಸೋಹಿ ಶಿವಕುಮಾರಸ್ವಾಮಿಗಳ 6ನೇ ಪುಣ್ಯಸ್ಮರಣೆ
ಶಿವಕುಮಾರ ಸ್ವಾಮೀಜಿಗಳ ಆದರ್ಶ ಗುಣಗಳನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ಶ್ರೀ ಜವೇನಹಳ್ಳಿ ಮಠದ ಮಠಾಧೀಶರಾದ ಸಂಗಮೇಶ್ವರ ಸ್ವಾಮೀಜಿ ಸಲಹೆ ನೀಡಿದರು. ನಾಡಿನ ಪುಣ್ಯಭೂಮಿಯಲ್ಲಿ ಅನೇಕ ಸಂತರು, ಶರಣರು, ತಪಸ್ವಿಗಳು, ಸಿದ್ಧಪುರುಷರು ತಮ್ಮ ಕಾಯಕದ ಮೂಲಕ ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಬೆಳಗುತ್ತಿದ್ದಾರೆ. ಆದರೆ ಶಿವಕುಮಾರ ಸ್ವಾಮೀಜಿ ಬಡಮಕ್ಕಳಿಗೆ ಅನ್ನದಾಸೋಹ, ಅಕ್ಷರ, ಆಶ್ರಯ, ಕೊಟ್ಟು ಅವರ ಜೀವನದ ಬದುಕು ಪಾವನಗೊಳಿಸಿರುವ ಸ್ವಾಮೀಜಿವರ ನಡೆ, ನುಡಿ ನಮಗೆ ಮಾರ್ಗದರ್ಶನವಾಗಿದೆ ಎಂದರು.
ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ
ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ. ಧನ್ಯಶ್ರೀ (20) ಆತ್ಮಹತ್ಯೆಗೆ ಶರಣಾದ ಮಹಿಳೆ. ಧನ್ಯಶ್ರೀ ಸಕಲೇಶಪುರ ತಾಲೂಕಿನ ಬ್ಯಾಕೆರೆಗಡಿ (ಜನ್ನಾಪುರ) ಗ್ರಾಮದವರು. ಎರಡು ವರ್ಷದ ಹಿಂದೆ ಹಳ್ಳಿಯೂರು ಗ್ರಾಮದ ಪ್ರೇಮ್‌ಕುಮಾರ್‌ನನ್ನು ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಒಂದು ವರ್ಷದಿಂದ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ ಎನ್ನುವ ಆರೋಪ ಪ್ರೇಮ್‌ ಕುಮಾರ್‌ ಮೇಲಿದೆ. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ರೀಡಾ ಮನೋಭಾವ ಇರುವವರು ಸಾಧಕರಾಗಬಲ್ಲರು
ಕ್ರೀಡಾ ಮನೋಭಾವ ಇರುವವರು ಸಾಧಕರಾಗಬಲ್ಲರು, ದೇಶಕ್ಕೆ ಸತ್ಪ್ರಜೆಯಾಗಬಲ್ಲರು, ಜೀವನದಲ್ಲಿ ಯಶಸ್ಸು ಗಳಿಸುವರು. ಏಕೆಂದರೆ ಸೋಲು ಗೆಲುವು ಒಂದು ನಾಣ್ಯದ ಎರಡು ಮುಖವಿದ್ದಂತೆ, ಕ್ರೀಡಾಪಟುಗಳು ಮಾತ್ರ ಅದನ್ನು ಸಮನಾಗಿ ಸ್ವೀಕರಿಸುವರು. ಧರ್ಮ, ಜಾತಿ ಭೇದ ಇಲ್ಲದೆ ಇರುವುದು ಕ್ರೀಡೆಯಲ್ಲಿ ಮಾತ್ರ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪರ್ತಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು. ತಂದೆತಾಯಿ ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಕಷ್ಟಪಡುತ್ತಾರೆ, ಅವರ ತ್ಯಾಗಗಳಿಗೆ ಮಕ್ಕಳು ಸಾರ್ಥಕತೆಯನ್ನು ನೀಡಬೇಕು, ಆ ದೃಷ್ಟಿಯಲ್ಲಿ ತಮ್ಮನ್ನು ತಾವು ಆತ್ಮಾವಲೋಕನ ಮಾಡಿಕೊಳ್ಳಬೇಕು. ತಮ್ಮ ವ್ಯಕ್ತಿತ್ವವನ್ನು ದೃಢಶಕ್ತಿ ಮತ್ತು ದೃಢಸಂಕಲ್ಪದಿಂದ ರೂಪಿಸಿಕೊಳ್ಳಬೇಕು ಎಂದರು.
ನವಿಲೆ ನಾಗೇಶ್ವರ ಕ್ಷೇತ್ರದಲ್ಲಿ 5 ಕೋಟಿ ವೆಚ್ಚದಲ್ಲಿ ನೂತನ ಕಲ್ಯಾಣ ಮಂಟಪ
ಬಾಗೂರು ಹೋಬಳಿಯ ನವಿಲೆ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ನಾಗೇಶ್ವರ ಸನ್ನಿಧಿಯಲ್ಲಿ ಸುಮಾರು 5 ಕೋಟಿ ರು. ವೆಚ್ಚದಲ್ಲಿ ನೂತನ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ಹೋಬಳಿಯ ನವಿಲೆ ನಾಗೇಶ್ವರ ಸನ್ನಿಧಿಯಲ್ಲಿ ದೇವಾಲಯ ಆಡಳಿತ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸದ್ಯ ದೇವಾಲಯದ ಬ್ಯಾಂಕ್ ಖಾತೆಯಲ್ಲಿ ಸುಮಾರು 2 ಕೋಟಿ ಹಣವಿದ್ದು, ಈ ಹಣದಲ್ಲಿ ನೂತನ ಕಲ್ಯಾಣ ಮಂಟಪದ ಕಾಮಗಾರಿಯನ್ನು ಪ್ರಾರಂಭಿಸಲಾಗುತ್ತದೆ ಎಂದು ತಿಳಿಸಿದರು.
ಶೀತಲಗೃಹ ನಿರ್ಮಾಣಕ್ಕೆ ಶಾಸಕ ಸ್ವರೂಪ್‌ ಗುದ್ದಲಿಪೂಜೆ
ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ದೊರಕದೆ ಇದ್ದಾಗ ಅವುಗಳ ಶೇಖರಣೆ ಮಾಡಲು ಹಳೆಯ ಶೀತಲಗೃಹ ನಿರ್ಮಾಣಗೊಂಡಿರುವುದರಿಂದ ೨೦೦೦ ಮೆಟ್ರಿಕ್ ಟನ್ ಸಾಮರ್ಥ್ಯವುಳ್ಳ ದೊಡ್ಡ ಮಟ್ಟದ ಶೀತಲಗೃಹ ಗೃಹ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಸ್ವರೂಪ್ ಪ್ರಕಾಶ್ ಅವರು ತಿಳಿಸಿದ್ದಾರೆ. ಗುಣಮಟ್ಟ ಕಾಯ್ದುಕೊಂಡು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ತಿಳಿಸಿದರು. ಈ ಶೀತಲಗೃಹ ನಿರ್ಮಾಣದಿಂದ ಶೀಘ್ರವಾಗಿ ರೈತರು ಬೆಳೆದ ಆಲೂಗೆಡ್ಡೆ ಮತ್ತು ತರಕಾರಿಗಳನ್ನು ಶೇಖರಿಸಿಡಲು ಅನುಕೂಲವಾಗಲಿದೆ ಎಂದರು.
ರಸ್ತೆ ಸುರಕ್ಷತಾ ಅರಿವು ಕುರಿತು ಜಾಥಾ
ಬೇಲೂರು ತಾಲೂಕಿನ ಅರೇಹಳ್ಳಿ ರೋಟರಿ ಶಾಲೆಯ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್,ರೋಟರಿ ಕ್ಲಬ್ ಹಾಗೂ ಕಬ್ಸ್ ಅಂಡ್ ಬುಲ್ ಬುಲ್ ವಿದ್ಯಾರ್ಥಿಗಳ ತಂಡದ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸಿ, ಸೀಟ್ ಬೆಲ್ಟ್ ಧರಿಸಿ ಕಾರು ಚಲಾಯಿಸಿ, ಕುಡಿದು ವಾಹನ ಚಲಾಯಿಸಬೇಡಿ, ರಸ್ತೆ ನಿಯಮಗಳನ್ನು ತಪ್ಪದೇ ಪಾಲಿಸಿ ಸೇರಿದಂತೆ ಇನ್ನೂ ಹಲವಾರು ಘೋಷಣೆಗಳನ್ನು ಕೂಗಿದರು.
ನಾಳೆಯಿಂದ ರಾಜ್ಯಮಟ್ಟದ ಮಹಿಳಾ ಕ್ರಿಕೆಟ್‌ ಪಂದ್ಯಾವಳಿ
ವಿಜಯನಗರದಲ್ಲಿರುವ ಟೈಮ್ಸ್ ಇಂಟರ್ ನ್ಯಾಷನಲ್ ಶಾಲೆ ಆವರಣದಲ್ಲಿ ಟೈಮ್ಸ್ ಗ್ರೂಪ್ ಆಫ್ ಇನ್ಟಿಟ್ಯೂಟ್ ಸಂಯುಕ್ತಾಶ್ರಯದಲ್ಲಿ ಜ.೨೨ರಿಂದ ಜ.೨೬ರವರೆಗೂ ರಾಜ್ಯ ಮಟ್ಟದ ಲೆದರ್ ಬಾಲ್ ಮಹಿಳಾ ಕ್ರಿಕೆಟ್ ಟೂರ್ನಮೆಂಟ್‌ ಹಮ್ಮಿಕೊಳ್ಳಲಾಗಿದೆ ಎಂದು ಟೈಮ್ಸ್ ಕಾರ್ಯದರ್ಶಿ ಬಿ.ಕೆ. ಗಂಗಾಧರ್ ತಿಳಿಸಿದರು. ಈ ಕ್ರೀಡೆಗೆ ರಾಜ್ಯದ ವಿವಿಧ ಭಾಗಗಳಿಂದ ಎಂಟು ತಂಡಗಳು ಭಾಗವಹಿಸಲಿದೆ. ಮೈಸೂರಿನಿಂದ ಇಂದು ತಂಡ, ಬೆಂಗಳೂರಿನಿಂದ ಎರಡು ತಂಡ, ಹಾಸನದಿಂದ ಒಂದು ತಂಡ, ಶಿವಮೊಗ್ಗ ಒಂದು, ಹುಬ್ಬಳಿಯಿಂದ ಹಾಗೂ ವಿಜಯಪುರ, ಬ್ರಹ್ಮಾವರದಿಂದ ಒಂದೊಂದು ತಂಡ ಪಾಲ್ಗೊಳ್ಳಲಿದೆ ಎಂದರು.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 413
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved