ತ್ರಿವಿಧ ದಾಸೋಹಿ ಶಿವಕುಮಾರಸ್ವಾಮಿಗಳ 6ನೇ ಪುಣ್ಯಸ್ಮರಣೆಶಿವಕುಮಾರ ಸ್ವಾಮೀಜಿಗಳ ಆದರ್ಶ ಗುಣಗಳನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ಶ್ರೀ ಜವೇನಹಳ್ಳಿ ಮಠದ ಮಠಾಧೀಶರಾದ ಸಂಗಮೇಶ್ವರ ಸ್ವಾಮೀಜಿ ಸಲಹೆ ನೀಡಿದರು. ನಾಡಿನ ಪುಣ್ಯಭೂಮಿಯಲ್ಲಿ ಅನೇಕ ಸಂತರು, ಶರಣರು, ತಪಸ್ವಿಗಳು, ಸಿದ್ಧಪುರುಷರು ತಮ್ಮ ಕಾಯಕದ ಮೂಲಕ ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಬೆಳಗುತ್ತಿದ್ದಾರೆ. ಆದರೆ ಶಿವಕುಮಾರ ಸ್ವಾಮೀಜಿ ಬಡಮಕ್ಕಳಿಗೆ ಅನ್ನದಾಸೋಹ, ಅಕ್ಷರ, ಆಶ್ರಯ, ಕೊಟ್ಟು ಅವರ ಜೀವನದ ಬದುಕು ಪಾವನಗೊಳಿಸಿರುವ ಸ್ವಾಮೀಜಿವರ ನಡೆ, ನುಡಿ ನಮಗೆ ಮಾರ್ಗದರ್ಶನವಾಗಿದೆ ಎಂದರು.