• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬ ಆಚರೆಣೆ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ 93ನೇ ಹುಟ್ಟುಹಬ್ಬ ಆಚರಣೆ ಅಂಗವಾಗಿ ನಗರದ ನೀರಬಾಗಿಲು ಶ್ರೀ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ದರ್ಗಾದಲ್ಲಿ ಪ್ರಾರ್ಥನೆಯನ್ನು ಶಾಸಕರು ಹಾಗೂ ಪಕ್ಷದ ಮುಖಂಡರು ನೆರವೇರಿಸಿದರು.ದೇವೇಗೌಡರು ಅಪ್ಪಟ ಗ್ರಾಮೀಣ ಪರಿಸರದಿಂದ ಬೆಳೆದು ಬಂದ ರೈತನ ಮಗ. ತುಂಬಿದ ಕೊಡದಂತೆ ಸರಳತೆಯ ಸಾಕಾರಮೂರ್ತಿ ಎನಿಸಿಕೊಂಡು, ಬದ್ಧತೆ, ಹಠ ಮತ್ತು ಛಲಗಾರಿಕೆಯಿಂದ ರಾಜಕೀಯ ಉತ್ತುಂಗಕ್ಕೇರಿದ ಮಹಾನಾಯಕರು ಎಂದು ಬಣ್ಣಿಸಿದರು.
ಮಲೆನಾಡು ಭಾಗದ ಅಭಿವೃದ್ಧಿಗೆ ಹೆಚ್ಚಿನ ಗಮನ
ಮಲೆನಾಡು ಭಾಗಕ್ಕೆ ಹೆಚ್ಚಿನ ಅನುದಾನವನ್ನು ತರುವ ಮೂಲಕ ಸಂಪೂರ್ಣ ಅಭಿವೃದ್ಧಿಗೆ ತಾವು ಬದ್ಧ ಎಂದು ಶಾಸಕ ಎಚ್. ಕೆ ಸುರೇಶ್ ಹೇಳಿದರು. ಒಂದು ಕೋಟಿ ವೆಚ್ಚದ ರಸ್ತೆ ಮತ್ತು ಚರಂಡಿ ಡಾಂಬರೀಕರಣದ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸಿ ಬಳಿಕ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸಿ ಮಾತನಾಡಿದ ತಾಲೂಕಿನ ಮಲೆನಾಡು ಭಾಗಕ್ಕೆ ಈ ಹಿಂದಿನಿಂದಲೂ ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ನಡೆಯುತ್ತಿದೆ, ಇದನ್ನು ಮನಗಂಡು ಶಾಸಕನಾದ ಬಳಿಕದಿಂದಲೂ ಮಲೆನಾಡಿನ ಹಳ್ಳಿಗಳಿಗೆ ಭೇಟಿ ನೀಡಿ ಕಾಮಗಾರಿಗಳು ಮತ್ತು ಇನ್ನಿತರ ಸಮಸ್ಯೆಗಳ ಪಟ್ಟಿ ಮಾಡಿ ಸರ್ಕಾರಕ್ಕೆ ಕೋಟ್ಯಂತರ ರು. ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸದ್ಯಕ್ಕೆ 13 ಕೋಟಿ ರು. ಅನುದಾನ ಬಿಡುಗಡೆಯಾಗಿದ್ದು ಶೀಘ್ರದಲ್ಲೇ ಶಂಕುಸ್ಥಾಪನೆ ನಡೆಸಲಾಗುವುದು ಎಂದರು.
ಎರಡು ವರ್ಷಗಳಲ್ಲಿ ಕಾಂಗ್ರೆಸ್‌ ಸರ್ಕಾರದ ಸಾಧನೆ ಮಾತ್ರ ಶೂನ್ಯ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಅವಧಿ ಪೂರೈಸಿದ್ದು ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ ಎಂದು ಬಿಜೆಪಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇವಲ ಭಾಷಣಕ್ಕೆ ಮಾತ್ರ ಸೀಮಿತರಾಗಿದ್ದು ಬೇರೆ ಯಾವ ಕೆಲಸವೂ ಮಾಡಿಲ್ಲ. ಭ್ರಷ್ಟಾಚಾರ ವಿಚಾರವನ್ನು ತೆಗೆಯಲು ಹೋದರೆ ಅವರು ತಮ್ಮ ಮಾತನ್ನು ಜಾತಿಗಣತಿ, ಆಯೋಗ ಎಂಬ ಬೇರೆ ವಿಷಯಗಳ ಬಗ್ಗೆ ಮಾತನ್ನು ಬದಲಾಯಿಸುವ ಬುದ್ಧಿವಂತಿಕೆ ತೋರಿಸುತ್ತಾರೆ ಎಂದರು.
ಪಾಕಿಸ್ತಾನದ ವರ್ತನೆ ಸಹಿಸಲಾಗದು
ನಾವೆಲ್ಲರೂ ಭಾರತಾಂಬೆಯ ಮಕ್ಕಳು, ಇತ್ತೀಚಿನ ಘಟನೆಗಳು ನಮ್ಮ ಹೃದಯವನ್ನು ಹೊಕ್ಕಿದೆ ಎಂದು ಶಾಸಕ ಸಿ.ಎನ್ ಬಾಲಕೃಷ್ಣ ಹೇಳಿದ್ದಾರೆ. ದೇಶದ ಭದ್ರತಾ ಪಡೆ, ಆಯಾ ಕಾಲಘಟ್ಟದಲ್ಲಿ ತನ್ನ ಶಕ್ತಿ, ಸಾಮರ್ಥ್ಯವನ್ನ ಪ್ರದರ್ಶನ ಮಾಡಿದೆ. ಮೇ ೨೪ರಂದು ಬೃಹತ್ ತಿರಂಗ ಯಾತ್ರೆ ಬೆಳಗ್ಗೆ ೯ ಗಂಟೆಗೆ ೪೦ ಅಡಿ ಆಂಜನೇಯ ದೇವಾಲಯದ ಆವರಣದಿಂದ ಮೆರವಣಿಗೆ ಆರಂಭವಾಗಲಿದೆ, ೫೦೦ ಮೀಟರ್ ಉದ್ದದ ರಾ?ಧ್ವಜದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ ಎಂದರು.
ಹರಾಜಾದರೂ ಹಸ್ತಾಂತರವಾಗದ ಸಕಲೇಶಪುರ ಪುರಸಭೆ ಮಳಿಗೆಗಳು
ಸುಮಾರು ೨೭ ವರ್ಷಗಳ ನಂತರ ಪುರಸಭೆ ಮಳಿಗೆ ಹರಾಜು ನಡೆಸಲು ಪುರಸಭೆ ಆಡಳಿತ ದಿಟ್ಟ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಏಪ್ರಿಲ್ ೯ರಂದು ಬಸವೇಶ್ವರ ರಸ್ತೆಯ ೩೨ ಹಾಗೂ ವಿಜಯ ಬ್ಯಾಂಕ್ ವಾಣಿಜ್ಯ ಸಂಕಿರ್ಣದ ೨೦ ಮಳಿಗೆ ಸೇರಿದಂತೆ ೫೨ ಮಳಿಗೆಗಳ ಹರಾಜು ನಡೆಸಲು ಪುರಸಭೆ ಯಶಸ್ವಿಯಾಗಿದೆ. ಹರಾಜು ಪ್ರಕ್ರಿಯೆಯಲ್ಲಿ ತಿಳಿಸಿರುವಂತೆ ಟೆಂಡರ್‌ ನಡೆದ ದಿನದಿಂದಲೇ ಮಳಿಗೆ ಹರಾಜು ಪಡೆದ ಟೆಂಡರ್‌ದಾರರಿಗೆ ಮಳಿಗೆಗಳನ್ನು ತೆರವುಗೊಳಿಸಿ ಹಸ್ತಾಂತರಿಸಬೇಕಿರುವುದು ಪುರಸಭೆ ಕರ್ತವ್ಯ. ಆದರೆ, ಟೆಂಡರ್ ನಡೆದು ತಿಂಗಳು ಕಳೆದರೂ ಇದುವರೆಗೆ ಟೆಂಡರ್‌ದಾರರಿಗೆ ಮಳಿಗೆ ಹಸ್ತಾಂತರಿಸದಿರುವುದು ಹರಾಜು ಪ್ರಕ್ರಿಯೆಯ ಬಗ್ಗೆ ಪ್ರಶ್ನೆಗಳು ಏಳುವಂತೆ ಮಾಡಿದೆ.
ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣು ವಿತರಣೆ
ಎಚ್.ಡಿ. ದೇವೇಗೌಡರ ೯೩ನೇ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದೇವೆ ಎಂದು ಪುರಸಭಾಧ್ಯಕ್ಷ ಎಚ್.ಕೆ.ಪ್ರಸನ್ನ ತಿಳಿಸಿದರು. ದೇವೇಗೌಡರ ಜನ್ಮದಿನ ಪ್ರಯುಕ್ತ ತಾಲೂಕು ಜೆಡಿಎಸ್ ವತಿಯಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣುಗಳು ಹಾಗೂ ಬ್ರೆಡ್ ವಿತರಿಸಿ ಮಾತನಾಡಿದರು. ಗೌಡರಿಗೆ ದೇವರು ಇನ್ನಷ್ಟು ಆರೋಗ್ಯ, ಆಯಸ್ಸು, ನೆಮ್ಮದಿ ಕೊಟ್ಟು ಕಾಪಾಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ ಹಾಗೂ ತಾಲೂಕಿನ ಎಲ್ಲಾ ನಾಗರಿಕ ಪರವಾಗಿ ಜನ್ಮ ದಿನ ಶುಭಾಶಯವನ್ನು ಕೋರುತ್ತೇವೆ ಎಂದರು.
ನಿವೃತ್ತ ಅಂಗನವಾಡಿ ನೌಕರರ ಪೆನ್ಷನ್‌ಗೆ ಆಗ್ರಹಿಸಿ ಪ್ರತಿಭಟನೆ
ಎ.ಐ.ಟಿ.ಯು.ಸಿ. ಜಿಲ್ಲಾಧ್ಯಕ್ಷೆ ಎಸ್.ಎನ್. ಜಯಲಕ್ಷ್ಮಿ ಮಾಧ್ಯಮದೊಂದಿಗೆ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಐ.ಸಿ.ಡಿ.ಎಸ್.ಯಲ್ಲಿ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಗ್ರಾಚ್ಯುಟಿ ಪಾವತಿ ಕಾಯಿದೆ ೧೯೭೨ರ ಅಡಿಯಲ್ಲಿ ಗ್ರಾಚ್ಯುಟಿ (ನಿವೃತ್ತಿ ಉಪಧನ) ಪಡೆಯಲು ಅರ್ಹರು ಎಂಬುದಾಗಿ ಸುಪ್ರೀಂಕೋರ್ಟ್ ಅತ್ಯಂತ ಮಹತ್ವದ ತೀರ್ಪನ್ನು ನೀಡಿದೆ. ನ್ಯಾಯಪೀಠವು ಅಂಗನವಾಡಿ ನೌಕರರ ಕೆಲಸ-ಕಾರ್ಯಗಳನ್ನು ಸೂಕ್ಷ್ಮವಾಗಿ ಗಮನಿಸಿ ಅವರ ಕೆಲಸವು ಅರೆಕಾಲಿಕವಲ್ಲ, ಅಂಗನವಾಡಿ ಪೂರ್ಣ ನೌಕರರು ನಿರ್ವಹಿಸುತ್ತಿದ್ದಾರೆಂಬುದನ್ನು ಒತ್ತಿ ಹೇಳಿದ್ದಾರೆ ಎಂದರು.
ಶಿಕ್ಷಣ ಸಚಿವರಿಗೆ ಶಾಸಕ ರೇವಣ್ಣ ತರಾಟೆ
ಬಡವರ ಮಕ್ಕಳನ್ನು ಗೋಳು ಹೊಯ್ದುಕೊಂಡರೆ ನಿಮ್ಮ ಕುಟುಂಬ ನಾಶ ಆಗುತ್ತದೆ. ಮಕ್ಕಳು ನೀಡುವ ಶುಲ್ಕದ್ದಲ್ಲಿಯೂ ಹಣ ಹೊಡೆತ್ತಿದ್ದೀರಲ್ಲ ನಿಮಗೆ ಮಾನ ಮರ್ಯಾದೆ ಇದೆಯೇ ಎಂದು ಶಾಸಕ ಎಚ್.ಡಿ.ರೇವಣ್ಣ ರಾಜ್ಯ ಶಿಕ್ಷಣ ಸಚಿವರ ವಿರುದ್ಧ ಹರಿಹಾಯ್ದರು. ವಿದ್ಯಾರ್ಥಿಗಳ ಪೋಷಕರು ಕೂಲಿ ಮಾಡಿ ಅಷ್ಟಿಷ್ಟು ಕೂಡಿ ಹಾಕಿ ಶಿಕ್ಷಣ ಸಂಸ್ಥೆಗೆ ನೀಡಿದ ಹಣವನ್ನು ನುಂಗಿ ನೀರು ಕುಡಿಯುತ್ತಿದ್ದೀರಿ ಇದು ಎಷ್ಟರ ಮಟ್ಟಿಗೆ ಸರಿ? ಇಂತಹ ಹಣವನ್ನು ನುಂಗಿ ನೀರು ಕುಡಿಯುತ್ತಿರುವ ಸಚಿವರ ವಂಶ ಹೇಗೆ ಉದ್ಧಾರ ಆಗಲು ಸಾಧ್ಯ ಎಂದು ಕಟುವಾಗಿ ಟೀಕಿಸಿದರು.
ಅತ್ಯಂತ ಹೃದಯಪೂರ್ವಕ ಸಹಕಾರ ದೊರೆತಿದೆ
ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉಪ ಲೋಕಾಯುಕ್ತರ ಕಚೇರಿಯಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಆಯ್ದ ಪ್ರಕರಣಗಳನ್ನು ಇತ್ಯರ್ಥ ಪಡಿಸಲುವ ಸಂಬಂಧ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಅವರು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಪರಿಹಾರ ಮಾಡಲು ಪ್ರಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದು ಅಭಿನಂದನೆಗಳನ್ನು ತಿಳಿಸಿದರು. ಸುಸೂತ್ರವಾಗಿ ಪ್ರಕರಣಗಳ ವಿಲೇವಾರಿ ಮಾಡಲು ಆತ್ಮೀಯವಾಗಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಆಕಾಶವಾಣಿಯಲ್ಲಿ ಎಂಸಿಇ ತಂತ್ರಸುಧಾ ಸರಣಿ
ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಚಾರಗಳನ್ನು ಜನಸಾಮಾನ್ಯರಿಗೆ ಸರಳವಾಗಿ ತಿಳಿಸಿಕೊಡುವ ಸಲುವಾಗಿ ಆಕಾಶವಾಣಿ ಹಾಸನ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಸಹಯೋಗದಲ್ಲಿ ರೂಪಿಸಿರುವ ’ತಂತ್ರಸುಧಾ’ ತಂತ್ರಜ್ಞಾನ ಸರಣಿ ಮೇ ೧೯ರಿಂದ ಸೋಮವಾರ ಹಾಗೂ ಬುಧವಾರ ಬೆಳಗ್ಗೆ ೮.೩೫ಕ್ಕೆ ಪ್ರಸಾರವಾಗಲಿದೆ. ಒಟ್ಟು ಹದಿನೈದು ಕಂತುಗಳನ್ನು ಈ ಸರಣಿ ಒಳಗೊಂಡಿದೆ.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 508
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved