• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತರಿಸಲು ತಡವರಿಸಿದ ಅಧಿಕಾರಿಗಳು
ಹಲವು ವರ್ಷ ತಿಂಗಳಿನಿಂದ ಸಾರ್ವಜನಿಕರ ಕೆಲಸ ಮಾಡದ ದೂರುಗಳಲ್ಲಿ ತಹಸೀಲ್ದಾರ್, ವಿಲೆಜ್ ಅಕೌಂಟೆಂಟ್ ಹಾಗೂ ಇತರೆ ಇಲಾಖೆ ಅಧಿಕಾರಿಗಳನ್ನು ಉಪಲೋಕಾಯುಕ್ತ ಕೆ.ಎನ್ ಫಣೀಂದ್ರ ಅವರು ಪ್ರಶ್ನಿಸಿದಾಗ ಉತ್ತರ ಕೊಡಲಾಗದೇ ತಡವರಿಸಿದಾಗ ಸುಳ್ಳನ್ನು ಮತ್ತೆ ಮತ್ತೆ ಹೇಳಬೇಡಿ ಎಂದು ಅವರ ಕೋಪ ಮಾಡಿಕೊಂಡ ಘಟನೆ ನಡೆಯಿತು. ಸುಳ್ಳಿಗೆ ಮತ್ತೊಂದು ಸುಳ್ಳು ಹೇಳಬಾರದು, ಮುಂದಿನ ಒಂದು ತಿಂಗಳಲ್ಲಿ ಪ್ರಕರಣ ಇತ್ಯರ್ಥಪಡಿಸಿ, ಯಾವ ಸೀಮೆಯವರು ನೀವು ಈ ಸಂಬಂಧ ಮೇಲ್ಮನವಿಗೆ ಸಲ್ಲಿಸಿ ಎಂದು ಈ ಪ್ರಕರಣಕ್ಕೆ ಅಂತ್ಯವಾಡಿದರು.
ಮಹಾರಾಜ ಪಾರ್ಕ್‌ನಲ್ಲಿ ಸ್ವಚ್ಛತೆಗೆ ಕ್ರಮವಹಿಸಿ
ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ನಗರದ ಮಹಾರಾಜ್ ಪಾರ್ಕ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಹಾಗೂ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಶೌಚಾಲಯ ಸ್ವಚ್ಛತೆಗೆ ಕ್ರಮವಹಿಸಿ ಅಚ್ಚುಕಟ್ಟಾಗಿ ನಿರ್ವಹಣೆ ಮಾಡುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. . ಪಾರ್ಕ್‌ನಲ್ಲಿ ವಾಕ್ ಮಾಡುವ ಸಾರ್ವಜನಿಕರಿಗೆ ತೊಂದರೆಯಾಗದಂತೆ ವಿದ್ಯುತ್ ಸಂಪರ್ಕದ ಕೇಬಲ್‌ಗಳು ಮೇಲೆ ಕಾಣಿಸದಂತೆ ಮುಚ್ಚಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕರಿಗೆ ಕಾನೂನು ಚೌಕಟ್ಟಿನಲ್ಲಿ ಸವಲತ್ತು ಒದಗಿಸಿ
ಸರ್ಕಾರದ ಸವಲತ್ತುಗಳನ್ನು ಸಾರ್ವಜನಿಕರಿಗೆ ತಲುಪಿಸಲು ಕಾನೂನು ಚೌಕಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಾಸನ ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿರುವ ಸುಮಾರು ೪೫೦ ರಿಂದ ೫೦೦ ಪ್ರಕರಣಗಳಲ್ಲಿ ಆಯ್ದ ಇತ್ಯರ್ಥವಾಗುವ ೮೪ ಪ್ರಕರಣಗಳನ್ನು ನಾಳೆ ಇತ್ಯರ್ಥ ಪಡಿಸಲಾಗುವುದು ಎಂದರು.
ಧರಣಿಯಿಂದ ಚನ್ನರಾಯಪಟ್ಟಣದ ಸಾರ್ವಜನಿಕರಿಗೆ ಕಿರಿಕಿರಿ
ಚನ್ನರಾಯಪಟ್ಟಣ ತಾಲೂಕು ಆಡಳಿತದ ವಿರುದ್ಧ ಕಳೆದ ೯ ದಿನಗಳಿಂದ ನಡೆಸುತ್ತಿರುವ ಕೆಲ ಪ್ರಗತಿಪರ ಸಂಘಟನೆಗಳು ಧರಣಿ ಸಮಸ್ಯೆಯ ಕುರಿತಾಗಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ನಂತರವೂ ಧರಣಿ ಮುಂದುವರಿಕೆ ಸರಿಯಲ್ಲ, ಇದರಿಂದ ಸಾರ್ವಜನಿಕರಿಗೆ ಮತ್ತು ಸರ್ಕಾರಿ ನೌಕರರಿಗೆ ಕಿರಿಕಿರಿಯನ್ನುಂಟು ಮಾಡುತ್ತಿದೆ ಎಂದು ದಲಿತ ಸಂಘಟನೆ ಮುಖಂಡ, ಶ್ರವಣಬೆಳಗೊಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮಣ್ ತಿಳಿಸಿದ್ದಾರೆ. ತಾಲೂಕು ಕಚೇರಿ ಸುತ್ತಮುತ್ತ ಇರುವ ಏಳೆಂಟು ಸರ್ಕಾರಿ ಇಲಾಖೆಗಳ ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತಿದೆ ಎಂದಿದ್ದಾರೆ.
ಜಾತಿ ಸಮೀಕ್ಷೆ ವೇಳೆ ಉಪಜಾತಿ ನಮೂದಿಸಬೇಡಿ
ಕರ್ನಾಟಕ ರಾಜ್ಯದ ಸಮಸ್ತ ಹೊಲೆಯ ಸಮುದಾಯದ ಬಂಧುಗಳು ಜಾತಿ ಗಣತಿ ಸಂದರ್ಭದಲ್ಲಿ ಯಾವುದೇ ರೀತಿಯ ಉಪಜಾತಿಯನ್ನು ನೋಂದಣಿ ಮಾಡಿಸಬಾರದು ಎಂದು ದಲಿತ ಮುಖಂಡ ಎಚ್ ಕೆ ಸಂದೇಶ್ ತಿಳಿಸಿದ್ದಾರೆ. ಹೊಲೆಯ ಜಾತಿಗೆ ಸಂಬಂಧಿಸಿದಂತೆ ಉಪಜಾತಿಗಳಿದ್ದು ಆ ಉಪಜಾತಿಗಳಾದ ಆದಿ ದ್ರಾವಿಡ, ಆದಿ ಕರ್ನಾಟಕ , ಬಲಗೈ ಛಲವಾದಿ ಇನ್ನಿತರೆ ಉಪಜಾತಿಗಳನ್ನು ಯಾರೂ ಕೂಡ ನೋಂದಣಿ ಮಾಡಿಸಬಾರದು. ದಯಮಾಡಿ ಹೊಲೆಯ ಎಂದು ನೋಂದಣಿ ಮಾಡಿಸಿದರೆ ಅದು ಮುಂದಿನ ಭವಿಷ್ಯಕ್ಕೆ ಸಹಕಾರಿಯಾಗುತ್ತದೆ ಎಂದರು.
ಯುದ್ಧ ಮುಂದುವರಿಸಿದ್ದರೆ ಸ್ವಾಗತಿಸಬಹುದಿತ್ತು
ಇಡೀ ದೇಶದ ಜನ ಭಯೋತ್ಪಾದನೆ ವಿರುದ್ಧ ನಿಲ್ಲಬೇಕಿದೆ. ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಹಾಗೂ ರಾಹುಲ್‌ ಗಾಂಧಿ ಅವರ ಸೂಚನೆಯಂತೆ ಬೆಂಬಲ ಕೊಟ್ಟಿದ್ದೇವೆ. ಅಮೆರಿಕಾ ಮಧ್ಯಸ್ಥಿಕೆ ವಹಿಸುವ ಬದಲು ಮೋದಿಯವರೇ ಒಂದು ಒಳ್ಳೆಯ ನಿರ್ಧಾರ ತೆಗೆದುಕೊಳ್ಳಬಹುದಿತ್ತು. ಕದನ ವಿರಾಮ ಆಗಿದೆ. ನಾವು ಭಯೋತ್ಪಾದನೆ ವಿರುದ್ಧ ಇರಬೇಕು. ಪಹಲ್ಗಾಮ್ ನರಮೇಧದಿಂದ ತಾಯಂದಿರು, ಮಕ್ಕಳು ಕಣ್ಣೀರಿಟ್ಟಿರುವುದನ್ನು ಯಾವತ್ತೂ ಮರೆಯಲು ಆಗುವುದಿಲ್ಲ. ಯುದ್ಧ ಮುಂದುವರಿಸಿದ್ದರೆ ಸ್ವಾಗತಿಸಬಹುದಿತ್ತು ಎಂದು ಸಂಸದ ಶ್ರೇಯಸ್‌ ಪಟೇಲ್‌ ಹೇಳಿದರು.
ಸಾಮೂಹಿಕ ಆಚರಣೆಗಳು ಸಾಮರಸ್ಯದ ಜೀವನಕ್ಕೆ ವೇದಿಕೆ
ಗುಂಡನಬೆಳ್ಳೂರು ಗ್ರಾಮದಲ್ಲಿ ಪುನರುಜ್ಜೀವನಗೊಂಡ ಶ್ರೀ ಮಲ್ಲೇಶ್ವರಸ್ವಾಮಿ ದೇವಾಲಯ ಜೀರ್ಣೋದ್ಧಾರ ಮತ್ತು ಜಂಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಆಶೀರ್ವಚನ ನೀಡುತ್ತಾ, ಮನುಷ್ಯ ತಮ್ಮಲ್ಲಿರುವ ದ್ವೇಷ, ಅಸೂಯೆಗಳನ್ನು ಬದಿಗೊತ್ತಿ ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಮೂಡಿಸಿಕೊಳ್ಳಬೇಕು. ಧರ್ಮ ಮಾರ್ಗದಲ್ಲಿ ಸಾಗಿದರೆ ಮನುಷ್ಯನಿಗೆ ಸಹಜವಾಗಿಯೇ ಶಾಂತಿ, ನೆಮ್ಮದಿ ದೊರಕುತ್ತದೆ. ಗ್ರಾಮಗಳಲ್ಲಿರುವ ದೇವಸ್ಥಾನಗಳು ಮನುಷ್ಯರಿಗೆ ಶಾಂತಿ- ನೆಮ್ಮದಿ ನೀಡುವ ಧಾರ್ಮಿಕ ಕೇಂದ್ರಗಳಾಗಿವೆ ಎಂದರು.
ಕಳ್ಳೇರಿ ಗ್ರಾಮ ಪಂಚಾಯತ್‌ ಚುನಾವಣೆ
ಕಾನೂನು ಪಾಲನೆ ಮಾಡಬೇಕಾಗಿದ್ದ ಅಧಿಕಾರಿಗಳೇ ಕಾನೂನು ಗಾಳಿಗೆ ತೂರಿ ತಮಗೆ ತೋಚಿದಂತೆ ಚುನಾವಣೆ ನಡೆಸಿ ಗ್ರಾಮ ಪಂಚಾಯತ್‌ ಸದಸ್ಯರ ಮೇಲೆ ದರ್ಪ ತೋರಿದ್ದಾರೆಂದು ಕಳ್ಳೇರಿ ಗ್ರಾಮ ಪಂಚಾಯತ್‌ ಸದಸ್ಯರಾದ ಶ್ರೀನಿವಾಸ್ ಹಾಗೂ ಸದಸ್ಯೆ ಮೀನಾಕ್ಷಿ ಗಿರೀಶ್ ಆರೋಪ ಮಾಡಿದರು. ಇವರ ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ನಮ್ಮ ಗ್ರಾಪಂ ನಲ್ಲಿ ಚುನಾವಣೆ ನಡೆದಿದ್ದರೂ ಸಹ ಸಮಯಕ್ಕಿಂತ ಮುಂಚಿತವಾಗಿ ನಿಗದಿ ಪಡಿಸಿದ ಸಮಯಕ್ಕಿಂತ ಅವರಿಗೆ ಬೇಕಾದ ರೀತಿಯಲ್ಲಿ ಚುನಾವಣೆ ನಡೆಸಿದ್ದು ಈ ಬಗ್ಗೆ ಸಂಬಂಧಪಟ್ಟ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಹಾಗು ಜಿಲ್ಲಾಧಿಕಾರಿಗಳಿಗೆ ಎಸಿಯವರಿಗೆ ಪತ್ರ ಬರೆಯಲಾಗಿದೆ ಎಂದರು.
ಬ್ರಿಲಿಯಂಟ್ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ಎಚ್‌.ಎಸ್‌.ಅನಿಲ್ ಕುಮಾರ್ ವಹಿಸಿಕೊಂಡಿದ್ದರು. ಇವರು ಮಾತನಾಡಿ, ನೂತನವಾಗಿ ಪ್ರಥಮ ಪಿಯುಸಿಗೆ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಸ್ವಾಗತವನ್ನು ಕೋರಿದರು. ಹಾಗೂ 2024-25ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಪ್ರಥಮ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದವರಿಗೆ ನಗದು ಪುರಸ್ಕಾರವನ್ನು ನೀಡಿ ಸನ್ಮಾನಿಸಿದ್ದು ಅತ್ಯಂತ ವಿಶೇಷವೆನಿಸಿತು.
ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಳ
ಕೆಲವು ವರ್ಷಗಳಿಂದ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ತಾಲೂಕಿನ ಫಲಿತಾಂಶ ಜಿಲ್ಲಾ ಮಟ್ಟದಲ್ಲಿ ಕೊನೆಯ ಸ್ಥಾನದಲ್ಲಿತ್ತು. ಈ ಹಿಂದೆ ಮಕ್ಕಳ ದಾಖಲಾತಿ ಇಲ್ಲದ ಪರಿಣಾಮ ಹಲವು ಗ್ರಾಮಗಳಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು. ಆ ಪೈಕಿ ಈ ಸಾಲಿನಲ್ಲಿ 5 ಗ್ರಾಮಗಳಲ್ಲಿ ಮುಚ್ಚಿರುವ ಶಾಲೆಗಳು ಪುನಾರಂಭಗೊಳ್ಳುತ್ತಿವೆ. ಮಕ್ಕಳ ಮನೆ ಕೂಡ ಮೂರು ಕಡೆ ಆರಂಭಗೊಳ್ಳುತ್ತಿವೆ. ಮಕ್ಕಳ ಮನೆ ಮೂಲಕ ಪೂರ್ವ ಪ್ರಾಥಮಿಕ ಶಾಲೆಗಳಿಂದಲೇ ಇಂಗ್ಲೀಷ್ ಬೋಧನೆಗೆ ಒತ್ತು ನೀಡಲಾಗಿದೆ. ಖಾಸಗಿ ಶಾಲೆಗಳನ್ನು ಮೀರಿಸುವ ಮಟ್ಟದಲ್ಲಿ ನಮ್ಮ ಮಕ್ಕಳ ಮನೆ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 508
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved