• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರು ಸಂಕಷ್ಟದಲ್ಲಿದ್ದರೆ, ಸರ್ಕಾರ ಗಾಢ ನಿದ್ರೆಯಲ್ಲಿದೆ: ವಿಪಕ್ಷ ನಾಯಕ ಆರ್‌.ಅಶೋಕ್
ಮಾವು ಬೆಲೆ ನೆಲಕಚ್ಚಿದ ವೇಳೆಯೂ ಸರ್ಕಾರ ಗಾಢ ನಿದ್ರೆಯಲ್ಲಿತ್ತು, ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಿಸಿದ ನಂತರ ರಾಜ್ಯ ಸರ್ಕಾರ ನಿದ್ರೆಯಿಂದ ಎಚ್ಚೆತ್ತು ಬೆಂಬಲ ಬೆಲೆ ಘೋಷಿಸಿದೆ. ಕಾಫಿ ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಆಗಮಿಸಬೇಕು ಎಂದಾದರೆ ಹಾನಿಪ್ರಮಾಣದ ಅಂಕಿ ಅಂಶಗಳನ್ನು ರಾಜ್ಯ ಸರ್ಕಾರ ನೀಡಬೇಕು, ಆನಂತರ ಕೇಂದ್ರದಿಂದ ಪರಿಹಾರ ಬಿಡುಗಡೆ ಮಾಡಿಸುವ ಬಗ್ಗೆ ಮಾತನಾಡಬಹುದು.
ವ್ಯವಸ್ಥಾಪಕಿಯನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಕೆಸ್ಸಾರ್ಟಿಸಿ ನೌಕರರ ಧರಣಿ
ಕಳೆದ ತಿಂಗಳು ಕೂಡ ವ್ಯವಸ್ಥಾಪಕಿಯ ವರ್ತನೆ ಬಗ್ಗೆ ಮಾಹಿತಿ ತಿಳಿದು ಕರೆದು ಬುದ್ದಿವಾದ ಹೇಳಿ, ನೌಕರರು ಕಷ್ಟದ ಸಂದರ್ಭದಲ್ಲಿ ರಜೆ ಕೇಳಿದಾಗ ಕೊಡಬೇಕು. ನಿಮ್ಮ ವರ್ತನೆ ಸರಿ ಮಾಡಿಕೊಳ್ಳಬೇಕು ಎಂದು ಹೇಳಿ ಕಳಿಸಿದ್ದೆ. ಆದರೆ ಇಂದು ಇಂತಹ ಪರಿಸ್ಥಿತಿಯಲ್ಲಿ ಬಂದು ಮಾತನಾಡಲು ತಮಗೆ ಬೇಸರವಾಗುತ್ತಿದೆ.
ಕಳಪೆ ಬಿತ್ತನೆ ಬೀಜ ಪೂರೈಕೆ: ಪರಿಹಾರಕ್ಕಾಗಿ ರೈತರ ಪ್ರತಿಭಟನೆ
ಬೆಳೆ ನಾಶವಾಗಿರುವ ರೈತರಿಗೆ ಕಂಪನಿಯವರಿಂದಲೇ ಕೃಷಿ ಇಲಾಖೆಯವರು ಪ್ರತಿ ಎಕರೆಗೆ ೫೦ ಸಾವಿರ ರು. ಪರಿಹಾರ ಕೊಡಿಸಬೇಕು ಹಾಗೂ ಹಾಸನ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಹೆಸರನ್ನು ಅವರ ಅನುಮತಿ ಇಲ್ಲದೆ ಬಳಸಿಕೊಂಡು ಕರಪತ್ರವನ್ನು ಮುದ್ರಿಸಿ, ಇಲಾಖೆಯನ್ನು ದುರುಪಯೋಗ ಪಡಿಸಿಕೊಂಡಿರುವ ಬಿತ್ತನೆ ಬೀಜದ ಹೈಟೆಕ್ ಕಂಪನಿ ಮತ್ತು ಏಜೆನ್ಸಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು.
ಆಲೂರು ತಾಲೂಕಿನಲ್ಲಿ ಮೆಕ್ಕೆಜೋಳ ಬೆಳೆ ಹಾನಿ ವೀಕ್ಷಿಸಿದ ಆರ್‌. ಅಶೋಕ್‌
ಹಾಸನದ ಭಯಾನಕ ಸ್ಥಿತಿಯನ್ನು ಅನೇಕ ಸಚಿವರು ಕಂಡುಕೊಳ್ಳದೆ, ಭೇಟಿ ನೀಡದೆ ಅಲ್ಲಿಂದಲೇ ಹಿಂದಿರುಗಿದ್ದಾರೆ. ಹಿರಿಯ ಸಚಿವರು, ವೈದ್ಯಕೀಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರೆ ನಿಖರವಾದ ಕಾರಣ ಪತ್ತೆಯಾಗಬಹುದು ಎಂದು ಅವರು ಒತ್ತಾಯಿಸಿದರು.
ಕಾರ್ಮಿಕರ ಮಕ್ಕಳಿಗಾಗಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ: ಸಚಿವ ರಾಜಣ್ಣ
ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ರಾಜ್ಯ ಸರ್ಕಾರ ರಾಜ್ಯದ ವಸತಿ ಶಾಲೆಗಳ ಆಧುನೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಶಿಸ್ತನ್ನು ಗಳಿಸಬೇಕು. ವಿದ್ಯಾರ್ಥಿಗಳಿಗೆ ಪದೇ ಪದೇ ರಜೆ ನೀಡಬಾರದು, ಇದರಿಂದ ಅವರ ಭೌದ್ಧಿಕ ಗುಣಮಟ್ಟ ಕುಸಿಯುತ್ತದೆ, ಈ ಬಗ್ಗೆ ವಸತಿ ಶಾಲೆಗಳ ಪ್ರಾಂಶುಪಾಲರು ಸೇರಿದಂತೆ ಶಿಕ್ಷಕರು ಹೆಚ್ಚಿನ ಗಮನಹರಿಸಬೇಕು.
ಸನಾತನ ಧರ್ಮದ ರಕ್ಷಣೆ ನಮ್ಮ ಮೇಲಿದೆ
ಋಗ್ವೇದ, ಯಜುರ್ವೇದ, ಸಾಮವೇದ ಹಾಗೂ ಅಥರ್ವಣ ವೇದದಿಂದ ಕಲಿಕೆ, ಸಂಗೀತ, ಅಭಿನಯ ಹಾಗೂ ರಸ(ಸಾರ)ವನ್ನು ಒಳಗೊಂಡ ವಿಷಯದ ಆಧಾರದಲ್ಲಿ ನಾಟ್ಯವೇದ ಎಂಬುದನ್ನು ಬ್ರಹ್ಮದೇವ ಸೃಷ್ಠಿ ಮಾಡಿದರು. ನಂತರ ಬ್ರಹ್ಮದೇವರ ನಿರ್ದೇಶನದಂತೆ ಭರತಮುನಿಗಳು ಭರತನಾಟ್ಯವನ್ನು ಪ್ರಯೋಗಕ್ಕೆ ತಂದರು ಎಂಬ ಉಲ್ಲೇಖವಿದೆ. ಇಂತಹ ಇತಿಹಾಸ ಹೊಂದಿರುವ ದೇವಲೋಕದ ಕಲೆಯನ್ನು ಮುಂದಿನ ಪೀಳಿಗೆಗೆ ಉಳಿಸಿ, ಬೆಳೆಸುವ ಮತ್ತು ಸನಾತನ ಧರ್ಮ ಹಾಗೂ ಸಂಸ್ಕೃತಿಯನ್ನು ಕಾಪಾಡುವ ಜವಾಬ್ದಾರಿ ನಮ್ಮಗಳ ಮೇಲಿದೆ ಎಂದು ಸಾರ್ವಜನಿಕ ಆಸ್ಪತ್ರೆಯ ದಂತವೈದ್ಯೆ ಡಾ. ಅಶ್ವತಿ ಅಭಿಪ್ರಾಯಪಟ್ಟರು.
ಪ್ರತಿ ಸ್ತ್ರೀಯು ಪ್ರತಿಭಾವಂತೆ ಎಂದ ಜಯಶಂಕರ್ ಬೆಳಗುಂಬ
ಶ್ರೀ ಕುವೆಂಪು ಮಹಿಳಾ ಸಂಘದ ಜುಲೈ ತಿಂಗಳ ಮಾಸಿಕ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರಂಗಕರ್ಮಿ ಜಯಶಂಕರ್ ಬೆಳಗುಂಬ ಗಿಡಕ್ಕೆ ನೀರೆರೆಯುವ ಮೂಲಕ ಸಭೆಗೆ ಚಾಲನೆ ನೀಡಿದರು. ನಂತರ ಮಾತನಾಡಿ, ಪ್ರತಿಯೊಬ್ಬ ಸ್ತ್ರೀಯೂ ಪ್ರತಿಭಾವಂತಳು. ಆದರೆ ಆಕೆಯ ಪ್ರತಿಭೆ ಹೊರಹಾಕಲು ಸೂಕ್ತವಾದ ವಾತಾವರಣವಿಲ್ಲದೆ ತನ್ನ ಪ್ರತಿಭೆಯನ್ನು, ಸಾಮರ್ಥ್ಯವನ್ನು ತಾನು ಮಾತ್ರ ಅನುಭವಿಸಬೇಕಷ್ಟೇ. ಹಾಗಾಗದೆ ಪ್ರತಿಭಾವಂತ ಪ್ರತಿಯೊಬ್ಬ ಮಹಿಳೆಯೂ ತನ್ನ ಇಷ್ಟವಾದ ಹವ್ಯಾಸಗಳಲ್ಲಿ ದೃಢವಾಗಿ ಮುಂದುವರಿಯುವ ಸಂಕಲ್ಪ ಮಾಡಿಕೊಳ್ಳಬೇಕು ಎಂದು ಜಯಶಂಕರ್ ಬೆಳಗುಂಬ ಅಭಿಪ್ರಾಯಪಟ್ಟರು.
ದನಕರುಗಳಂತೆ ಕಾಫಿ ತೋಟಗಳಲ್ಲಿ ಅಡ್ಡಾಡುತ್ತಿರುವ ಕಾಡಾನೆ ಹಿಂಡು
ಬೇಲೂರು ತಾಲೂಕಿನ ಮಲೆನಾಡು ಭಾಗದಲ್ಲಿ 40ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿದ್ದು, ದನಕರುಗಳಂತೆ ರಾಜಾರೋಷವಾಗಿ ರಸ್ತೆಯಲ್ಲಿ ಓಡಾಡುತ್ತಿದ್ದು ವಾಹನ ಸವಾರರು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಪ್ರಾಣಭಯದಲ್ಲಿ ನಡೆದಾಡುವಂಥಾಗಿದೆ. ಮಲೆನಾಡು ಭಾಗದಲ್ಲಿ ಕಾಡಾನೆಗಳ ದಾಳಿಯಿಂದ ಸಾಕಷ್ಟು ಅವಾಂತರವಾಗುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಕಣ್ಣಮುಚ್ಚಿ ಕುಳಿತಿದೆ. ಅಧಿಕಾರಿಗಳು ಶ್ರೀಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಸರ್ಕಾರ ಕೂಡ ಇದರ ಕಡೆ ಗಮನ ಹರಿಸದೇ ಉಚಿತ ಗ್ಯಾರಂಟಿ ಯೋಜನೆಗೆ ಪ್ರಾಮುಖ್ಯತೆ ನೀಡಿ ಕಾಡಾನೆ ದಾಳಿಯಿಂದ ಬೇಸತ್ತಿರುವ ಬೆಳೆಗಾರರ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ
ಜಿಲ್ಲೆಯಲ್ಲಿ ಇರುವುದು ಒಬ್ಬರೇ ಹೃದ್ರೋಗ ತಜ್ಞರು
ಹಾಸನದಲ್ಲಿ ಹೃದ್ರೋಗ ಹಾಗೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಕಾಮಗಾರಿ ಮೊದಲು ಪೂರ್ಣಗೊಳ್ಳಲಿ. ಆ ಬಗ್ಗೆ ನಾನು ಕೂಡ ಗುತ್ತಿಗೆದಾರನ ಜೊತೆ ಮಾತನಾಡುತ್ತೇನೆ. ಕಟ್ಟಡ ಪೂರ್ಣಗೊಂಡ ನಂತರ ಅಗತ್ಯವಿರುವ ಸಲಕರಣೆಗಳನ್ನು ನೀಡಲು ಸರ್ಕಾರಕ್ಕೆ ಮನವಿ ಸಲ್ಲಿಸೋಣ. ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಒಬ್ಬರೇ ಹೃದ್ರೋಗ ತಜ್ಞರಿದ್ದಾರೆ. ಇನ್ನೂ ಎರಡು, ಮೂರು ಹೃದ್ರೋಗ ತಜ್ಞರ ನೇಮಕಕ್ಕೆ ಆರೋಗ್ಯ ಸಚಿವರಲ್ಲಿ ಮನವಿ ಮಾಡುತ್ತೇನೆ ಎಂದರು. ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಂಭವಿಸುತ್ತಿರುವ ಸಾವುಗಳ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ ಸಭೆ ನಡೆಸಿದರು.
ಎಐ ಫಲಿತಾಂಶದ ಮರುಪರಿಶೀಲನೆ ಅತ್ಯಗತ್ಯ
ಕೃತಕ ಬುದ್ಧಿಮತ್ತೆ(ಎಐ) ಮತ್ತು ಮೆಷಿನ್ ಲರ್ನಿಂಗ್ ಮಾಡೆಲ್‌ಗಳಿಂದ ದೊರೆಯುವ ಫಲಿತಾಂಶವನ್ನು ಮನುಷ್ಯರ ಬುದ್ಧಿಶಕ್ತಿ ಬಳಸಿ ಪರಿಶೀಲಿಸಬೇಕಾದ ಅಗತ್ಯತೆ ಇದೆ ಎಂದು ಕ್ಯಾಪ್‌ಜೆಮಿನಿ ಸಂಸ್ಥೆಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಸೀನಿಯರ್ ಕನ್ಸಲ್ಟೆಂಟ್ ಮೌನೇಶ್ ಕೆ ಅವರು ತಿಳಿಸಿದರು. ಕೃತಕ ಬುದ್ಧಿಮತ್ತೆ ಮತ್ತು ಮೆಷಿನ್ ಲರ್ನಿಂಗ್ ಮಾಡೆಲ್‌ಗಳಲ್ಲಿ ಪೂರ್ವಾಗ್ರಹ ಅಂತರ್ಗತವಾಗಿರುವುದರಿಂದ ಅವು ನೀಡುವ ಫಲಿತಾಂಶವನ್ನು ಯಥಾವತ್ತಾಗಿ ಸ್ವೀಕರಿಸಲು ಸಾಧ್ಯವಿಲ್ಲ. ಕೃತಕ ಬುದ್ಧಿಮತ್ತೆ ಮಾಡೆಲ್‌ಗಳ ಕಾರ್ಯಕ್ಷಮತೆ ಅವುಗಳಿಗೆ ಉಣಬಡಿಸುವ ದತ್ತಾಂಶದ ಮೇಲೆ ಅವಲಂಬಿತವಾಗಿರುತ್ತದೆ ಎಂದು ವಿವರಿಸಿದರು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 550
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved