• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಡಿಮಠದ ಶ್ರೀಗಳು ನಮಗೆ ಮಹಾಗುರುಗಳಿದಂತೆ
ಕೋಡಿಮಠದ ಸಭಾಂಗಣದಲ್ಲಿ ಆಯೋಜಿಸಿದ್ದ ಶ್ರೀ ಗುರು ಯೋಗಿ ಪ್ರಭುಕುಮಾರ ಪಟ್ಟಾಧ್ಯಕ್ಷರ 94ನೇ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಗಳು, ಮಾಜಿ ಪ್ರಧಾನ ಮಂತ್ರಿಗಳಾದ ಇಂದಿರಾಗಾಂಧಿ ಪಿ ವಿ ನರಸಿಂಹರಾವ್ ಸೇರಿದಂತೆ ರಾಜ್ಯ ಹಾಗೂ ದೇಶದ ಪ್ರಮುಖ ರಾಜಕಾರಣಿಗಳು ಮಾತ್ರವಲ್ಲ ಮಠ ಮಂದಿರವನ್ನು ಮುನ್ನಡೆಸುತ್ತಿರುವ ನಮ್ಮಂತ ಅನೇಕ ಮಠಾಧೀಶರಿಗೆ ತಮ್ಮ ನಿಖರ ಭವಿಷ್ಯ ವಾಣಿಯ ಮೂಲಕ ಮಾರ್ಗದರ್ಶನ ನೀಡುತ್ತಾ ಬಂದಿದ್ದಾರೆ. ಕೋಡಿಮಠದ ಶ್ರೀಗಳನ್ನು ಮಹಾ ಗುರುಗಳು ಎಂದು ಕರೆಯುವುದರಿಂದ ಅವರಿಗಿಂತ ನಮ್ಮೆಲ್ಲರಿಗೂ ಗೌರವ ಹೆಚ್ಚಾಗುತ್ತದೆ ಎಂದರು.
ಆರೋಗ್ಯಕರ ಹೃದಯಕ್ಕಾಗಿ ಉಚಿತ ಯೋಗ ಶಿಬಿರ
ಶ್ರೀ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಜುಲೈ ೮ರ ಮಂಗಳವಾರದಿಂದ ಜುಲೈ ೧೭ರ ಗುರುವಾರದವರೆಗೂ ಪ್ರತಿದಿನ ಬೆಳಿಗ್ಗೆ ೫.೩೦ರಿಂದ ೭.೩೦ರ ವರೆಗೂ ಆರೋಗ್ಯಕರ ಹೃದಯಕ್ಕಾಗಿ ಉಚಿತ ಯೋಗಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಜನರನ್ನ ಜಾಗೃತಿಗೊಳಿಸಿ ರೋಗ ಮುಕ್ತರನ್ನಾಗಿ ಮಾಡುವುದಕ್ಕಾಗಿ ಒಂದಷ್ಟು ಯೋಗಾಸನಗಳು, ಪ್ರಾಣಾಯಾಮ, ಅಗ್ನಿಹೋತ್ರ ಇತ್ಯಾದಿಗಳನ್ನು ಹತ್ತು ದಿನಗಳ ಕಾಲ ಜುಲೈ ೮ರ ಮಂಗಳವಾರದಿಂದ ನಗರದ ಎಂ.ಜಿ. ರಸ್ತೆ ಬಳಿ ಇರುವ ಶ್ರಿ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಪ್ರತಿದಿನ ಬೆಳಿಗ್ಗೆ ೫:೩೦ ರಿಂದ ೭:೩೦ರ ವರೆಗೂ ಉಚಿತವಾಗಿ ನೀಡಲಾಗುವುದು ಎಂದರು.
ಪಾಂಡುರಂಗನ ಪಾದಪೂಜೆ ಮಾಡಿ ಏಕಾದಶಿ ಆಚರಣೆ
ಶ್ರೀ ರುಕ್ಮಿಣಿ ಪಾಂಡುರಂಗ ಸ್ವಾಮಿ ದೇಗುಲದಲ್ಲಿ ಆಷಾಢ ಪ್ರಥಮ ಏಕಾದಶಿ ಪ್ರಯುಕ್ತ ವಿಶೇಷ ಪಾದಪೂಜೆಯನ್ನು ಏರ್ಪಡಿಸಿದ್ದು ಭಕ್ತರು ಸರದಿ ಸಾಲಿನಲ್ಲಿ ನಿಂತು ಶ್ರೀ ಪಾಂಡುರಂಗನ ಪಾದ ಸ್ಪರ್ಶ ಮಾಡುವ ಮೂಲಕ ಏಕಾದಶಿ ಆಚರಿಸಿದರು. ಕ್ತರು ಉಪವಾಸ ವ್ರತ ಕೈಗೊಂಡು ರಾತ್ರಿ ಇಡಿ ಭಜನೆ, ಕೀರ್ತನೆ, ಜಾಗರಣೆ ಮಾಡುತ್ತಾರೆ. ಇದರಿಂದ ಪಾಪಗಳು ನಿವಾರಣೆಯಾಗುತ್ತದೆ ಸುಖ ಸಮೃದ್ಧಿ ಪ್ರಾಪ್ತವಾಗುತ್ತದೆ ಎಂಬ ನಂಬಿಕೆ ಇದೆ. ಅದರಂತೆ ಶ್ರೀರುಕ್ಮಿಣಿ ವಿಠಲ ದೇಗುಲದಲ್ಲೂ ದೇವಶಯನಿ ಏಕಾದಶಿ ಯಂದು ವಿಶೇಷ ಪೂಜೆ ಹಾಗೂ ಆರಾಧನೆಯನ್ನು ನಡೆಸಲಾಗುತ್ತದೆ ಎಂದರು.
ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಗ್ರಾಮೀಣ ಪ್ರದೇಶದ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳು ಶೇ.೯೨ಕ್ಕೂ ಹೆಚ್ಚು ಅಂಕ ಪಡೆದಿದ್ದು, ಇವರ ಉನ್ನತ ಶಿಕ್ಷಣಕ್ಕೆ ಪೂರಕವಾದ ಬುನಾದಿ ಹಾಕಿಕೊಡುವಲ್ಲಿ ಶಾಲೆಯ ಮುಖ್ಯ ಶಿಕ್ಷಕರ ಬದ್ಧತೆ ಅಡಗಿದೆ ಎಂದು ಶಿಕ್ಷಕರ ಕಾರ್ಯವನ್ನು ಬಿಇಒ ಸೋಮಲಿಂಗೇಗೌಡ ಅಭಿನಂದಿಸಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ೫ ಬಂದ ವಿದ್ಯಾರ್ಥಿಗಳು ಹಾಗೂ ಶೇ. ೮೯ಕ್ಕಿಂತ ಹೆಚ್ಚು ಅಂಕ ಪಡೆದ ಸರ್ಕಾರಿ ಶಾಲೆಗಳ ೨೨ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. ೧೦೦ರಷ್ಟು ಫಲಿತಾಂಶ ಪಡೆದ ೪ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರನ್ನು ಸನ್ಮಾನಿಸಿ, ಪಾರಿತೋಷಕ ನೀಡಿ ಗೌರವಿಸಲಾಯಿತು.
ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸಕಲೇಶಪುರದಲ್ಲಿ ಪ್ರತಿಭಟನೆ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ದೇಶಾದ್ಯಾಂತ ಹಮ್ಮಿಕೊಂಡಿರುವ ಪ್ರತಿಭಟನೆ ಅಂಗವಾಗಿ ತಾಲೂಕಿನಲ್ಲಿ ಸಹ ಜು.9 ರಂದು ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಐಟಿಯುಸಿ ತಾಲೂಕು ಅಧಕ್ಷ ಹರೀಶ್ ಹೇಳಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕರು ದುಡಿಯುವ ಸಮಯವನ್ನು ೮ ಗಂಟೆಯಿಂದ ೧೦ ಗಂಟೆಗೆ ಹೆಚ್ಚಿಸಿರುವುದು ಖಂಡನೀಯ. ಕೇಂದ್ರ ಹಾಗೂ ರಾಜ್ ಸರ್ಕಾರಗಳು ೨೯ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ ಕೇವಲ ನಾಲ್ಕು ಕಾನೂನು ಜಾರಿಗೆ ಮಾಡಿದೆ ಎಂದರು.
ದ್ವಿಭಾಷಾ ಶಿಕ್ಷಣ ನೀತಿ ಜಾರಿಗಾಗಿ ಕರವೇ ಪ್ರತಿಭಟನೆ
ಕರ್ನಾಟಕದ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಡ್ಡಾಯಗೊಳಿಸುವ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕು ಹಾಗೂ ತೃತೀಯ ಭಾಷೆಯಾದ ಹಿಂದಿಯನ್ನು ಪಠ್ಯಕ್ರಮದಿಂದ ಹೊರಗಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದಿಂದ ಶನಿವಾರ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಮಹಾರಾಷ್ಟ್ರ ಸರ್ಕಾರವು ಸಹ ತ್ರಿಭಾಷಾ ನೀತಿಯನ್ನು ರದ್ದುಗೊಳಿಸಿ, ಮರಾಠಿ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಡ್ಡಾಯಗೊಳಿಸುವ ನಿರ್ಧಾರವನ್ನು ಕೈಗೊಂಡಿದೆ. ಈ ರಾಜ್ಯಗಳು ತಮ್ಮ ಭಾಷಿಕ ಗುರುತನ್ನು ರಕ್ಷಿಸುವುದರ ಜೊತೆಗೆ ಶೈಕ್ಷಣಿಕ ಗುಣಮಟ್ಟವನ್ನು ಕಾಪಾಡಿಕೊಂಡಿವೆ. ಕರ್ನಾಟಕವು ಈ ಉದಾಹರಣೆಗಳಿಂದ ಸ್ಫೂರ್ತಿಯನ್ನು ಪಡೆದು, ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಿಗೆ ಆದ್ಯತೆ ನೀಡುವ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕಾಗಿದೆ ಎಂದು ಒತ್ತಾಯಿಸಿದರು.
ದೇವಾಲದಕೆರೆಯಲ್ಲಿ ರಸಗೊಬ್ಬರ ಮಳಿಗೆ ಆರಂಭ
ಬೆಳೆಗಾರರಲ್ಲಿ ವೃತ್ತಿಪರತೆಯ ಕೊರತೆ ಕಾಡುತ್ತಿದೆ. ಯಾವುದೇ ಬೆಳೆಗೂ ಮಣ್ಣು, ನೀರು, ಗೊಬ್ಬರದ ಅಗತ್ಯವಿದೆ. ಇವುಗಳ ಬಳಕೆಯ ಬಗ್ಗೆ ಸಾಕಷ್ಟು ಬೆಳೆಗಾರರಿಗೆ ಅರಿವಿನ ಕೊರತೆ ಇದೆ. ಅಲ್ಲದೆ ಮಾರುಕಟ್ಟೆ ಜ್ಞಾನ ಸಹ ಅಗತ್ಯವಿದೆ. ತಮ್ಮ ಬೆಳೆಯನ್ನು ಯಾವಾಗ ಯಾವ ಬೆಲೆಗೆ ಮಾರಾಟ ಮಾಡಬೇಕು ಎಂಬ ಪರಿಕಲ್ಪನೆ ಹೊಂದುವುದು ಅಗತ್ಯ. ಗೊಬ್ಬರ ಬಳಕೆಯನ್ನು ಸಹ ಹೆಚ್ಚಿನ ಜಾಗೃತೆಯಿಂದ ಬಳಸುವ ಅಗತ್ಯವಿದೆ. ಸಮಯವಲ್ಲದ ಸಮಯದಲ್ಲಿ ಉಚಿತವಲ್ಲದ ಗೊಬ್ಬರ ನೀಡಿದರೆ ಹಣ ವ್ಯರ್ಥವಾಗಲಿದೆ ಎಂದು ಕಾಫಿ ಮಂಡಳಿ ಅಧ್ಯಕ್ಷ ಎಂ ಕೆ ದಿನೇಶ್ ಹೇಳಿದರು.
ಜೀವನದ ಎಲ್ಲಾ ಸಾಧನೆಗಳಿಗೂ ಪೋಷಕರೇ ಕಾರಣ
ನೀವು ಜೀವನದಲ್ಲಿ ಏನೆ ಯಶಸ್ಸು ಕಂಡಿದ್ದರೂ ಅದು ನೂರಕ್ಕೆ ತೊಂಬತ್ತು ಭಾಗ ನಿಮ್ಮ ತಂದೆ ತಾಯಿಯೆ ಕಾರಣವೇ ಹೊರತು ಎಲ್ಲವು ನನ್ನಿಂದಲೇ ಅಂದುಕೊಳ್ಳಬಾರದು ಎಂದು ಪೊಲೀಸ್ ಕಮಿಷನರ್ ಬೆಂಗಳೂರಿನ ಎಡಾ ಮಾರ್ಟಿನ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಜೀವನದಲ್ಲಿ ನೀವು ಪಡೆಯುವ ಯಶಸ್ಸು ಹೇಗೆ ಬಂದಿತು ಎಂಬುದನ್ನು ಅರಿತು ನೀವು ನಿಮ್ಮ ತಂದೆ ತಾಯಿಯನ್ನು ಗೌರವಿಸಬೇಕು. ಆ ಯಶಸ್ಸಿನಲ್ಲಿ ನಿಮ್ಮ ಪೋಷಕರ ಪರಿಶ್ರಮವು ಸೇರಿದೆ ಎಂಬುದನ್ನು ಮರೆಯಬಾರದು ಎಂದು ಸಲಹೆ ನೀಡಿದರು. ಏನೇ ಉನ್ನತ ವ್ಯಾಸಂಗ ಮಾಡಿದ್ದರೇ ಅದು ನಿಮ್ಮ ಪೋಷಕರಿಂದ ಎಂಬುದು ನೆನಪಿರಲಿ ಎಂದರು.
ನಾಡಪ್ರಭು ಕೆಂಪೇಗೌಡರದ್ದು ಆದರ್ಶಮಯ ಬದುಕು
ಹುಟ್ಟು ಸಾವಿನ ನಡುವೆ ಮನುಷ್ಯ ಮಾಡುವ ಒಳ್ಳೆಯ ಕೆಲಸ ಕಾರ್ಯಗಳಿಂದ ಬೌದ್ಧಿಕವಾಗಿ ಮರೆಯಾದ ಬಳಿಕವೂ ಸಮಾಜ ಸ್ಮರಿಸುವಂತಿರುತ್ತದೆ ಅಂತಹ ಆದರ್ಶಮಯ ಸಾರ್ಥಕ ಬದುಕು ನಾಡಪ್ರಭು ಕೆಂಪೇಗೌಡರದ್ದಾಗಿದೆ ಎಂದು ಹಾಸನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಂಭುನಾಥ ಸ್ವಾಮೀಜಿ ಹೇಳಿದರು. ಕೆಂಪೇಗೌಡರ ದೂರದೃಷ್ಟಿಯ ಸಂಕಲ್ಪದೊಂದಿಗೆ ನಿರ್ಮಾಣಗೊಂಡ ಬೆಂಗಳೂರು ಇಂದು ವಿಶ್ವ ಖ್ಯಾತಿಯಾಗಿ ಪಾತ್ರವಾಗಿರುವುದಲ್ಲದೆ ಕೋಟ್ಯಂತರ ಜನತೆಗೆ ಆಶ್ರಯ ನೀಡಿದ್ದು ಇಂದು ಕೆಂಪೇಗೌಡರ ಸಮ ಮತ್ತು ದೂರ ದೃಷ್ಟಿಕೋನದ ಫಲವನ್ನು ನಾವೆಲ್ಲ ಪಡೆಯುತ್ತಿದ್ದೇವೆ ಎಂದರು.
ವಲಸಿಗರ ಮೇಲೆ ಕ್ರಮಕ್ಕೆ ಒತ್ತಾಯಿಸಿ ಡಿಸಿಗೆ ದೂರು
ಬೇಲೂರು ತಾಲೂಕಿನ ಕಾಫಿ ತೋಟಗಳಲ್ಲಿ ಕೂಲಿ ಕೆಲಸಕ್ಕೆ ಅಸ್ಸಾಂ ಹಾಗೂ ಬಾಂಗ್ಲಾದ ವಲಸಿಗರು ಸುಮಾರು ೫ ಸಾವಿರಕ್ಕೂ ಹೆಚ್ಚು ಕಾರ್ಮಿಕರು ಅನಧಿಕೃತವಾಗಿ ಬಾಡಿಗೆ ಮನೆ ಮಾಡಿಕೊಂಡು ವಾಸಿಸುತ್ತಿದ್ದಾರೆ. ಇವರು ಬೆಳೆಗಾರರು ಹಾಗು ಸ್ಥಳೀಯರಿಗೆ ಬಹಳ ತೊಂದರೆ ಕೊಡುತ್ತಿದ್ದಾರೆ. ಅಲ್ಲದೆ ರಾತ್ರಿ ೧೨ ಗಂಟೆ ನಂತರ ಕುಡಿದು ಗಲಾಟೆ ಮಾಡುವುದರ ಜೊತೆಗೆ ಒಂಟಿ ಮನೆಗಳ ಮೇಲೆ ದಾಂಧಲೆ ನಡೆಸುವುದು ಕಂಡುಬರುತ್ತಿದೆ. ವಲಸಿಗರು ತಮ್ಮ ಸಂಘಟನೆ ಕಟ್ಟಿಕೊಂಡು ತೋಟದ ಮಾಲೀಕರನ್ನು ಹೆದರಿಸುವುದು ಅಲ್ಲದೆ ಅಶಿಸ್ತಿನಿಂದ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 550
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved