• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕರ ಅಹವಾಲನ್ನು ಸಮಾಧಾನದಿಂದ ಆಲಿಸಿ
ಸಾರ್ವಜನಿಕರು ಕಚೇರಿಗೆ ಬಂದ ಸಂದರ್ಭದಲ್ಲಿ ಅಧಿಕಾರಿಗಳು ಸ್ಪಂದಿಸಿ ಸಮಾಧಾನದಿಂದ ಆಲಿಸಿ ಅವರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ೨೪೦ ಜನರಿಗೆ ಟೋಕನ್ ನೀಡಲಾಗಿದೆ. ಅದರಲ್ಲಿ ಇಂದು ೧೮೦ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಉಳಿದ ಅರ್ಜಿಗಳನ್ನು ಶುಕ್ರವಾರ ಬೆಳಗ್ಗೆ ೧೦ ಗಂಟೆಯಿಂದ ಇದೇ ಸ್ಥಳದಲ್ಲಿ ಲೋಕಾಯುಕ್ತದ ಇತರೆ ನ್ಯಾಯಾಧೀಶರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ ಎಂದರು.
ರಸ್ತೆ ಕಾಮಗಾರಿ ವೇಳೆ ಸಿಡಿಮದ್ದು ಬಳಕೆಯಿಂದ ಮನೆಗಳ ಗೋಡೆ ಬಿರುಕು
ಖಾಸಗಿ ನಿವೇಶನಕ್ಕೋಸ್ಕರ ಸಾರ್ವಜನಿಕರು ತಿರುಗಾಡುವ ರಸ್ತೆಯಲ್ಲಿದ್ದ ಬಂಡೆಯನ್ನು ಸಿಡಿಸಿದ ಪರಿಣಾಮ ಸುತ್ತಮುತ್ತಲಿನ ಮನೆ ಹಾಗೂ ದೇವಸ್ಥಾನದ ಗೋಡೆ ಬಿರುಕು ಬಿಟ್ಟಿದ್ದು ನಿವಾಸಿಗಳು ಪ್ರತಿಭಟನೆ ನಡೆಸಿದರು. ಯಾವುದೇ ಅನುಮತಿ ಪಡೆಯದೇ ಭೂ ವಿಜ್ಞಾನ ಗಣಿ ಇಲಾಖೆಯಿಂದ ಅನುಮತಿ ಪಡೆಯದೇ ಬಂಡೆ ಸಿಡಿಸಿದ್ದಾರೆ. ಇದರಿಂದ ನಮ್ಮ ಮನೆಗಳಿಗೆ ಅಪಾರ ನಷ್ಟವಾಗಿದೆ. ದಂಡಾಧಿಕಾರಿಗಳು ಸೂಕ್ತ ತನಿಖೆ ನಡೆಸಿ ನಮಗೆ ನ್ಯಾಯ ಜೊತೆಗೆ ಪರಿಹಾರ ಕೊಡಿಸಿಕೊಡಬೇಕೆಂದು ಮನವಿ ಮಾಡಿದರು.
ನನ್ನ ಕಿಡ್ನಾಪ್ ಮಾಡಿಲ್ಲ ಎಂದ ಮಗಳು
ಅರೇಹಳ್ಳಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಕಿಡ್ನಾಪ್‌ ಮಾಡಿದ್ದಾರೆ ಎನ್ನಲಾದ ಯುವತಿ ತನ್ನ ಪತಿಯ ಜೊತೆ ಪ್ರತ್ಯಕ್ಷವಾಗಿ ನನ್ನನ್ನು ಯಾರೂ ಅಪಹರಿಸಿಲ್ಲ ನಾನೇ ಪತಿಯೊಂದಿಗೆ ತೆರಳಿದ್ದೇನೆ ಎಂದು ಹೇಳಿಕೆ ನೀಡಿದ್ದು ಪ್ರಕರಣಕ್ಕೆ ಹೊಸ ತಿರುವು ಬಂದಿದೆ. ಚನ್ನರಾಯಪಟ್ಟಣದ ಯುವಕ, ಕೆಲ ತಿಂಗಳ ಹಿಂದೆ ಅರೇಹಳ್ಳಿಯ ಹುಡುಗಿಯನ್ನು ಪ್ರೀತಿಸಿದ್ದ. ಪೋಷಕರ ನಿರಾಕರಣೆ ನಡುವೆಯೂ ಮದುವೆ ಆಗಿದ್ದ ಎನ್ನಲಾಗಿದೆ. ಆದರೆ, ಪೋಷಕರು ಮಗಳನ್ನು ಒಪ್ಪಿಸಿ, ಹುಡುಗನ ಮನೆಯಿಂದ ವಾಪಸ್‌ ಕರೆ ತಂದಿದ್ದರು. ನಂತರ, ಪತಿ ತನ್ನ ಪತ್ನಿಯನ್ನು ಮರಳಿ ಕರೆದೊಯ್ಯಲು ಯತ್ನಿಸಿದನಾದರೂ ಆಗಿರಲಿಲ್ಲ.
ವಿಕ್ರಂ ರಾವ್ ದೇಶದ ಪತ್ರಕರ್ತರನ್ನು ಒಂದು ಕುಟುಂಬ ಎಂದುಕೊಂಡಿದ್ದರು
ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದಲ್ಲಿ ಅಧ್ಯಕ್ಷರಾಗಿ ಸುದೀರ್ಘ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತ ಹಾಗೂ ಕ್ರಿಯಾಶೀಲ ಸಂಘಟಕರಾದ ಕೆ.ವಿ. ವಿಕ್ರಮರಾವ್ ಅವರಿಗೆ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಬುಧವಾರದಂದು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಒಂದು ನಿಮಿಷ ಮೌನ ಆಚರಿಸುವುದರ ಮೂಲಕ ಅರ್ಥಪೂರ್ಣವಾಗಿ ಶ್ರದ್ಧಾಂಜಲಿ ಅರ್ಪಿಸಿದರು. ಪತ್ರಕರ್ತರಿಗಾಗಿಯೇ ಜೀವನವನ್ನು ಮುಡಿಪಾಗಿಟ್ಟಿದ್ದವರು ಎಂದು ನೆನಪಿಸಿಕೊಂಡರು. ಅವರ ನಿಧನ ಪತ್ರಿಕಾರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದರು.
ಸೈನಿಕರ ಹಿತರಕ್ಷಣೆಗಾಗಿ ಸಾಮೂಹಿಕ ಪ್ರಾರ್ಥನೆ
ಭಾರತದಲ್ಲಿ ಅಶಾಂತಿ ಸೃಷ್ಠಿಸುವ ಜತೆಗೆ ಭಾರತೀಯರ ನೆಮ್ಮದಿಯ ಬದುಕಿಗೆ ಕೊಳ್ಳಿ ಇಡುವ ಸಲುವಾಗಿ ಭಯೋತ್ಪಾದನೆ ಬೆಂಬಲಿಸಿದ ಪಾಪಿ ಪಾಕಿಸ್ತಾನಕ್ಕೆ ನಮ್ಮ ವೀರ ಯೋಧರು "ಆಪರೇಷನ್ ಸಿಂದೂರ್ " ಮೂಲಕ ದಿಟ್ಟ ಉತ್ತರ ನೀಡಿದ್ದಾರೆ. ಆದರೆ ಈ ಸಂದರ್ಭದಲ್ಲಿ ಹುತಾತ್ಮರಾದ 7 ಭಾರತೀಯ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವ ಜತೆಗೆ ದಿಟ್ಟ ನಿರ್ಧಾರ ಕೈಗೊಂಡ ನಮ್ಮ ವೀರ ಯೋಧರಿಗೆ ಕೃತಜ್ಞತೆ ಸಲ್ಲಿಸುವ ಜತೆಗೆ ನಮಿಸುತ್ತೇವೆ ಎಂದು ನಿವೃತ್ತ ಯೋಧ ಎಚ್.ಡಿ.ವಸಂತ ಕುಮಾರ್ ತಿಳಿಸಿದರು.
ಬ್ಯಾಂಕ್‌ನಲ್ಲಿ ಕನ್ನಡ ಬಳಕೆಗೆ ಕ್ರಮ ವಹಿಸಿ
ಆಡಳಿತದಲ್ಲಿ ಕನ್ನಡ ಭಾಷೆಯನ್ನು ಶೇಕಡ ನೂರಕ್ಕೆ ನೂರರಷ್ಟು ಬಳಸುವ ಮೂಲಕ ಕನ್ನಡ ಅನುಷ್ಠಾನಕ್ಕೆ ಒತ್ತು ನೀಡಿ ಕನ್ನಡ ಭಾಷೆ ಬಳಸಿ ಉಳಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಅವರು ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲೆಯಲ್ಲಿ ಕನ್ನಡ ಭಾಷೆಯನ್ನು ಬಳಸುವ ಮೂಲಕ ಉಳಿಸಿ ರಾಜ್ಯದಲ್ಲಿ ಮಾದರಿ ಆಗಬೇಕು ಎಂದು ಹೇಳಿದರು. ಪ್ರಾಧಿಕಾರದ ಮೂಲ ಆಶಯ ಕನ್ನಡ ಭಾಷೆಯನ್ನು ಅಳಿಸಿ ಹಾಕದಂತೆ ಬೆಳೆಸಬೇಕು ಎಂಬುದಾಗಿ ಎಂದರು. ಭಾಷಾಂಧತೆ ಹುಟ್ಟುಹಾಕಬಾರದು ಭಾಷೆ ಪ್ರೇಮ ಇರಬೇಕು ಎಂದು ತಿಳಿಸಿದರು.
ಟೈಮ್ಸ್ ಗುರುಕುಲ ಶಾಲೆ ವಿದ್ಯಾರ್ಥಿಗಳಿಗೆ ಸನ್ಮಾನ
ಟೈಮ್ಸ್ ಗುರುಕುಲ ಸಿ.ಬಿ.ಎಸ್.ಇ. ಶಾಲೆಗೆ ನೂರಕ್ಕೆ ನೂರರಷ್ಟು ಫಲಿತಾಂಶ ಹಾಗೂ ಹೆಚ್ಚಿನ ಅಂಕ ಪಡೆದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳನ್ನು ಬುಧವಾರದಂದು ಸನ್ಮಾನಿಸಿ ಗೌರವಿಸಿದರು. , ಈಗಾಗಲೇ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಫಲಿತಾಂಶ ಬಂದಿದ್ದು, ಈ ಅಂಕಗಳು ಕೆಲವೊಂದಕ್ಕೆ ಮಾನದಂಡ ಅಷ್ಟೆ. ಮುಂದೆ ಭವಿಷ್ಯ ತುಂಬ ಉಜ್ವಲವಾಗಿರಬೇಕು ಎನ್ನುವ ಗುರಿ ಇದ್ದರೇ ಏನೇನು ತಪ್ಪುಗಳನ್ನು ಮಾಡಿದ್ದೀರಾ ಅದನ್ನು ಸರಿಪಡಿಸಿಕೊಳ್ಳುವುದನ್ನು ಕಲಿತುಕೊಳ್ಳಿ. ಎಲ್ಲಿ ಸರಿಯಾಗಿದೆ, ಎಲ್ಲಿ ತಪ್ಪಾಗಿದೆ, ತಪ್ಪಾಗಿರುವುದನ್ನು ಹೇಗೆ ಸರಿಪಡಿಸಿಕೊಳ್ಳಬೇಕು ಬಗ್ಗೆ ಆತ್ಮವಲೋಕನ ಮಾಡಿಕೊಳ್ಳಿ ಎಂದರು. ಅಂಕ ಕಡಿಮೆ ಬಂದಿದೆ ಎನ್ನುವ ಬಗ್ಗೆ ಮನಸ್ಸಿನಲ್ಲಿದ್ದರೇ ತೆಗೆದು ಹಾಕಿ ಮುಂದೆ ಏನು ಮಾಡಬೇಕು ಎನ್ನುವುದರ ಬಗ್ಗೆ ಚಿಂತಿಸಿ ಎಂದು ಸಲಹೆ ನೀಡಿದರು.
ತೀವ್ರಗೊಂಡ ತಹಸೀಲ್ದಾರ್ ಹಠಾವೋ ಜನತೆ ಬಚಾವೋ ಪ್ರತಿಭಟನೆ
"ತಹಸೀಲ್ದಾರ್ ಹಠಾವೋ ಚನ್ನರಾಯಪಟ್ಟಣ ಜನತೆ ಬಚಾವೋ " ಆಂದೋಲನ 12ನೇ ದಿನಕ್ಕೆ ಕಾಲಿಟ್ಟಿದ್ದು, ತಾಲೂಕು ಕಚೇರಿಗೆ ಬೀಗ ಹಾಕಲು ಯತ್ನಿಸಿದ ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದು ಶಾಮಿಯಾನವನ್ನು ತೆರವುಗೊಳಿಸಿದರು. ಎಷ್ಟು ಕೆಟ್ಟ ಆಡಳಿತ ನಮ್ಮ ರಾಜ್ಯದಲ್ಲಿ ಇದೆ ಎಂಬುದನ್ನು ತಿಳಿಯಬೇಕು. ಇಷ್ಟು ದಿನವಾದರೂ ಪ್ರತಿಭಟನಾ ಸ್ಥಳಕ್ಕೆ ಒಬ್ಬ ಅಧಿಕಾರಿ ಬಂದು ವಿಚಾರಿಸದೇ ನಮ್ಮನ್ನು ಬಂಧಿಸುವಂತೆ ಹೇಳಿರುವುದು ಖಂಡನೀಯ. ಆದ್ದರಿಂದ ಇಂದು ತಾಲೂಕು ಕಚೇರಿಗೆ ಬೀಗ ಹಾಕಲು ತೀರ್ಮಾನಿಸಿದ್ದೇವೆ ಎಂದರು.
ಅವೈಜ್ಞಾನಿಕ ರಸ್ತೆ ನಿರ್ಮಾಣದಿಂದ ತೊಂದರೆ
ಕೇರಳಾಪುರ ಗ್ರಾಮ ಪಂಚಾಯ್ತಿಯ ಮುಂಬಾಗದ ಮುಖ್ಯರಸ್ತೆ ಮೈಸೂರು ಸಾಲಿಗ್ರಾಮ ಕಡೆಯಿಂದ ಬರುವ ರಸ್ತೆ ಹೊಳೆನರಸೀಪುರ ರಸ್ತೆ ಕೊಣನೂರು ಕಡೆಯಿಂದ ಬರುವ ವಾಹನಗಳು ನಾಲ್ಕು ದಿಕ್ಕುಗಳಿಂದಲೂ ವಾಹನ ಬರುತ್ತವೆ, ಆದರೆ ಯಾವುದೇ ಭಾಗದಲ್ಲಿ ರಸ್ತೆ ನಿರ್ಮಾಣದಲ್ಲಿ ಅಪಘಾತಗಳು ಆಗದಂತೆ ರಸ್ತೆ ಸುರಕ್ಷತೆಯ ಕ್ರಮಗಳನ್ನು ಅನುಸರಿಸದೇ ರಸ್ತೆ ನಿರ್ಮಾಣ ಮಾಡಿದ್ದು, ಹಲವು ದಿನಗಳಿಂದ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಗ್ರಾಮಸ್ಥರು ದಾರಿ ಹೋಕರು ಅಪಘಾತಗಳಿಂದ ಪಾರಾಗುತ್ತಿದ್ದಾರೆ.
ಆಪರೇಷನ್ ಸಿಂದೂರದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ
ಪಹಲ್ಗಾಂ ದಾಳಿಗೆ ಪ್ರತೀಕಾರವಾಗಿ, ಭಾರತೀಯ ಸೇನೆಯು "ಆಪರೇಷನ್ ಸಿಂದೂರ " ಪ್ರಾರಂಭಿಸಿ ಪಾಕಿಸ್ತಾನದೊಳಗೆ ಆಳವಾಗಿ ದಾಳಿ ನಡೆಸಿ, ಲಷ್ಕರ್-ಎ-ತೊಯ್ಬಾ ಮತ್ತು ಜೈಶ್-ಎ-ಮೊಹಮ್ಮದ್ ಗುಂಪುಗಳಿಗೆ ಸೇರಿದ ಒಂಭತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ನಾಶಪಡಿಸಿತು. ನೂರಾರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವ ಮೂಲಕ ಮತ್ತು ಭಯೋತ್ಪಾದನೆಯನ್ನು ಸಹಿಸಲಾಗುವುದಿಲ್ಲ ಎಂಬ ದಿಟ್ಟ ಸಂದೇಶವನ್ನು ಜಗತ್ತಿಗೆ ರವಾನಿಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಯೋತ್ಪಾದಕರಿಗೆ ಮುಗ್ಧ ಹಿಂದೂಗಳು ಚೆಲ್ಲುವ ಪ್ರತಿ ರಕ್ತದ ಹನಿಗೂ ನ್ಯಾಯ ಒದಗಿಸಿದೆ ಎಂದರು.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 508
  • next >
Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved