• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಶ್ಚಾತ್ಯರ ಅನುಕರಣೆ ಬಿಟ್ಟು ನಮ್ಮ ಸಂಸ್ಕೃತಿ ಅನುಸರಿಸಿ
ಪಾಶ್ಚಾತ್ಯರ ಅನುಕರಣೆಯನ್ನು ಬಿಟ್ಟು, ನಮ್ಮ ಪ್ರಾಚೀನ ಶ್ರೀಮಂತ ಪರಂಪರೆಯನ್ನು ಇಂದಿನ ಯುವಜನರು ಎತ್ತಿ ಹಿಡಿಯಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರೆ ನೀಡಿದ್ದಾರೆ. ಯಾವುದೇ ಜಾತಿ, ಧರ್ಮ, ಜನಾಂಗದ ಭೇದವಿಲ್ಲದೆ ಸರ್ವರಿಗೂ ಆಶ್ರಯ, ಅನ್ನ, ಅಕ್ಷರವೆಂಬ ತ್ರಿವಿಧ ದಾಸೋಹ ಮಾಡುತ್ತಿರುವ ನಮ್ಮ ಮಠ ಮಾನ್ಯಗಳು ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿವೆ ಎಂದರು.
ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ಚಿನ್ನದ ಪದಕ
ಮೇ ೧ರಂದು ಮಲೇಷ್ಯಾದಲ್ಲಿ ನಡೆದ ಅಂತರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದ ಮೊಹಮ್ಮದ್ ಸುಜೈನ್ ಅವರಿಗೆ ಜಿಲ್ಲಾ ಕರಾಟೆ ಸಂಸ್ಥೆ ಮತ್ತು ಹಾಸನದ ಹೋಲಿಮೌಂಟ್ ಶಾಲೆಯ ಮುಖ್ಯಸ್ಥರಿಂದ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು. ಕರಾಟೆ ಪಟು ಹಾಗೂ ತರಬೇತುದಾರ ಆರೀಫ್‌ ಅವರು ಕರಾಟೆ ಕ್ರೀಡೆಯಲ್ಲಿ ಸಾಕಷ್ಟು ಸಾಧನೆ ಮಾಡಿದ್ದು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಯನ್ನು ಏರ್ಪಡಿಸಿ ಈ ಕ್ಷೇತ್ರದಲ್ಲಿ ಸಾಧನೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಪ್ರಚಾರವಿಲ್ಲದೆ ಸರ್ಕಾರಿ ಶಾಲೆ ಪ್ರಗತಿ ಕುಂಠಿತ
ಸರ್ಕಾರಿ ಶಾಲೆಯಲ್ಲಿ ಉಚಿತವಾಗಿ ಓದಿದವರು ಶಾಲೆಗಳನ್ನು ಮರೆಯದೆ ತಮ್ಮ ಕೈಲಾದ ಸಹಕಾರ ನೀಡಬೇಕೆಂಬ ಉದ್ದೇಶದಿಂದ "ನಮ್ಮ ಶಾಲೆ ನಮ್ಮ ಜವಾಬ್ದಾರಿ " ಎಂಬ ವಿನೂತನ ಯೋಜನೆ ಆರಂಭಿಸಲಾಗಿದೆ ಎಂದು ಹಳೇಬೀಡಿನ ಕೆ.ಪಿ.ಎಸ್ ಉಪ ಪ್ರಾಂಶುಪಾಲ ಮುಳ್ಳಯ್ಯ ತಿಳಿಸಿದರು. ಸರ್ಕಾರಿ ಶಾಲೆಗಳಲ್ಲಿ ಪ್ರತಿದಿನ ವಿದ್ಯಾರ್ಥಿ ಊಟದ ವ್ಯವಸ್ಥೆ, ಉಚಿತ ಆರೋಗ್ಯ ತಪಾಸಣೆ, ಬಿಸಿಹಾಲು, ಮೊಟ್ಟೆ-ಬಾಳೆಹಣ್ಣುಗಳನ್ನು ನೀಡುವುದು ಆಧುನಿಕ ಅಡಿಗೆ ಮತ್ತು ದಾಸ್ತಾನು ಕೊಠಡಿಗಳು ಇವೆ ಎಂದರು.
ನಾಳೆ ತೆರೆ ಮೇಲೆ ಮಿಂಚಲಿರುವ ರಿದಂ ಚಿತ್ರ
ದೊಡ್ಡಕಾಡನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ನಿರೀಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ರಂಗರಾಜು ಎನ್.ಆರ್. ಅವರ ಪುತ್ರ ಮಂಜು ಮಿಲನ್ ನಿರ್ದೇಶಿಸಿ ನಾಯಕ ನಟನಾಗಿ ನಟಿಸಿರುವ "ರಿದಂ " ಚಲನಚಿತ್ರ ಮೇ ೧5ರ ಗುರುವಾರ ತೆರೆ ಕಾಣುತ್ತಿದ್ದು, ಹೆಚ್ಚಿನ ಉತ್ತೇಜನ ನೀಡುವಂತೆ ರಿದಂ ಚಿತ್ರ ತಂಡ ವಿನಂತಿಸಿದೆ. ನಾಯಕಿಯಾಗಿ ಮೇಘಶ್ರೀ ನಟಿಸಿರುವ ಚಿತ್ರದಲ್ಲಿ ಸಮನ್, ವಿನಯ ಪ್ರಕಾಶ್, ಭವ್ಯ, ಶಿವರಾಂ ಮುಖ್ಯ ಭೂವಿಕೆಯಲ್ಲಿದ್ದಾರೆ. ಸಂಗೀತವನ್ನು ಎ.ಟಿ.ರವೀಶ್ ನೀಡಿದ್ದು, ಸಾಹಸವನ್ನು ಅಲ್ಟಿಮೇಟ್ ಶಿವು, ಫಯಾಜ್ ಖಾನ್ ಹಾಗೂ ಗಣೇಶ್ ನೀಡಿದ್ದಾರೆ.
ಪುರಸಭಾ ತೆರಿಗೆಯಿಂದ ವಾರ್ಡ್‌ಗಳ ಅಭಿವೃದ್ಧಿ
ಹಲವು ವರ್ಷಗಳಿಂದ ನಾಗಸಮುದ್ರ ರಸ್ತೆಯಿಂದ ರಾಘವೇಂದ್ರ ಕನ್ವೆಷನ್ ಹಾಲ್‌ವರೆಗೆ ಚರಂಡಿ ಹಾಗೂ ಡಾಂಬರ್ ರಸ್ತೆ ನಿರ್ಮಾಣಕ್ಕೆ ವಾರ್ಡಿನ ಸಾರ್ವಜನಿಕರು ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದರು. ಇದನ್ನು ನೀಗಿಸಲು ಸದಸ್ಯರು ಮುಂದಾಗಿದ್ದು ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು. ಸರ್ಕಾರದಿಂದ ಅನುದಾನ ಕಡಿಮೆಯಾಗಿರುವುದರಿಂದ ಪುರಸಭಾ ತೆರಿಗೆಯಲ್ಲಿ ವಾರ್ಡ್‌ಗಳ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ವಾರ್ಡಿನಲ್ಲಿ ಬೀದಿದೀಪಗಳ ಸಮಸ್ಯೆ ಇದೆ, ಇದನ್ನು ನೀಗಿಸಲಾಗುತ್ತಿದೆ, ಸ್ವಚ್ಛತೆಗೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದು, ವಾರ್ಡಿನಲ್ಲಿ ಕಸ ರಸ್ತೆ ಬದಿ ಬೀಳದಂತೆ ನೋಡಿಕೊಳ್ಳಲಾಗುತ್ತಿದೆ ಎಂದರು.
ಪೋಸ್ಟರ್‌ ಮೇಕಿಂಗ್‌ನಲ್ಲಿ ಗಂಧದಕೋಠಿ ವಿದ್ಯಾರ್ಥಿಗಳಿಗೆ ಬಹುಮಾನ
ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಪೋಸ್ಟರ್ ಮೇಕಿಂಗ್ ಸ್ಫರ್ಧೆಯಲ್ಲಿ ನಗರದ ಆರ್.ಸಿ. ರಸ್ತೆ ಗಂಧದ ಕೋಠಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಗಳ ತಂಡ ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಬಹುಮಾನ ಪಡೆದುಕೊಂಡಿದೆ.ಕಾಲೇಜಿನ ಪ್ರಾಂಶುಪಾಲ ಡಿ.ಕೆ. ಮಂಜಯ್ಯ ವಿಜೇತ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿದರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಉಪನ್ಯಾಸಕರಾದ ದಿಲೀಪ್ ಕುಮಾರ್ ಎಚ್.ಕೆ. ಮತ್ತು ಕಾವ್ಯ ಸಿ.ಪಿ. ಅವರ ಮಾರ್ಗದರ್ಶನ ಪಡೆದುಕೊಂಡಿದ್ದರು.
ಸಿಂದೂರ ಯಶಸ್ವಿ ಹಿನ್ನೆಲೆ ಬೇಲೂರಲ್ಲಿ ತಿರಂಗಾ ಯಾತ್ರೆ
ಪಹಲ್ಗಾಮ್ ದಾಳಿಗೆ ಪ್ರತಿ ದಾಳಿಯಾಗಿ ಭಾರತವು ಆಪರೇಷನ್ ಸಿಂಧೂರ ಮೂಲಕ ಪ್ರತ್ಯುತ್ತರ ನೀಡಿದ್ದಕ್ಕಾಗಿ ಮತ್ತು ನಮ್ಮ ಹೆಮ್ಮೆಯ ಸೈನಿಕರಿಗೆ ನೈತಿಕ ಸ್ಥೈರ್ಯ ನೀಡುವ ಸಲುವಾಗಿ ಚನ್ನಕೇಶವಸ್ವಾಮಿ ದೇವಸ್ಥಾನದ ಮುಂಭಾಗದಿಂದ ಬಸವೇಶ್ವರ ವೃತ್ತದವರೆಗೂ ಬಿಜೆಪಿ ಹಾಗೂ ಪ್ರಗತಿಪರ ಸಂಘಟನೆಗಳ ವತಿಯಿಂದ ಶಾಸಕ ಎಚ್.ಕೆ.ಸುರೇಶ್ ನೇತೃತ್ವದಲ್ಲಿ "ರಾಷ್ಟ್ರ ರಕ್ಷಣೆಗಾಗಿ ನಾವೆಲ್ಲರೂ " ಎಂಬ ಘೋಷವಾಕ್ಯದಡಿ ತಿರಂಗಾ ಯಾತ್ರೆ ಮಾಡಲಾಯಿತು.
ಅರ್ಚಕನ ಆತ್ಮಹತ್ಯೆಗೆ ಕಾರಣರಾದವರ ಬಂಧನಕ್ಕೆ ಆಗ್ರಹ
ಬೇಲೂರು ತಾಲೂಕಿನ ಹಳೇಬೀಡು ಹೋಬಳಿಯ ಗಂಗೂರು ಗ್ರಾಮದ ಶ್ರೀ ಲಕ್ಷ್ಮೀರಂಗನಾಥಸ್ವಾಮಿ ದೇವಾಲಯದ ಅರ್ಚಕ ದೇವಾಲಯದಲ್ಲೇ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಹಾಗೂ ಮೃತರ ಕುಟುಂಬಕ್ಕೆ ೧೦ ಲಕ್ಷ ಪರಿಹಾರ ನೀಡಬೇಕೆಂದು ಆಗ್ರಹಿಸಿ ರಾಜ್ಯ ಧಾರ್ಮಿಕ ದತ್ತಿ ದೇವಾಲಯಗಳ ಆರ್ಚಕರ ಮತ್ತು ಆಗಮಿಕರ ಸಂಘದಿಂದ ಮಂಗಳವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಅಪ್ಪನ ಎದುರಲ್ಲೇ ಮಗಳ ಕಿಡ್ನಾಪ್ ಮಾಡಿದ ಯುವಕ
ಅರೇಹಳ್ಳಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಕಾರ್‌ನಲ್ಲಿ ಬಂದ ನಾಲ್ವರು ತಂದೆಯ ಎದುರಲ್ಲೇ ಮಗಳನ್ನು ಕಿಡ್ನಾಪ್ ಮಾಡಿದ್ದಲ್ಲದೆ ಕಾರನ್ನು ತಡೆದು ನಿಲ್ಲಿಸಲು ಹೋಗಿ ಡೋರ್‌ನಲ್ಲಿ ನೇತಾಡುತ್ತಿದ್ದ ತಂದೆಯನ್ನು ಸಹ ರಸ್ತೆಯುದ್ದಕ್ಕೂ ಎಳೆದೊಯ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚನ್ನರಾಯಪಟ್ಟಣ ಮೂಲದ ಯುವಕ, ಕೆಲ ತಿಂಗಳ ಹಿಂದೆ ಅರೇಹಳ್ಳಿ ಸಮೀಪದ ಹುಡುಗಿಯನ್ನು ಪ್ರೀತಿಸಿ ಪೋಷಕರ ನಿರಾಕರಣೆಯೊಂದಿಗೆ ಮದುವೆ ಆಗಿದ್ದ ಎನ್ನಲಾಗಿದೆ. ಕೆಲ ದಿನಗಳ ಹಿಂದೆ ಮಗಳನ್ನು ಒಪ್ಪಿಸಿ ಹುಡುಗನ ಮನೆಯಿಂದ ಪೋಷಕರು ಮನೆಗೆ ವಾಪಸ್‌ ಕರೆ ತಂದಿದ್ದರು ಎನ್ನಲಾಗಿದೆ.
ಒಳ ಮೀಸಲಾತಿ ಸಮೀಕ್ಷೆಯ ಲೋಪದೋಷ ಸರಿಪಡಿಸಿ
ಒಳ ಮೀಸಲಾತಿ ಸಂಬಂಧ ಎಸ್.ಸಿ. ಪಟ್ಟಿಯಲ್ಲಿಯ ೧೦೧ ಜಾತಿಗಳ ಸಮೀಕ್ಷೆ ಕಾರ್ಯದಲ್ಲಿ ಹಲವು ಲೋಪದೋಷಗಳು ಕಂಡುಬಂದಿದ್ದು, ಕೂಡಲೇ ಅವುಗಳನ್ನು ಸರಿಪಡಿಸಿ, ಸಮೀಕ್ಷೆ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸುವಂತೆ ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ಒತ್ತಾಯಿಸಿದರು. ಪರಿಶಿಷ್ಟ ಜಾತಿಯ ೧೦೧ ಜಾತಿಗಳ ಸಮೀಕ್ಷೆ ಕಾರ್ಯ ಮೇ ೫, ೨೦೨೫ರಿಂದ ಪ್ರಾರಂಭವಾಗಿದೆ. ಮೂರು ಹಂತಗಳಲ್ಲಿ ನಡೆಯುತ್ತಿರುವ ಈ ಸಮೀಕ್ಷೆ ಕಾರ್ಯ ಮೇ ೨೩ರಂದು ಕೊನೆಗೊಳ್ಳುತ್ತದೆ ಎಂದು ತಮ್ಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಎಂದರು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 508
  • next >
Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved