• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರೀ ಮಳೆಗೆ ಹೊಗೆಸೊಪ್ಪಿನ ಗಿಡಗಳ ಬೆಳವಣಿಗೆ ಕುಂಠಿತ
ರಾಮನಾಥಪುರದ ತಂಬಾಕು ಮಾರುಕಟ್ಟೆಯ ಫ್ಲಾಟ್‌ ಫಾರಂ 7ರ ಮತ್ತು 63ರ ಮಾರುಕಟ್ಟೆ ವ್ಯಾಪ್ತಿಯಲ್ಲಿ ಹೊಗೆಸೊಪ್ಪು ಬೆಳೆಯು, ಭಾಗಶಃ ಭಾರಿ ಹಾನಿಯಾಗಿದೆ. ಕೆಲವು ಬೆಳಗಾರರ ಬೆಳೆ ಸಂಪೂರ್ಣ ಹಾನಿಯಾಗಿದೆ. ಕೊಣನೂರು, ಮಲ್ಲಿಪಟ್ಟಣ, ದೊಡ್ಡಮಗ್ಗೆ, ರಾಮನಾಥಪುರ ಮುಂತಾದ ಫ್ಲಾಟ್‌ ಫಾರಂ 7 ಹಾಗೂ 63 ವ್ಯಾಪ್ತಿಯ ಸುಮಾರು ನೂರಕ್ಕೂ ಹೆಚ್ಚು ಹೆಕ್ಟೇರ್‌ನಲ್ಲಿ ಬೆಳೆಗಳು ಹಾನಿಯಾಗಿದೆ. ಈ ವರ್ಷ ಮೇ ಮತ್ತು ಜೂನ್‌ನಲ್ಲಿ ಸತತವಾಗಿ ವಾರಗಟ್ಟಲೆ ಮಳೆ ಸುರಿದಿರುವುದರಿಂದ ಅತಿಯಾದ ತಂಬಾಕು ನಾಟಿ ಮಾಡಿದ ಹೊಲಗಳಲ್ಲಿ ತೇವಾಂಶ ಹೆಚ್ಚಾಗಿದ್ದು, ಹೊಗೆ ಸೊಪ್ಪು ಗಿಡಗಳು ಬೆಳವಣಿಗೆ ಆಗದೆ ಹೊಗೆಸೊಪ್ಪು ಉತ್ಪಾದನೆ ಕುಂಠಿತವಾಗುವ ಸಾಧ್ಯತೆಗಳು ಹೆಚ್ಚಾಗಲಿದೆ.
ದೇಶದ ಚುನಾವಣೆ ವ್ಯವಸ್ಥೆಯ ಅರಿವು ಕಾರ್ಯಕ್ರಮ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವ ಮೂಲಕವೇ ಸರ್ಕಾರ ರಚಿಸುವ ಅವಕಾಶಗಳಿರುವುದರಿಂದ ಮಕ್ಕಳಿಗೆ ವಿದ್ಯಾಭ್ಯಾಸದ ಜೊತೆಗೆ ಅವರಲ್ಲಿ ಸಾಮಾಜಿಕ ಪ್ರಜ್ಞೆ ಮೂಡಿಸುವುದು ಅಗತ್ಯ. ವಿದ್ಯಾವಂತರೇ ಇಂದು ಮತದಾನದಲ್ಲಿ ಪೂರ್ಣ ಪ್ರಮಾಣದಲ್ಲಿ ಪಾಲ್ಗೊಳ್ಳುತ್ತಿಲ್ಲ. ಚುನಾವಣಾ ಆಯೋಗ ಸ್ಥಳೀಯ ಇಲಾಖೆಗಳ ಮೂಲಕ ಎಷ್ಟೇ ಜಾಗೃತಿ ಮೂಡಿಸುತ್ತಿದ್ದರೂ ವಿದ್ಯಾವಂತ ಯುವಜನರು ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದಿರುವುದು ವಿಷಾದನೀಯ ಎಂದು ಕೆ.ಪಿ.ಎಸ್‌ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಮುಳ್ಳಯ್ಯ ತಿಳಿಸಿದರು.
ತಹಸೀಲ್ದಾರ್‌ ಮಮತಾಗೆ ವಿವಿಧ ಸಂಘಟನೆಗಳ ಬೀಳ್ಕೊಡುಗೆ
ಸಾಲುಮರದ ತಿಮ್ಮಕ್ಕ ಪೌಂಡೇಷನ್ ಹಾಗು ವಿವಿಧ ಸಂಘಸಂಸ್ಥೆಗಳ ವತಿಯಿಂದ ಇಲ್ಲಿನ ಚನ್ನಕೇಶವ ದಾಸೋಹ ಭವನದಲ್ಲಿ ಆಯೋಜಿಸಿದ್ದ ತಹಸೀಲ್ದಾರ್ ಎಂ. ಮಮತಾ ಅವರ ಬೀಳ್ಕೊಡುಗೆ, ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಕೆಲಸ ಸಮಾಜದ ಸೇವೆ ಮಾಡಲು ಉತ್ತಮ ವೇದಿಕೆಯಾಗಿದೆ. ಅಧಿಕಾರಿಗಳು ಭ್ರಷ್ಟಾಚಾರ ಮುಕ್ತವಾಗಿ ಕೆಲಸ ಮಾಡಿದರೆ ದೇಶದ ಅಭಿವೃದ್ಧಿಗೆ ಪೂರಕವಾಗುವುದರ ಜೊತೆಗೆ ಜನಸಾಮಾನ್ಯರಿಗೆ ಸಹಾಯವಾಗುತ್ತದೆ. ಈ ನಿಟ್ಟಿನಲ್ಲಿ ತಾಲೂಕಿನಲ್ಲಿ ದಕ್ಷ ಆಡಳಿತಾಧಿಕಾರಿ ಎಂ ಮಮತಾರವರು ಉತ್ತಮ ಕೆಲಸ ಮಾಡಿದ್ದಾರೆ ಎಂದು ಶಾಸಕ ಸುರೇಶ್‌ ಹೇಳಿದರು.
ಬಾಕಿ ಇರುವ ಕಂದಾಯ ವಸೂಲಿ ಮಾಡಲು ಕಾನೂನು ಕ್ರಮ
ಪುರಸಭೆ ವತಿಯಿಂದ ಪಟ್ಟಣದಲ್ಲಿ ಕಂದಾಯ ವಸೂಲಾತಿ ಮಾಡುತ್ತಿದ್ದು, ಪಟ್ಟಣದ ಅಭಿವೃದ್ಧಿ ಮತ್ತು ನಿರ್ವಹಣೆಗಾಗಿ ವಿವಿಧ ಮೂಲಗಳಿಂದ ಆದಾಯವನ್ನು ಸಂಗ್ರಹಿಸಲಾಗುತ್ತಿದೆ. ಇದರಲ್ಲಿ ಕಂದಾಯ ವಸೂಲಾತಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಇಂದಿನಿಂದ ವಸೂಲಿಯನ್ನು ಕಟ್ಟುನಿಟ್ಟಾಗಿ ಮಾಡಲಾಗುತ್ತಿದೆ. ಪಟ್ಟಣದ ನಾಗರಿಕರಿಂದ ಕಾನೂನುಬದ್ಧವಾಗಿ ಕಂದಾಯ ಸಂಗ್ರಹಿಸುವ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಲಿದ್ದೇವೆ. ಇದರ ಜೊತೆಯಲ್ಲಿ ನಮ್ಮ ಇಲಾಖೆ ಅಧಿಕಾರಿಗಳ ಜೊತೆ ಕಂದಾಯ ಪಾವತಿಸುವವರು ಸೌಜನ್ಯದಿಂದ ವ್ಯವಹರಿಸುವಂತೆ ಮತ್ತು ಕಂದಾಯ ನಿಯಮಗಳು ಅದರ ಕಾರ್ಯ ವಿಧಾನಗಳ ಬಗ್ಗೆ ನಾವು ಅವರಿಗೆ ತಿಳಿ ಹೇಳಿ ಜಾಗೃತಿ ಮುಡಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.
ದೇವಾಲದಕೆರೆಯಲ್ಲಿ ಇಂದು ರಸಗೊಬ್ಬರ ಮಾರಾಟ ಮಳಿಗೆ ಓಪನ್‌
ಹಾನುಬಾಳು ಕಾಫಿ ಬೆಳೆಗಾರರ ಸಹಕಾರ ಸಂಘ ನಿ. ಇದರ ವತಿಯಿಂದದೇವಾಲದಕೆರೆ ಗ್ರಾಮದಲ್ಲಿ ನೂತನ ರಸಗೊಬ್ಬರ ಮಾರಾಟ ಮಳಿಗೆಯ ಉದ್ಘಾಟನೆ ಹಾಗೂ ರಸಗೊಬ್ಬರ ಬಳಕೆಯ ವಿಚಾರ ಸಂಕಿರಣವನ್ನು ಜುಲೈ 5ರಂದು ಆಯೋಜಿಸಲಾಗಿದ್ದು ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹಾನುಬಾಳು ಕಾಫಿ ಬೆಳೆಗಾರರ ಸಹಕಾರ ಸಂಘದ ಅಧ್ಯಕ್ಷರಾದ ಎಚ್.ಬಿ ಭಾಸ್ಕರ್ ಮನವಿ ಮಾಡಿದರು.
ಸಿಎಂ ಬದಲಾವಣೆ ಬಗ್ಗೆ ಮಾತನಾಡಲು ಅಶೋಕ್‌ ಯಾರು
ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಈ ವಿಚಾರದ ಬಗ್ಗೆ ನವೆಂಬರ್ ನಂತರದಲ್ಲಿ ಪ್ರತಿಕ್ರಿಯೆ ಕೊಡಲಾಗುವುದು. ಅದರ ಬಗ್ಗೆ ಮಾತನಾಡಲು ಆರ್‌. ಅಶೋಕ್ ಯಾರು ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್‌ ತಿರುಗೇಟು ನೀಡಿದರು. ನಮ್ಮ ಹೈಕಮಾಂಡ್ ಇದೆ, ಅವರು ತೀರ್ಮಾನ ಮಾಡುತ್ತಾರೆ, ಸಿಎಂ ಬದಲಾವಣೆ ಬಗ್ಗೆ ಮಾತನಾಡಲು ಅಶೋಕ್ ಯಾರು ಎಂದು ಕುಟುಕಿದರು. ಯಾರೋ ಹೇಳಿದರು ಅಂದಮಾತ್ರಕ್ಕೆ ಸಿಎಂ ಬದಲಾಗುವುದಿಲ್ಲ ಎನ್ನುವ ಮೂಲಕ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದರು. ಅಶೋಕ್ ಅವರು ನವೆಂಬರ್‌ವರೆಗೆ ಗಡುವು ನೀಡಿದ್ದಾರೆ. ಆಗ ಏನಾಗುತ್ತೆ ನೋಡಿ, ನಂತರ ನಾನು ಮಾತನಾಡುವೆ ಎಂದು ಟಾಂಗ್ ಕೊಟ್ಟರು.
ಉತ್ತಮ ಮಳೆಯಿಂದ ವಿದ್ಯುತ್‌ ಸಮಸ್ಯೆ ಅಷ್ಟಾಗಿಲ್ಲ
ರಾಜ್ಯದ ಎಲ್ಲಾ ಕಡೆ ಉತ್ತಮವಾಗಿ ಮಳೆ ಆಗುತ್ತಿರುವುದರಿಂದ ವಿದ್ಯುತ್ ಸಮಸ್ಯೆ ಅಷ್ಟಾಗಿ ಇಲ್ಲ. ರಾಜ್ಯದಲ್ಲಿ 2500 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದನೆಗೆ ಟೆಂಡರ್‌ ಆಹ್ವಾನಿಸಿದ್ದು, 10 ಸಾವಿರ ಕೋಟಿ ರು. ಹೂಡಿಕೆಗೆ ಖಾಸಗಿ ಕಂಪೆನಿಗಳು ಮುಂದೆ ಬಂದಿವೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ೨೫೦೦ ಮೆಗಾವ್ಯಾಟ್‌ ವಿದ್ಯುತ್ ಉತ್ಪಾದನೆ ಮಾಡಲು ಖಾಸಗಿಯವರು ಬಂಡವಾಳ ಹೂಡುತ್ತಿದ್ದು, ನಾವು ಅವರಿಂದ ವಿದ್ಯುತ್ ಖರೀದಿ ಮಾಡಿ, ರೈತರು ಸೇರಿ ಎಲ್ಲರಿಗೂ ಪೂರೈಕೆ ಮಾಡುತ್ತೇವೆ ಎಂದರು.
ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಮನಸ್ಸು ಮಾಡಿ
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದು, ಗುಣಮಟ್ಟದ ಶಿಕ್ಷಣ ನೀಡುತ್ತಿರುವುದ ಜೊತೆಗೆ ಸರ್ಕಾರದಿಂದ ಮಧ್ಯಾಹ್ನದ ಬಿಸಿ ಊಟ, ಉಚಿತ ಸಮವಸ್ತ್ರ, ಉಚಿತ ಪುಸ್ತಕ ಸೇರಿದಂತೆ ಹಲವಾರು ಸವಲತ್ತುಗಳನ್ನು ನೀಡುತ್ತಿದ್ದರು ಸಹ, ಪೋಷಕರು ತಮ್ಮ ಮಕ್ಕಳನ್ನು ಸಾವಿರಾರು ರುಪಾಯಿ ಡೊನೇಷನ್ ನೀಡಿ ಪಟ್ಟಣಗಳಲ್ಲಿರುವ ಖಾಸಗಿ ಶಾಲೆಗಳಿಗೆ ಸೇರಿಸುತ್ತಿರುವುದು ದುರದೃಷ್ಟಕರ. ಆದ್ದರಿಂದ ಸರ್ಕಾರದವರು ಖಾಸಗಿ ಶಾಲೆಗಳ ಹಾವಳಿಗೆ ಕಡಿವಾಣ ಹಾಕಬೇಕು. ಪೋಷಕರು ಸಹ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಮನಸ್ಸು ಮಾಡಬೇಕು ಎಂದರು.
ನಾಡಪ್ರಭು ಕೆಂಪೇಗೌಡರ ದೂರದೃಷ್ಟಿತ್ವವೇ ಆದರ್ಶ
ಕೆಂಪೇಗೌಡರು ಶೌರ್ಯ, ಸಾಹಸ, ದೂರದೃಷ್ಟಿಗೆ ಹೆಸರಾಗಿದ್ದು, ಬೆಂಗಳೂರು ನಗರವನ್ನು ಜಾತಿ ಆಧಾರಿತವಾಗಿ ಮಾಡದೆ, ವೃತ್ತಿ ಆಧಾರಿತ ಭೂಮಿಯನ್ನಾಗಿ ಮಾಡಿದರು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ದೂರದೃಷ್ಟಿ ನಾಯಕರಾಗಿದ್ದರು. ಮಣ್ಣಿನ ಕೋಟೆಯಿಂದ ಕಟ್ಟಿದ ಹಳ್ಳಿ ಪ್ರದೇಶ ವಾಗಿದ್ದ ಬೆಂದಕಾಳೂರನ್ನು ನಗರವಾಗಿ ನಿರ್ಮಿಸಿ ಬೆಂಗಳೂರು ನಗರ ಇಂದು ದೇಶ-ವಿದೇಶಿಗರಿಗೆ ಚಿರಪರಿಚಿತವಾಗಿದೆ ಎಂದರು.
ವಿದ್ಯಾರ್ಥಿಗಳು ಉನ್ನತ ಸಾಧಕರಾಗುವತ್ತ ಚಿಂತನೆ ನಡೆಸಿ
ಟೈಮ್ಸ್ ಹಾಸನ ಪಿಯು ಕಾಲೇಜು ವತಿಯಿಂದ ಏರ್ಪಡಿಸಿದ್ದ ಫ್ರೆಶರ್ಸ್ ಡೇ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ದಿನಗಳಲ್ಲಿ ಇಂತಹ ಅವಕಾಶಗಳು ಇರಲಿಲ್ಲ, ಬದಲಾದ ಕಾಲಘಟ್ಟದಲ್ಲಿ ಉತ್ತಮ ಅವಕಾಶಗಳಿದ್ದು ಹೆಚ್ಚಿನ ಪರಿಶ್ರಮ ಪಟ್ಟಾಗ ಸಾಧನೆ ಸಾಧ್ಯವಾಗಲಿದೆ. ಪ್ರಾಥಮಿಕ ಹಂತದಿಂದಲೇ ಗುಣಮಟ್ಟದ ಶಿಕ್ಷಣ ದೊರಕಿಸುವ ಉದ್ದೇಶದಿಂದ ರಾಜ್ಯದಲ್ಲೆ ವಿನೂತನವಾದ ಮಕ್ಕಳ ಮನೆ ಶಾಲೆಗಳನ್ನು ತಾಲೂಕಿನಲ್ಲಿ ತೆರೆಯಲಾಗಿದೆ. ಅತ್ಯಂತ ಕಡಿಮೆ ಹಣದಲ್ಲಿ ಕಾನ್ವೆಂಟ್‌ಗಳಲ್ಲಿ ನೀಡುವ ಶಿಕ್ಷಣವನ್ನು ಜನಸಾಮಾನ್ಯರಿಗೆ ದೊರಕಿಸುವ ಪ್ರಯತ್ನ ನಡೆದಿದ್ದು ಜನರು ಇದರ ಉಪಯೋಗ ಪಡೆಯುವಂತೆ ತಿಳಿಸಿದರು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 550
  • next >
Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved