• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಡ್ವೊಕೇಟ್‌ ಸ್ಟಿಕ್ಕರ್‌ ಹಾಕಿದ ಕಾರಿನಲ್ಲಿ ಗೋಮಾಂಸ ಮಾರಾಟ ಯತ್ನ
ಕಾರಿಗೆ ಅಡ್ವೋಕೇಟ್ ಸ್ಟಿಕ್ಕರ್ ಹಾಕಿ ಅಕ್ರಮವಾಗಿ ಕಾರಿನಲ್ಲಿ ಗೋಮಾಂಸ ತುಂಬಿ ಮಾರಾಟ ಮಾಡಲು ಮುಂದಾದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ನಗರ ಠಾಣೆಯ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಕಾರು ಸಕಲೇಶಪುರ ನಗರ ಬೈಪಾಸ್ ರಸ್ತೆಯಿಂದ ಕಪ್ಪಿನಕೋಡಿ ಸಮೀಪ ಕುಶಾಲನಗರ ಬಡಾವಣೆ ಒಳಗೆ ತಿರುಗುತ್ತಿದ್ದಂತೆ ತಡೆದು ಪರಿಶೀಲನೆ ನಡೆಸಿದ್ದಾರೆ. ಕಾರಿನ ಒಳಗೆ ಸುಮಾರು ೧೦೦ ಕೆ.ಜಿಗೂ ಅಧಿಕ ಗೋಮಾಂಸ ಪತ್ತೆಯಾಗಿದೆ.
ಭೂ ದಾಖಲೆಗಳ ಡಿಜಿಟಲೀಕರಣ ಕಾರ್ಯ ಯಶಸ್ವಿಯಾಗಲಿ
ಕಂದಾಯ ಇಲಾಖೆಯಲ್ಲಿ ಭೂ ಸುರಕ್ಷಾ ಯೋಜನೆಯಡಿಯಲ್ಲಿ ಎಲ್ಲಾ ಭೂ ದಾಖಲೆಗಳನ್ನು ಡಿಜಿಟಲೀಕರಣ ಮಾಡುವ ಕಾರ್ಯ ಪ್ರಾರಂಭಿಸಿದ್ದು, ಈ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶಾಸಕ ಸ್ವರೂಪ್ ಪ್ರಕಾಶ್ ಶುಭ ಹಾರೈಸಿದರು. ತಹಸೀಲ್ದಾರ್ ಕಚೇರಿಯಲ್ಲಿ ಸರ್ವೇ ಮತ್ತು ನೋಂದಣಿ ಇಲಾಖೆಯ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣಗೊಳಿಸಲು ಬುಧವಾರ ಆಯೋಜಿಸಿದ್ದ ಡಿಜಿಟಲ್ ರೆಕಾರ್ಡ್ ರೂಮ್ ಉದ್ಘಾಟಿಸಿ ಮಾತನಾಡಿದ ಅವರು, ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ಉತ್ತಮ ಕಾರ್ಯ ನಡೆಯುತ್ತಿದೆ ಎಂದು ಅಭಿನಂದಿಸಿದರು.
ಸಂಗೀತ ಮತ್ತು ಸಾಹಿತ್ಯದತ್ತ ಆಸಕ್ತಿ ಬೆಳೆಸಿಕೊಳ್ಳಿ
ಸಂಗೀತ ಮತ್ತು ಸಾಹಿತ್ಯದ ಕಡೆ ಸ್ವಲ್ಪವಾದರೂ ಆಸಕ್ತಿ ಮತ್ತು ಪರಿಜ್ಞಾನ ಇಲ್ಲ ಎಂದರೆ ನಾವು ಪ್ರಾಣಿಗಳು ಹಾಗೂ ಪಕ್ಷಿಗಳು ಎಂದು ಹೇಳಿ ಬಿಡುತ್ತಾರೆ. ಹಾಗಾಗಿ ಅವುಗಳ ಬಗ್ಗೆ ಸ್ವಲ್ಪವಾದರೂ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಸಂಸ್ಕೃತ ಭವನದ ಕಾರ್ಯದರ್ಶಿ ಪರಮೇಶ್ವರ ವಿ. ಭಟ್ ತಿಳಿಸಿದರು. ಮನುಷ್ಯ ಜನ್ಮದಲ್ಲಿ ನಮಗೆ ಸಾಹಿತ್ಯ, ಸಂಗೀತ ಇವುಗಳ ಬಗ್ಗೆ ಸಲ್ಪ ಆಸಕ್ತಿ ಇಲ್ಲ, ಪರಿಜ್ಞಾನ ಇಲ್ಲ ಎಂದರೇ ನಾವು ಸಾಕ್ಷತ್ ಪಶುಗಳು ಎಂದು ಹೇಳಿ ಬಿಡುತ್ತಾರೆ. ಸಾಹಿತ್ಯದಲ್ಲಿ, ಸಂಗೀತದಲ್ಲಿ ಸ್ವಲ್ಪವಾದರೂ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಸಾಲಗಾಮೆ ಸರ್ಕಲ್‌ನಲ್ಲಿ ಸಂಚಾರಿ ಫಲಕ ಲೋಕಾರ್ಪಣೆ
ಇನ್ನರ್ ವ್ಹೀಲ್ ಕ್ಲಬ್ ಆಫ್ ಹಾಸನ್ ಗೋಲ್ಡ್ ಸಂಸ್ಥೆಯಿಂದ ಸ್ಥಾಪಿಸಲಾಗಿರುವ ಸಂಚಾರಿ ದಿಕ್ಸೂಚಿ ಫಲಕವನ್ನು ನಗರಸಭಾಧ್ಯಕ್ಷ ಎಂ. ಚಂದ್ರೇಗೌಡ ಅವರು ಇತ್ತೀಚೆಗೆ ಅನಾವರಣಗೊಳಿಸಿದರು. ಚಿಕ್ಕಮಗಳೂರು, ಮಂಗಳೂರು ಹಳೇಬೀಡು ಕಡೆಯಿಂದ ಬೆಂಗಳೂರು ಕಡೆಗೆ ಪ್ರಯಾಣಿಸುವವರಿಗೆ ಅನುಕೂಲವಾಗುವ ದೃಷ್ಟಿಯಿಂದ ದಿಕ್ಸೂಚಿ ಫಲಕವನ್ನು ಅಳವಡಿಸಿದ್ದು ಇದಕ್ಕೆ ಸಹಕಾರ ನೀಡಿದ ನಗರಸಭೆ ಹಾಗೂ ದಾನಿಗಳನ್ನು ಇದೇ ವೇಳೆ ಸ್ಮರಿಸಿದ್ದರು.
ದುರುದ್ದೇಶದಿಂದ ಜಾತಿ ನಿಂದನೆ ಕೇಸ್‌
ಡಿಡಿಪಿಐ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಬಿ. ಎಚ್. ಮಂಜುನಾಥ್ ಮೇಲೆ ದುರುದ್ದೇಶಪೂರಿತ ವೈಯಕ್ತಿಕ ಧ್ವೇಷದ ಹಿನ್ನೆಲೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಿಸಿರುವುದನ್ನು ಜಿಲ್ಲಾಧಿಕಾರಿಗಳು ಪರಾಮರ್ಶಿಸಿ ಸೂಕ್ತ ನ್ಯಾಯವನ್ನು ದೊರಕಿಸಿಕೊಡಬೇಕು ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಬುಧವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಆದ್ದರಿಂದ ಜಿಲ್ಲಾಧಿಕಾರಿಗಳು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಹೌಸಿಂಗ್ ಫಾರ್ ಆಲ್ ಯೋಜನೆಯಡಿ ಶೀಘ್ರ ಮನೆ ವಿತರಣೆ
ಹೌಸಿಂಗ್ ಫಾರ್‌ ಆಲ್ ಯೋಜನೆಯಡಿ ನಿರ್ಮಿಸಿರುವ ಮನೆಗಳ ಪೈಕಿ, ಮುಂದಿನ ಮೂರು ತಿಂಗಳ ಒಳಗೆ ಮೊದಲ ಹಂತದಲ್ಲಿ 8೦೦ ಫಲಾನುಭವಿಗಳಿಗೆ ನೂತನ ಗೃಹಗಳನ್ನು ವಿತರಿಸಲು ಕ್ರಮ ಕೈಗೊಳ್ಳುವುದಾಗಿ ಸ್ಥಳೀಯ ಶಾಸಕ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಭರವಸೆ ನೀಡಿದರು. ವಸತಿ ರಹಿತರು, ನಿರ್ಗತಿಕರು ಹಾಗೂ ಬಡವರಿಗೆ ನೀಡಲು ರಾಜ್ಯ-ಕೇಂದ್ರ ಸರ್ಕಾರಗಳ ಸಹಭಾಗಿತ್ವದಲ್ಲಿ ಹೌಸಿಂಗ್ ಫಾರ್ ಆಲ್ ಯೋಜನೆಯಡಿ ಸುಬ್ರಹ್ಮಣ್ಯ ಬೆಟ್ಟದ ತಪ್ಪಲಿನಲ್ಲಿ ಸುಮಾರು 1181 ಮನೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದರು.
ಪೌರಾಣಿಕ ನಾಟಕ ಪ್ರದರ್ಶಿಸಿದ ಪೊಲೀಸರು
ಕಲೆ ಮತ್ತು ಸಂಸ್ಕೃತಿಯ ಪ್ರತೀಕವಾದ ಪೌರಾಣಿಕ ನಾಟಕಗಳು ಇತ್ತೀಚಿನ ವರ್ಷಗಳಲ್ಲಿ ನಶಿಸುತ್ತಿದೆ. ಇಂತಹ ಸಂದರ್ಭದಲ್ಲಿ ಬಿಡುವಿಲ್ಲದ ವೇಳಾಪಟ್ಟಿ ಹಾಗೂ ಜವಾಬ್ದಾರಿಯುತ ಕರ್ತವ್ಯದ ನಡುವೆಯೂ ನಮ್ಮ ಪೊಲೀಸ್ ಇಲಾಖೆಯವರು ತರಬೇತಿ ಪಡೆದು, ಪ್ರದರ್ಶನ ನೀಡುತ್ತಿದ್ದಾರೆ. ಇದೇ ರೀತಿ ನಮ್ಮ ಇಲಾಖೆ ಅಧಿಕಾರಿಗಳು ಎಲ್ಲಾ ಕಡೆಗಳಲ್ಲೂ ಕಾರ್ಯಕ್ರಮಗಳನ್ನು ಮಾಡಬೇಕು ಎಂದು ಸಲಹೆ ನೀಡಿ, ಕಲಾವಿದರಿಗೂ ಹಾಗೂ ಕಲಾಭಿಮಾನಿಗಳಿಗೆ ಮೈಸೂರು ದಕ್ಷಿಣ ವಲಯ ಐಜಿಪಿ ಡಾ. ಬೋರಲಿಂಗಯ್ಯ ಶುಭಕೋರಿದರು.
ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರ ನೇಮಕ
ಅರಕಲಗೂಡು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಕಬ್ಬಳಿಗೆರೆ ಗ್ರಾಮದ ಕೆ.ಟಿ. ಸೋಮಶೇಖರ್ ಹಾಗೂ ವಿಧಾನಸಭಾ ವ್ಯಾಪ್ತಿಯ ಹಳ್ಳಿಮೈಸೂರು ಹೋಬಳಿಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಜೇಗೌಡ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ. ಕೆ.ಶಿವಕುಮಾರ್ ನೇಮಕ ಮಾಡಿದ್ದಾರೆ. ಪಕ್ಷದ ಬಲವರ್ಧನೆ ಮತ್ತು ಸಂಘಟನೆಗೆ ಶ್ರಮಿಸುವಂತೆ ಸೂಚಿಸಿದ್ದಾರೆ. ಪಕ್ಷ ವಹಿಸಿರುವ ಜವಾಬ್ದಾರಿಯನ್ನು ಕಾರ್ಯಕರ್ತರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿಸಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಇಲ್ಲಿ ಜಯಗಳಿಸುವಂತೆ ಕಾರ್ಯ ನಿರ್ವಹಿಸುವುದಾಗಿ ಹೇಳಿದರು.
ಗಣರಾಜ್ಯೋತ್ಸವದಂದು ಎಲ್ಲಾ ಇಲಾಖೆಯ ಸಿಬ್ಬಂದಿ ಕಡ್ಡಾಯವಾಗಿ ಪಾಲ್ಗೊಳ್ಳಿ
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನಗರದ ಸುಭಾಷ್ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ವಿವಿಧ ಶಾಲಾ ಮಕ್ಕಳ ಆಕರ್ಷಕ ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಇಲಾಖೆಯ ಸಿಬ್ಬಂದಿ ಕಡ್ಡಾಯವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು. ಗಣರಾಜ್ಯೋತ್ಸವ ಸಂದಭದಲ್ಲಿ ತಾಲೂಕಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದು ದಂಡಾಧಿಕಾರಿಗಳಾದ ಮೇಘನಾ ತಿಳಿಸಿದ್ದಾರೆ.
ಶಿಷ್ಟಾಚಾರ ಪಾಲಿಸದ ಅಧಿಕಾರಿಗಳ ವಿರುದ್ಧ ಶಾಸಕ ಆಕ್ರೋಶ
ಕೆ.ಹೊಸಕೋಟೆ ಹೋಬಳಿ ಕಿತ್ತಗೆರೆ ಗ್ರಾಮದಲ್ಲಿ 22 ಲಕ್ಷ ರು. ವೆಚ್ಚದ ಅಂಗನವಾಡಿ ಕಟ್ಟಡ ಉದ್ಘಾಟನೆ ಗ್ರಾಮಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ಶಾಸಕರ ಬಳಿ ಕಾರ್ಯಕ್ರಮಕ್ಕೆ ಸ್ಥಳೀಯ ಜನಪ್ರತಿನಿಧಿಗಳನ್ನು ಕರೆಯದೆ ಆಹ್ವಾನಿಸದೆ ಇರುವ ಬಗ್ಗೆ ತಿಳಿಸಿದರು. ಎಂಎಲ್‌ಎ ಬರ್ತಾರೆ ಅಂದ್ರೆ ನಿಮಗೆ ಜವಾಬ್ದಾರಿ ಬೇಡವೇ, ಬೇಕಾಬಿಟ್ಟಿ ಮಾಡ್ತೀರಿ ಅಂದ್ರೆ ಸುಮ್ಮೆ ಇರ್ತೀನಾ ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆ ಸಹಾಯಕ ನಿರ್ದೇಶಕ ಎ. ಟಿ. ಮಲ್ಲೇಶ್ ಹಾಗೂ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸಲ್ಮಾ ಮತ್ತು ರಜಾಕ್ ಅವರಿಗೆ ತೀವ್ರವಾಗಿ ತರಾಟೆ ತೆಗೆದುಕೊಂಡರು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 413
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved