• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೇಮಾವತಿ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆಗೆ ಚಾಲನೆ
ಚನ್ನರಾಯಪಟ್ಟಣ ತಾಲೂಕಿನ ರೈತರ, ಕಬ್ಬು ಬೆಳೆಗಾರರ ಜೀವನಾಡಿಯಾಗಿರುವ ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆಯ ಸಮಗ್ರ ಅಭಿವೃದ್ಧಿಗೆ ರೈತರು ಸಹಕರಿಸಬೇಕು ಎಂದು ಶಾಸಕ ಸಿ. ಎನ್. ಬಾಲಕೃಷ್ಣ ಮನವಿ ಮಾಡಿದರು. ಕಬ್ಬು ಬೆಳೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಿತ್ತನೆ ಬೀಜವನ್ನು ಸಾಲದ ರೂಪದಲ್ಲಿ, ಹನಿ ನೀರಾವರಿ ಪದ್ಧತಿ ಅಳವಡಿಕೆಗೆ ಸಹಾಯಧನವನ್ನು ಕಾರ್ಖಾನೆಯಿಂದ ನೀಡಲಾಗುತ್ತಿದೆ. ಕಬ್ಬು ಕಟಾವಿನ ವಿಚಾರದಲ್ಲಿ ತೊಂದರೆಯಾಗದ ರೀತಿಯಲ್ಲಿ ೩೦೦ ಕಾರ್ಮಿಕರನ್ನು ಕರೆತರಲಾಗಿದೆ. ಯಾವುದೇ ಸಮಸ್ಯೆಗೆ ಆಸ್ಪದ ಕೊಡದ ರೀತಿಯಲ್ಲಿ ಕಾರ್ಖಾನೆ ಉಳಿಸಲು ರೈತರು ಮುಂದಾಗಬೇಕು ಎಂದರು.
ಸರ್ಕಾರದಿಂದ ಕಳಪೆ ಗುಣಮಟ್ಟದ ಜೋಳದ ಬೀಜ
ಸರ್ಕಾರವು ಕಂಪನಿಗಳ ಮೂಲಕ ರೈತರಿಗೆ ಕಳಪೆ ಗುಣಮಟ್ಟದ ಜೋಳದ ಬೀಜ ನೀಡಿದ್ದು, ಜಿಲ್ಲಾದ್ಯಂತ ಬೆಳೆಗೆ ಆಗಿರುವ ನಷ್ಟದ ಬಗ್ಗೆ ಪರಿಹಾರ ನೀಡಲು ಆಗ್ರಹಿಸಿ ನಗರದ ಸಂತೇಪೇಟೆ ವೃತ್ತದ ಬಳಿ ಇರುವ ಜಂಟಿ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ರೈತರಿಂದ ಜುಲೈ ೭ರ ಸೋಮವಾರದಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಕಣಗಾಲ್ ಮೂರ್ತಿ ತಿಳಿಸಿದರು. ರೈತರಿಗೆ ಕಳಪೆ ಬೀಜ ನೀಡಿರುವ ಮತ್ತು ಕಂಪನಿಯವರು ರೈತರಿಗೆ ಜಂಟಿ ಕೃಷಿ ನಿರ್ದೇಶಕರ ನೇತೃತ್ವದಲ್ಲಿ ನಷ್ಟವನ್ನು ತುಂಬಿಕೊಡಬೇಕು. ಸಾಮೂಹಿಕವಾಗಿ ರೈತರಿಗೆ ಜಿಲ್ಲಾಡಳಿತ ವತಿಯಿಂದ ಉಚಿತವಾಗಿ ಬೆಳೆ ವಿಮೆ ಮಾಡಿಕೊಡಬೇಕು ಎಂದು ತಿಳಿಸಿದರು.
ಚನ್ನರಾಯಪಟ್ಟಣ ಪುರಸಭೆಯನ್ನು ನಗರಸಭೆಯಾಗಿಸಿ
ಚನ್ನರಾಯಪಟ್ಟಣ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಬೇಕೆಂಬ ಪ್ರಸ್ತಾವನೆ ಹಿನ್ನೆಲೆಯಲ್ಲಿ ತಾಲೂಕಿನ ೧೨ ಗ್ರಾಮಗಳನ್ನು ಸೇರಿಸುವ ಕಡತಕ್ಕೆ ಅನುಮೋದನೆ ನೀಡಬೇಕೆಂದು ಶಾಸಕ ಸಿ.ಎನ್. ಬಾಲಕೃಷ್ಣ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಮಾಡಿದರು. ಪಟ್ಟಣವು ವಾಣಿಜ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ಪ್ರವಾಸಿ ಕೇಂದ್ರವಾಗಿ ಬೆಳೆಯುತ್ತಿದೆ. ಈಗಾಗಲೇ ಪುರಸಭೆ ಅಸ್ತಿತ್ವದಲ್ಲಿದ್ದು, ಜನಸಂಖ್ಯೆ ಆಧಾರದಲ್ಲಿ ನಗರಸಭೆಯನ್ನಾಗಿ ಪರಿವರ್ತಿಸಿ ವಿಶೇಷ ಅನುದಾನ ನೀಡುವ ಮೂಲಕ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಸಂಬಂಧ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಸಿಇಟಿ ಕೌನ್ಸಿಲಿಂಗ್‌ ಬಗ್ಗೆ ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಅರಿವು
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಯುವ ವೃತ್ತಿಪರ ಕೋರ್ಸುಗಳ ಸೀಟು ಹಂಚಿಕೆ ಪ್ರಕ್ರಿಯೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯದ ವಿವಿಧೆಡೆ ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ಈ ಬಾರಿ ಸೀಟು ಹಂಚಿಕೆ ಮಂಥನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ತಿಳಿಸಿದರು.
ಮಹಾನ್ ವ್ಯಕ್ತಿಗಳನ್ನು ಸೀಮಿತಗೊಳಿಸಲಾಗುತ್ತಿದೆ
ಮಹಾನ್ ವ್ಯಕ್ತಿಗಳನ್ನು ಜಾತಿ, ಧರ್ಮ, ವರ್ಗಕ್ಕೆ, ಭಾಷೆಗೆ ಸೀಮಿತಗೊಳಿಸುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ಅಂತಹ ಮಹಾನುಭಾವರು ಎಲ್ಲವನ್ನೂ ಮೀರಿ ಬೆಳೆದವರು. ಆದರೆ ಸಂಕುಚಿತ ಮನೋಭಾವನೆಯಿಂದಾಗಿ ಮಹಾನ್ ವ್ಯಕ್ತಿಗಳು ಸೀಮಿತವಾಗುತ್ತಿದ್ದಾರೆ ಎಂದು ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಸಂತೋಷ್‌ ಗೌಡ ವಿಷಾದಿಸಿದರು. ಅವರು ಕೇರಳಾಪುರ ಗ್ರಾಮದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ ೫೧೬ನೇ ಜಯಂತಿ ಆಚರಣೆ ವೇಳೆ ಸುದ್ದಿಗಾರರ ಜೊತೆ ಮಾತನಾಡಿ, ಬಸವ, ಕನಕ, ಅಂಬೇಡ್ಕರ್‌ ಕೆಂಪೇಗೌಡ ಹೀಗೆ ಮಹಾನ್ ನಾಯಕರನ್ನು ಒಂದು ವರ್ಗದ ಸೀಮಿತ ವ್ಯಕ್ತಿಗಳನ್ನಾಗಿ ವರ್ಗೀಕರಿಸುತ್ತಿರುವುದು ವಿಷಾದನೀಯ ಎಂದರು.
ಪಂಚ ಗ್ಯಾರಂಟಿ ಅನುಷ್ಠಾನದಲ್ಲಿ ಅರಸೀಕೆರೆ ಪ್ರಥಮ
ಚುನಾಯಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಹಕಾರದಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ಕ್ಷೇತ್ರದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷ ಧರ್ಮಶೇಖರ್‌ ಹೇಳಿದರು. ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ 14ನೇ ಸಭೆ ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಾಸಕರ ಮಾರ್ಗದರ್ಶನ ಸಮಿತಿಯ ಸದಸ್ಯರ ಜನಪರ ಕಾಳಜಿ ಜೊತೆಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಸಹಕಾರದಿಂದ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಅರಸೀಕೆರೆ ಪ್ರಥಮ ಸ್ಥಾನದಲ್ಲಿದೆ ಎಂದು ಸಂತಸ ಹಂಚಿಕೊಂಡರು.
ಒತ್ತಡದಿಂದ ಯುವಕರಲ್ಲಿ ಹೃದಯಾಘಾತ ಹೆಚ್ಚಳ
ಒತ್ತಡದ ಜೀವನದಿಂದ ಯುವ ಜನಾಂಗದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಖ್ಯಾತ ಹೃದ್ರೋಗ ತಜ್ಞರಾದ ಇಂಡಿಯಾನ ಆಸ್ಪತ್ರೆಯ ವೈದ್ಯ ಡಾ. ಅನೂಪ್ ತಿಳಿಸಿದರು‌. ಯಾವುದೇ ಹೃದಯಸ್ಥಂಭನ ಸಂದರ್ಭದಲ್ಲಿ ಅವರಿಗೆ ಮೊದಲು ಪ್ರಥಮ ಚಿಕಿತ್ಸೆ ನೀಡುವುದು ಅತಿಮುಖ್ಯ. ಕೆಲವರಲ್ಲಿ ಕೊರೋನಾ ಸಂದರ್ಭದಲ್ಲಿ ನೀಡಿದ ವ್ಯಾಕ್ಸಿನ್‌ನಿಂದಾಗಿ ಹೆಚ್ಚಾಗಿ ಹೃದಯಸ್ಥಂಭನ ಆಗುತ್ತದೆ ಎಂಬುದು ತಪ್ಪು ಕಲ್ಪನೆ ಎಂದರು.
ನಿವೃತ್ತ ಶಿಕ್ಷಕ ಕುಮಾರ್‌ಗೆ ಬೀಳ್ಕೊಡುಗೆ
ಬಬ್ಬಗಳಲೆ ಶಾಲೆಯಲ್ಲಿ ಏರ್ಪಡಿಸಿದ್ದ ನಿವೃತ್ತ ಎಂ.ಬಿ. ಕುಮಾರ್ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಗ್ರಾಮ ಪಂಚಾಯತಿ ಅಧ್ಯಕ್ಷ ಯೋಗೇಶ್ ಕುಮಾರ್ ಉದ್ಘಾಟನೆ ಮಾಡಿದರು. ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಎಂ.ಎನ್. ಕುಮಾರಸ್ವಾಮಿ ಅವರು ನಿವೃತ್ತ ಶಿಕ್ಷಕ ಕುಮಾರ್ ಅವರನ್ನು ಗೌರವಿಸಿ ಮಾತನಾಡಿ, ಸರ್ಕಾರಿ ಶಾಲೆ- ಕಾಲೇಜುಗಳು ಉಳಿದರೆ ಮಾತ್ರ ಕನ್ನಡ ಭಾಷೆ ಬೆಳೆಯಲು ಸಾಧ್ಯ ಎಂದರು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಯಲ್ಲಿ ಕ್ರೀಡಾ ಚಟುವಟಿಕೆ ಮತ್ತು ಶಿವಶರಣರ ವಚನಗಳನ್ನು ಅಳವಡಿಸಿಕೊಂಡು ನಡೆಯಿರಿ ಎಂದು ಕಿವಿಮಾತು ಹೇಳಿದರು.
ಶಿಕ್ಷಣ ಪಡೆದ ವಿದ್ಯಾರ್ಥಿಗಳು ದೇಶಕ್ಕೆ ಆಸ್ತಿಯಾಗಬೇಕು
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ೬೦೦ಕ್ಕೂ ಹೆಚ್ಚು ಅಂಕ ಗಳಿಸಿದ ತಾಲೂಕಿನ ಎಲ್ಲಾ ಪ್ರೌಢಶಾಲೆಗಳ ಮಕ್ಕಳಿಗೆ ಹಾಗೂ ತಾಲೂಕಿನ ಎಲ್ಲಾ ಪ್ರೌಢಶಾಲಾ ಶಿಕ್ಷಕರಿಗೆ ಶಾಸಕ ಸಿಮೆಂಟ್ ಮಂಜು ಅವರು ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ೫ನೇ ಸ್ಥಾನ ಹಾಗೂ ಜಿಲ್ಲೆಯ ೮ ತಾಲೂಕುಗಳಲ್ಲಿ ಸಕಲೇಶಪುರ ತಾಲೂಕು ನಂ. ೧ ಸ್ಥಾನ ಪಡೆದಿರುವುದು ಅತ್ಯಂತ ಸಂತೋಷದ ವಿಷಯವಾಗಿದೆ ಎಂದು ಸಿಮೆಂಟ್‌ ಮಂಜು ಹೇಳಿದರು.
ಹಾಸನ: ಒಂದೇ ದಿನ ಹೃದಯಾಘಾತಕ್ಕೆ ಐವರು ಬಲಿ
ಜಿಲ್ಲೆಯಲ್ಲಿ ಹೃದಯಾಘಾತ ಮರಣ ಮೃದಂಗ ಮುಂದುವರೆದಿದೆ. ಸೋಮವಾರ ಒಂದೇ ದಿನ ಹಾಸನ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಐವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 550
  • next >
Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved