• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸದ್ದು ಮಾಡುತ್ತಿದೆ ನದಿ ಮರಳು ಗಣಿಗಾರಿಕೆ ಟೆಂಡರ್‌
ಸರ್ಕಾರ ಹೇಮಾವತಿ ನದಿ ಮರಳು ಗಣಿಗಾರಿಕೆಗಾಗಿ ಕರೆದಿರುವ ಟೆಂಡರ್ ಪ್ರಕ್ರಿಯೆ ತಾಲೂಕಿನಲ್ಲಿ ಬಾರಿ ಸದ್ದು ಮಾಡುತ್ತಿದೆ. ೨೦೨೩ರ ಏಪ್ರಿಲ್‌ವರೆಗೆ ಇದ್ದ ಮರಳು ಗಣಿಗಾರಿಕೆ ಅವಧಿ ಮುಕ್ತಾಯದ ನಂತರದ ಎರಡು ವರ್ಷದವರಗೆ ಮರಳು ಗಣಿಗಾರಿಕೆಗೆ ಅವಕಾಶವಿಲ್ಲದ ಕಾರಣ ಜನರು ಅಭಿವೃದ್ಧಿ ಕಾಮಗಾರಿಗಾಗಿ ಮರಳು ದೊರೆಯದೆ ದುಪ್ಪಟ್ಟು ದುಡ್ಡು ಕೊಟ್ಟು ಮರಳುಗಳ್ಳರಿಂದ ಮರಳು ಪಡೆಯುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದಾಗಿ ತಾಲೂಕಿನಲ್ಲಿ ಮರಳು ಗಣಿಗಾರಿಕೆಗೆ ಅವಕಾಶ ನೀಡುವಂತೆ ಒತ್ತಾಯ ಕೇಳಿ ಬರುತ್ತಿದ್ದ ಹಿನ್ನೆಲೆಯಲ್ಲಿ ಸರ್ಕಾರ ಮರಳು ಗಣಿಗಾರಿಕೆಗೆ ಹೊಸ ವಿಧಾನದಲ್ಲಿ ಟೆಂಡರ್‌ಗೆ ಅವಕಾಶ ಮಾಡಿಕೊಟ್ಟಿದೆ.
ರೈಲು ರಕ್ಷಣಾ ದಳ ಶ್ವಾನದಿಂದ ತಪಾಸಣೆ
ದೇಶದ ಗಡಿ ಭಾಗದಲ್ಲಿ ಉದ್ವಿಘ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಲಗೇಜ್ ಸೇರಿದಂತೆ ಸೂಕ್ಷ್ಮ ಸ್ಥಳಗಳನ್ನು ರೈಲ್ವೆ ರಕ್ಷಣಾದಳ ಚಾರ್ಲಿ ಶ್ವಾನದಿಂದ ತಪಾಸಣೆ ಮಾಡಲಾಯಿತು.
14ರಂದು ಚನ್ನರಾಯಪಟ್ಟಣದ ಮಿನಿ ವಿಧಾನಸೌಧಕ್ಕೆ ಬೀಗ
ಪಟ್ಟಣದ ಮಿನಿವಿಧಾನಸೌಧಕ್ಕೆ ಮೇ ೧೪ ರಂದು ಮುತ್ತಿಗೆ ಹಾಕಿ ಬೀಗ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ಮುಖಂಡ ಮಂಜುನಾಥ್ ತಿಳಿಸಿದ್ದಾರೆ.
ಮುಂಗಾರು ತಂಬಾಕು ನಾಟಿಗೆ ರೈತರ ಸಿದ್ಧತೆ
ಇಲ್ಲಿಯ ತಂಬಾಕು ಹರಾಜು ಮಾರುಕಟ್ಟೆ ಫ್ಲಾಟ್ ಫಾರಂ 7 ಹಾಗೂ 63 ರಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾದ ತಂಬಾಕು ಸಸಿ ಮಡಿ ಬೆಳೆಸಲು ರೈತರು ಆರಂಭಿಸಿದ್ದಾರೆ.
ಭಾರತೀಯ ಸೇನಾಪಡೆಗೆ ದೇವರು ಹೆಚ್ಚಿನ ಶಕ್ತಿ ನೀಡಲಿ
ಆಪರೇಷನ್ ಸಿಂದೂರದ ಮೂಲಕ ಉಗ್ರರ ನೆಲೆಗಳನ್ನು ಭಾರತೀಯ ಸೇನೆಯ ವಾಯುಪಡೆ ನಾಶಪಡಿಸಿ ಪಹಲ್ಗಾಮ್‌ ದಾಳಿಗೆ ತಕ್ಕ ಉತ್ತರ ನೀಡಿರುವ ಭಾರತೀಯ ಸೇನಾಪಡೆಗೆ ದೇವರು ಹೆಚ್ಚಿನ ಶಕ್ತಿ ನೀಡಲಿ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಪ್ರಾರ್ಥಿಸಿದರು.
ಶ್ರದ್ಧಾಭಕ್ತಿಯೊಂದಿಗೆ ತೆರೆ ಕಂಡ ಕೆಂಚಾಂಬೆ ಜಾತ್ರೋತ್ಸವ
೪೮ ಹಳ್ಳಿಗಳಿಗೆ ಸೇರಿದ ಕೆಂಚಾಂಬ ದೇವಿ ವರ್ಷದ ದೊಡ್ಡ ಜಾತ್ರೆ ಕಟ್ಟುನಿಟ್ಟಿನಿಂದ ಅತ್ಯಂತ ವೈಭವ, ಭಯ, ಭಕ್ತಿಯಿಂದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು. ಈ ಜಾತ್ರೆಯಲ್ಲಿ ಮಾತ್ರ ದೇವಿ ಪಾದ ಮುಟ್ಟಿ ನಮಸ್ಕರಿಸಲು ಅವಕಾವಿರುತ್ತದೆ.ಇತ್ತೀಚೆಗೆ ಆರಂಭವಾದ ಜಾತ್ರೆಗೆ ಭಾನುವಾರ ದೊಡ್ಡ ಜಾತ್ರೆ ನಡೆಯುವುದರೊಂದಿಗೆ ನಾಂದಿ ಹಾಡಲಾಯಿತು.
ಗಡಿ ಕಾಯುವ ಸೈನಿಕರ ಸುರಕ್ಷತೆಗಾಗಿ ಪ್ರಾರ್ಥನೆ
ನಮ್ಮ ದೇಶದ ಸುರಕ್ಷತೆಗಾಗಿ ಗಡಿಕಾಯುತ್ತಿರುವ ನಮ್ಮ ಸೈನಿಕರಿಗೆ ಧೈರ್ಯ ತುಂಬಿ, ಅವರಿಗೆ ಒಳ್ಳೆಯ ಆರೋಗ್ಯ ಹಾಗೂ ಪ್ರಾಣಹಾನಿ ಆಗದಿರಲಿ ಎಂದು ನಗರದ ರೈಲ್ವೆ ನಿಲ್ದಾಣದ ಎದುರು ಇರುವ ಶ್ರೀ ಆಂಜನೇಯ ದೇವಸ್ಥಾನದಲ್ಲಿ ನೂರಾರು ಜನ ಮಾಜಿ ಸೈನಿಕರು ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳು ಸೇರಿ ಶನಿವಾರ ಪೂಜೆ ಸಲ್ಲಿಸಿ ನಗರದಲ್ಲಿ ಬೈಕ್ ರ್‍ಯಾಲಿ ನಡೆಸಿದರು. ಪ್ರತಿ ಸೈನಿಕರಿಗೆ ನಾಗರಿಕರು ಗೌರವ ಕೊಡಬೇಕು. ಜೊತೆಗೆ ಸೈನಿಕರ ಶ್ರೇಯಸ್ಸಿಗಾಗಿ ದೇವರಿಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಬೇಕಾಗಿ ಕೇಳುತ್ತೇನೆ ಎಂದರು.
ಅರಸೀಕೆರೆಗೆ ಸಿಎಂ ಡಿಸಿಎಂ ಡಿಕೆ ಶಿವಕುಮಾರ್
ಮೇ 30ರ ಶುಕ್ರವಾರ ವಿವಿಧ ಕಾಮಗಾರಿಗಳ ಉದ್ಘಾಟನೆ ಮಾಡಲು ಮುಖ್ಯಮಂತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಂತ್ರಿಗಳು ನಗರಕ್ಕೆ ಆಗಮಿಸಲಿದ್ದಾರೆ ಶಾಸಕ ಹಾಗೂ ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು. ಎಂಜಿನಿಯರಿಂಗ್‌ ಕಾಲೇಜು ಹಾಗೂ ಪಾಲಿಟೆಕ್ನಿಕ್ ಕಾಲೇಜು ಉದ್ಘಾಟನೆ ನೆರವೇರಿಸಲಿದ್ದಾರೆ. ಎಂಜಿನಿಯರಿಂಗ್‌ ಕಾಲೇಜು ಕೇಂದ್ರ ಸರ್ಕಾರ ಈಗಾಗಲೇ 240 ವಿದ್ಯಾರ್ಥಿಗಳಿಗೆ ನಾಲ್ಕು ಕೋರ್ಸ್‌ಗೆ ಅರ್ಜಿ ಕರೆಯಲು ಅನುಮತಿ ನೀಡಿದೆ ಎಂದು ವಿವರಿಸಿದರು.
ದೇಶದ ಅಭಿವೃದ್ಧಿಯಲ್ಲಿ ರಸ್ತೆಗಳು ಪ್ರಮುಖ ಪಾತ್ರ ವಹಿಸುತ್ತವೆ
ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸ್ಥಳೀಯ ಶಾಸಕ ಹಾಗೂ ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಶನಿವಾರ ಭೂಮಿಪೂಜೆ ನೆರವೇರಿಸಿದರು. ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯನ್ನು ಗುಣಮಟ್ಟದಿಂದ ಮಾಡಿಕೊಡುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಿ ಎಂದು ಲೋಕೋಪಯೋಗಿ ಎಂಜಿನಿಯರ್‌ಗಳಿಗೆ ಸೂಚನೆ ನೀಡಿದರು. ನಗರಗಳಿರಲಿ, ಗ್ರಾಮೀಣ ಪ್ರದೇಶಗಳಿರಲಿ ಎಲ್ಲ ಭಾಗಗಳ ಅಭಿವೃದ್ಧಿ ಆಗಬೇಕು ಎಂದರೆ ರಸ್ತೆಗಳು ಪ್ರಮುಖ ಪಾತ್ರ ವಹಿಸುತ್ತವೆ. ರಸ್ತೆಗಳು ಚೆನ್ನಾಗಿದ್ದರೆ, ಸಾಗಣೆ, ವ್ಯಾಪಾರ-ವಹಿವಾಟು ಒಂದು ಕಡೆಯಿಂದ ಮತ್ತೊಂದು ಕಡೆಗೆ ಚೆನ್ನಾಗಿ ನಡೆಯಲಿದೆ. ಇದರಿಂದ ಆರ್ಥಿಕ ಬಲವರ್ಧನೆ ಆಗಲಿದೆ ಎಂದು ಹೇಳಿದರು.
ಲಯಾರ್ಥಿಗಳಿಗೆ ಉತ್ತಮ ಓದುವ ವಾತಾವರಣ ನಿರ್ಮಿಸಿ
ನಿಲಯದ ಊಟೋಪಚಾರ ವ್ಯವಸ್ಥೆ, ಸ್ವಚ್ಛತೆ, ಶಿಸ್ತು ಈ ವಿಷಯಗಳ ಬಗ್ಗೆ ಯಾವುದೇ ರೀತಿಯ ಉದಾಸೀನತೆ ತೋರಿಸದೇ ಕರ್ತವ್ಯ ನಿರ್ವಹಿಸಬೇಕು. ನಿಲಯಗಳಲ್ಲಿ ಆಕಸ್ಮಿಕ ಅವಘಡಗಳು ಸಂಭವಿಸದ ಹಾಗೆ ಮುನ್ನೆಚ್ಚರಿಕೆಯನ್ನು ವಹಿಸಬೇಕು. ಪ್ರತಿ ಹಂತಗಳಲ್ಲೂ ಈ ಬಗ್ಗೆ ಪರಿವೀಕ್ಷಣೆಯನ್ನು ಮುಂದಿನ ಹಂತದ ಅಧಿಕಾರಿಗಳು ಮಾಡಬೇಕು ಎಂದು ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆಯುವ ನಿಲಯಾರ್ಥಿಗಳಿಗೆ ಉತ್ತಮವಾಗಿ ಓದುವ ವಾತಾವರಣವನ್ನು ನಿರ್ಮಿಸಿಕೊಡುವಲ್ಲಿ ನಿಲಯದ ಸಿಬ್ಬಂದಿಯ ಪಾತ್ರ ಬಹುಮುಖ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಬಿ.ಆರ್‌. ಹೇಳಿದ್ದಾರೆ.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 508
  • next >
Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved