• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಮುಬಾರಕ್‌ ಪಠಾಣ್‌ ಆಯ್ಕೆ
ಚನ್ನರಾಯಪಟ್ಟಣ ತಾಲೂಕು ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಮುಬಾರಕ್ ಪಠಾಣ್ ಆಯ್ಕೆಯಾಗಿದ್ದಾರೆ. ಶಾಸಕ ಸಿ ಎನ್ ಬಾಲಕೃಷ್ಣ ಮಾತನಾಡಿ, ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರನ್ನು ಈ ದಿನ ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ. ನೂತನ ಅಧ್ಯಕ್ಷರಾದ ಮುಬಾರಕ್ ಅವರು ಮುಸ್ಲಿಂ ಸಮಾಜದ ಹಿರಿಯ ಮತ್ತು ಕಿರಿಯ ಮುಖಂಡರ ಸಲಹೆ, ಸಹಕಾರ ಪಡೆದು ಜೆಡಿಎಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಲಿ ಎಂದು ಸಲಹೆ ನೀಡಿದರು. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳಿಗೆ ನಿಮ್ಮೆಲ್ಲರ ಸಂಪೂರ್ಣ ಸಹಕಾರ ಇರಲಿ ಎಂದರು.
ಪಡಿತರ ವಿತರಣೆಯಲ್ಲಿ ಲೋಪವಿಲ್ಲ ಎಂದ ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘ
ಆಹಾರ ಗೋದಾಮಿನಿಂದ ನೀಡುತ್ತಿರುವ ಅಕ್ಕಿಯ ಚೀಲದ ತೂಕ ಮತ್ತು ಅಳತೆ ಸರಿಯಾಗಿದ್ದು, ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಸಮರ್ಪಕವಾಗಿ ಪಡಿತರ ವಿತರಣೆ ಮಾಡಲಾಗುತ್ತಿದೆ ಎಂದು ತಾಲೂಕು ನ್ಯಾಯಬೆಲೆ ಅಂಗಡಿಗಳ ಮಾಲೀಕರ ಸಂಘದ ಗೌರವಾಧ್ಯಕ್ಷ ಕುಶಾವರ ನಾಗರಾಜು ತಿಳಿಸಿದರು. ಗೋದಾಮಿನಿಂದ ಅಕ್ಕಿ ವಿತರಣೆ ಮಾಡುವಾಗ ಸರಿಯಾದ ಪ್ರಮಾಣದಲ್ಲಿ ತೂಕ ಮಾಡುವುದಲ್ಲದೆ ತಮ್ಮಿಂದ ಸಹಿಯನ್ನು ಕೂಡ ಹಾಕಿಸಿಕೊಳ್ಳಲಾಗುತ್ತದೆ. ಒಂದು ವೇಳೆ ತೂಕ ಮತ್ತು ಅಳತೆಯಲ್ಲಿ ವ್ಯತ್ಯಾಸವಾದರೆ ನಾವು ಗ್ರಾಹಕರಿಗೆ ಹೇಗೆ ಅಕ್ಕಿಯನ್ನು ವಿತರಣೆ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.
ಭೂಮಾಪಕರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ
ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ ತಮ್ಮ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ತಾಲೂಕು ಪರವಾನಗಿ ಭೂಮಾಪಕರು ಲಾಗಿನ್ ನಿಷ್ಕ್ರಿಯಗೊಳಿಸಿ ಕೆಲಸ ಸ್ಥಗಿತಗೊಳಿಸಿ ಸೋಮವಾರ ಪಟ್ಟಣದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು. ತಮಗೆ ಇದುವರೆಗೂ ಸಮಯಕ್ಕೆ ಸರಿಯಾಗಿ ಸರಿಯಾದ ವೇತನ ಆಗಿಲ್ಲ. ತಂತ್ರಾಂಶದಲ್ಲಿ ವಿಲೇ ಪ್ರಕರಣಗಳಿಗೆ ಸಂಭಾವನೆಯಲ್ಲಿ ತಾರತಮ್ಯ ಮಾಡಲಾಗಿದೆ. ಲಾಗಿನ್ ಅಲ್ಲದೆ ಇತರೆ ಕೆಲಸಗಳನ್ನು ವಹಿಸಲಾಗಿದೆ. ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ ಎಂದರು.
ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದವರ ಬಂಧನಕ್ಕೆ ಆಗ್ರಹ
ಗೋ ರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಜಿಹಾದಿ ಮತಾಂಧರನ್ನು ತಕ್ಷಣವೇ ಬಂಧಿಸಲು ಆಗ್ರಹಿಸಿ ಶ್ರೀರಾಮಸೇನೆಯಿಂದ ಸೋಮವಾರ ಪ್ರತಿಭಟಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರಿಗೆ ಮನವಿ ಸಲ್ಲಿಸಿದರು. ಇಂಗಳಿ ಗ್ರಾಮದಲ್ಲಿ ಗೋ ಹಂತಕರು ಸಾಗಿಸುತ್ತಿದ್ದ ಹಸುಗಳ ವಾಹನ ತಡೆದು ರಕ್ಷಣೆಯನ್ನು ಶ್ರೀರಾಮಸೇನೆ ಕಾರ್ಯಕರ್ತರು ಮಾಡಿದ್ದಾರೆ. ಕಸಾಯಿಖಾನೆಗೆ ಹೋಗುತ್ತಿದ್ದನ್ನು ಪೊಲೀಸರಿಗೆ ಒಪ್ಪಿಸಿದ ನಂತರ ಮುಸ್ಲಿಂ ಜಿಹಾದಿಗಳು ಗ್ರಾಮಕ್ಕೆ ಬಂದಿದ್ದು, ಶ್ರೀರಾಮಸೇನೆ ಕಾರ್ಯಕರ್ತರನ್ನು ತೆಂಗಿನ ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದಾರೆ ಎಂದರು.
ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ್‌ ಜ್ಞಾನ ಅತ್ಯವಶ್ಯ
ಇಂದಿನ ಸ್ಪರ್ಧಾತ್ಮಕ, ಆಧುನಿಕ ಯುಗದಲ್ಲಿ ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅತ್ಯಗತ್ಯ. ಪ್ರತಿಯೊಬ್ಬ ವಿದ್ಯಾರ್ಥಿಯೂ ಕಂಪ್ಯೂಟರ್ ಜ್ಞಾನ ಹೊಂದಬೇಕು. ಬದಲಾದ ಪರಿಸ್ಥಿತಿಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಈ ಜ್ಞಾನವು ಅಗತ್ಯ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ತಿಳಿಸಿದರು. ಶ್ರೀರಾಮನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ತಂತ್ರಜ್ಞಾನ ನೆರವಿನ ಕಲಿಕಾ ಕಾರ್ಯಕ್ರಮ ಯೋಜನೆಯಡಿ ನೀಡಿರುವ ಕಂಪ್ಯೂಟರ್ ಪ್ರಯೋಗಾಲಯ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಸಹ ವಿದ್ಯಾರ್ಥಿ ದಿಸೆಯಿಂದಲೇ ಅಂತರ್ಜಾಲದಲ್ಲಿರುವ ಉತ್ತಮ ವಿಷಯಗಳನ್ನು ಅರಿತುಕೊಂಡು ಜ್ಞಾನವನ್ನು ಹೆಚ್ಚಿಸಿಕೊಳ್ಳುವ ಮೂಲಕ ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದರು.
ರಾಜ್ಯ ಸರ್ಕಾರದ ದುರಾಡಳಿತ ಖಂಡಿಸಿ ಜೆಡಿಎಸ್‌ ಪ್ರತಿಭಟನೆ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕಳೆದ ಎರಡು ವರ್ಷಗಳಲ್ಲಿ ಜನರಿಗೆ ಉತ್ತಮ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಲಂಚಗುಳಿತನ, ಭ್ರಷ್ಟಾಚಾರ ಹೆಚ್ಚಾಗಿರುವುದನ್ನು ಹಾಗೂ ಆಡಳಿತದ ವೈಫಲ್ಯ ಖಂಡಿಸಿ ರಾಜ್ಯ ಜೆಡಿಎಸ್ ಪಕ್ಷದಿಂದ ಮಾಜಿ ಸಚಿವ ಎಚ್.ಡಿ. ರೇವಣ್ಣ ನೇತೃತ್ವದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರಿಗೆ ಮನವಿ ಸಲ್ಲಿಸಿದರು. ಮಳೆಯಿಂದಾಗಿ ಹಾನಿಯಾಗಿರುವ ಮನೆಗಳಿಗೆ ಪ್ರತಿ ಮನೆಗೆ 5 ಲಕ್ಷ ರು.ನಂತೆ ಪರಿಹಾರ ಮೊತ್ತವನ್ನು ಕೂಡಲೇ ಸರ್ಕಾರ ಘೋಷಿಸಲು ಒತ್ತಾಯಿಸುತ್ತೇವೆ ಎಂದು ಹೇಳಿದರು.
ಕೋಟವಾಳು ಗ್ರಾಮದ ಶಾಲೆಗೆ ಕಂಪ್ಯೂಟರ್ ಕೊಡುಗೆ
ಇತ್ತೀಚಿನ ದಿನಗಳಲ್ಲಿ ಕಂಪ್ಯೂಟರ್‌ ಬಳಕೆಯ ಅನಿವಾರ್ಯತೆಯಿದ್ದು, ವಿದ್ಯಾರ್ಥಿದೆಸೆಯಿಂದಲೇ ಅದರ ಪ್ರಾಥಮಿಕ ಅರಿವು ಮೂಡಿಸುವ ಉದ್ದೇಶ ಇದರಿಂದ ಈಡೇರಲಿದೆ ಎಂದು ಮಾಜಿ ಶಾಸಕ ಮತ್ತು ಅರಸೀಕಟ್ಟೆ ಅಮ್ಮ ದೇವಾಲಯದ ಸಮಿತಿ ಅಧ್ಯಕ್ಷ ಡಾ. ಎ.ಟಿ. ರಾಮಸ್ವಾಮಿ ಹೇಳಿದರು. ಕೋಟವಾಳು ಗ್ರಾಮದಲ್ಲಿರುವ ವಿದ್ಯಾನಿಕೇತನ ಶಾಲೆಯ ಸಭಾಂಗಣದಲ್ಲಿ ಅರಸೀಕಟ್ಡೆ ಅಮ್ಮ ದೇವಾಲಯದ ಸಮಿತಿವತಿಯಿಂದ 2 ಲಕ್ಷ 50 ಸಾವಿರ ರು. ವೆಚ್ಚದಲ್ಲಿ ಕಂಪ್ಯೂಟರ್‌ ಹಾಗೂ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ನಂತರ ಮಾತನಾಡಿದ ಅವರು, ಇಂದಿನ ಯುಗದಲ್ಲಿ ಅತಿಅವಶ್ಯವಾಗಿ ಕಂಪ್ಯೂಟರ್ ಬೇಕಾಗಿದ್ದು, ಶಾಲಾ ವಿದ್ಯಾರ್ಥಿಗಳು ಅಲ್ಲದೇ ಇತರೆ ವಿದ್ಯಾರ್ಥಿಗಳು ಇದರ ಉಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಶಿಕ್ಷಕರು ವಿದ್ಯಾರ್ಥಿಗಳಿಗೆ ಸದ್ಗುಣ, ಸಂಸ್ಕಾರ ಕಲಿಸಲಿ: ರಂಗನಾಥ ಸ್ವಾಮಿ ಸಲಹೆ
ನಾನು ನನ್ನ ಶಾಲೆಗೆ ಸಮಯಕ್ಕೆ ಸರಿಯಾಗಿ ಹಾಜರಾಗಿ ಮಕ್ಕಳ ಭವಿಷ್ಯದ ಬಗ್ಗೆ ಪೋಷಕ ವೃಂದದವರಲ್ಲಿ ಕುಳಿತು ಚರ್ಚಿಸುತಿದ್ದಂತಹ ನನ್ನ ವೃತ್ತಿ ಬದ್ಧತೆಯನ್ನು ಕಂಡು ನನ್ನನ್ನು ಹಳ್ಳಿಯ ಜನರು ಪ್ರೀತಿಸುತ್ತಿದ್ದರು.
ತುರ್ತು ಪರಿಸ್ಥಿತಿಯಂಥ ಕರಾಳ ದಿನ ಮತ್ತೆ ಬಾರದಿರಲಿ: ಶಾಸಕ ಸಿಮೆಂಟ್ ಮಂಜು
ದೇಶದ ಪ್ರಜಾಪ್ರಭುತ್ವ ಉಳಿವಿಗಾಗಿ ದೇಶಾದ್ಯಂತ ಹೋರಾಟಗಳು ನಡೆದಿವೆ. ಇತಿಹಾಸದಿಂದ ಪಾಠ ಕಲಿತು ವರ್ತಮಾನದಲ್ಲಿ ಬದುಕು ರೂಪಿಸಿಕೊಳ್ಳಬೇಕು. ಆದ್ದರಿಂದ, ಮುಂದೆ ತುರ್ತುಪರಿಸ್ಥಿತಿಯಂತ ಕೆಟ್ಟ ಪರಿಸ್ಥಿತಿ ಮತ್ತೊಮ್ಮೆ ದೇಶಕ್ಕೆ ಬಾರದಿರಲೆಂದು ಇಂತಹ ಘಟನೆಯನ್ನು ನೆನೆಯಬೇಕಿದೆ.
ಅರಕಲಗೂಡಲ್ಲಿ ಅಭಿವೃದ್ಧಿ ಕಾರ್ಯಗಳಾಗಬೇಕಿದೆ: ಮಲ್ಲಿಕಾರ್ಜುನ ಸ್ವಾಮೀಜಿ ಸಲಹೆ
ಯುವಕರ ಕಣ್ಮಣಿಯಾಗಿ ಕೆಲಸ ಮಾಡುತ್ತಿರುವ ಶ್ರೀಧರ್ ಗೌಡರ ಹೆಸರು ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಬಡ ವಿದ್ಯಾರ್ಥಿಗಳಿಗೆ 16 ಲಕ್ಷ ರು. ವಿದ್ಯಾರ್ಥಿ ವೇತನ ಕೊಡಿಸಿರುವೆ. ಕ್ಷೇತ್ರದಲ್ಲಿ ಎಲ್ಲ ರಾಜಕಾರಣಿಗಳಿಗಿಂತ ಮಿಗಿಲಾಗಿ ಜನರ ಕಷ್ಟಗಳಿಗೆ ಸ್ಪಂದಿಸುವ ಗುಣ ಹೊಂದಿರುವ ಇವರ ಶ್ರೇಷ್ಠ ವ್ಯಕ್ತಿತ್ವಕ್ಕೆ ತಕ್ಕ ಫಲ ಸಿಗುವಂತಾಗಲಿ.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 550
  • next >
Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved