• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾವೇರಿ ನದಿಗೆ ಮಹಶಿರ್‌ ಮೀನು ಮರಿಗಳು
ಇಲ್ಲಿಯ ರಾಮೇಶ್ವರಸ್ವಾಮಿ ದೇವಸ್ಥಾನದ ಕಾವೇರಿ ನದಿ ವಹ್ನಿ ಪುಕ್ಷರಣಿಯ ಎರಡು ಬದಿಯ ಒಂದು ಪರ್ಲಾಂಗ್ (200 ಮೀಟರ್ ) ನದಿಯನ್ನು ಮತ್ಸ್ಯ ಸಂರಕ್ಷಿತ ಪ್ರದೇಶ ಎಂದು ಮೈಸೂರು ಮೀನುಗಾರಿಕೆ ಇಲಾಖೆ ಆರ್‌. ಗಣೇಶ್ ತಿಳಿಸಿದರು. ಈ ಕ್ಷೇತ್ರದಲ್ಲಿ ಬರುವ ಭಕ್ತರು ಸಂರಕ್ಷಿತ ಮೀನುಗಳಿಗೆ ಪುರಿ, ಕಡಲೆಕಾಯಿ, ಹಿಂಡಿ ಮುಂತಾದ ಅಹಾರವನ್ನು ಹಾಕಬಹುದು. ಈ ಸ್ಥಳದಲ್ಲಿ ಪ್ಲಾಸ್ಟಿಕ್, ಗೋಣಿಚೀಲ, ಕಸ ಕಡ್ಡಿ ಬಟ್ಟೆ ಇನ್ನಿತರ ತ್ಯಾಜ್ಯ ವಸ್ತುಗಳನ್ನು ಹಾಕಬಾರದು. ಈ ನಿಯಮ ಉಲ್ಲಂಘನೆ ಮಾಡಿದರೆ ಶಿಕ್ಷಗೆ ಗುರಿ ಪಡಿಸಲಾಗುವುದು ಎಂದು ಗಣೇಶ್ ತಿಳಿಸಿದರು.
ಬೇಲೂರಿನ ಕನ್ನಿಕಾಪರಮೇಶ್ವರಿ ದೇವಾಲಯದಲ್ಲಿ ವಾಸವಿ ಜಯಂತಿ
ಪೇಟೆ ಕನ್ನಿಕಾಪರಮೇಶ್ವರಿ ದೇವಾಲಯದಲ್ಲಿ ವಾಸವಿ ಜಯಂತಿಯ ಅಂಗವಾಗಿ ಉತ್ಸವ ಮೂರ್ತಿಯನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಅದ್ಧೂರಿಯಾಗಿ ಆಚರಿಸಿದರು. ಶಾಂತಿ ಮತ್ತು ಸಮೃದ್ಧಿಗಾಗಿ ಗಣಪತಿ ಹೋಮ, ದೇವಿಯ ಧಾರ್ಮಿಕ ಉಪನ್ಯಾಸ ಮತ್ತು ಕೀರ್ತನೆ ದೇವಿ ಸ್ತುತಿ ಹಾಗು ಭಜನೆ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಗುರುವಾರ ಓಕಳಿ ಉತ್ಸವಕ್ಕೆ ಸರ್ವ ಭಕ್ತಾದಿಗಳು ಬಂದು ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿದರು.
ಗಣತಿದಾರರಿಗೆ ಸ್ಪಷ್ಟ ಮಾಹಿತಿ ನೀಡಲು ಕರೆ
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯು ಮೇ ೫ರಿಂದ ಪ್ರಾರಂಭವಾಗಿದ್ದು, ಮೇ ೧೭ರವರೆಗೆ ಜಿಲ್ಲೆಯಲ್ಲಿ ನಡೆಯಲಿದೆ. ಗಣತಿದಾರರು ಮನೆ ಮನೆ ಭೇಟಿ ಮಾಡಿ ಮಾಹಿತಿ ಸಂಗ್ರಹಿಸಲಿರುವರು. ಈ ಸಂದರ್ಭದಲ್ಲಿ ಮನೆ ಯಜಮಾನರು ಆಧಾರ್ ಕಾರ್ಡ್ ಹಾಗೂ ಪಡಿತರ ಚೀಟಿಯನ್ನು ಮುಂಚಿತವಾಗಿ ತೆಗೆದಿಟ್ಟುಕೊಂಡಿದ್ದು, ಗಣತಿದಾರರಿಗೆ ಸ್ಪಷ್ಟ ಮಾಹಿತಿ ನೀಡುವ ಮೂಲಕ ಸಮೀಕ್ಷೆಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಕೋರಿದ್ದಾರೆ.
ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ವಾಸವಿ ಜಯಂತಿ
ಶ್ರೀ ವಾಸವಿ ಜಯಂತಿ ಪ್ರಯುಕ್ತ ಮೇ ೧ರ ಗುರುವಾರದಿಂದ ಪ್ರತಿನಿತ್ಯ ಅಭಿಷೇಕ, ವಿಶೇಷ ಅಲಂಕಾರ ಹಾಗೂ ಸಂಪ್ರದಾಯದ ಆಚರಣೆಯಂತೆ ಪೂಜಾ ಕೈಂಕರ್ಯ ನೆರವೇರಿಸಿ, ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಲಾಗುತ್ತಿತ್ತು. ಬುಧವಾರ ಮುಂಜಾನೆ ಬ್ರಾಹ್ಮಿ ಮಹೂರ್ತದಲ್ಲಿ ಹೇಮಾವತಿ ನದಿ ತೀರದಲ್ಲಿ ಗಂಗೆ ಪೂಜೆ ನೆರವೇರಿಸಿ, ಕನ್ನಿಕೆಯರಿಂದ ಕಳಸದ ಮೆರವಣಿಗೆ, ನಂತರ ಗೋಪೂಜೆ, ಪಂಚಾಮೃತ ಅಭಿಷೇಕ ನಡೆಸಲಾಯಿತು.
ದೇಹವನ್ನೂ ದೇವಾಲಯದಂತೆ ಪರಿಶುದ್ಧವಾಗಿ ಇಟ್ಟುಕೊಳ್ಳಿ
ಜಗತ್ತನ್ನು ವ್ಯಾಪಿಸುವ ಭಗವಂತ, ಮನುಷ್ಯನ ದೇಹದಲ್ಲಿಯೂ ಇದ್ದು, ದೇವಾಲಯ ಎಷ್ಟು ಪವಿತ್ರವೋ ಅಷ್ಟೇ ಪವಿತ್ರವಾದುದು ಮನುಷ್ಯನ ದೇಹ. ದೇಹವನ್ನು ಪರಿಶುದ್ಧವಾಗಿ, ರೋಗರಹಿತವಾಗಿ ಇಟ್ಟುಕೊಂಡು, ದ್ವೇಷ, ಅಸೂಯೇ ತ್ಯಜಿಸಿ, ಪ್ರೀತಿ ವಾತ್ಸಲ್ಯದಿಂದ ಬದುಕಬೇಕಾದ್ದು ಮನುಷ್ಯ ಧರ್ಮವಾಗಿದೆ ಎಂದು ಮೈಸೂರು ಶ್ರೀ ಸುತ್ತೂರು ವೀರಸಿಂಹಾಸನ ಸಂಸ್ಥಾನ ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಮನುಷ್ಯ ಭಗವಂತನನ್ನು ಪವಿತ್ರವಾಗಿ ಇಟ್ಟುಕೊಳ್ಳುವ ಪ್ರಯತ್ನದಲ್ಲಿ ನಡೆ ಒಳಗೆ ನುಡಿ ತುಂಬಿ, ನುಡಿ ಒಳಗೆ ನಡೆ ತುಂಬಿ, ನಡೆನುಡಿಯಲ್ಲಿ ಪರಿಪೂರ್ಣತೆ ತುಂಬಿ ಸಾಮರಸ್ಯ ಕಾಣುತ್ತಾ, ಇವ ನಮ್ಮವ ಇವ ನಮ್ಮವ ಎಂದು ಪ್ರೀತಿಯಿಂದ ಕಾಣುವ ಭಾವನೆ ಬೆಳೆಸಿಕೊಂಡಾಗ ಮನುಷ್ಯ ಜೀವನ ಸಾರ್ಥಕವಾಗುತ್ತದೆ.
ಕೆಂಚಾಂಬ ದೇವಿಯ ಅದ್ಧೂರಿ ದೊಡ್ಡ ಜಾತ್ರೆ
ಸುತ್ತಲಿನ 48 ಹಳ್ಳಿಗಳಿಗೆ ಸೇರಿದ ಕೆಂಚಾಂಬ ದೇವಿಯ ವರ್ಷದ ದೊಡ್ಡ ಜಾತ್ರೆ ಅತ್ಯಂತ ವೈಭವ, ಭಯ, ಭಕ್ತಿಯಿಂದ ಮೇ 4ರಿಂದ 12ರವರೆಗೆ ಹರಿಹಳ್ಳಿ ಗ್ರಾಮದಲ್ಲಿರುವ ಕೆಂಚಾಂಬಿಕೆ ದೇವಸ್ಥಾನದಲ್ಲಿ ನಡೆಯುತ್ತದೆ. ಪ್ರತಿ ಹಳ್ಳಿಗಳಲ್ಲಿ ಮಹಿಳೆಯರು ಕಳಸ ತೆಗೆದುಕೊಂಡು ಹೊಳೆ ಬಳಿ ತೆರಳಿ ಕೆಂಚಾಂಬಿಕೆ ದೇವಿಗೆ ಪೂಜೆ ಸಲ್ಲಿಸುತ್ತಾರೆ. ಶನಿವಾರ ರಾತ್ರಿ ಹರಿಹಳ್ಳಿ ಗ್ರಾಮದ ಮೂಲ ದೇವಸ್ಥಾನದಲ್ಲಿ ಸಪ್ತಮಾತೃಕೆಯರ ಮುಖವಾಡವನ್ನಿಟ್ಟು ರಾತ್ರಿ 10 ಗಂಟೆಯವರೆಗೆ ಅಲಂಕಾರ ಮಾಡಿ ಸುಗ್ಗಿ ನಡೆಯುತ್ತದೆ. ಮೇ 11ರಂದು ದೊಡ್ಡ ಜಾತ್ರೆ ನಡೆಯುತ್ತದೆ. ಅಂದು ಪ್ರತಿಯೊಬ್ಬರೂ ದೇವಿ ಪಾದ ಮುಟ್ಟಿ ನಮಸ್ಕರಿಸಲು ಅವಕಾಶ ನೀಡಲಾಗುತ್ತದೆ.
ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಹಂಸಗೆ ಶಾಸಕರಿಂದ ಅಭಿನಂದನೆ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬೇಲೂರು ತಾಲೂಕಿಗೆ ಪ್ರಥಮ ಸ್ಥಾನ ಮತ್ತು ಕರ್ನಾಟಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆಯುವ ಮೂಲಕ ಬೇಲೂರಿನ ಕೀರ್ತಿಯನ್ನು ಹೆಚ್ಚಿಸಿದ ಹಂಸ ಎಂಬ ವಿದ್ಯಾರ್ಥಿಯನ್ನು ಬೇಲೂರಿನ ಶಾಸಕ ಎಚ್.ಕೆ.ಸುರೇಶ್ ಹಾಗೂ ಕಸಾಪ ವತಿಯಿಂದ ವಿಶೇಷವಾಗಿ ಅಭಿನಂದನೆ ಸಲ್ಲಿಸಿದರು. ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಪ್ರಗತಿ ಮತ್ತು ಅವರ ಸಾಮಾನ್ಯ ಜ್ಞಾನ ಅತ್ಯವಶ್ಯಕವಾಗಿದೆ. ವಿದ್ಯಾರ್ಥಿಗಳು ಅಂಕದ ಜೊತೆಯಲ್ಲಿ ಸಾಮಾನ್ಯ ಜ್ಞಾನವನ್ನು ಪತ್ರಿಕೆಗಳನ್ನು ಓದುವ ಮೂಲಕ ಬೆಳಸಿಕೊಳ್ಳಬೇಕು ಎಂದರು.
ಜಾತಿಗಣತಿದಾರರಿಗೆ ಸರಿಯಾದ ಮಾಹಿತಿ ನೀಡಿ
ಮೀಸಲಾತಿ ವರ್ಗೀಕರಣಕ್ಕೆ ಬರುವ ಗಣತಿದಾರರಿಗೆ ಸಂಕ್ಷಿಪ್ತ ಮಾಹಿತಿ ನೀಡಲು ಸಫಾಯಿ ಕರ್ಮಚಾರಿ ಆಯೊಗದ ಮಾಜಿ ಎ.ಆರ್‌. ವೆಂಕಟೇಶ್ ಸಲಹೆ ನೀಡಿದರು. ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಒಟ್ಟು 101 ಜಾತಿಗಳಿವೆ. ಈ ಪೈಕಿ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಉಪ ಜಾತಿಗಳು ಯಾವ ಜಾತಿಗೆ ಸೇರಿವೆ ಎಂಬ ಗೊಂದಲವನ್ನೂ ಇತ್ಯರ್ಥಪಡಿಸಬೇಕಾಗಿದೆ. ದಾಖಲೆ, ಪುರಾವೆ, ಅಂತರ್ ಜಾತಿ ಹಿಂದುಳಿದಿರುವಿಕೆ ಇನ್ನಿತರ ಮಾಹಿತಿ ಸಂಗ್ರಹಿಸಿ ವೈಜ್ಞಾನಿಕ ಮತ್ತು ತರ್ಕಬದ್ಧವಾಗಿ ಎಸ್‌ಸಿ ಮೀಸಲು ವರ್ಗೀಕರಣ ನಡೆಸಬೇಕಾಗಿರುವುದರಿಂದ ಅಂಜಿಕೆ ಇಲ್ಲದೆ ಸರಿಯಾದ ಮಾಹಿತಿ ನೀಡಬೇಕು.
ಜಮೀನು ಸಮಸ್ಯೆ ಪರಿಹಾರವಾಗುತ್ತಿಲ್ಲ ರೈತನ ಏಕಾಂಗಿ ಪ್ರತಿಭಟನೆ
ಸರ್ಕಾರ ಗ್ರಾಮ ವಾಸ್ತವ್ಯ ಹಾಗೂ ಜನಸಂಪರ್ಕ ಸಭೆಗಳನ್ನು ನಡೆಸುವ ಮೂಲಕ ಶೋಷಿತ, ಬಡವರ್ಗದ ಜನತೆಗೆ ನ್ಯಾಯವನ್ನು ದೊರಕಿಸುವ ನಿಟ್ಟಿನಲ್ಲಿ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ಸಮಸ್ಯೆಗಳ ಪರಿಹಾರ ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿ ರೈತರೊಬ್ಬರು ತಾಲೂಕು ಕಚೇರಿ ಮುಂಭಾಗ ಏಕಾಂಗಿಯಾಗಿ ಪ್ರತಿಭಟನೆಯನ್ನು ನಡೆಸಿದರು. ಕಡೆಯ ಆಸ್ತ್ರವಾಗಿ ತಾಲೂಕು ಕಚೇರಿ ಮುಂದೆ ಏಕಾಂಗಿಯಾಗಿ ಕುಳಿತು ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದು ವಿವರಿಸಿದರು.
ಪಾಕಿಸ್ತಾನಿಗಳ ಗಡಿಪಾರಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಹಿಂದೂಗಳನ್ನು ಗುರಿಯಾಗಿಸಿ ಪಹಲ್ಗಾಂನಲ್ಲಿ ನಡೆದ ಭೀಕರ ಉಗ್ರದಾಳಿ ಹಿನ್ನೆಲೆಯಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪಾಕಿಸ್ತಾನ ವಿಚಾರದಲ್ಲಿ ಅತ್ಯಂತ ಕಠಿಣ ನಿರ್ಣಯಗಳನ್ನು ಕೈಗೊಂಡಿದ್ದು, ರಾಷ್ಟ್ರೀಯ ಭದ್ರತೆಯ ದೃಷ್ಠಿಯಿಂದ ಕೇಂದ್ರ ಗೃಹ ಸಚಿವಾಲಯ ಪಾಕಿಸ್ತಾನಿ ಪ್ರಜೆಗಳ ಗಡಿಪಾರಿಗೆ ಆಜ್ಞಾಪತ್ರ ಹೊರಡಿಸಿದ್ದು, ಕೂಡಲೇ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಪ್ರಧಾನಿಗಳು ಭಾರತೀಯ ಸೇನಾ ಪಡೆಗಳಿಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಮುಕ್ತ ಅನುಮತಿ ನೀಡಿದ್ದಾರೆ. ನಮ್ಮ ಸೇನಾ ಪಡೆಗಳು ಉಗ್ರರನ್ನು ನಾಶ ಮಾಡೇ ತೀರುತ್ತವೆ ಎಂಬ ದೃಢ ವಿಶ್ವಾಸವಿದೆ ಎಂದರು.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 508
  • next >
Top Stories
ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
‘ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved