ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಅಧಿಕಾರ ಸಿಕ್ಕಂತೆ. ನಮ್ಮ ಗ್ಯಾರಂಟಿ ಕಾರ್ಯಕ್ರಮಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ನಾವು ಜನರ ಭಾವನೆಗಳಿಗಾಗಿ ರಾಜಕೀಯ ಮಾಡುತ್ತಿಲ್ಲ, ಜನರ ಬದುಕಿಗಾಗಿ ರಾಜಕೀಯ ಮಾಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಶಿಗ್ಗಾಂವಿ ಉಪಚುನಾವಣೆಯ ಭರ್ಜರಿ ಗೆಲುವಿನ ಹಿನ್ನೆಲೆಯಲ್ಲಿ ಸವಣೂರಿನಲ್ಲಿ ಭಾನುವಾರ ಕಾಂಗ್ರೆಸ್ ಆಯೋಜಿಸಿದ್ದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಮಾವೇಶ ಕೈ ಕಾರ್ಯಕರ್ತರ ಜೋಶ್ ಹೆಚ್ಚಿಸುವಂತೆ ಮಾಡಿತು.