ರಾಜ್ಯದಲ್ಲಿ ವಕ್ಫ್ ಕಾನೂನು ದುರುಪಯೋಗ - ಬಸವರಾಜ ಬೊಮ್ಮಾಯಿರಾಜ್ಯದಲ್ಲಿ ವಕ್ಫ್ ಕಾನೂನು ದುರುಪಯೋಗ ಆಗುತ್ತಿದ್ದು, ಕಂದಾಯ ಕಾನೂನು ಕಡೆಗಣಿಸಿ ವಿನಾಕಾರಣ ಇಡೀ ರಾಜ್ಯದ ರೈತರ ಸಾಗುವಳಿ ಜಮೀನುಗಳಿಗೆ ವಕ್ಫ್ ಪ್ರಾಪರ್ಟಿ ಎಂದು ಮಾಡಲು ಹೊರಟಿದ್ದಾರೆ. ಸರ್ಕಾರ ರೈತರಿಗೆ ನೀಡಿರುವ ನೋಟಿಸ್ ವಾಪಸ್ ಪಡೆದು, ರಾಜ್ಯದ ಸಮಗ್ರ ದಾಖಲೆಗಳನ್ನು ಪರಿಶೀಲನೆ ಮಾಡಿ ರೈತರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.