ಬೆಳೆ ನಷ್ಟ ಪರಿಹಾರ ರೈತರ ಖಾತೆಗೆ ಶೀಘ್ರ ಜಮೆ ಮಾಡಲು ಆಗ್ರಹಮುಂಗಾರು ಬೆಳೆ ವಿಮೆ ನೀಡಿಕೆಯಲ್ಲಿ ಆಗಿರುವ ತಾರತಮ್ಯ ಸರಿಪಡಿಸಬೇಕು. ೨೦೨೩-೨೪ರಲ್ಲಿ ಭೀಕರ ಬರಗಾಲದಿಂದ ಬೆಳೆ ನಷ್ಟವಾಗಿದ್ದು, ಬೆಳೆ ಪರಿಹಾರವನ್ನು ರಾಜ್ಯ ಸರ್ಕಾರ ಶೀಘ್ರವೇ ರೈತರ ಖಾತೆಗೆ ಜಮಾ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕದಿಂದ ಸೋಮವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.