ಮೆಕ್ಕೆಜೋಳಕ್ಕೆ ಬಂಪರ್ ಬೆಲೆ, ರೈತರಲ್ಲಿಲ್ಲ ಬೆಳೆಬರಗಾಲದಿಂದ ಜಿಲ್ಲೆಯ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಕೆಲ ರೈತರಿಗೆ ಬಿತ್ತನೆ ಮಾಡಿದ ಖರ್ಚು ಕೂಡ ಸಿಗದ ರೀತಿಯಲ್ಲಿ ಬೆಳೆ ಹಾಳಾಗಿದೆ. ಸುಮಾರು 50 ಸಾವಿರ ಹೆಕ್ಟೇರ್ನಲ್ಲಿ ಅಲ್ಪ ಪ್ರಮಾಣದಲ್ಲಿ ಇಳುವರಿ ಇದ್ದು, ಸಂಕಷ್ಟದಲ್ಲಿರುವ ರೈತರು ಬೆಳೆ ದಾಸ್ತಾನು ಮಾಡಿಕೊಳ್ಳುವ ಶಕ್ತಿಯಿಲ್ಲದೇ ಈ ಹಿಂದೇಯ ಮಾರಾಟ ಮಾಡಿಕೊಂಡಿದ್ದಾರೆ. ಬೀಜ, ಗೊಬ್ಬರ ಖರೀದಿಗೆ ವ್ಯಾಪಾರಸ್ಥರಿಂದ ಮುಂಗಡ ಹಣ ಪಡೆದವರು ಅವರಿಗೇ ಬೆಳೆ ಮಾರುವ ಅನಿವಾರ್ಯತೆ ಎದುರಿಸುತ್ತಿದ್ದಾರೆ.