ಶೋಷಿತ ಸಮಾಜಗಳು ಶಿಕ್ಷಣಕ್ಕೆ ಒತ್ತು ನೀಡಲಿಶೋಷಿತ ಸಮಾಜಗಳು ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಪ್ರಗತಿ ಸಾಧಿಸಬೇಕು ಎಂದು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಸ್ವಾಮಿಗಳು ನುಡಿದರು. ರಾಣಿಬೆನ್ನೂರು ನಗರದ ಹಲಗೇರಿ ರಸ್ತೆ ಶ್ರೀ ಬೀರಲಿಂಗೇಶ್ವರ (ಹೊರಗುಡಿ) ದೇವಸ್ಥಾನದ ಆವರಣದಲ್ಲಿ ಶುಕ್ರವಾರ ತಾಲೂಕು ಕುರುಬ ನೌಕರರ ಸಂಘ, ಪ್ರದೇಶ ಕುರುಬರ ಸಂಘದ ತಾಲೂಕು ಘಟಕ, ಕುರುಬ ಸಮಾಜದ ವಿವಿಧ ಸಂಘಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ತಾಲೂಕು ಕುರುಬ ನೌಕರರ ಸಮಾವೇಶ, ಶೈಕ್ಷಣಿಕ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.