• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಿರುಗದ ಕಬ್ಬಿನ ಗಾಣ, ಬೆಲ್ಲ ತಯಾರಿಕೆಗೆ ಕಹಿ
ಕಬ್ಬಿನ ಗಾಣಗಳು ತಿರುಗುತ್ತಿಲ್ಲ, ಬೆಲ್ಲ ತಯಾರಿಕೆಗೆ ಕಹಿ ಅನುಭವವಾಗಿದೆ. ಸಕ್ಕರೆ ಕಾರ್ಖಾನೆ ಭರದಿಂದ ಕಬ್ಬು ನುರಿಸುತ್ತಿವೆ. ಆದರೆ ಗಾಣ ನೆಚ್ಚಿದವರು ಹಣೆಗೆ ಕೈ ಹಚ್ಚಿ ಚಿಂತೆಗೊಳಗಾಗಿದ್ದಾರೆ, ಹಾನಗಲ್ಲ ತಾಲೂಕು ಭತ್ತ, ಕಬ್ಬು ಬೆಳೆದು ಹಸಿವು ನೀಗಿಸಿ, ಸಿಹಿ ಉಣಿಸಿದ ನಾಡು. ೯೦೦ ಕೆರೆಗಳು, ಧರ್ಮಾ ವರದಾ ನದಿ ಇರುವ ಈ ತಾಲೂಕಿನಲ್ಲಿ ಬೆಲ್ಲಕ್ಕಾಗಿಯೇ ಎಕರೆ, ಅರ್ಧ ಎಕರೆ ಕಬ್ಬು ಹಾಕಿಕೊಂಡು ಗಾಣಗಳಿಗೆ ಹೋಗಿ ಬೆಲ್ಲ ಮಾಡಿಸಿಕೊಂಡು, ಇಡೀ ವರ್ಷ ಬಳಸುತ್ತಿದ್ದರು.
ಪರಿಹಾರ ಘೋಷಿಸಿಯೇ ಜಿಲ್ಲೆಗೆ ಮುಖ್ಯಮಂತ್ರಿ ಬರಲಿ
ರೈತಪರ ಕಾಳಜಿಯಿದ್ದರೇ ಬರಪೀಡಿತ ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರದ ಮೊತ್ತದಲ್ಲಿ ರಾಜ್ಯ ಸರ್ಕಾರದ ಪಾಲೆಷ್ಟು ಎಂಬುದನ್ನು ಘೋಷಣೆ ಮಾಡಿಯೇ ಬರಬೇಕೆಂದು ರೈತ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ ಆಗ್ರಹಿಸಿದರು.
ಬಸ್‌ ಇಲ್ಲದೇ ನಿಲ್ದಾಣಗಳಲ್ಲಿ ಜನಜಾತ್ರೆ
ಕಳೆದ ಕೆಲವು ದಿನಗಳಿಂದ ಬಸ್‌ ಪ್ರಯಾಣಿಕರ ಪರದಾಟ ಮಿತಿಮೀರಿದೆ. ಬಸ್‌ ನಿಲ್ದಾಣದಲ್ಲಿ ಇಡೀ ದಿನ ಪ್ರಯಾಣಿಕರ ಜಾತ್ರೆಯೇ ನೆರೆದಿರುತ್ತದೆ. ಯಾವ ಬಸ್‌ಗಳಲ್ಲೂ ಹತ್ತಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು, ಬಸ್‌ ಪ್ರಯಾಣವೇ ಸಾಕು ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.ಕಳೆದ ಕೆಲವು ದಿನಗಳಿಂದ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರ ಬವಣೆ ಹೇಳತೀರದಾಗಿದೆ. ಅದರಲ್ಲೂ ಹಬ್ಬ, ಹುಣ್ಣಿಮೆ ಬಂತೆಂದರೆ ನಿಲ್ದಾಣದಲ್ಲೇ ಜಾತ್ರೆಯ ವಾತಾವರಣ ಕಂಡುಬರುತ್ತಿದೆ. ಸೋಮವಾರ ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಜಿಲ್ಲೆಯಿಂದಲೇ ಸಾವಿರಾರು ಪ್ರಯಾಣಿಕರು ತೆರಳಿದ್ದಾರೆ. ಒಂದು ಬಸ್‌ ನಿಲ್ದಾಣ ಪ್ರವೇಶಿಸುತ್ತಿದ್ದಂತೆ, ಪಾರ್ಕಿಂಗ್ ಮಾಡುವ ಮುನ್ನವೇ ಜನ ಮುತ್ತಿಗೆ ಹಾಕುತ್ತಿದ್ದಾರೆ.
ನ.28ರಿಂದ ಮೂರು ದಿನ ಕಾಗಿನೆಲೆಯಲ್ಲಿ ಕನಕ ಜಯಂತ್ಯುತ್ಸವ
ಕಾಗಿನೆಲೆ ಕನಕ ಗುರುಪೀಠದಲ್ಲಿ ಕನಕ ಜಯಂತ್ಯುತ್ಸವದ ನಿಮಿತ್ತ ನ.28ರಿಂದ 30ರವರೆಗೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನ.29ರಂದು ಆಯೋಜಿಸಿರುವ ಭಾವೈಕ್ಯ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಕನಕಗುರುಪೀಠದ ಆಡಳಿತಾಧಿಕಾರಿ ಎಸ್.ಎಫ್.ಎನ್. ಗಾಜೀಗೌಡ್ರ ತಿಳಿಸಿದರು.
ಹೊಸತನವ ಬಿತ್ತಿ ಬೆಳೆಯುವ ಇಚ್ಛಾಶಕ್ತಿ ನಮ್ಮದಾಗಲಿ
ಉರುಳುವ ಕಾಲ ಚಕ್ರದಲ್ಲಿ ಹೂವುಗಳು ಅರಳಬೇಕಲ್ಲದೆ ಮುಳ್ಳುಗಳನ್ನು ಬೆಳೆಸುವುದು ಬೇಡ, ಹೊಸತನವ ಬಿತ್ತಿ ಬೆಳೆಯುವ ಇಚ್ಛಾಶಕ್ತಿ ನಮ್ಮದಾಗಬೇಕು ಎಂದು ಸಾಹಿತಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸತೀಶ ಕುಲಕರ್ಣಿ ನುಡಿದರು.ಇಲ್ಲಿನ ಅ.ನ.ಕುಂದಾಪೂರ ಹಾಗೂ ಬಿ.ಬಿ. ಪದಕಿ ಟ್ರಸ್ಟ್‌, ಮಂಥನ ವೇದಿಕೆ ಸಂಯುಕ್ತವಾಗಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ, ರಾಷ್ಟ್ರ, ರಾಜ್ಯ ಪ್ರಶಸ್ತಿ ಪುರಸ್ಕೃತರಿಗೆ ಸಮ್ಮಾನ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದರು.
ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಿ ಮಹಾಪಂಚಾಯತ್ ಅಧಿವೇಶನ
ಬರಗಾಲದಿಂದ ಸಂಕಷ್ಟದಲ್ಲಿರುವ ರಾಜ್ಯದ ರೈತರ ಸಾಲಮನ್ನಾ ಮಾಡಲು ಒತ್ತಾಯಿಸಲು ಬೆಂಗಳೂರಿನಲ್ಲಿ ಡಿ.೨೩ರಂದು ರಾಷ್ಟ್ರೀಯ ಕಿಸಾನ್ ಮಹಾಪಂಚಾಯತ್ ಅಧಿವೇಶನ ಹಮ್ಮಿಕೊಳ್ಳಲಾಗಿದೆ.ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರ ಶಾಂತಕುಮಾರ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ನೆರವಿಗೆ ಬಾರದೆ ರಾಜಕೀಯ ಚೆಲ್ಲಾಟವಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಕೇಂದ್ರದಲ್ಲಿ ಹೆಚ್ಚುತ್ತಿದೆ ಶ್ವಾನಗಳ ಹಾವಳಿ
ಜಿಲ್ಲಾ ಕೇಂದ್ರ ಹಾವೇರಿಯಲ್ಲಿ ಬೀದಿ ನಾಯಿಗಳ ಕಾಟ ವಿಪರೀತವಾಗಿದ್ದು, ಯಾವ ರಸ್ತೆ, ಓಣಿಗಳಲ್ಲಿ ಹೋದರೂ ಹತ್ತಾರು ನಾಯಿಗಳ ಹಿಂಡೇ ಬೆನ್ನಟ್ಟಿ ಬರುತ್ತವೆ. ಇಷ್ಟಾದರೂ ನಗರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವುದಕ್ಕೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ. ನಗರದ ಬಸ್‌ ನಿಲ್ದಾಣ ಸುತ್ತಮುತ್ತ, ಪಿಬಿ ರಸ್ತೆ, ಹಾನಗಲ್ಲ ರಸ್ತೆ, ಸುಭಾಸ ಸರ್ಕಲ್‌, ಬಸವೇಶ್ವರನಗರ, ರೈಲ್ವೆ ಸ್ಟೇಶನ್‌ ರಸ್ತೆ ಹೀಗೆ ಯಾವ ರಸ್ತೆ, ಓಣಿಗಳಿಗೆ ಹೋದರೂ ನಾಯಿಗಳ ಹಿಂಡೇ ಕಾಣುತ್ತವೆ. ಕೆಲವು ಕಡೆ ನಾಲ್ಕಾರು ನಾಯಿಗಳಿದ್ದರೆ, ಇನ್ನು ಕೆಲವು ಕಡೆಗಳ್ಲಲಂತೂ 15ರಿಂದ 20ರಷ್ಟು ಶ್ವಾನಗಳು ಗುಂಪಾಗಿರುತ್ತವೆ. ಹಗಲಿನ ವೇಳೆ ಅಲ್ಲಲ್ಲಿ ಮಲಗಿರುವ ನಾಯಿಗಳು, ರಾತ್ರಿ ವೇಳೆ ಹಾಗೂ ನಸುಕಿನಲ್ಲಿ ಅಪಾಯಕಾರಿ ರೀತಿಯಲ್ಲಿ ವರ್ತಿಸುತ್ತವೆ.
ಮೂಲಸೌಕರ್ಯಗಳಿಲ್ಲದೇ ಬಾಗಿಲು ಮುಚ್ಚಿದ ಸಣ್ಣ ಕೈಗಾರಿಕೆಗಳು
ಕೆಎಸ್‌ಎಸ್‌ಐಡಿಸಿ (ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ)ಯ ದಿವ್ಯ ನಿರ್ಲಕ್ಷದಿಂದ ಪಟ್ಟಣದ ಮಾಸೂರು ರಸ್ತೆಯ ಪಕ್ಕದಲ್ಲಿರುವ ಕೈಗಾರಿಕೆ ಪ್ರದೇಶದಲ್ಲಿ ಮೂಲ ಸೌರ್ಕಯಗಳ ಕೊರತೆಯಿಂದ ಕೆಲವು ಸಣ್ಣ ಕೈಗಾರಿಕೆಗಳು ಬಾಗಿಲು ಮುಚ್ಚಿವೆ.೧೯೮೩-೮೪ರಲ್ಲಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರು ಗ್ರಾಮೀಣ ಪ್ರದೇಶದಲ್ಲಿ ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಕರ್ನಾಟಕ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಸ್ಥಾಪಿಸಿದರು. ಈ ಮೂಲಕ ಪಟ್ಟಣದಲ್ಲಿ ನಿಗಮದ ಶಾಖೆಯನ್ನು ಆರಂಭಿಸಲಾಗಿತ್ತು.
ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಕ್ರೀಡಾ ಚಟುವಟಿಕೆ ಸಹಕಾರಿ
ಸಮಾಜದ ನೆಮ್ಮದಿಗಾಗಿ ಹಗಲಿರುಳು ಕೆಲಸ ಮಾಡುವ ಪೊಲೀಸರು ದೈಹಿಕ ಮತ್ತು ಮಾನಸಿಕ ಸದೃಢತೆ ಕಾಯ್ದುಕೊಳ್ಳುವುದು ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಹೇಳಿದರು. ಕೆರೆಮತ್ತಿಹಳ್ಳಿ ಡಿಎಆರ್ ಕವಾಯತ್ ಮೈದಾನದಲ್ಲಿ ಶುಕ್ರವಾರ ನಾಲ್ಕು ದಿನಗಳ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಪಾರಿವಾಳ ಹಾರಿಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಜನತಾ ದರ್ಶನದ ಮೂಲಕ ತಾಲೂಕು ಕೇಂದ್ರದಲ್ಲಿಯೇ ಪರಿಹಾರ ಲಭ್ಯ
ಜನರ ಸಮಸ್ಯೆಗಳನ್ನು ಹೊತ್ತು ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸುವುದನ್ನು ತಪ್ಪಿಸಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಅವುಗಳಿಗೆ ಪರಿಹಾರ ಕಲ್ಪಿಸುವ ಚಿಂತನೆಯಿಂದ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು. ರಾಣಿಬೆನ್ನೂರು ನಗರದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ತಾಲೂಕು ಮತ್ತು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜನತಾ ದರ್ಶನದಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ ಕೆಲವು ಅರ್ಹ ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಜಿಲ್ಲಾಧಿಕಾರಿ ಆದೇಶ ಪ್ರತಿ ವಿತರಿಸಿದರು.
  • < previous
  • 1
  • ...
  • 467
  • 468
  • 469
  • 470
  • 471
  • 472
  • 473
  • 474
  • 475
  • ...
  • 485
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved