• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಂಸ್ಕೃತಿಕ ಮೌಲ್ಯ ಬಿತ್ತಿದ ಸುವರ್ಣ ನೆಲ ಕರ್ನಾಟಕ
ಸಾಂಸ್ಕೃತಿಕ ಮೌಲ್ಯಗಳನ್ನು ಬಿತ್ತಿ ಬೆಳೆಸಿದ ಕನ್ನಡ ಸಾಹಿತ್ಯದ ಸುವರ್ಣ ನೆಲ ಕರ್ನಾಟಕದಲ್ಲಿ ಜನಿಸುವುದೇ ಒಂದು ಪುಣ್ಯ. ಇಲ್ಲಿರುವ ಎಲ್ಲರೂ ಕನ್ನಡ ಅರಿತು ಮಾತನಾಡಿ ಮೌಲ್ಯಗಳನ್ನು ಅರ್ಥ ಮಾಡಿಕೊಂಡು ನಡೆಯುವಂತಾಗಬೇಕು ಎಂದು ನಾಡೋಜ ಡಾ.ಮಹೇಶ ಜೋಶಿ ಹೇಳಿದರು.
ದರೋಡೆ ಪ್ರಕರಣ, ೫ ಆರೋಪಿಗಳ ಬಂಧನ
ಪಟ್ಟಣ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ದರೋಡೆ ನಡೆದ ಪ್ರಕರಣ ಭೇದಿಸಿದ ಹಾನಗಲ್ಲ ಪೊಲೀಸರು ೮ ತಾಸುಗಳಲ್ಲಿ ೫ ಜನ ಆರೋಪಿತರನ್ನು ಬಂಧಿಸಿದ್ದಾರೆ.ಇರ್ಷಾದ್‌ಅಹ್ಮದ್ ಆಲದಕಟ್ಟಿ ಎಂಬ ತರಕಾರಿ ವ್ಯಾಪಾರಿ ತನ್ನ ಸ್ನೇಹಿತ ಗೌಸ ಮೋಹದ್ದೀನ ಉಪ್ಪಣಸಿ ಎಂಬವರೊಂದಿಗೆ ನ. ೧೮ ರಂದು ರಾತ್ರಿ ೧೨ ಗಂಟೆಗೆ ಅಕ್ಕಿಆಲೂರಿನಿಂದ ಹಾನಗಲ್ಲಿಗೆ ಬರುವ ಸಂದರ್ಭದಲ್ಲಿ ಗೆಜ್ಜಿಹಳ್ಳಿ ಹಾಗೂ ಹಾನಗಲ್ಲ ನಡುವಿರುವ ಧರ್ಮಾ ನದಿ ಸೇತುವೆ ಬಳಿ ಅಪರಿಚಿತ ತಂಡ ಏಕಾಏಕಿ ಹೊಡೆದು ಹೆದರಿಸಿ ₹೨೪ ಸಾವಿರ ಹಾಗೂ ಎರಡು ಮೊಬೈಲ್‌ಗಳನ್ನು ದರೋಡೆ ಮಾಡಿರುವುದಾಗಿ ಹಾನಗಲ್ಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಜಾಹೀರಾತು ದರ ನಿಗದಿಗೆ ರಾಜಕೀಯ ಪಕ್ಷಗಳ ಸಭೆ
ಮುಂಬರುವ ಲೋಕಸಭೆ ಚುನಾವಣೆ-೨೦೨೪ರ ಹಿನ್ನೆಲೆ ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಮುದ್ರಣ ಮತ್ತು ವಿದ್ಯುನ್ಮಾನ ಜಾಹೀರಾತು ದರಗಳ ಕುರಿತಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ರಘುನಂದನ್ ಮೂರ್ತಿ ಚರ್ಚಿಸಿ ದರ ಅಂತಿಮಗೊಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ, ವಿವಿಧ ರಾಜಕೀಯ ಪಕ್ಷಗಳು ಹಾಗೂ ಚುನಾವಣಾ ಅಭ್ಯರ್ಥಿಗಳು ನೀಡುವ ಟಿವಿ ಮಾಧ್ಯಮ, ರೆಡೀಯೋ ಹಾಗೂ ಪತ್ರಿಕಾ ಮಾಧ್ಯಮಗಳ ಚುನಾವಣಾ ಜಾಹೀರಾತುಗಳಿಗೆ ನಿಗದಿತ ದರ ನಿಗದಿಪಡಿಸುವ ಪೂರ್ವ ಸಿದ್ಧತಾ ಸಭೆ ನಡೆಯಿತು.
ಸತೀಶ ಕುಲಕರ್ಣಿ ಬದುಕು, ಬರಹ ನವ ಪೀಳಿಗೆಗೆ ಪ್ರೇರಣಾದಾಯಕ
ಸಾಹಿತಿ ಸತೀಶ ಕುಲಕರ್ಣಿ ಅವರ ಬದುಕು, ಬರಹ ಮತ್ತು ಸಮಾಜದ ಬದಲಾವಣೆಗೆ ನಡೆದ ಹೋರಾಟಗಳು ನವ ಪೀಳಿಗೆಗೆ ಪ್ರೇರಣಾದಾಯಕ ಎಂದು ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲಿಂಗಯ್ಯ ಹಿರೇಮಠ ಅಭಿಪ್ರಾಯಪಟ್ಟರು.ನಗರದ ಹಂಚಿನಮನಿ ಆರ್ಟ್ ಗ್ಯಾಲರಿಯಲ್ಲಿ ಭಾವ ಸಂಗಮ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸತೀಶ ಕುಲಕರ್ಣಿ ಅವರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಸೊಲಬಕ್ಕನವರ ಕಳಕಳಿ ನಮಗೆ ಪ್ರೇರಣೆ
ಬಹುಸಂಖ್ಯಾತ ಶ್ರಮಿಕ ವರ್ಗವನ್ನು ಪ್ರತಿನಿಧಿಸಿ ಹಳ್ಳಿಗರ ಮತ್ತು ಸಾಮಾನ್ಯರ ಜನರ ಬಗೆಗಿದ್ದ ಡಾ. ಟಿ.ಬಿ. ಸೊಲಬಕ್ಕನವರ ಕಳಕಳಿ ನಮಗೆ ಪ್ರೇರಣೆ ಎಂದು ಹುಬ್ಬಳ್ಳಿಯ ರಾಮಕೃಷ್ಣಾಶ್ರಮದ ರಘುವೀರಾನಂದ ಸ್ವಾಮೀಜಿ ಹೇಳಿದರು. ಭಾನುವಾರ ತಾಲೂಕಿನ ಗೊಟಗೋಡಿಯ ಶಿಲ್ಪಕಲಾ ಕುಟೀರದಲ್ಲಿ ಜರುಗಿದ ಡಾ. ಟಿ.ಬಿ. ಸೊಲಬಕ್ಕನವರ ತೃತೀಯ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.
ಹೆಲ್ಮೇಟ್‌ ಕಡ್ಡಾಯಕ್ಕೆ ತಿಂಗಳ ಗಡುವು
ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚಳವಾಗಿದ್ದು, ಅಪಘಾತ ಹೆಚ್ಚುತ್ತಿವೆ. ಅದಕ್ಕಾಗಿ ಹೆಲ್ಮೆಟ್‌ ಕಡ್ಡಾಯ ಸೇರಿದಂತೆ ಸಂಚಾರ ನಿಯಮ ಪಾಲನೆ ಕುರಿತು ಒಂದು ತಿಂಗಳ ಕಾಲ ಜಾಗೃತಿ ಮೂಡಿಸಲಾಗುವುದು. ನಂತರ ಹೆಲ್ಮೆಟ್‌ ಕಡ್ಡಾಯ ಜಾರಿಗೊಳಿಸಲಾಗುವುದು ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ತಿಳಿಸಿದರು.
ಹೋರಿ ಹಬ್ಬದ ವಿಚಾರವಾಗಿ ಮಾರಾಮಾರಿ
ಹಾವೇರಿ: ಕೊಬ್ಬರಿ ಹೋರಿ ಹಬ್ಬದ ವಿಚಾರಕ್ಕೆ ಸಂಬಂಧಿಸಿದಂತೆ ಅನ್ಯ ಕೋಮಿನವರಿಂದ ಹಿಂದೂ ಯುವಕರ ಮೇಲೆ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದ್ದು, ಈ ಸಂಬಂಧ ಮುಸ್ಲಿಂ ಸಮುದಾಯಕ್ಕೆ ಸೇರಿದ 15 ಜನರ ಮೇಲೆ ಪ್ರಕರಣ ದಾಖಲಾಗಿದೆ.ಕೋಳೂರು ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಅನ್ಯ ಕೋಮಿನವರಿಗೆ ಸೇರಿದ ಹೋರಿಯನ್ನು ಹಿಂದೂ ಯುವಕರು ಹಿಡಿದಿದ್ದರು.
ಮಕ್ಕಳಿಗೆ ಮಾನವೀಯ ಮೌಲ್ಯಗಳ ಬಗ್ಗೆ ತಿಳಿಹೇಳಿ
ಕನ್ನಡಪ್ರಭ ವಾರ್ತೆ ಸವಣೂರುಮಕ್ಕಳಿಗೆ ಮಾನವೀಯ ಮೌಲ್ಯಗಳು ಕುರಿತು ತಿಳಿಸುವಂತಹ ಕಾರ್ಯಕ್ರಮಗಳು ಆಗಬೇಕು ಎಂದು ಶಿರಬಡಗಿ ಗ್ರಾಪಂ ಅಧ್ಯಕ್ಷ ತೇಜಪ್ಪ ಕಡಿಮನಿ ಹೇಳಿದರು.ಶಿರಬಡಗಿ ಪ್ರೌಢಶಾಲೆಯಲ್ಲಿ ನಡೆದ ಮಕ್ಕಳ ವಿಶೇಷ ಗ್ರಾಮಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಿಗೆ ಸಂಬಂಧಿಸಿದಂತೆ ವಿಶೇಷ ಗ್ರಾಮಸಭೆ ಕೈಗೊಳ್ಳುವುದರೊಂದಿಗೆ ಬ್ಯಾಂಕ್ ವ್ಯವಹಾರದ ಕುರಿತು ಮಕ್ಕಳು ಮಾಹಿತಿ ಪಡೆಯಬಹುದು. ಬಾಲಕಾರ್ಮಿಕರ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕಾನೂನಿನ ಕುರಿತು ಪ್ರತಿ ಶಾಲೆಯಲ್ಲಿಯೂ ಪ್ರತಿವರ್ಷ ಕಾರ್ಯಕ್ರಮಗಳು ನಡೆಯಬೇಕು ಎಂದು ಹೇಳಿದರು.
ವಿಶ್ವ ಏಡ್ಸ್ ದಿನ: ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಿ
ವಿಶ್ವ ಏಡ್ಸ್ ದಿನ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ವಿಶೇಷವಾಗಿ ಆಚರಣೆ ಮಾಡಬೇಕು. ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೇ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ವಿಶೇಷ ಚಟುವಟಿಕೆ, ಉಪನ್ಯಾಸ, ಎಚ್.ಐ.ವಿ. ಏಡ್ಸ್ ಕುರಿತು ಅರಿವು, ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
ತಾಲೂಕಿಗೊಂದು ತಂಬಾಕು ಮುಕ್ತ ಗ್ರಾಮ ಘೋಷಿಸಿ
ನವೆಂಬರ್ ತಿಂಗಳಾಂತ್ಯದೊಳಗೆ ಎಲ್ಲ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳು ತಂಬಾಕು ಮುಕ್ತ ಪ್ರದೇಶವೆಂದು ಘೋಷಣೆಯಾಗಬೇಕು. ಕನಿಷ್ಠ ಪ್ರತಿ ತಾಲೂಕಿನ ಒಂದು ಗ್ರಾಮವನ್ನು “ತಂಬಾಕು ಮುಕ್ತ ಗ್ರಾಮ” ಎಂದು ಘೋಷಣೆಯಾಗಬೇಕು. ಎಲ್ಲೆಡೆ ನಾಮಫಲಕ ಅಳವಡಿಕೆ ಪೂರ್ಣಗೊಳ್ಳಬೇಕು. ಜಿಲ್ಲಾಧಿಕಾರಿಗಳ ಕಚೇರಿಯಿಂದಲೇ ಈ ಕೆಲಸ ಆರಂಭಿಸಬೇಕು ಎಂದು ರಾಷ್ಟ್ರೀಯ ತಂಬಾಕು ನಿಯಂತ್ರಣ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅಧಿಕಾರಿಗಳಿಗೆ ತಾಕೀತು ಮಾಡಿದರು.
  • < previous
  • 1
  • ...
  • 469
  • 470
  • 471
  • 472
  • 473
  • 474
  • 475
  • 476
  • 477
  • ...
  • 485
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved