• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಗರಸಭೆ ಅವ್ಯವಸ್ಥೆ ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಸಾರ್ವಜನಿಕರಿಗೆ ಸ್ಪಂದಿಸದ ನಗರಸಭೆ ಅಧಿಕಾರಿಗಳ ವಿರುದ್ಧ ಹಾಗೂ ನಗರಸಭೆಯ ಅವ್ಯವಸ್ಥೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ನಗರಸಭೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.ನಗರ ವ್ಯಾಪ್ತಿಯಲ್ಲಿ ೧೫ ದಿನಗಳಿಗೊಮ್ಮೆ ಕುಡಿಯುವ ನೀರು ಪೂರೈಸಲಾಗುತ್ತಿದ್ದು, ಸಾರ್ವಜನಿಕರು ನೀರಿನ ಸೌಕರ್ಯದಿಂದ ವಂಚಿತರಾಗಿದ್ದಾರೆ. ಚರಂಡಿ ನಿಯಮಿತವಾಗಿ ಸ್ವಚ್ಛಗೊಳಿಸದೆ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಲಾಯಿತು.
ಅಸಮರ್ಪಕ ಬರ ಪರಿಹಾರ: ಹಣ ಸಂಗ್ರಹಿಸಿಸರ್ಕಾರಕ್ಕೆ ನೀಡಲು ಮುಂದಾದ ರೈತರು
ಬರ ಪರಿಹಾರವಾಗಿ 2 ಸಾವಿರ ರುಪಾಯಿ ನೀಡಿರುವ ಸರ್ಕಾರದ ಕ್ರಮ ಖಂಡಿಸಿ, ಸರ್ಕಾರ ನಡೆಸಲು ಸಿಎಂ, ಡಿಸಿಎಂಗೆ ನೀಡಲೆಂದು ಹಣ ಸಂಗ್ರಹಿಸಿ ರೈತರು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಪಟ್ಟಣದಲ್ಲಿ ನಡೆಯಿತು. ರೈತ ಮುಖಂಡರಾದ ಎಂ.ಎನ್. ನಾಯಕ್ ಹಾಗೂ ಮಾಲತೇಶ ಪೂಜಾರ ನೇತೃತ್ವದಲ್ಲಿ ಸವಣೂರು ತಹಸೀಲ್ದಾರ್ ಕಚೇರಿ ಎದುರು ರೈತರು ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಒತ್ತಾಯ
ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ಕೂಡಲೇ ತ್ವರಿತವಾಗಿ ತರಗತಿ ನಡೆಸಬೇಕು ಎಂದು ಒತ್ತಾಯಿಸಿ ಎಸ್‌ಎಫ್‌ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸೋಮವಾರ ತಾಲೂಕಿನ ಗಾಂಧಿಪುರ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಪ್ರಾಂಶುಪಾಲ ಡಿ.ಟಿ. ಪಾಟೀಲರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಎಸ್. ಮಾತನಾಡಿ, ರಾಜ್ಯದಲ್ಲಿ ೪೩೦ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನ. ೨೩ರಿಂದ ರಾಜ್ಯದಲ್ಲಿ ತರಗತಿ ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದಾರೆ. ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಈಗ ಅತಿಥಿ ಉಪನ್ಯಾಸಕರ ಸರ್ಕಾರದ ಮಧ್ಯ ಸಂಘರ್ಷದಲ್ಲಿ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಭವಿಷ್ಯ ಹಾಳುಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಒತ್ತಾಯ
ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ಕೂಡಲೇ ತ್ವರಿತವಾಗಿ ತರಗತಿ ನಡೆಸಬೇಕು ಎಂದು ಒತ್ತಾಯಿಸಿ ಎಸ್‌ಎಫ್‌ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸೋಮವಾರ ತಾಲೂಕಿನ ಗಾಂಧಿಪುರ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಪ್ರಾಂಶುಪಾಲ ಡಿ.ಟಿ. ಪಾಟೀಲರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಎಸ್. ಮಾತನಾಡಿ, ರಾಜ್ಯದಲ್ಲಿ ೪೩೦ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನ. ೨೩ರಿಂದ ರಾಜ್ಯದಲ್ಲಿ ತರಗತಿ ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದಾರೆ. ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಈಗ ಅತಿಥಿ ಉಪನ್ಯಾಸಕರ ಸರ್ಕಾರದ ಮಧ್ಯ ಸಂಘರ್ಷದಲ್ಲಿ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಭವಿಷ್ಯ ಹಾಳುಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶತಮಾನದ ಕೆರೆಗೆ ಜೀವ ಕಳೆ
ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರೂಪಿಸಿರುವ "ಅಮೃತ ಸರೋವರ " ಅಭಿಯಾನ ಇಂದು ಫಲ ನೀಡಿದ್ದು, ಈ ಬರಗಾಲದಲ್ಲಿ ರೈತರಿಗೆ ಆಸರೆಯಾಗಿದೆ.ಈ ಅಭಿಯಾನದಿಂದ ತಾಲೂಕಿನ ಶಿರಗಂಬಿ ಗ್ರಾಮದಲ್ಲಿ ಶತಮಾನದ ಕೆರೆಗೆ ಜೀವ ಕಳೆ ಬಂದಿದೆ. ಬರಗಾಲದ ಈ ಸಂದರ್ಭದಲ್ಲಿ ನೀರಿನ ಬವಣೆ ನೀಗಿಸಿದೆ. ೨೦೨೨-೨೩ನೇ ಸಾಲಿನಲ್ಲಿ ಕೈಗೊಂಡ ಈ ಕಾಮಗಾರಿಗೆ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸರ್ವ ಸದಸ್ಯರು, ಗ್ರಾಮದ ಜನತೆ ಕೈ ಜೋಡಿಸಿದ್ದರು.
ಮುಂಗಾರು ಹೋಯ್ತು, ಹಿಂಗಾರು ಬಿತ್ತನೆಗೂ ಬರ!
ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಭೀಕರ ಬರ ಎದುರಾಗಿ ಈಗಾಗಲೇ ರೈತರು ಸಂಕಷ್ಟ ಎದುರಿಸುತ್ತಿದ್ದು, ಹಿಂಗಾರು ಬಿತ್ತನೆಗೂ ಈಗ ಬರಸಿಡಿಲು ಎರಗಿದೆ. ಇದರಿಂದ ಜಿಲ್ಲೆಯಲ್ಲಿ ಶೇ. 50ರಷ್ಟೂ ಬಿತ್ತನೆ ಆಗದೇ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.ಅಕ್ಟೋಬರ್‌ನಲ್ಲಿ ಹಿಂಗಾರು ಬಿತ್ತನೆ ಕಾರ್ಯ ಆರಂಭವಾಗಬೇಕಿತ್ತು. ಆದರೆ, ಹಿಂಗಾರು ಮಳೆಯೂ ಕಾಲಕ್ಕೆ ತಕ್ಕಂತೆ ಬಾರದ ಹಿನ್ನೆಲೆ ನವೆಂಬರ್‌ನಲ್ಲಿ ರೈತರು ಹಿಂಗಾರು ಬಿತ್ತನೆ ಮಾಡಿದ್ದಾರೆ. ನವೆಂಬರ್‌ನಲ್ಲಿ ಭರವಸೆ ಮೂಡಿಸಿದ್ದ ಮಳೆರಾಯನನ್ನು ನಂಬಿದ ರೈತರು ಜಿಲ್ಲೆಯಲ್ಲಿ ಜೋಳ, ಗೋವಿನಜೋಳ, ಗೋದಿ, ಹೆಸರು, ಅಲಸಂದೆ, ಸೂರ್ಯಕಾಂತಿ, ಇತರ ಬೀಜ ಬಿತ್ತನೆ ಮಾಡಿದ್ದಾರೆ.
ಬಿಸಿಯೂಟ ನೌಕರರ ಧರಣಿ, ಪ್ರತಿಭಟನಾನಿರತ ಮಹಿಳೆ ಅಸ್ವಸ್ಥ
ಬಿಸಿಯೂಟ ತಯಾರಕರು ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ಜಿಲ್ಲಾಡಳಿತ ಭವನದ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸಂದರ್ಭದಲ್ಲಿ ಭಾನುವಾರ ಪ್ರತಿಭಟನಾನಿರತ ಬಿಸಿಯೂಟ ಕಾರ್ಯಕರ್ತೆಯೊಬ್ಬರು ಅಸ್ವಸ್ಥಗೊಂಡರು. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಯಿತು.ಲಲಿತಾ ಸುರೇಶ ಮೊಟೇಬೆನ್ನೂರ ಅಸ್ವಸ್ಥಗೊಂಡ ಬಿಸಿಯೂಟ ಕಾರ್ಯಕರ್ತೆಯಾಗಿದ್ದು, ಸದ್ಯ ಚೇತರಿಸಿಕೊಂಡಿದ್ದಾರೆ. ಕಳೆದ ಮೂರು ದಿನಗಳಿಂದ ಬಿಸಿಲು, ರಾತ್ರಿಯನ್ನು ಲೆಕ್ಕಿಸದೇ ಪ್ರತಿಭಟನಾ ಸ್ಥಳದಲ್ಲಿಯೇ ಅಡುಗೆ ತಯಾರಿಸಿ ಧರಣಿ ಸತ್ಯಾಗ್ರಹ ಮುಂದುವರಿಸಿದ್ದರೂ ಈ ವರೆಗೂ ಯಾವ ಅಧಿಕಾರಿಯೂ ತಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಅಲ್ಲದೇ ಅಸ್ವಸ್ಥಗೊಂಡ ಮಹಿಳೆಯ ಆರೋಗ್ಯ ವಿಚಾರಿಸದ ಇಲಾಖೆ ಅಧಿಕಾರಿಗಳ ನಡೆಗೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಮೂರನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ನೌಕರರ ಹೋರಾಟ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ತಯಾರಕರು ಹಾವೇರಿ ಜಿಲ್ಲಾಡಳಿತ ಭವನದ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಶನಿವಾರವೂ ಮುಂದುವರಿದಿದ್ದು, ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಈ ವೇಳೆ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ) ಜಿಲ್ಲಾ ಸಮಿತಿ ಪ್ರಮುಖರು ಮಾತನಾಡಿ, ಬಿಸಿಯೂಟ ತಯಾರಕರನ್ನು ಏಪ್ರಿಲ್ ೧೦ರ ಮೊದಲು ಕೆಲಸ ಮಾಡುತ್ತಿರುವ ಅಡುಗೆಯವರನ್ನೇ ಮುಂದುವರಿಸಬೇಕೆಂದು ಆದೇಶವಿದ್ದರೂ ಆಯುಕ್ತರು ಅಡುಗೆಯವರನ್ನು ಮಾರ್ಚ್‌ ೩೧ಕ್ಕೆ ಬಿಡುಗಡೆಗೊಳಿಸಿ ಜೂ. ೧ಕ್ಕೆ ಪುನಃ ನೇಮಕಾತಿ ಮಾಡಿಕೊಳ್ಳುವಂತೆ ಆದೇಶ ಮಾಡಿದ್ದು, ಅದನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಟಿಸಿಗಳನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಿ
ಕಡಿಮೆ ಸಾಮರ್ಥ್ಯದ ವಿದ್ಯುತ್ ಪರಿವರ್ತಕಗಳನ್ನು ಅವಶ್ಯಕತೆಗೆ ಅನುಗುಣವಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ನೀಡುವಂತೆ ಶಾಸಕ ಶ್ರೀನಿವಾಸ ಮಾನೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಾನಗಲ್ಲದ ಹೆಸ್ಕಾಂ ಮತ್ತು ಕೆಪಿಟಿಸಿಎಲ್‌ನ ಹಿರಿಯ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದ್ದಾರೆ. ವಿದ್ಯುತ್ ಪರಿವರ್ತಕಗಳ ದುರಸ್ತಿ ಕಾರ್ಯ ಚುರುಕುಗೊಳಿಸಬೇಕು. ಶಾಲಾ ಮಕ್ಕಳು ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಳಜಿ ವಹಿಸಬೇಕು ಎಂದು ಸೂಚಿಸಿದ್ದಾರೆ.
ಕುಡಿವ ನೀರಿನ ಸಮಸ್ಯೆ ಉದ್ಭವಿಸದಂತೆ ಎಚ್ಚರ ವಹಿಸಿ
ಗ್ರಾಪಂ ವಂತಿಕೆ ಹಣದಿಂದ ಬರ ನಿರ್ವಹಣೆ ಮಾಡಬೇಕು. ನೀರಿನ ಸಮಸ್ಯೆ ಉದ್ಭವಿಸದಂತೆ ಅಧಿಕಾರಿಗಳು ಎಚ್ಚರವಹಿಸಬೇಕು, ನಿರ್ಲಕ್ಷ್ಯ ಮಾಡಬಾರದು ಎಂದು ಶಾಸಕ ಬಸವರಾಜ ಶಿವಣ್ಣನವರ ಸೂಚಿಸಿದರು. ಬ್ಯಾಡಗಿ ಪಟ್ಟಣದ ತಾಪಂ ಸುವರ್ಣ ಸೌಧದಲ್ಲಿ ಶನಿವಾರ ಜರುಗಿದ ಬರಗಾಲದ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು. ಕೇವಲ ಸರ್ಕಾರದ ಹಾಗೂ ಶಾಸಕರ ಕೆಲಸ ಮಾತ್ರವಲ್ಲ, ಸರ್ಕಾರದ ಕಡೆಗೆ ಬೊಟ್ಟು ಮಾಡಿ ತೋರಿಸದೇ ಸರ್ವ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರು ಪಿಡಿಒಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಒಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
  • < previous
  • 1
  • ...
  • 500
  • 501
  • 502
  • 503
  • 504
  • 505
  • 506
  • 507
  • 508
  • ...
  • 522
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved