• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧಿವೇಶನ: ವಿರೋಧ ಪಕ್ಷದ ಪ್ರಶ್ನೆಗೆ ಉತ್ತರಿಸಲು ಸರ್ಕಾರ ಸಿದ್ಧ
ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿ, ಅಧ್ಯಕ್ಷರ ನೇಮಕಾತಿಗೆ ಮೊದಲ ಹಂತದಲ್ಲಿ ಶಾಸಕರನ್ನು ಪರಿಗಣಿಸಲಾಗುವುದು. ನಾನು ಹಾಗೂ ಉಪಮುಖ್ಯಮಂತ್ರಿಗಳು ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ವರಿಷ್ಠರಿಗೆ ನೀಡಲಾಗಿದ್ದು, ಅನುಮತಿಯನ್ನು ನಿರೀಕ್ಷಿಸಲಾಗಿದೆ ಎಂದರು.
ಶೈಕ್ಷಣಿಕ ಕ್ರಾಂತಿಗೆ ಸರ್ಕಾರ ಸಿದ್ಧ
ಪ್ರಾಥಮಿಕ ಶಾಲೆಯ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪಪ್ರತಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ 5 ಕೆಪಿಎಸ್ ಶಾಲೆಯನ್ನು ಆರಂಭಿಸಲು ನಿರ್ಧರಿಸಲಾಗಿದ್ದು, ಅಗತ್ಯಕ್ಕೆ ತಕ್ಕಂತೆ ಶಿಕ್ಷಕರ ನೇಮಕ ಮಾಡುವ ಮೂಲಕ ರಾಜ್ಯದಲ್ಲಿ ಶೈಕ್ಷಣಿಕ ಕ್ರಾಂತಿಗೆ ಸರ್ಕಾರ ಸಿದ್ಧವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.ಬುಧವಾರ ಕರ್ನಾಟಕದ ತಿರುಪತಿ ಎಂದೇ ಖ್ಯಾತಿ ಪಡೆದಿರುವ ಕದರಮಂಡಲಗಿ ಗ್ರಾಮದಲ್ಲಿ ಹಳೇ ವಿದ್ಯಾರ್ಥಿಗಳು ₹1.16 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಪ್ರಾಥಮಿಕ ಶಾಲೆಯ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರಿ ಶಾಲೆಯಲ್ಲಿ ಓದಿ ಸಾಧನೆ ಮಾಡಿದವರಿದ್ದಾರೆ. ಅವರೆಲ್ಲರೂ ತಾವು ಕಲಿತ ಶಾಲೆಗೆ ಸಾಧ್ಯವಾದಷ್ಟು ಧನಸಹಾಯ ಮಾಡಿದ್ದೇ ಆದಲ್ಲಿ ಸರ್ಕಾರದ ಹೊರೆ ಇಳಿಸುವುದರ ಜೊತೆಗೆ ದೇಶದಲ್ಲಿಯೇ ರಾಜ್ಯದ ಶಿಕ್ಷಣ ಇಲಾಖೆ ಮಾದರಿಯಾಗಲಿದೆ ಎಂದರು.
೨ಎ ಮೀಸಲಾತಿ ಸಿಗುವವರೆಗೂ ಹೋರಾಟ
ನಮ್ಮ ಸಮಾಜದ ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗ ಸಿಗಲಿ ಎಂಬ ಸದುದ್ದೇಶದಿಂದ ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ಸಿಗುವ ವರೆಗೂ ಹೋರಾಟ ಮಾಡುವ ಸಂಕಲ್ಪ ಮಾಡಿದ್ದೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.ಲಿಂಗಾಯತ ಪಂಚಮಸಾಲಿ ಸಮಾಜವನ್ನು ೨ಎ ಮೀಸಲಾತಿ ಅನುಷ್ಠಾನಕ್ಕೆ ಹಾಗೂ ಲಿಂಗಾಯತ ಉಪ ಸಮಾಜಗಳನ್ನು ಕೇಂದ್ರ ಸರ್ಕಾರ ಒಬಿಸಿ ಮೀಸಲಾತಿಗೆ ಸೇರ್ಪಡೆಗೊಳಿಸಿ ಶಿಫಾರಸು ಮಾಡುವಂತೆ ಹಕ್ಕೊತ್ತಾಯಿಸಿ ರಾಜ್ಯಾದಂತ ಆರಂಭವಾಗಿರುವ ೬ನೇ ಹಂತದ ಚಳವಳಿಗೆ ತಾಲೂಕಿನ ಅಬಲೂರು ಗ್ರಾಮದಲ್ಲಿನ ಸರ್ವಜ್ಞನ ಕಂಚಿನ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಹಾವೇರಿ ಜಿಲ್ಲೆಯಾದ್ಯಂತ ಕೈಗೊಳ್ಳುವ ಪ್ರವಾಸಕ್ಕೆ ಚಾಲನೆ ನೀಡಿ ಮಾತನಾಡಿದರು.
ಸ್ಥಳೀಯ ಕಬ್ಬು ಬೆಳೆಗಾರರಿಗೆ ಸಿಗದ ಆದ್ಯತೆ
ಸುಮಾರು ವರ್ಷಗಳಿಂದ ತಾಲೂಕಿನಲ್ಲಿ ಸಕ್ಕರೆ ಕಾರ್ಖಾನೆಗಳಿಲ್ಲದ ಕಾರಣ ಕಬ್ಬು ಬೆಳೆಯಲು ರೈತರು ನಿರಾಸಕ್ತಿ ತೋರುತ್ತಿದ್ದರು. ಆದರೆ ಕೋಣನಕೇರಿ ಹತ್ತಿರದ ವಿಐಎನ್‌ಪಿ ಸಕ್ಕರೆ ಕಾರ್ಖಾನೆ ಸ್ಥಾಪನೆಯಿಂದಾಗಿ ತಾಲೂಕಿನಲ್ಲಿ ಲಕ್ಷಕ್ಕೂ ಅಧಿಕ ಎಕರೆಯಷ್ಟು ಕಬ್ಬು ಬೆಳೆದಿದ್ದಾರೆ. ಆದರೆ ಸ್ಥಳೀಯರಿಗೆ ಆದ್ಯತೆ ನೀಡದೆ ಮುಂಡಗೋಡ, ಕಲಘಟಗಿ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಸಂವಿಧಾನವನ್ನು ಪೂಜ್ಯವಾಗಿ ಕಂಡರೆ ಅದರ ಆಶಯಕ್ಕೆ ಗೌರವ
ನಮಗೆ ನಾವೇ ಅಂಗೀಕರಿಸಿದ ಸಂವಿಧಾನವನ್ನು ಪೂಜ್ಯತೆಯಿಂದ ಕಾಣುವ ಜೊತೆಗೆ ಸಮಾನತೆಗಾಗಿ ಆಚರಿಸಿ ಅಳವಡಿಸಿಕೊಳ್ಳುವ ಇಚ್ಛಾಶಕ್ತಿ ನಮ್ಮದಾದರೆ ಸಂವಿಧಾನದ ಆಶಯಕ್ಕೆ ದೊಡ್ಡ ಗೌರವ ಸಿಕ್ಕಂತಾಗುತ್ತದೆ ಎಂದು ಹಾನಗಲ್ಲ ಪೊಲೀಸ್‌ ವೃತ್ತ ನಿರೀಕ್ಷಕ ಎಸ್.ಆರ್. ಶ್ರೀಧರ ನುಡಿದರು.
ತಿರುಗದ ಕಬ್ಬಿನ ಗಾಣ, ಬೆಲ್ಲ ತಯಾರಿಕೆಗೆ ಕಹಿ
ಕಬ್ಬಿನ ಗಾಣಗಳು ತಿರುಗುತ್ತಿಲ್ಲ, ಬೆಲ್ಲ ತಯಾರಿಕೆಗೆ ಕಹಿ ಅನುಭವವಾಗಿದೆ. ಸಕ್ಕರೆ ಕಾರ್ಖಾನೆ ಭರದಿಂದ ಕಬ್ಬು ನುರಿಸುತ್ತಿವೆ. ಆದರೆ ಗಾಣ ನೆಚ್ಚಿದವರು ಹಣೆಗೆ ಕೈ ಹಚ್ಚಿ ಚಿಂತೆಗೊಳಗಾಗಿದ್ದಾರೆ, ಹಾನಗಲ್ಲ ತಾಲೂಕು ಭತ್ತ, ಕಬ್ಬು ಬೆಳೆದು ಹಸಿವು ನೀಗಿಸಿ, ಸಿಹಿ ಉಣಿಸಿದ ನಾಡು. ೯೦೦ ಕೆರೆಗಳು, ಧರ್ಮಾ ವರದಾ ನದಿ ಇರುವ ಈ ತಾಲೂಕಿನಲ್ಲಿ ಬೆಲ್ಲಕ್ಕಾಗಿಯೇ ಎಕರೆ, ಅರ್ಧ ಎಕರೆ ಕಬ್ಬು ಹಾಕಿಕೊಂಡು ಗಾಣಗಳಿಗೆ ಹೋಗಿ ಬೆಲ್ಲ ಮಾಡಿಸಿಕೊಂಡು, ಇಡೀ ವರ್ಷ ಬಳಸುತ್ತಿದ್ದರು.
ಪರಿಹಾರ ಘೋಷಿಸಿಯೇ ಜಿಲ್ಲೆಗೆ ಮುಖ್ಯಮಂತ್ರಿ ಬರಲಿ
ರೈತಪರ ಕಾಳಜಿಯಿದ್ದರೇ ಬರಪೀಡಿತ ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರದ ಮೊತ್ತದಲ್ಲಿ ರಾಜ್ಯ ಸರ್ಕಾರದ ಪಾಲೆಷ್ಟು ಎಂಬುದನ್ನು ಘೋಷಣೆ ಮಾಡಿಯೇ ಬರಬೇಕೆಂದು ರೈತ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ ಆಗ್ರಹಿಸಿದರು.
ಬಸ್‌ ಇಲ್ಲದೇ ನಿಲ್ದಾಣಗಳಲ್ಲಿ ಜನಜಾತ್ರೆ
ಕಳೆದ ಕೆಲವು ದಿನಗಳಿಂದ ಬಸ್‌ ಪ್ರಯಾಣಿಕರ ಪರದಾಟ ಮಿತಿಮೀರಿದೆ. ಬಸ್‌ ನಿಲ್ದಾಣದಲ್ಲಿ ಇಡೀ ದಿನ ಪ್ರಯಾಣಿಕರ ಜಾತ್ರೆಯೇ ನೆರೆದಿರುತ್ತದೆ. ಯಾವ ಬಸ್‌ಗಳಲ್ಲೂ ಹತ್ತಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು, ಬಸ್‌ ಪ್ರಯಾಣವೇ ಸಾಕು ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.ಕಳೆದ ಕೆಲವು ದಿನಗಳಿಂದ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರ ಬವಣೆ ಹೇಳತೀರದಾಗಿದೆ. ಅದರಲ್ಲೂ ಹಬ್ಬ, ಹುಣ್ಣಿಮೆ ಬಂತೆಂದರೆ ನಿಲ್ದಾಣದಲ್ಲೇ ಜಾತ್ರೆಯ ವಾತಾವರಣ ಕಂಡುಬರುತ್ತಿದೆ. ಸೋಮವಾರ ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಜಿಲ್ಲೆಯಿಂದಲೇ ಸಾವಿರಾರು ಪ್ರಯಾಣಿಕರು ತೆರಳಿದ್ದಾರೆ. ಒಂದು ಬಸ್‌ ನಿಲ್ದಾಣ ಪ್ರವೇಶಿಸುತ್ತಿದ್ದಂತೆ, ಪಾರ್ಕಿಂಗ್ ಮಾಡುವ ಮುನ್ನವೇ ಜನ ಮುತ್ತಿಗೆ ಹಾಕುತ್ತಿದ್ದಾರೆ.
ನ.28ರಿಂದ ಮೂರು ದಿನ ಕಾಗಿನೆಲೆಯಲ್ಲಿ ಕನಕ ಜಯಂತ್ಯುತ್ಸವ
ಕಾಗಿನೆಲೆ ಕನಕ ಗುರುಪೀಠದಲ್ಲಿ ಕನಕ ಜಯಂತ್ಯುತ್ಸವದ ನಿಮಿತ್ತ ನ.28ರಿಂದ 30ರವರೆಗೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನ.29ರಂದು ಆಯೋಜಿಸಿರುವ ಭಾವೈಕ್ಯ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಕನಕಗುರುಪೀಠದ ಆಡಳಿತಾಧಿಕಾರಿ ಎಸ್.ಎಫ್.ಎನ್. ಗಾಜೀಗೌಡ್ರ ತಿಳಿಸಿದರು.
ಹೊಸತನವ ಬಿತ್ತಿ ಬೆಳೆಯುವ ಇಚ್ಛಾಶಕ್ತಿ ನಮ್ಮದಾಗಲಿ
ಉರುಳುವ ಕಾಲ ಚಕ್ರದಲ್ಲಿ ಹೂವುಗಳು ಅರಳಬೇಕಲ್ಲದೆ ಮುಳ್ಳುಗಳನ್ನು ಬೆಳೆಸುವುದು ಬೇಡ, ಹೊಸತನವ ಬಿತ್ತಿ ಬೆಳೆಯುವ ಇಚ್ಛಾಶಕ್ತಿ ನಮ್ಮದಾಗಬೇಕು ಎಂದು ಸಾಹಿತಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸತೀಶ ಕುಲಕರ್ಣಿ ನುಡಿದರು.ಇಲ್ಲಿನ ಅ.ನ.ಕುಂದಾಪೂರ ಹಾಗೂ ಬಿ.ಬಿ. ಪದಕಿ ಟ್ರಸ್ಟ್‌, ಮಂಥನ ವೇದಿಕೆ ಸಂಯುಕ್ತವಾಗಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ, ರಾಷ್ಟ್ರ, ರಾಜ್ಯ ಪ್ರಶಸ್ತಿ ಪುರಸ್ಕೃತರಿಗೆ ಸಮ್ಮಾನ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದರು.
  • < previous
  • 1
  • ...
  • 538
  • 539
  • 540
  • 541
  • 542
  • 543
  • 544
  • 545
  • 546
  • ...
  • 557
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved