ಮೂಡುಬಿದಿರೆ: ಹಿಂದೂ ಧರ್ಮ, ದೇವರು, ಸಂಸ್ಕೃತಿಯ ಬಗ್ಗೆ ಅವಾಚ್ಯ,ಅಶ್ಲೀಲ ಪದ ಪ್ರಯೋಗ ಮಾಡಿ ನಾಲಿಗೆ ಹರಿಯಬಿಟ್ಟಿರುವುದನ್ನು ಮುಂದುವರಿಸಿರುವ ಪ್ರೊ.ಕೆ.ಎಸ್ ಭಗವಾನ್ ವಿರುದ್ಧ ಮೊಕದ್ದಮೆ ದಾಖಲು ಮಾಡಿ ಬಂಧಿಸಬೇಕೆಂದು ಮೂಡುಬಿದಿರಿ ಶ್ರೀ ವೆಂಕಟರಮಣ ಮತ್ತು ಶ್ರೀ ಹನುಮಂತ ದೇವಸ್ಥಾನದ ಮೊಕ್ತೇಸರ ಪಡುಮಾರ್ನಾಡು ದಯಾನಂದ ಪೈ ಹೇಳಿದರು.ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮೂಡುಬಿದಿರೆ ತಾಲೂಕು ಕಚೇರಿ ಆವರಣದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಂದರ್ಭದಲ್ಲಿ ಮಾತನಾಡಿದರು.ಅಭಿವ್ಯಕ್ತಿ ಸ್ವಾತಂತ್ರದ ನೆಪದಲ್ಲಿ ಕೋಟ್ಯಾಂತರ ಹಿಂದೂಗಳ ಭಾವನೆಗಳಿಗೆ ನೋವನ್ನುಂಟುಮಾಡಿರುವ ಭಗವಾನ್ ಕೃತ್ಯವನ್ನು ಅವರು ಖಂಡಿಸಿದರಲ್ಲದೆ ಸರ್ಕಾರ ಈತನ ಬಂಧನಕ್ಕೆ ಯಾಕೆ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಪ್ರಶ್ನಿಸಿದರು. ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ನೀಡಲಾದ ಮನವಿ ಪತ್ರವನ್ನು ತೆರಿಗೆ ಸಲಹೆಗಾರ ಗಣೇಶ್ ರಾವ್ ವಾಚಿಸಿದರು. ಹಿಂದೂ ಜನಜಾಗೃತಿ ಸಮಿತಿಯ ಪ್ರಮುಖ್ ಜಾಹ್ನವಿ ಉಮೇಶ್ ಪೈ, ನೀತಾ ಪ್ರಭು, ಉದ್ಯಮಿ ಚಿದಾನಂದ ಎಸ್ ಸಫಲಿಗ, ಶ್ರೀ ವೆಂಕರಮಣ ದೇವಸ್ಥಾನದ ಮೊಕ್ತೇಸರ ಅಶೋಕ್ ಮಲ್ಯ, ತನಿಯಪ್ಪ ಕೋಟ್ಯಾನ್, ಪ್ರವೀಣ್ ಭಂಡಾರಿ,ಕಿಶೋರ್ ಭಂಡಾರಿ ದೇವದಾಸ್ ಕಾಮತ್, ಮುರಳೀಧರ ಕಾಮತ್, ಗೋವಿಂದ ಪ್ರಭು, ಮೋಹನ್ ಪ್ರಭು, ವಾಸ್ತು ತಜ್ಞ ರಾಘವೇಂದ್ರ ಭಂಡಾರ್ಕಾರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮೂಡುಬಿದಿರೆ: ಹಿಂದೂ ಜನ ಜಾಗೃತಿ ಸಮಿತಿ ಪ್ರತಿಭಟನೆ
ಹಿಂದೂ ಧರ್ಮ, ದೇವರು, ಸಂಸ್ಕೃತಿಯ ಬಗ್ಗೆ ಅವಾಚ್ಯ,ಅಶ್ಲೀಲ ಪದ ಪ್ರಯೋಗ ಮಾಡಿ ನಾಲಿಗೆ ಹರಿಯಬಿಟ್ಟಿರುವುದನ್ನು ಮುಂದುವರಿಸಿರುವ ಪ್ರೊ.ಕೆ.ಎಸ್ ಭಗವಾನ್ ವಿರುದ್ಧ ಮೊಕದ್ದಮೆ ದಾಖಲು ಮಾಡಿ ಬಂಧಿಸಬೇಕೆಂದು ಮೂಡುಬಿದಿರಿ ಶ್ರೀ ವೆಂಕಟರಮಣ ಮತ್ತು ಶ್ರೀ ಹನುಮಂತ ದೇವಸ್ಥಾನದ ಮೊಕ್ತೇಸರ ಪಡುಮಾರ್ನಾಡು ದಯಾನಂದ ಪೈ ಹೇಳಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.