ಸಾರಾಂಶ
ಸರ್ಕಾರದಿಂದ ಬಿಡುಗಡೆಯಾದ 2 ಕೋಟಿ ರು. ಅನುದಾನದ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗಳ ಪ್ರಾರಂಭಕ್ಕೆ ಹೆಚ್.ಎ. ಹಂಸ ಚಾಲನೆ ನೀಡಿದರು. ಈ ಸಂದರ್ಭ ಕಾಮಗಾರಿ ಗುಣಮಟ್ಟ ಕಾಪಾಡುವಂತೆ ಸೂಚನೆ ನೀಡಿದರು.
ಮಡಿಕೇರಿ: ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲೆಮಾಡು ಕಾಲೋನಿ ಹಾಗೂ ಕಾನ್ಶಿರಾಮ್ ನಗರದಲ್ಲಿ ಸರ್ಕಾರದಿಂದ ಬಿಡುಗಡೆಯಾದ 2 ಕೋಟಿ ರು. ಅನುದಾನದ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗಳ ಪ್ರಾರಂಭಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹೆಚ್ ಎ ಹಂಸ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು, ಹೊದ್ದೂರು ಗ್ರಾಮ ಪಂಚಾಯಿತಿಯ ಬಗ್ಗೆ ಶಾಸಕರಾದ ಡಾ ಮಂತರ್ ಗೌಡ ಅವರು ವಿಶೇಷ ಕಾಳಜಿ ವಹಿಸಿ ಅನುದಾನ ನೀಡುತ್ತಿದ್ದಾರೆ.ಪಾಲೆಮಾಡು ಮತ್ತು ಕಾನ್ಶಿರಾಮ ಕಾಲೋನಿಗೆ ತಲಾ ಒಂದು ಕೋಟಿ ರು. ಅನುದಾನ ನೀಡಿದ್ದಾರೆ ಎಂದು ಹೇಳಿದರು.
ಈ ಸಂದರ್ಭ ಕಾಮಗಾರಿಯ ಗುಣಮಟ್ಟವನ್ನು ಕಾಪಾಡುವಂತೆ ಗುತ್ತಿಗೆದಾರರಿಗೆ ಎಚ್.ಎ ಹಂಸ ಅವರು ಸೂಚನೆ ನೀಡಿದ್ದರು.ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಅನುರಾಧ, ಸದಸ್ಯರಾದ ಹಮೀದ್ , ಹೊನ್ನಪ್ಪ ಕುಸುಮಾವತ, ಮೊಣ್ಣಪ್ಪ ಹಾಗೂ ಗ್ರಾಮಸ್ಥರು ಇದ್ದರು.