ಹೋಮಿಯೋಪತಿಗೆ ಹೆಚ್ಚಿನ ಮಾನ್ಯತೆ ಬೇಕು: ಡಾ. ಎ.ಎಸ್. ಕುಮಾರ್

| Published : Sep 21 2025, 02:03 AM IST

ಹೋಮಿಯೋಪತಿಗೆ ಹೆಚ್ಚಿನ ಮಾನ್ಯತೆ ಬೇಕು: ಡಾ. ಎ.ಎಸ್. ಕುಮಾರ್
Share this Article
  • FB
  • TW
  • Linkdin
  • Email

ಸಾರಾಂಶ

ಆಳ್ವಾಸ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ವತಿಯಿಂದ ವಿದ್ಯಾಗಿರಿಯ ಮುಂಡ್ರುದೆಗುತ್ತು ಕೆ.ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ೨ ದಿನಗಳ ಪ್ರೊವಿನಿಯೋ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಿತು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ವೈಜ್ಞಾನಿಕ ಅಧ್ಯಯನಗಳ ಮೂಲಕ ಹೋಮಿಯೋಪತಿಗೆ ಇನ್ನೂ ಹೆಚ್ಚಿನ ಮಾನ್ಯತೆ ಸಿಗಬೇಕು ಎಂದು ದೆಹಲಿಯ ಕೇಂದ್ರೀಯ ಹೋಮಿಯೋಪತಿ ಸಂಶೋಧನಾ ಪರಿಷತ್‌ನ ವೈಜ್ಞಾನಿಕ ಸಲಹಾ ಮಂಡಳಿ ಅಧ್ಯಕ್ಷ ಡಾ. ಎ.ಎಸ್. ಕುಮಾರ್ ಮಿತ್ರಚಂದ್ರ ಧಾವಲೆ ಹೇಳಿದರು.ಆಳ್ವಾಸ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ವತಿಯಿಂದ ವಿದ್ಯಾಗಿರಿಯ ಮುಂಡ್ರುದೆಗುತ್ತು ಕೆ.ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ನಡೆಯುತ್ತಿರುವ ೨ ದಿನಗಳ ಪ್ರೊವಿನಿಯೋ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.

ಹೊಮಿಯೋಪತಿ ಪಠ್ಯಕ್ರಮದಲ್ಲಿ ಸಂಶೋಧನಾ ವಿಧಾನಶಾಸ್ತ್ರ ವಿಷಯವನ್ನು ಪರಿಚಯಿಸಿರುವುದು ಉತ್ತಮ ನಿರ್ಧಾರ. ಇದರಿಂದ ಹೋಮಿಯೋಪತಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ರೀತಿಯಲ್ಲಿ ಅಧ್ಯಯನ ಮಾಡಲು, ಸಂಶೋಧನೆ ನಡೆಸಲು ಮತ್ತು ಲೇಖನಗಳನ್ನು ಪ್ರಕಟಿಸಲು ಸಹಾಯವಾಗುತ್ತದೆ ಎಂದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಮಾತನಾಡಿ, ಭಾರತ ಅತ್ಯಂತ ಶ್ರೀಮಂತ ಮಾನವ ಸಂಪನ್ಮೂಲ ಹೊಂದಿದ ದೇಶ. ಈ ಸಂಪನ್ಮೂಲದ ಆರೋಗ್ಯಕ್ಕೆ ಎದುರಾಗುವ ಸಮಸ್ಯೆಯನ್ನು ಹೋಗಲಾಡಿಸುವಲ್ಲಿ ವೈದ್ಯಕೀಯ ಕ್ಷೇತ್ರಗಳು ಉತ್ತಮ ಕಾರ್ಯ ನಿರ್ವಹಿಸುತ್ತಿವೆ. ವೈಜ್ಞಾನಿಕ ಮನೋಧರ್ಮದ ಮೂಲಕ ಹೋಮಿಯೋಪತಿಯನ್ನು ಬೆಳೆಸಿ ಎಂದು ಕರೆ ನೀಡಿದರು.ಕಾರ್ಯಕ್ರಮದಲ್ಲಿ ಆಳ್ವಾಸ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ಮೆಡಿಕಲ್ ಕ್ಯಾಂಪ್‌ಗಳಿಗೆ ಸಹಕಾರ ನೀಡಿದ ಮೂಡುಬಿದಿರೆಯ ವಿವಿಧ ಸಮಾಜ ಸೇವಕರಾದ ಅಮರ್ ಕೋಟೆ, ಪುತ್ತಿಗೆ ಸೋಮನಾಥೇಶ್ವರ ದೇವಾಲಯದ ಅರ್ಚಕ ಅಡಿಗಲ್ ಅನಂತಕೃಷ್ಣ ಭಟ್, ಅಕ್ಷಯ್ ಜೈನ್, ಭಾರವಿ ಹಾಗೂ ಧರಣೇಂದ್ರ ಅವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಮೊಹಮ್ಮದ್ ಇಕ್ಬಾಲ್ ಕೆ., ಕಾಲೇಜಿನ ಆಡಳಿತಾಧಿಕಾರಿ ಡಾ. ಪ್ರಜ್ಞಾ ಆಳ್ವ, ಪ್ರಾಂಶುಪಾಲ ಡಾ. ಹೆರಾಲ್ಡ್ ರೋಷನ್ ಪಿಂಟೋ, ಕಾರ್ಯಕ್ರಮ ಸಂಯೋಜಕಿ ಡಾ. ವಸುಮತಿ ಕೋಡಿಕಲ್ ಉಪಸ್ಥಿತರಿದ್ದರು. ಉಪನ್ಯಾಸಕ ರಾಜೇಶ್ ಡಿಸೋಜ ನಿರೂಪಿಸಿದರು.