ಸಾರಾಂಶ
ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಸರ್ಜರಿ ಮೂಲಕ ಬಡ ರೋಗಿಗಳಿಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದೇನೆ ಎಂದು ಡಾ.ಸಾಲಿ ಮಂಜಪ್ಪ ತಿಳಿಸಿದರು.ರಾಷ್ಟ್ರೀಯ ಸತ್ಯಶೋಧನಾ ಸಮಿತಿ, ಅಪರಾಧ ತಡೆ ಮತ್ತು ಮಾನವ ಹಕ್ಕುಗಳ ರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸೇವಾ ಸಮಿತಿ, ಕರ್ನಾಟಕ ಶಾಮಿಯಾನ ದೀಪಾಲಂಕಾರ, ಹೂ ಅಲಂಕಾರಿಕ ಇತರೆ ಕಾರ್ಮಿಕರ ಸಂಘದ ಆಶ್ರಯದಲ್ಲಿ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರದಲ್ಲಿ ಡಾ.ಕದಂಬಿನಿ ಗಾಂಗೂಲಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.
ಜಿಲ್ಲಾಸ್ಪತ್ರೆಯಲ್ಲಿ ವೈದ್ಯನಾಗಿ ಸೇವೆ ಸಲ್ಲಿಸುತ್ತಿದ್ದಾಗ ಬಡವ-ಬಲ್ಲಿದ ಎನ್ನುವ ತಾರತಮ್ಯವಿಲ್ಲದೆ ಎಲ್ಲರಿಗೂ ಸಮಾನವಾದ ಚಿಕಿತ್ಸೆ ನೀಡುತ್ತಿದ್ದೆ. ಅದು ನನಗೆ ಆತ್ಮತೃಪ್ತಿ ತಂದಿದೆ. ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕರಿಸುತ್ತಿರುವುದು ಇನ್ನು ಹೆಚ್ಚಿನ ಸಾಧನೆಗೆ ಬೆಂಬಲಿಸಿದಂತಾಗುತ್ತದೆ ಎಂದು ಹೇಳಿದರು.ರಾಷ್ಟ್ರೀಯ ಸತ್ಯಶೋಧನಾ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಲೋಹಿತ್ಕುಮಾರ್, ಕರ್ನಾಟಕ ಶಾಮಿಯಾನ ದೀಪಾಲಂಕಾರ ಹೂ ಅಲಂಕಾರ ಹಾಗೂ ಕಾರ್ಮಿಕರ ಸಂಘದ ಅಧ್ಯಕ್ಷ ಪೂಜಾರಿ ಕರಿಯಪ್ಪ, ಲೇಖಕ ಹೆಚ್.ಆನಂದ್ಕುಮಾರ್, ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಮಂಜುನಾಥ್, ರೈತ ಸಂಘದ ಚೌಡಮ್ಮ, ಲಿಂಗರಾಜ್ ಶ್ರೀನಾಥ್, ರಾಜಶೇಖರ್, ಶಶಿಧರ್ ಇದ್ದರು.