ಸೆಪ್ಟೆಂಬರ್ 13 ರಂದು ದೇವನಹಳ್ಳಿಯಲ್ಲಿ ಬೃಹತ್ ಉದ್ಯೋಗ ಮೇಳ: 28,000+ ಉದ್ಯೋಗಗಳು ಕಾದಿವೆ!

| Published : Sep 07 2024, 01:41 AM IST / Updated: Sep 07 2024, 08:56 AM IST

ಸೆಪ್ಟೆಂಬರ್ 13 ರಂದು ದೇವನಹಳ್ಳಿಯಲ್ಲಿ ಬೃಹತ್ ಉದ್ಯೋಗ ಮೇಳ: 28,000+ ಉದ್ಯೋಗಗಳು ಕಾದಿವೆ!
Share this Article
  • FB
  • TW
  • Linkdin
  • Email

ಸಾರಾಂಶ

ಸೆಪ್ಟೆಂಬರ್ 13 ರಂದು ದೇವನಹಳ್ಳಿಯಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳದಲ್ಲಿ 116 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು, 28,000 ಕ್ಕೂ ಹೆಚ್ಚು ಉದ್ಯೋಗಾವಕಾಶಗಳೊಂದಿಗೆ ಆಗಮಿಸುತ್ತಿವೆ.

  ಕುಂದಾಣ :  ಸೆ. 13 ರಂದು ದೇವನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ‘ಬೃಹತ್ ಉದ್ಯೋಗಮೇಳ’ಕ್ಕೆ ಇದುವರೆಗೆ ೧೧೬ ಕಂಪನಿಗಳು ನೋಂದಾಯಿಸಿಕೊಂಡಿದ್ದು, ವಿವಿಧ ಕಂಪನಿ ಹಾಗೂ ಏಜೆನ್ಸಿಗಳ ವತಿಯಿಂದ ೨೮,೮೪೦ ಉದ್ಯೋಗಗಳಿಗೆ ಬೇಡಿಕೆ ಇದೆ ಎಂದು ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಹೇಳಿದರು.

ಸೆ. 13 ರಂದು ದೇವನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ‘ಬೃಹತ್ ಉದ್ಯೋಗಮೇಳ’ಕ್ಕೆ ಇದುವರೆಗೆ 116 ಕಂಪನಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಹೇಳಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗ್ರಾ ಜಿಲ್ಲಾಡಳಿತ ಭವನದ ಜಿಪಂ ಸಭಾಂಗಣದಲ್ಲಿ ನಡೆದ ಉದ್ಯೋಗ ಮೇಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಮಟ್ಟದ ಬೃಹತ್ ಉದ್ಯೋಗಮೇಳದಲ್ಲಿ ಅಂದಾಜು 120 ಕ್ಕೂ ಅಧಿಕ ನಿಯೋಜಕರು/ ಕಂಪನಿಗಳು ಹಾಗೂ 15,೦೦೦ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ಗುರಿ ಹೊಂದಲಾಗಿದೆ. ಇದುವರೆಗೂ ನೇರ ಸಂದರ್ಶನದ ಮೂಲಕ ಆಯ್ಕೆಗೆ ಅಂದಾಜು 8,೦೦೦ ಉದ್ಯೋಗಗಳಿಗೆ ಬೇಡಿಕೆ ಇದೆ ಹಾಗೂ ಏಜೆನ್ಸಿಗಳ ಮೂಲಕ ಆಯ್ಕೆಗೆ 20,೦೦೦ ಉದ್ಯೋಗಗಳಿಗೆ ಬೇಡಿಕೆ ಇದೆ ಎಂದು ಹೇಳಿದರು.

ಪ್ರತಿ ಗ್ರಾಪಂಗೆ 100 ಉದ್ಯೋಗಾಕಾಂಕ್ಷಿಗಳು ನೋಂದಣಿ ಹಾಗೂ ನಗರಸಭೆ ಮತ್ತು ಪುರಸಭೆ ವ್ಯಾಪ್ತಿಗಳಲ್ಲಿ ೨೦೦೦ ದಿಂದ ೩೦೦೦ ಉದ್ಯೋಗಾಕಾಂಕ್ಷಿಗಳು ನೋಂದಣಿ ಮಾಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಆನ್ಲೈನ್ ನಲ್ಲಿ ನೋಂದಾಯಿಸಿಕೊಳ್ಳದ ಉದ್ಯೋಗಾಕಾಂಕ್ಷಿಗಳಿಗೆ ಸ್ಥಳದಲ್ಲಿಯೇ ನೋಂದಣಿ ವ್ಯವಸ್ಥೆ ಕಲ್ಪಿಸಿ, ಉದ್ಯೋಗಾಕಾಂಕ್ಷಿಗಳ ವಿದ್ಯಾಬ್ಯಾಸಕ್ಕೆ ಅನುಗುಣವಾಗಿ ಕಂಪನಿಗಳ ಬಳಿ ಸಂದರ್ಶನಕ್ಕೆ ತೆರಳಲು ಮಾರ್ಗದರ್ಶನ ನೀಡಲು ಎನ್ಎಸ್ಎಸ್, ಎನ್ಸಿಸಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳನ್ನು ನೇಮಿಸಿ. ಉದ್ಯೋಗಾಂಕ್ಷಿಗಳಿಗೆ ನೆರವಾಗಲು ಕಂಪನಿ ವಿವರಗಳು, ಸಂದರ್ಶನಕ್ಕೆ ಹಾಜರಾಗಿ ಬೇಕಾದ ವಿಳಾಸದ ಸೂಚನಾ ಫಲಕಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಎಸ್ಎಸ್ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರುವ ಮತ್ತು ವಿವಿಧ ತರಬೇತಿ ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿ ಪಡೆದ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಉದ್ಯೋಗಮೇಳದಲ್ಲಿ ಭಾಗವಹಿಸಲು ಉದ್ಯೋಗಕಾಂಕ್ಷಿಗಳು https:/bangalorerural.nic.in/job-fair/5 ನೋಂದಾಯಿಸಿಕೊಳ್ಳಬಹುದಾಗಿದೆ ಎಂದರು.

ಜಿಪಂ ಸಿಇಒ ಡಾ.ಕೆ.ಎನ್ ಅನುರಾಧ ಮಾತನಾಡಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ, ಗ್ರಾಪಂ ಪಿಡಿಒ ಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದ್ದು, ಉದ್ಯೋಗ ಮೇಳಕ್ಕೆ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಕ್ರಮ ವಹಿಸಿ ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್.ಎಚ್, ಜಿಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕರಾದ ನರೇಂದ್ರ ಬಾಬು, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಗನ್ನಾಥ ಸೇರಿ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲೂಕುಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.