ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿ

| Published : Jun 07 2025, 03:03 AM IST

ಸಾರಾಂಶ

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಯ ಅಧಿಕಾರಿಗಳಿಗೆ ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಶಕ್ತಿ ಯೋಜನೆ, ಯುವನಿಧಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ವಿಳಂಬ ನೀತಿ ಅನುಸರಿದರೆ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ಫಾರುಖ್‌ ಡಾಲಾಯತ್ ಎಚ್ಚರಿಸಿದರು.

ಕುಷ್ಟಗಿ:

ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಇಲಾಖೆಯ ಅಧಿಕಾರಿಗಳು ಮಾಡಬೇಕೆಂದು ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ಫಾರುಖ್‌ ಡಾಲಾಯತ್ ಹೇಳಿದರು.

ತಾಲೂಕಿನ ಮೆಣೇದಾಳ ಗ್ರಾಮ ಪಂಚಾಯಿತಿಯಲ್ಲಿ ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯಿತಿಗಳ ಕಡೆ ಎಂಬ ಅಭಿಯಾನದ ಅಂಗವಾಗಿ ನಡೆದ ಗ್ರಾಪಂ ಮಟ್ಟದ ಮೇಲ್ವಿಚಾರಣೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳಿಂದ ಫಲಾನುಭವಿಗಳು ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.

ಇದೇ ವೇಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಯ ಅಧಿಕಾರಿಗಳಿಗೆ ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಶಕ್ತಿ ಯೋಜನೆ, ಯುವನಿಧಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸೂಚಿಸಲಾಯಿತು. ವಿಳಂಬ ನೀತಿ ಅನುಸರಿದರೆ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಎಚ್ಚರಿಸಿದರು.

ಈ ವೇಳೆ ಮೆಣೇದಾಳ ಪಿಡಿಒ ಬಸವರಾಜ ರ್‍ಯಾವಣಕಿ, ಗ್ರಾಪಂ ಉಪಾಧ್ಯಕ್ಷ ಯಂಕಪ್ಪ ತೆಮ್ಮಿನಾಳ, ಜಿಲ್ಲಾ ಸಮಿತಿ ಉಪಾಧ್ಯಕ್ಷ ಅಮರೇಶ ಗಾಂಜಿ, ಜಿಲ್ಲಾ ಸಮಿತಿ ಸದಸ್ಯೆ ಶಾರದಾ ಕಟ್ಟಿಮನಿ, ತಾಲೂಕು ಸಮಿತಿ ಸದಸ್ಯರಾದ ನರಸಪ್ಪ ಬಿಂಗಿ, ಹುಸೇನ ಕಾಯಿಗಡ್ಡಿ, ಆನಂದಗೌಡ, ಶೋಭಾ ಪುರ್ತಗೇರಿ, ಉಮಾದೇವಿ ಪಾಟೀಲ ಸೇರಿದಂತೆ ಇತರರು ಇದ್ದರು.