ಸಾರಾಂಶ
ಮುಂಬರುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದೊರೆಯಲು ಎಲ್ಲಾ ಶಾಲೆಗಳ ಶಿಕ್ಷಕರು ಶಿಸ್ತಿನಿಂದ ಅಗತ್ಯಚಟುವಟಿಕೆಯ ಕಾರ್ಯಕ್ರಮಗಳನ್ನು ರೂಪಿಸಬೇಕು
ಕನ್ನಡಪ್ರಭ ವಾರ್ತೆ ತುಮಕೂರುಮುಂಬರುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದೊರೆಯಲು ಎಲ್ಲಾ ಶಾಲೆಗಳ ಶಿಕ್ಷಕರು ಶಿಸ್ತಿನಿಂದ ಅಗತ್ಯಚಟುವಟಿಕೆಯ ಕಾರ್ಯಕ್ರಮಗಳನ್ನು ರೂಪಿಸಬೇಕು. ಯಾವ ಮಗುವೂ ಅಭ್ಯಾಸದಲ್ಲಿ ಹಿಂದುಳಿಯದಂತೆ ಎಚ್ಚರವಹಿಸಬೇಕು ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್ಗೌಡರು ತಾಲೂಕಿನ ಶಾಲೆಗಳ ಮುಖ್ಯಶಿಕ್ಷಕರಿಗೆ ಸೂಚಿಸಿದರು.ಗುರುವಾರ ಸಿದ್ಧಗಂಗಾ ಮಠದ ಉದ್ಧಾನೇಶ್ವರ ಸಭಾಂಗಣದಲ್ಲಿ ನಡೆದ ತುಮಕೂರು ತಾಲೂಕಿನ ಸರ್ಕಾರಿ, ಅನುದಾನಿತ, ಅನುದಾನರಹಿರ ಪ್ರೌಢಶಾಲೆಗಳ ಮುಖ್ಯೋಪಧ್ಯಾಯರ ಸಭೆ ಉದ್ಘಾಟಿಸಿ ಮಾತನಾಡಿದರು. ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಉತ್ತಮಪಡಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆಚರ್ಚೆ ನಡೆಸಿದರು.
ಫಲಿತಾಂಶ ಉತ್ತಮಪಡಿಸಲು ಇಲಾಖೆ ಸೂಚಿಸಿರುವ ಎಲ್ಲಾ ಚಟುವಟಿಕೆಗಳನ್ನು ಚಾಚೂ ತಪ್ಪದೆ ಅನುಸರಿಸಬೇಕು.ಪ್ರತಿ ವಿದ್ಯಾರ್ಥಿಯ ಶೈಕ್ಷಣಿಕ ಪ್ರಗತಿ ಬಗ್ಗೆಯೂ ಗಮನಹರಿಸಬೇಕು. ವಿದ್ಯಾರ್ಥಿಕಲಿಕೆಯಲ್ಲಿ ಹಿಂದುಳಿದಿದ್ದರೆ ಅಂತಹವರಿಗೆ ವಿಶೇಷ ತರಗತಿಗಳನ್ನು ನಡೆಸಿ ಮಾರ್ಗದರ್ಶನ ನೀಡಬೇಕು. ವಿದ್ಯಾರ್ಥಿಗಳುಯೋಗ, ಧ್ಯಾನ ಮಾಡಲು ಸಲಹೆ ಮಾಡಬೇಕು. ಯೋಗ, ಧ್ಯಾನದಿಂದ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಜ್ಞಾಪಕ ಶಕ್ತಿ ಹೆಚ್ಚುತ್ತದೆಎಂದು ಹೇಳಿದರು.ಎಲ್ಲಾ ಶಾಲೆಗಳೂ ಕಡ್ಡಾಯವಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರ ಸಭೆ ನಡೆಸಬೇಕು. ವಿದ್ಯಾರ್ಥಿಯ ಶೈಕ್ಷಣಿಕ ಪ್ರಗತಿ ಬಗ್ಗೆ ಪೋಷಕರ ಗಮನಕ್ಕೆ ತಂದುಮಕ್ಕಳಲ್ಲಿ ಅಧ್ಯಯನ ಆಸಕ್ತಿ ಬೆಳೆಸಲು ಪೋಷಕರುಅನುಸರಿಸಬೇಕಾದ ಕ್ರಮಗಳ ಬಗ್ಗೆ ಶಿಕ್ಷಕರು ತಿಳಿಸಬೇಕು. ಎಲ್ಲಾರೀತಿಯಲ್ಲಿ ಪ್ರಯತ್ನ ಮಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟ ಉತ್ತಮಪಡಿಸಿ,ಯಾವ ವಿದ್ಯಾರ್ಥಿಯೂ ಪರೀಕ್ಷೆಯಲ್ಲಿ ಫೇಲ್ಆಗದಂತೆ ಹಾಗೂ ಎಲ್ಲರೂಉತ್ತಮ ಅಂಕಪಡೆಯುವಂತೆ ಮಾರ್ಗದರ್ಶನ ನೀಡಬೇಕುಎಂದು ಶಾಸಕ ಸುರೇಶ್ಗೌಡರು ಹೇಳಿದರು.ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಮಕ್ಕಳ ಭವಿಷ್ಯರೂಪಿಸುವ ಶಿಕ್ಷಣ ಆದ್ಯತೆಆಗಿರುವಕಾರಣ ಸರ್ಕಾರವೂ ವಿಶೇಷ ಕಾಳಜಿವಹಿಸಿ ಪರೀಕ್ಷೆ ಫಲಿತಾಂಶಉತ್ತಮಪಡಿಸಲುಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿದೆ. ಎಲ್ಲವನ್ನೂಆಚರಣೆಗೆತಂದು ವಿದ್ಯಾರ್ಥಿಗಳ ಜ್ಞಾನ, ಅಧ್ಯಯನಶೀಲತೆ ಹೆಚ್ಚಿಸುವಜವಾಬ್ದಾರಿ ಶಿಕ್ಷಕರ ಮೇಲಿದೆಎಂದು ಹೇಳಿದರು.ಕ್ಷೇತ್ರಶಿಕ್ಷಣಾಧಿಕಾರಿ ಎಂ.ಹನುಮಂತಪ್ಪ, ಉಪನಿರ್ದೇಶಕರಕಚೇರಿಯ ಶಿಕ್ಷಣಾಧಿಕಾರಿ ಎ.ಟಿ. ರಂಗದಾಸಪ್ಪ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದಜಿಲ್ಲಾಧ್ಯಕ್ಷಎಸ್.ಪಿ. ಸಿದ್ಧಲಿಂಗಸ್ವಾಮಿ, ತುಮಕೂರು ತಾಲೂಕು ಸಂಘದ ಅಧ್ಯಕ್ಷ ಕೆ.ಎಲ್.ಜಗದೀಶ್ ಅವರೊಂದಿಗೆ ತಾಲೂಕಿನ ವಿವಿಧ ಪ್ರೌಢಶಾಲೆ ಮುಖ್ಯ ಶಿಕ್ಷಕರು ಭಾಗವಹಿಸಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))