ಸಾರಾಂಶ
ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ಮಾನವಿಕ ಸಂಘ ಹಾಗೂ ಅರ್ಥಶಾಸ್ತ್ರ ವಿಭಾಗಗಳ ಜಂಟಿ ಆಶ್ರಯದಲ್ಲಿ ಎಸ್. ಡಿ.ಸಾಮ್ರಾಜ್ಯ ಸಂಸ್ಮರಣಾರ್ಥ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ‘ರಾಷ್ಟ್ರೀಯ ಸ್ವಾವಲಂಬನೆಯ ಹಾದಿ: ಗಾಂಧೀಜಿಯವರ ಸ್ವದೇಶಿಯಿಂದ ಮೇಕ್ಇನ್ ಇಂಡಿಯಾವರೆಗೆ’ ಎಂಬ ವಿಷಯದ ಕುರಿತು ಅಂತರ್ಕಾಲೇಜು ಭಾಷಣ ಸ್ಪರ್ಧೆ ನಡೆಯಿತು.
ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಸರಳ ಜೀವನದೊಂದಿಗೆ ಜೀವಿಸಿದ ಮಹಾತ್ಮಾ ಗಾಂಧೀಜಿ ಗ್ರಾಮ ಸ್ವರಾಜ್ಯದ ಕನಸನ್ನು ಕಂಡವರು. ಅಹಿಂಸಾ ಪ್ರತಿಪಾದಕರಾದ ಅವರು ಚಿಂತಕರಾಗಿ ನಮ್ಮ ಜೊತೆಗೆ ಸದಾ ಇರುತ್ತಾರೆ ಎಂದು ಮಹಾವೀರ ಕಾಲೇಜು ಆಡಳಿತ ಮಂಡಳಿ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ ಅಭಿಪ್ರಾಯಪಟ್ಟಿದ್ದಾರೆ.ಇಲ್ಲಿನ ಶ್ರೀ ಮಹಾವೀರ ಕಾಲೇಜಿನ ಮಾನವಿಕ ಸಂಘ ಹಾಗೂ ಅರ್ಥಶಾಸ್ತ್ರ ವಿಭಾಗಗಳ ಜಂಟಿ ಆಶ್ರಯದಲ್ಲಿ ಏರ್ಪಡಿಸಲಾದ ಎಸ್. ಡಿ.ಸಾಮ್ರಾಜ್ಯ ಸಂಸ್ಮರಣಾರ್ಥ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ‘ರಾಷ್ಟ್ರೀಯ ಸ್ವಾವಲಂಬನೆಯ ಹಾದಿ: ಗಾಂಧೀಜಿಯವರ ಸ್ವದೇಶಿಯಿಂದ ಮೇಕ್ಇನ್ ಇಂಡಿಯಾವರೆಗೆ’ ಎಂಬ ವಿಷಯದ ಕುರಿತು ಅಂತರ್ಕಾಲೇಜು ಭಾಷಣ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.
ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಿ, ಗಾಂಧೀಜಿ ಚಿಂತನೆಗಳು ಈಗಿನ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಿದೆ ಎಂದರು.ವೇದಿಕೆಯಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪ್ರೊ. ರಮೇಶ್ ಭಟ್, ಕಾಲೇಜಿನ ವಿಶ್ವಸ್ಥ ಮಂಡಳಿ ಸದಸ್ಯ ಅಜಿತ್ ಮುರಾಯ, ಐಕ್ಯೂಎಸಿ ಸಂಚಾಲಕ ಹಾಗೂ ವಿದ್ಯಾರ್ಥಿಕ್ಷೇಮಪಾಲನಾ ಅಧಿಕಾರಿ ಪ್ರೊ. ಹರೀಶ್, ವಿದ್ಯಾರ್ಥಿ ನಾಯಕಿ ಶೃತಿ ಪೇರಿ, ಮಾನವಿಕ ಸಂಘದ ವಿದ್ಯಾರ್ಥಿ ಕಾರ್ಯದರ್ಶಿ ಚೈತ್ರಾ ಇದ್ದರು.
ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಸ್ವಾಗತಿಸಿದರು. ಮಾನವಿಕ ಸಂಘದ ಸಂಯೋಜಕಿ ಗೀತಾರಾಮಕೃಷ್ಣ ವಂದಿಸಿದರು. ತೃತೀಯ ಬಿ.ಎ. ವಿದ್ಯಾರ್ಥಿನಿ ಸುಚಿತ್ರ ನಿರೂಪಿಸಿದರು.