21 ರಂದು ಶನಿವಾರಸಂತೆಯಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ

| Published : Jun 18 2025, 11:48 PM IST

21 ರಂದು ಶನಿವಾರಸಂತೆಯಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ
Share this Article
  • FB
  • TW
  • Linkdin
  • Email

ಸಾರಾಂಶ

ಐಎಎಸ್‌, ಐಪಿಎಸ್‌ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ಜೂ. 21ರಂದು ನಡೆಯಲಿದೆ.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ, ಹಾಸನ ಮತ್ತು ಕೊಡಗು ಜಿಲ್ಲೆ, ಕೊಡಗು ಪತ್ರಕರ್ತರ ಸಂಘ ತಾಲೂಕು ಘಟಕ, ಬಿಜಿಎಸ್ ಸೇವಾಸಂಘ ಕಳಲೆ ಕೂಡಿಗೆ ಮತ್ತು ಭಾರತಿ ವಿದ್ಯಾಸಂಸ್ಥೆ ಶನಿವಾರಸಂತೆ ಸಂಯುಕ್ತ ಆಶ್ರಯದಲ್ಲಿ ಐಎಎಸ್, ಐಪಿಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ಜೂ.21 ರಂದು ಶನಿವಾರಸಂತೆ ಯಶಸ್ವಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಆರ್.ಹರೀಶ್ ಕುಮಾರ್ ಹೇಳಿದರು.ಬೆಳಗ್ಗೆ 10ಗಂಟೆಗೆ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಎಚ್.ಪಿ.ಸಂದೇಶ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಆದಿಚುಂಚನಗಿರಿ ಹಾಸನ ಶಾಖ ಮಠದ ಕಾರ್ಯದರ್ಶಿಗಳಾದ ಶಂಭುನಾಥಸ್ವಾಮೀಜಿ ಕಾರ್ಯಕ್ರಮದ ದಿವ್ಯಸಾನಿದ್ಯ ವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.ಶಾಸಕರಾದ ಡಾ.ಮಂತರ್‌ಗೌಡ, ಮೈಸೂರು ದಕ್ಷಿಣ ವಲಯ ಪೊಲೀಸ್ ಮಹಾನಿರ್ದೇಶಕರಾದ ಡಾ.ಬೋರಲಿಂಗಯ್ಯ, ಜಿಲ್ಲಾಧಿಕಾರಿ ವೆಂಕಟ್‌ರಾಜಾ, ಬೆಂಗಳೂರು ಸಂಚಾರ ನಿಯಂತ್ರಣ ವಿಭಾಗದ ಪೊಲೀಸ್ ಆಯುಕ್ತರಾದ ಎಂ.ಎನ್.ಅನುಚೇತ್, ಬೆಂಗಳೂರಿನ ಇಂಡಿಯನ್ ಐಎಎಸ್ ಅಕಾಡೆಮಿ ಸಿ.ಇ.ಒ. ಪಿ.ಸಿ.ಶ್ರೀನಿವಾಸ್, ಬಸುಗುಳ ಕಾಫಿ ಬೆಳೆಗಾರರಾದ ಬಿ.ಸಿ.ಪುಟ್ಟೇಗೌಡ, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಚ್.ಟಿ.ಅನಿಲ್, ಕಳಲೆ-ಕೂಡಿಗೆ ಬಿಜಿಎಸ್ ಸೇವಾಸಂಘದ ಅಧ್ಯಕ್ಷ ಆರ್.ಪಿ.ಲಕ್ಷ್ಮಣ್, ಉಪಾಧ್ಯಕ್ಷ ಕಳಲೆ ಕೃಷ್ಣೇಗೌಡ, ಉದ್ಯಮಿ ಗಿರೀಶ್ ಮಲ್ಲಪ್ಪ, ಭಾರತೀ ವಿದ್ಯಾಸಂಸ್ಥೆಯ ಅಧ್ಯಕ್ಷ ಜಗನ್‌ಪಾಲ್ ಭಾಗವಹಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9448582636 ಸಂಪರ್ಕಿಸಬಹುದು.ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಎಸ್.ಎ.ಮುರುಳೀಧರ್, ಕಾರ್ಯದರ್ಶಿ ಡಿ.ಪಿ.ಲೋಕೇಶ್, ಕಳಲೆ-ಕೂಡಿಗೆ ಬಿಜಿಎಸ್ ಸೇವಾಸಂಘದ ಉಪಾಧ್ಯಕ್ಷ ಕೃಷ್ಣೇಗೌಡ, ಸಂಘದ ನಿರ್ದೇಶಕ ಸುಕುಮಾರ್ ಇದ್ದರು.