ಆರ್ಥಿಕ ಪ್ರಗತಿಗೆ ಮೂಲಸೌಕರ್ಯ ಅಭಿವೃದ್ಧಿ ಅಗತ್ಯ

| Published : Oct 07 2024, 01:37 AM IST

ಸಾರಾಂಶ

ಯಾವುದೇ ಭಾಗದ ಆರ್ಥಿಕ ಅಭಿವೃದ್ಧಿಗೆ ಅಲ್ಲಿನ ಮೂಲಸೌಕರ್ಯಗಳು ಅಭಿವೃದ್ಧಿಗೊಳ್ಳುವ ಅಗತ್ಯವಿದೆ. ಹಾಗಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸಕಲ ರೀತಿಯ ಮೂಲ ಸೌಲಭ್ಯ ಒದಗಿಸಲು ಆದ್ಯತೆ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಯಾವುದೇ ಭಾಗದ ಆರ್ಥಿಕ ಅಭಿವೃದ್ಧಿಗೆ ಅಲ್ಲಿನ ಮೂಲಸೌಕರ್ಯಗಳು ಅಭಿವೃದ್ಧಿಗೊಳ್ಳುವ ಅಗತ್ಯವಿದೆ. ಹಾಗಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸಕಲ ರೀತಿಯ ಮೂಲ ಸೌಲಭ್ಯ ಒದಗಿಸಲು ಆದ್ಯತೆ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧೆಡೆ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಮೂಲ ಸೌಲಭ್ಯಗಳು ಒಮ್ಮೆ ಮಾಡಿದರೆ ಮುಗಿಯುವಂತದ್ದಲ್ಲ. ರಸ್ತೆ, ಚರಂಡಿ ಮೊದಲಾದವುಗಳನ್ನು ಆಗಾಗ ಮಾಡುತ್ತಲೇ ಇರಬೇಕಾಗುತ್ತದೆ. ಕ್ಷೇತ್ರದ ಯಾವುದೇ ಭಾಗದಲ್ಲಿ ಮೂಲ ಸೌಲಭ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ನಾನು ಇಡೀ ರಾಜ್ಯಕ್ಕೆ ಮಂತ್ರಿಯಾಗಿದ್ದರೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರ ಪಾಲಿಗೆ ಎಂದಿಗೂ ಮನೆಮಗಳಾಗಿರುವೆ. ಕ್ಷೇತ್ರದ ಅಭಿವೃದ್ಧಿಯೇ ನನ್ನ ಕನಸು. ಕ್ಷೇತ್ರದ ಮಗಳಾಗಿ ಜನರ ಸೇವೆ ಮಾಡುತ್ತಿರುವೆ. ಚುನಾವಣೆ ಸಂದರ್ಭದಲ್ಲಿ ಉತ್ತಮ ರಸ್ತೆ ನಿರ್ಮಾಣ ಮಾಡಿಕೊಡುವುದಾಗಿ ಗ್ರಾಮದ ಜನರಿಗೆ ಮಾತು ಕೊಟ್ಟಿದ್ದೆ. ಇದೀಗ ಕೊಟ್ಟ ಮಾತಿನಂತೆ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಿರುವೆ. ಗ್ರಾಮದ ಅಭಿವೃದ್ಧಿಯಲ್ಲಿ ಜನರು ಕೈ ಜೋಡಿಸಬೇಕೆಂದು ಸಚಿವರು ಸಲಹೆ ನೀಡಿದರು.

ಗುಣಮಟ್ಟದ ವಸ್ತುಗಳ ಬಳಕೆ ಮಾಡುವ ಮೂಲಕ ಸುಸಜ್ಜಿತ ರಸ್ತೆ ನಿರ್ಮಾಣ ಮಾಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದ ಸಚಿವರು, ರಸ್ತೆಗೆ ನೀರು ಕುಡಿಸಿ, ಬಾಳಿಕೆ ಬರುವಂತೆ ನೋಡಿಕೊಳ್ಳಿ ಎಂದು ಜನರಿಗೆ ವಿನಂತಿಸಿದರು.

ಹಲಗಾ ಗ್ರಾಮದ ಶಿವಾಜಿ ಗಲ್ಲಿಯ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಪೂಜೆ ಸಲ್ಲಿಸುವ ವೇಳೆ, ಗಣಪತ್ ಮಾರಿಹಾಳ್ಕರ್, ಸಾಗರ ಕಾಮನಾಚೆ, ಮಹಾವೀರ ಪಾಟೀಲ, ಕಿರಣ ಹನಮಂತಾಚೆ, ರೂಪಾ ಸುತಾರ್, ಕಲ್ಪನಾ ಹನಮಂತಾಚೆ, ಲಕ್ಷ್ಮೀ ಸಂತಾಜಿ, ರೇಖಾ ಚಿಕ್ಕಪರಪ್ಪ, ಅಣ್ಣಾಸಾಹೇಬ ಘೋರ್ಪಡೆ, ಪಿರಾಜಿ ಜಾಧವ, ಸುಕುಮಾರ ಹುಡೇದ, ರಾಜು ವಡಗಾಂವ, ಸಚಿನ ಸಾಮಜಿ, ಶಾಂತು ಬೆಲ್ಲದ, ಪಪ್ಪು ಮಾಸ್ತಮರ್ಡಿ, ಸಂತೋಷ ವಿ ಇತರರು ಇದ್ದರು.

ಹಲಗಾ ಗ್ರಾಮಕ್ಕೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಿಂದ ಮಾಸ್ತಮರ್ಡಿ ಕ್ರಾಸ್ ವರೆಗಿನ ರಸ್ತೆಯ ಡಾಂಬರೀಕರಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸುವ ವೇಳೆ 1108 ಶ್ರೀ ಸಿದ್ಧಸೇನ ಮಹಾರಾಜರು, ಮಂಜುನಾಥ ಕೋಲಕಾರ, ಸಂತೋಷ ಅಷ್ಟೇಕರ್, ನಾಗೇಶ ಮಹಾರ, ಮಾರುತಿ ತಾನಸಿ, ಗೋಪಾಲ ಮರಕಟನಾಳ, ಪ್ರಕಾಶ ಪಾಟೀಲ, ಸುರೇಶ ಪಾಟೀಲ, ರಾಜು ಪಾಟೀಲ, ವಿಶ್ವನಾಥ ಕೆ, ನಾಗಪ್ಪ ತಳವಾರ, ರಮೇಶ ಜಳಕನ್ನವರ, ಬಸವರಾಜ ವಾನಿ, ನಾನದೇವ ಜೋಗನ್ನವರ, ಶಿವನಗೌಡ ಪಾಟೀಲ, ಯಮನಪ್ಪ ಸಣ್ಣಮ‌ನಿ, ಬಸವರಾಜ ಪಾರ್ವತಿ, ರಾಕೇಶ ಪಾಟೀಲ, ಮಹಾವೀರ ಪಾಟೀಲ, ಸುಕುಮಾರ ಹುಡೇದ, ಭರತೇಶ ಬೆಲ್ಲದ, ನಾಗಯ್ಯಸ್ವಾಮಿ ಪೂಜಾರ ಉಪಸ್ಥಿತರಿದ್ದರು.

ಬಸ್ತವಾಡ ಗ್ರಾಮದ ವಿದ್ಯಾನಗರದ ಚಂದ್ರಪ್ರಭಾ ಕಾರ್ಯಾಲಯದ ಪಕ್ಕದಲ್ಲಿರುವ ಹಾಗೂ ತಾನಾಜಿ ಗಲ್ಲಿಯ ರಸ್ತೆಗಳ ಅಭಿವೃದ್ಧಿಯ ಕಾಮಗಾರಿಗಳಿಗೆ ಚಾಲನೆ ನೀಡುವ ವೇಳೆ, ಮನೋಹರ್ ಬಾಂಡಗಿ, ಕೇಶವ ಚೌಗುಲೆ, ಜ್ಯೋತಿಬಾ ಚೌಗುಲೆ ರಾಮಾ ಕಾಕತ್ಕರ್, ಮನೋಹರ ಮುಚ್ಚಂಡಿ, ಭರ್ಮಾ ಗೊಡಕೆಚಕ್, ರಾಜು ಬಡವಾನವರ, ಮಹಾವೀರ ಸಂಕೇಶ್ವರಿ, ಅಪ್ಪಯ್ಯ ಬಾಗನವರ, ಸಂಜಯ ಮಾರಗನಾಂಚೆ, ಶಿವಾಜಿ ಕಾಕತ್ಕರ್, ಬಸಿರಸಾಬ್ ಕಿಲವಾಲೆ ಉಪಸ್ಥಿತರಿದ್ದರು.