ಕೃಷಿ ಹೊಂಡದ ಸುತ್ತ ರಕ್ಷಣಾ ಬೇಲಿ ಅಳವಡಿಸಿ

| Published : Apr 09 2025, 12:35 AM IST

ಸಾರಾಂಶ

ಕೃಷಿ ಹೊಂಡದಲ್ಲಿ ಮಕ್ಕಳು ಈಜಲು ಮತ್ತು ಜಾನುವಾರುಗಳ ನೀರು ಕುಡಿಯಲು ಬಂದಂತಹ ಸಂದರ್ಭದಲ್ಲಿ ಹೊಂಡದಲ್ಲಿ ಬೀಳುವ ಸಂಭವವಿದ್ದು, ರೈತರು ಈ ಹಿಂದೆ ನಿರ್ಮಿಸಿರುವ ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಮೋಹನ್ ಕುಮಾರ್ ಕೆ ರವರು ಮನವಿ ಮಾಡಿದ್ದಾರೆ. ರೈತ ಬಾಂಧವರು ತಮ್ಮ ಜಮೀನಿನಲ್ಲಿರುವ, ಮುಖ್ಯವಾಗಿ ಮನೆಯ ಸಮೀಪವಿರುವ, ರಸ್ತೆ ಪಕ್ಕದಲ್ಲಿರುವ ಎಲ್ಲಾ ಕೃಷಿ ಹೊಂಡಗಳಿಗೆ ಸುರಕ್ಷಿತ ಕ್ರಮ ಕೈಗೊಳ್ಳಬೇಕು. ರೈತರು ತಮ್ಮ ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮ ಅಳವಡಿಸಿ ಪ್ರಾಣ ಹಾನಿ ತಪ್ಪಿಸಲು ಸಹಕರಿಸಬೇಕೆಂದು ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಬೇಸಿಗೆ ಪ್ರಾರಂಭವಾಗಿದ್ದು, ಕೃಷಿ ಹೊಂಡದಲ್ಲಿ ಮಕ್ಕಳು ಈಜಲು ಮತ್ತು ಜಾನುವಾರುಗಳ ನೀರು ಕುಡಿಯಲು ಬಂದಂತಹ ಸಂದರ್ಭದಲ್ಲಿ ಹೊಂಡದಲ್ಲಿ ಬೀಳುವ ಸಂಭವವಿದ್ದು, ರೈತರು ಈ ಹಿಂದೆ ನಿರ್ಮಿಸಿರುವ ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಮೋಹನ್ ಕುಮಾರ್ ಕೆ ರವರು ಮನವಿ ಮಾಡಿದ್ದಾರೆ.

ಕೃಷಿ ಹೊಂಡದ ಸುತ್ತಲು ತಂತಿ ಬೇಲಿ, ನೆರಳು ಪರದೆ, ತಮ್ಮಲ್ಲಿ ಲಭ್ಯವಿರುವ ಸಂಪನ್ಮೂಲಗಳಿಂದ ಬೇಲಿ ಅಳವಡಿಸುವುದು ಕಡ್ಡಾಯ. ಕೃಷಿ ಹೊಂಡದ ಮುಂದೆ ಅಪಾಯ ಮತ್ತು ಈಜಬಾರದು ಎಂಬ ಸೂಚನಾಫಲಕವನ್ನು ಕಡ್ಡಾಯವಾಗಿ ಹಾಕಬೇಕು ಹಾಗೂ ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮವಾಗಿ ಹಗ್ಗದೊಂದಿಗೆ ಟ್ಯೂಬ್‌ಗಳನ್ನು ನಾಲ್ಕು ಮೂಲೆಗಳಲ್ಲಿ ಇಳಿ ಬಿಡಲು ಕೋರಲಾಗಿದೆ.ಈ ನಿಟ್ಟಿನಲ್ಲಿ ರೈತ ಬಾಂಧವರು ತಮ್ಮ ಜಮೀನಿನಲ್ಲಿರುವ, ಮುಖ್ಯವಾಗಿ ಮನೆಯ ಸಮೀಪವಿರುವ, ರಸ್ತೆ ಪಕ್ಕದಲ್ಲಿರುವ ಎಲ್ಲಾ ಕೃಷಿ ಹೊಂಡಗಳಿಗೆ ಸುರಕ್ಷಿತ ಕ್ರಮ ಕೈಗೊಳ್ಳಬೇಕು. ರೈತರು ತಮ್ಮ ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮ ಅಳವಡಿಸಿ ಪ್ರಾಣ ಹಾನಿ ತಪ್ಪಿಸಲು ಸಹಕರಿಸಬೇಕೆಂದು ತಿಳಿಸಿದ್ದಾರೆ.