ರಾಮನಾಥಪುರ: ಇಲ್ಲಿಯ ವರದಾನ ಬಸವೇಶ್ವರ ದೇವಾಲಯದ ಸಭಾಂಗಣದಲ್ಲಿ 60ನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆಗಳೊಂದಿಗೆ ಸಜ್ಜಾಗಿದೆ. 31 ದಿನಗಳ ಕಾಲ ಪೂಜಾ ಕಾರ್ಯಗಳು, ವೈವಿಧ್ಯ ಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿದ್ಯುತ್ ಅಲಂಕಾರ ಪೂಜಾ ಕೈಂಕರ್ಯಗಳು ನಡೆಯಲಿವೆ ಎಂದು ಶ್ರೀ ವರದಾನ ಬಸವೇಶ್ವ ರ ಸಂಘದ ಸದಸ್ಯರಾದ ಪ್ರವೀಣ್ ತಿಳಿಸಿದರು.
ಸೆ. 14 ರಂದು ಬೆಳಿಗ್ಗೆ 11.30 ಗಂಟೆಗೆ ಶ್ರೀ ಗಣೇಶ ಪ್ರತಿಷ್ಠಾಪನಾ ಪೂಜಾ ಕೈಂಕರ್ಯಗಳು ನೆರವೇರಲಿವೆ. ಉದ್ಘಾಟನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಶಾಸಕರು ಎ. ಮಂಜು ಭಾಗವಹಿಸುವರು ಎಂದು ಹೇಳಿದರು. ಪ್ರತಿದಿನ ಸಂಜೆ 7 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ 31 ದಿನಗಳ ಕಾಲ ನಡೆಯುವ ವೈವಿಧ್ಯಪೂರ್ಣ ಕಾರ್ಯಕ್ರಮ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ಪ್ರವೀಣ್ ಮನವಿ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ವರದಾನ ಬಸವೇಶ್ವರ ಭಕ್ತ ಬಳಗದ ಸದಸ್ಯರಾದ ನಾಗೇಶ್, ರವಿಸುಂದರ, ಕಾರ್ತಿಕ್, ಸುಬ್ರಹ್ಮಣ್ಯ, ಯೋಗೇಶ್, ರಾಘು ಮುಂತಾದವರು ಇದ್ದರು.ವರದಾನ ಬಸವೇಶ್ವರ ದೇವಾಲಯದಲ್ಲಿ ಗಣಪನ ಪ್ರತಿಷ್ಟಾಪನೆ
ಸೆ. 14 ರಂದು ಬೆಳಿಗ್ಗೆ 11.30 ಗಂಟೆಗೆ ಶ್ರೀ ಗಣೇಶ ಪ್ರತಿಷ್ಠಾಪನಾ ಪೂಜಾ ಕೈಂಕರ್ಯಗಳು ನೆರವೇರಲಿವೆ. ಉದ್ಘಾಟನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಶಾಸಕರು ಎ. ಮಂಜು ಭಾಗವಹಿಸುವರು ಎಂದು ಹೇಳಿದರು. ಪ್ರತಿದಿನ ಸಂಜೆ 7 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ 31 ದಿನಗಳ ಕಾಲ ನಡೆಯುವ ವೈವಿಧ್ಯಪೂರ್ಣ ಕಾರ್ಯಕ್ರಮ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ಪ್ರವೀಣ್ ಮನವಿ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ವರದಾನ ಬಸವೇಶ್ವರ ಭಕ್ತ ಬಳಗದ ಸದಸ್ಯರಾದ ನಾಗೇಶ್, ರವಿಸುಂದರ, ಕಾರ್ತಿಕ್, ಸುಬ್ರಹ್ಮಣ್ಯ, ಯೋಗೇಶ್, ರಾಘು ಮುಂತಾದವರು ಇದ್ದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.