ರಾಮನಾಥಪುರ: ಇಲ್ಲಿಯ ವರದಾನ ಬಸವೇಶ್ವರ ದೇವಾಲಯದ ಸಭಾಂಗಣದಲ್ಲಿ 60ನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆಗಳೊಂದಿಗೆ ಸಜ್ಜಾಗಿದೆ. 31 ದಿನಗಳ ಕಾಲ ಪೂಜಾ ಕಾರ್ಯಗಳು, ವೈವಿಧ್ಯ ಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿದ್ಯುತ್ ಅಲಂಕಾರ ಪೂಜಾ ಕೈಂಕರ್ಯಗಳು ನಡೆಯಲಿವೆ ಎಂದು ಶ್ರೀ ವರದಾನ ಬಸವೇಶ್ವ ರ ಸಂಘದ ಸದಸ್ಯರಾದ ಪ್ರವೀಣ್ ತಿಳಿಸಿದರು.

ಸೆ. 14 ರಂದು ಬೆಳಿಗ್ಗೆ 11.30 ಗಂಟೆಗೆ ಶ್ರೀ ಗಣೇಶ ಪ್ರತಿಷ್ಠಾಪನಾ ಪೂಜಾ ಕೈಂಕರ್ಯಗಳು ನೆರವೇರಲಿವೆ. ಉದ್ಘಾಟನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಶಾಸಕರು ಎ. ಮಂಜು ಭಾಗವಹಿಸುವರು ಎಂದು ಹೇಳಿದರು. ಪ್ರತಿದಿನ ಸಂಜೆ 7 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ 31 ದಿನಗಳ ಕಾಲ ನಡೆಯುವ ವೈವಿಧ್ಯಪೂರ್ಣ ಕಾರ್ಯಕ್ರಮ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ಪ್ರವೀಣ್ ಮನವಿ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ವರದಾನ ಬಸವೇಶ್ವರ ಭಕ್ತ ಬಳಗದ ಸದಸ್ಯರಾದ ನಾಗೇಶ್, ರವಿಸುಂದರ, ಕಾರ್ತಿಕ್, ಸುಬ್ರಹ್ಮಣ್ಯ, ಯೋಗೇಶ್, ರಾಘು ಮುಂತಾದವರು ಇದ್ದರು.