ಕನ್ನಡಪ್ರಭ ವಾರ್ತೆ ಬಾದಾಮಿಶಿವಮೊಗ್ಗದಲ್ಲಿ ಭಾನುವಾರ ನಡೆದ ಅಂತಾರಾಷ್ಟ್ರೀಯ ಕರಾಟೆ ಓಪನ್ ಪಂದ್ಯಾವಳಿಯಲ್ಲಿ ವಿದ್ಯಾರ್ಥಿನಿಯರಾದ ಐಶ್ವರ್ಯ ಹೊಸಮನಿ ಹಾಗೂ ಸ್ನೇಹಾ ಮಾದರ ಅವರು 2 ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಗೆ, ಬಾದಾಮಿ ತಾಲೂಕಿಗೆ, ಬಾಗಲಕೋಟೆ ಜಿಲ್ಲೆಗೆ ಹಾಗೂ ರಾಜಕ್ಕೆ ಕೀರ್ತಿ ತಂದಿದ್ದಾರೆ.

ಕನ್ನಡಪ್ರಭ ವಾರ್ತೆ ಬಾದಾಮಿ

ಶಿವಮೊಗ್ಗದಲ್ಲಿ ಭಾನುವಾರ ನಡೆದ ಅಂತಾರಾಷ್ಟ್ರೀಯ ಕರಾಟೆ ಓಪನ್ ಪಂದ್ಯಾವಳಿಯಲ್ಲಿ ವಿದ್ಯಾರ್ಥಿನಿಯರಾದ ಐಶ್ವರ್ಯ ಹೊಸಮನಿ ಹಾಗೂ ಸ್ನೇಹಾ ಮಾದರ ಅವರು 2 ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಗೆ, ಬಾದಾಮಿ ತಾಲೂಕಿಗೆ, ಬಾಗಲಕೋಟೆ ಜಿಲ್ಲೆಗೆ ಹಾಗೂ ರಾಜಕ್ಕೆ ಕೀರ್ತಿ ತಂದಿದ್ದಾರೆ.

ಪ್ರಸ್ತುತ ವಿದ್ಯಾರ್ಥಿಗಳು ತಾಲೂಕಿನ ಯಂಕಂಚಿ ಮಣಿನಾಗರ ಗ್ರಾಮದ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿ ಮತ್ತು ಟಿ.ಎಸ್.ಗಂಗಲ್ ಸರ್ಕಾರಿ ಪ್ರೌಢ ಶಾಲೆಯ 10ನೇ ತರಗತಿಯಲ್ಲಿ ಓದುತ್ತಿದ್ದಾರೆ.

ಅಭಿನಂದನೆ: ಸಾಧನೆ ಮಾಡಿದ ವಿದ್ಯಾರ್ಥಿನಿಯರಿಗೆ ಉಪನಿರ್ದೇಶಕ ಎಸ್.ಆರ್.ಸೀತಾರಾಮು, ಜಿಲ್ಲಾ ಯೋಜನಾ ಉಪಸಮನ್ವಯಾಧಿಕಾರಿ ಪ್ರಮೋದಿನಿ ಬಳೂಲಮಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ಪೆಟ್ಲೂರ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ದೊಡ್ಡಪ್ಪನ್ನವರ, ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ಎಚ್.ಹಳಗೇರಿ, ಶಾಲೆ ಮುಖ್ಯೋಪಾಧ್ಯಾಯಿನಿ ಆರ್.ಆರ್.ಕುಲಕರ್ಣಿ, ಕೆಜಿಬಿವಿ ಶಾಲೆ ಮುಖ್ಯಶಿಕ್ಷಕಿ ಬಸಮ್ಮಾ ನರಸಾಪೂರ, ಸಮೂಹ ಸಂಪನ್ಮೂಲ ವ್ಯಕ್ತಿ ಆರ್.ವಿ.ಗೌಡಪ್ಪಗೌಡರ, ದೈಹಿಕ ಶಿಕ್ಷಕ ಗುರುನಾಥ ಹಾಗೂ ಶಿಕ್ಷಕರು, ಗುರುಹಿರಿಯರು, ಕ್ರೀಡಾಭಿಮಾನಿಗಳು ಅಭಿನಂದಿಸಿ ಶುಭಹಾರೈಸಿದ್ದಾರೆ.