ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ಇಲ್ಲಿನ ಕೊಡವೂರು ಜುಮಾದಿ ದೈವದ ವಾರ್ಷಿಕ ಕೋಲದ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಕೊಡವೂರು ಶ್ರೀ ಶಂಕರ ನಾರಾಯಣ ದೇವಾಲಯದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಪಂಚ ಧೂಮಾವತಿ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸುಭಾಷ್ ಮೆಂಡನ್ ವಹಿಸಿದ್ದರು.ಮುಖ್ಯ ಅತಿಥಿಯಾಗಿ ಭೂ ಸಮರ್ಪಣಾ ಸಮಿತಿಯ ಗೌರವಾಧ್ಯಕ್ಷ ಸಾಧು ಸಾಲಿಯಾನ್, ಗೌರವ ಸಲಹೆಗಾರರು ಕಾಪುಬೂಡು ಅನಿಲ್ ಬಲ್ಲಾಳ್, ಶ್ರೀ ಪಂಚ ಧೂಮಾವತಿ ದೈವಸ್ಥಾನದ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಅಣ್ಣಪ್ಪ ಶೆಟ್ಟಿ, ಪಡ್ಲನೆರ್ಗಿ ನಾಗರಿಕ ಸಮಿತಿ ಅಧ್ಯಕ್ಷ ಶೇಖರ್ ಪುತ್ರನ್, ಶ್ರೀ ಶಂಕರನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವಾದಿರಾಜ ಸಾಲಿಯನ್, ಶ್ರೀಲಾ ಕೃಷ್ಣ ದೇವಾಡಿಗ, ಕೊಡವೂರು ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ಸತೀಶ್ ಕೊಡವೂರು, ಮತ್ಸೋದ್ಯಮಿ ಮಂಜುನಾಥ ಕೊಳ, ಭೂ ಸಮರ್ಪಣಾ ಸಮ್ಮತಿಯ ಕಾರ್ಯಾಧ್ಯಕ್ಷ ಕೊಡವೂರು ವಾರ್ಡ್ ನಗರಸಭಾ ಸದಸ್ಯ ವಿಜಯ ಕೊಡವೂರು, ಪ್ರಧಾನ ಕಾರ್ಯದರ್ಶಿ ಪ್ರಭಾತ್ ಕೊಡವೂರು, ಶ್ರೀ ವೀರ ಮಾರುತಿ ಭಜನಾ ಮಂಡಳಿಯ ಮಹಿಳಾ ಸಮಿತಿಯ ಮಾಜಿ ಅಧ್ಯಕ್ಷೆ ಹೇಮಲತಾ ರಮೇಶ್ ಸುವರ್ಣ, ಮಾತೃಶ್ರೀ ಮಹಿಳಾ ಮಂಡಲ ಗರ್ಡೇ ಅಧ್ಯಕ್ಷೆ ಪ್ರೇಮ ಮತ್ತು ಜುಮಾದಿ ನಗರದ ಎಲ್ಲ ಕಾರ್ಯಕ್ರಮ, ಹೋರಾಟಗಳಿಗೆ ಬೆನ್ನೆಲುಬಾಗಿ ನಿಂತಿರುವ ಧಾರ್ಮಿಕ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಮಿತಿಯ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.ಭೂ ಸಮರ್ಪಣಾ ಸಮಿತಿ ಉಪಾಧ್ಯಕ್ಷ ಸಚಿನ್ ಸ್ವಾಗತಿಸಿದರು. ಸಮಿತಿಯ ಕಾರ್ಯದರ್ಶಿ ಚಂದ್ರಕಾಂತ್ ಕೊಡವೂರು ವಂದಿಸಿದರು.