ಸಾರಾಂಶ
ಮೈಸೂರು: ಅಪಘಾತಕೀಡಾದವರಿಗೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಧನ ಸಹಾಯ ನೀಡಿದ್ದಾರೆ.
ಮೈಸೂರು: ಅಪಘಾತಕೀಡಾದವರಿಗೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಧನ ಸಹಾಯ ನೀಡಿದ್ದಾರೆ. ಮೈಸೂರಿನಲ್ಲಿ ಆಯೋಜಿಸಿದ್ದ ಬಸವ ಜಯಂತಿ ಸಮಾರಂಭದಲ್ಲಿ ಭಾಗವಹಿಸಲು ಎಚ್.ಡಿ. ಕೋಟೆ ತಾಲೂಕಿನ ಕಟ್ಟೆ ಮನಗನಹಳ್ಳಿ ಗ್ರಾಮದಿಂದ ಬರುತ್ತಿದ್ದಾಗ ಅಪಘಾತಕ್ಕೀಡಾಗಿ ಜೆಎಸ್ಎಸ್ ಆಸ್ಪತ್ರೆ ಸೇರಿದ ಸುಮಾರು 9 ಜನರ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಸಚಿವ ಈಶ್ವರ್ ಖಂಡ್ರೆ ಅವರು, ವೈಯಕ್ತಿಕವಾಗಿ 1.50 ಲಕ್ಷ ರೂ. ಧನಸಹಾಯ ನೀಡಿದ್ದಾರೆ. ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್ ಹಾಗೂ ವೀರಶೈವ ಸಮಾಜದ ಮುಖಂಡರು ಇದ್ದರು.