ಸಾರಾಂಶ
ಕನ್ನಡಪ್ರಭ ವಾರ್ತೆ, ತುಮಕೂರು ಸ್ವಚ್ಛಂದವಾಗಿ ಆಟ-ಪಾಠ ಕಲಿಯಬೇಕಾದ ವಯಸ್ಸಿನಲ್ಲಿ ಮಕ್ಕಳನ್ನು ದುಡಿಮೆಗೆ ದೂಡಿ ಅವರ ಬಾಲ್ಯವನ್ನು ಕಸಿಯುವುದು ಕಾನೂನು ಅಪರಾಧವೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ್ ಕುಮಾರ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕರ್ಮಿದಕ ಯೋಜನಾ ಸೊಸೈಟಿಯ ಸಂಯುಕ್ತಾಶ್ರಯದಲ್ಲಿ ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಬಾಲ ಕಾರ್ಮಿಕ ಪದ್ಧತಿಯು ಮಕ್ಕಳ ನಲಿವು, ಶಿಕ್ಷಣ, ವಿಶ್ರಾಂತಿ, ನೆಮ್ಮದಿಯನ್ನು ಕಸಿದುಕೊಳ್ಳುವ ಅನಿಷ್ಠ ಪದ್ಧತಿಯಾಗಿದೆ. ಅಂಕಿ-ಅಂಶದ ಪ್ರಕಾರ ವಿಶ್ವದಲ್ಲಿ 160 ಮಿಲಿಯನ್ ಮಕ್ಕಳು ಬಾಲ ಕಾರ್ಮಿಕ ಪದ್ಧತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಬಾಲ ಕಾರ್ಮಿಕ ಪದ್ಧತಿ ಕಾಯ್ದೆಯನ್ವಯ 14 ವರ್ಷದೊಳಗಿನ ಬಾಲ ಮಕ್ಕಳು ಹಾಗೂ 18 ವರ್ಷದೊಳಗಿನ ಕಿಶೋರ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಕಾನೂನು ಅಪರಾಧ. ಮಕ್ಕಳು ಅವರ ಬಾಲ್ಯವನ್ನು ಸ್ವಚ್ಛಂದವಾಗಿ ಕಳೆಯಲು ಪೋಷಕರು ಹಾಗೂ ಸಮಾಜ ಅವಕಾಶ ಮಾಡಿಕೊಡಬೇಕೆಂದು ತಿಳಿಸಿದರು. ಬಾಲ ಕಾರ್ಮಿಕ ಪದ್ಧತಿಯನ್ನು ಸಮಾಜದಿಂದ ಮುಕ್ತಗೊಳಿಸಲು ನಾವೆಲ್ಲರೂ ಒಟ್ಟಾಗಿ ಶ್ರಮಿಸಬೇಕು. ಬಾಲ ಕಾರ್ಮಿಕ ಪದ್ಧತಿಯಲ್ಲಿ ತೊಡಗಿಕೊಂಡಿರುವ ಮಕ್ಕಳು ತಮ್ಮ ಹಕ್ಕುಗಳಿಗಾಗಿ ನ್ಯಾಯಕ್ಕಾಗಿ ಹೋರಾಟ ಮಾಡಲು ಸಾಧ್ಯವಿಲ್ಲವಾದ್ದರಿಂದ ಜೂನ್ 12ರಂದು ವಿಶ್ವದಾದ್ಯಂತ ಬಾಲ ಕಾರ್ಮಿಕ ವಿರೋಧಿ ಪದ್ಧತಿ ದಿನವನ್ನು ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಅವರು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಜಿಲ್ಲಾ ಕಾರ್ಮಿಕಾಧಿಕಾರಿ ತೇಜಾವತಿ ಕೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚೇತನ್ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ಪವಿತ್ರ, ಮಧುಗಿರಿ ಉಪ ವಿಭಾಗದ ಕಾರ್ಮಿಕಾಧಿಕಾರಿ ಫೈರೋಜ್ ಪಾಷಾ, ಗ್ರಂಥಾಲಯ ಇಲಾಖೆಯ ಉಪ ನಿರ್ದೇಶಕ ದಿವಾಕರ್, ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಕ ಪರಮೇಶ್, ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತಿತರರು ಹಾಜರಿದ್ದರು. ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳ ಕಚೇರಿಯಿಂದ ಕೇಂದ್ರ ಗ್ರಂಥಾಲಯ ಸಭಾಂಗಣದವರೆಗೂ ಹಮ್ಮಿಕೊಂಡಿದ್ದ ಬಾಲ ಕಾರ್ಮಿಕ ವಿರೋಧಿ ದಿನ ಕುರಿತು ಜಾಗೃತಿ ಜಾಥಾ ಕರ್ಯದಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕರ್ಯ ರ್ಶಿಧ ನೂರುನ್ನೀಸಾ ಭಾಗವಹಿಸಿದ್ದರು.