ಸಾರಾಂಶ
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಜೊತೆಯಲ್ಲಿ ಮಾನವೀಯ ಮೌಲ್ಯ ತಿಳಿಸಿಕೊಡುವುದು ಅಗತ್ಯ
ಲಕ್ಷ್ಮೇಶ್ವರ: ಇಂದಿನ ಮಕ್ಕಳು ನಮ್ಮ ಮುಂದಿನ ಭವಿಷ್ಯವಾಗಿದ್ದಾರೆ. ಆದ್ದರಿಂದ ನಮ್ಮ ಮಕ್ಕಳಿಗೆ ಉನ್ನತ ಸಂಸ್ಕೃತಿ ಮತ್ತು ಪರಂಪರೆ ತಿಳಿಸಿ ಕೊಡುವುದು ಅಗತ್ಯವಾಗಿದೆ ಎಂದು ಮಹಾಬಲೇಶ್ವರಪ್ಪ ಬೇವಿನಮರದ ಹೇಳಿದರು.
ಪಟ್ಟಣದ ವಿದ್ಯಾಪೀಠ ಪಾಠ ಶಾಲೆಯ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಜೊತೆಯಲ್ಲಿ ಮಾನವೀಯ ಮೌಲ್ಯ ತಿಳಿಸಿಕೊಡುವುದು ಅಗತ್ಯವಾಗಿದೆ. ಮಕ್ಕಳಿಗೆ ಹಿರಿಯರಿಗೆ ಗೌರವ ಕೊಡುವ ಜೊತೆಯಲ್ಲಿ ಪ್ರಾಚೀನ ಪರಂಪರೆ ಹಾಗೂ ಇತಿಹಾಸದ ಬಗ್ಗೆ ತಿಳಿಸಿಕೊಡುವುದು ಅಗತ್ಯವಾಗಿದೆ ಎಂದು ಹೇಳಿದರು.
ಈ ವೇಳೆ ಪ್ರಾಚಾರ್ಯ ಪ್ರಗತಿ ತಾವರೆ ಮಾತನಾಡಿ, ಮಕ್ಕಳು ನಮ್ಮ ದೇಶದ ಆಸ್ತಿಯಾಗಿದ್ದಾರೆ. ಮಕ್ಕಳ ಮನಸ್ಸನ್ನು ಅರಿತು ಬೋಧಿಸುವುದು ಶಿಕ್ಷಕರ ಕರ್ತವ್ಯವಾಗಿದೆ. ಮಕ್ಕಳಿಗೆ ಸಾವಿತ್ರಿಬಾಯಿ ಫುಲೆ ಅವರಂತ ಮಹಾನ್ ಸಾಧನೆ ಮಾಡಿದ ಮಹಿಳೆಯರ ಕುರಿತು ಮಕ್ಕಳಿಗೆ ತಿಳಿಸಿಕೊಡುವುದು ಅಗತ್ಯವಾಗಿದೆ ಎಂದು ಹೇಳಿದರು.ಈ ವೇಳೆ ಶಾಲೆಗೆ ಆಗಮಿಸಿದ ಮಕ್ಕಳಿಗೆ ಹೂವು ಹಾಗೂ ಸಿಹಿ ನೀಡಿ ಸ್ವಾಗತಿಸಲಾಯಿತು. ಶಾಲಾ ಆರಂಭದಲ್ಲಿ ಶಾಲೆಯ ಆಡಳಿತ ಮಂಡಳಿಯ ಸದಸ್ಯಯರು ಹಾಗೂ ಶಿಕ್ಷಕ ಸಿಬ್ಬಂದಿಗಳು ಹಾಜರಿದ್ದರು.