ಬೆಳಗಾವಿ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಗರದ 4 ಕಡೆ ಉದ್ಯಮಿಗಳ ಮನೆ ಮೇಲೆ ದಾಳಿ ಮಾಡುವ ಮೂಲಕ ಉದ್ಯಮಿಗಳಿಗೆ ಶಾಕ್ ನೀಡಿದ್ದಾರೆ. ಉದ್ಯಮಿ ವಿನೋದ್ ದೊಡ್ಡಣ್ಣವರ, ಪುಷ್ಪದಂತ ದೊಡ್ಡಣ್ಣವರ ಮನೆ, ಕಚೇರಿ ಸೇರಿದಂತೆ ಒಟ್ಟು 4 ಕಡೆ ಗೋವಾ, ಬೆಂಗಳೂರಿನ ಐಟಿ ಅಧಿಕಾರಿಗಳು ಮಂಗಳವಾರ ಬೆಳಗಿನ ಜಾವ ದಾಳಿ ಮಾಡಿದ್ದಾರೆ. ಇಬ್ಬರೂ ಸಕ್ಕರೆ ಕಾರ್ಖಾನೆ, ಐರನ್ ಹಾಗೂ ಗ್ರೈನೆಟ್ ಉದ್ಯಮಿಗಳಾಗಿದ್ದಾರೆ. ದೊಡ್ಡಣ್ಣವರ ಸಹೋದರರು ಐರನ್ ಹಾಗೂ ಗ್ರೈನೆಟ್ ದೇಶ-ವಿದೇಶಗಳಿಗೂ ರಪ್ತು ಮಾಡುತ್ತಾರೆ. ಕಾಗವಾಡ ತಾಲೂಕಿನಲ್ಲಿ ಎರಡು ಸಕ್ಕರೆ ಕಾರ್ಖಾನೆ ಹೊಂದಿದ್ದಾರೆ. ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇರುವ ಈ ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಲಾಗಿದೆ. ದಾಳಿಯಲ್ಲಿ ಏನೇನು ವಶಪಡಿಸಿಕೊಳ್ಳಲಾಗಿದೆ ಎಂಬುದರ ಮಾಹಿತಿ ಲಭ್ಯವಾಗಿಲ್ಲ.
ಉದ್ಯಮಿ ದೊಡ್ಡಣ್ಣವರ ಸಹೋದರರಿಗೆ ಐಟಿ ಶಾಕ್
ಬೆಳಗಾವಿ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಗರದ 4 ಕಡೆ ಉದ್ಯಮಿಗಳ ಮನೆ ಮೇಲೆ ದಾಳಿ ಮಾಡುವ ಮೂಲಕ ಉದ್ಯಮಿಗಳಿಗೆ ಶಾಕ್ ನೀಡಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.