ಸಾರಾಂಶ
ಬೆಳಗ್ಗೆ 9 ಗಂಟೆಗೆ ಕಾಂಗ್ರೆಸ್ ಭವನದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದ್ದು, ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಪಕ್ಷದ ಚುನಾವಣಾ ಉಸ್ತುವಾರಿಯಾಗಿರುವ ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗವಹಿಸಲಿದ್ದಾರೆ. ನಂತರ 11.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.
ಕನ್ನಡಪ್ರಭ ವಾರ್ತೆ ಉಡುಪಿಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಏ.2ರಂದು ನಾಮಪತ್ರ ಸಲ್ಲಿಸಲಿದ್ದಾರೆ.ಈ ಬಗ್ಗೆ ಗುರುವಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.
ಅಂದು ಬೆಳಗ್ಗೆ 9 ಗಂಟೆಗೆ ಕಾಂಗ್ರೆಸ್ ಭವನದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದ್ದು, ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಪಕ್ಷದ ಚುನಾವಣಾ ಉಸ್ತುವಾರಿಯಾಗಿರುವ ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗವಹಿಸಲಿದ್ದಾರೆ. ನಂತರ 11.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.ಈ ಸಂದರ್ಭ ಕೆಪಿಸಿಸಿಯ ನೂತನ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ, ಕೆಪಿಸಿಸಿಯ ನೂತನ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಭಾಪತಿ ಪ್ರತಾಪ್ಚಂದ್ರ ಶೆಟ್ಟಿ, ಪಕ್ಷದ ನಾಯಕರಾದ ಪ್ರಸಾದರಾಜ್ ಕಾಂಚನ್, ಉದಯಕುಮಾರ್ ಶೆಟ್ಟಿ ಮುನಿಯಾಲು, ದಿನೇಶ್ ಹೆಗ್ಡೆ ಮೊಳಹಳ್ಳಿ ಉಪಸ್ಥಿತರಿರುತ್ತಾರೆ ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.
ಸಭೆಯಲ್ಲಿ ಕೆಪಿಸಿಸಿ ಪ್ರ.ಕಾರ್ಯದರ್ಶಿ ಎಂ.ಎ. ಗಫೂರ್, ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಮುಖಂಡರಾದ ಬಿ. ನರಸಿಂಹ ಮೂರ್ತಿ, ರಮೇಶ್ ಕಾಂಚನ್, ದಿನೇಶ್ ಪುತ್ರನ್, ಭಾಸ್ಕರ್ ರಾವ್ ಕಿದಿಯೂರು, ಅಣ್ಣಯ್ಯ ಸೇರಿಗಾರ್, ಮುರಳಿ ಶೆಟ್ಟಿ, ಶಬ್ಬೀರ್ ಅಹಮ್ಮದ್, ದಿವಾಕರ ಕುಂದರ್, ಮಹಾಬಲ ಕುಂದರ್, ಆನಂದ ಪೂಜಾರಿ, ಪ್ರಶಾಂತ ಜತ್ತನ್ನ, ಉದ್ಯಾವರ ನಾಗೇಶ್ ಕುಮಾರ್, ಕೀರ್ತಿ ಶೆಟ್ಟಿ, ರೋನಿ ಉದ್ಯಾವರ, ಗಣೇಶ್ ನೆರ್ಗಿ, ಸಂಜಯ್ ಆಚಾರ್ಯ ಮುಂತಾದರಿದ್ದರು.